Saturday, December 18, 2010

’ಮಂಗ’ನ ಕೈನಲ್ಲಿ ಮಾಣಿಕ್ಯ





ಆದ್ಯಾತ್ಮದ ಸಾಧನೆಗೆ ದೇಹ ದಂಡನೆಯೂ ಒಂದು ಮಾರ್ಗ. ಅದರ ಒಂದು ಛಾಯೆಯನ್ನು ಇತ್ತೀಚೆಗೆ ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆದ ’ಮಡೆಸ್ನಾನ’ಗಳಲ್ಲಿ ಕಾಣಬಹುದು. ಅದರ ಬಗ್ಗೆ ಮಾದ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆಯಿತು.
ಲೌಕಿಕ ಸುಖವೆಲ್ಲವೂ ’ನಾನು ’ನನ್ನದು’ ಎಂಬ ಪರಿಧಿಯೊಳಗೇ ಸುತ್ತುತ್ತಿರುತ್ತದೆ. ಅಲೌಕಿಕದ ಮೆಟ್ಟಲು ಹತ್ತಬೇಕಾದರೆ ’ನಾನು’ ಎಂಬ ಭಾವವನ್ನು ಕಳೆದುಕೊಳ್ಳಬೇಕು. ಅಹಂಕಾರವನ್ನು ಕಳೆದುಕೊಳ್ಳುವ ಈ ಹಾದಿಯಲ್ಲಿ ’ಬಿಕ್ಷೆ ಬೇಡುವುದು’ ಒಂದು ಮೆಟ್ಟಲು.
ಋಷ್ಯಾಶ್ರಮಗಳಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳಿಗೆ ಭಿಕ್ಷಾವೃತ್ತಿ ಕಡ್ಡಾಯವಾಗಿತ್ತು. ಅವರು ಸುತ್ತಲ ಹಳ್ಳಿಗಳಲ್ಲಿ ಬೇಡಿ ತಂದ ಭಿಕ್ಷೆಯನ್ನು ಗುರುಗಳಿಗೂ ಕೊಟ್ಟು ತಾವುಣ್ಣಬೇಕಾಗಿತ್ತು ಇದು ಆಶ್ರಮದ ನಿಯಮಗಳಲ್ಲೊಂದು. ಉಪನಯನದಲ್ಲಿ ವಟು ತಾಯಿಯ ಬಳಿ ಹೋಗಿ ’ಭವತಿ ಭಿಕ್ಷಾಂ ದೇಹಿ’ ಎಂದು ಬೇಡುವುದು ಇಂದಿಗೂ ರೂಢಿಯಲ್ಲಿದೆ.
ಶಿವನೂ ಭಿಕ್ಷೆ ಬೇಡಿದ್ದಾನೆ. ಬುದ್ಧನೂ ಭಿಕ್ಷೆ ಬೇಡಿದ್ದಾನೆ. ಹಿಂದೆ ನವಕೋಟಿ ನಾರಾಯಣರೆನಿಸಿದ ಪುರಂಧರ ದಾಸರೇ ಅನಂತರದಲ್ಲಿ ಭಿಕ್ಷಾಟನೆಯನ್ನು ’ಮಧುಕರ ವೃತ್ತಿ ನಮ್ಮದು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಬೌದ್ದ ಮತ್ತು ಜೈನ ಧರ್ಮದಲ್ಲಿ ಭಿಕ್ಷುಗಳಿಗೆ ವಿಶೇಷ ಗೌರವವಿದೆ.

ಅನ್ಯರ ಮುಂದೆ ಬೊಗಸೆಯೊಡ್ಡಿ ’ದೇಹಿ’ ಎಂದು ಬೇಡುವುದು ಸಾಮಾನ್ಯರಿಂದ ಆಗದ ಕೆಲಸ. ತನ್ನ ಸ್ಥಾನ-ಮಾನ, ಘನತೆ-ಗೌರವಗಳನ್ನೆಲ್ಲಾ ಆ ಕ್ಷಣಕ್ಕೆ ಮರೆತು ’ಏನೂ ಅಲ್ಲ’ವಾಗುವ ಆ ಸ್ಥಿತಿಯೇ ಬಿಕ್ಷುಕ ಸ್ಥಿತಿ. ಕೊಡುವ ಕೈ ಯಾವಾಗಲೂ ಮೇಲಿರುತ್ತದೆ.ಬೇಡುವ ಕೈ ಕೆಳಗಿರುತ್ತದೆ.

ಇಂಥ ಉದಾತ್ತ ಮೌಲ್ಯ ಕನ್ನಡದ ಸುದ್ದಿವಾಹಿನಿಯೊಂದರಲ್ಲಿ ಕ್ರೈಮ್ ಎಪಿಸೋಡುಗೆ ಆಹಾರವಾದ ಪರಿಯನ್ನು ನೋಡಿ ಬೆಚ್ಚಿಬಿದ್ದೆ.

’ಆರ್ಟ್ ಅಫ್ ಬೆಗ್ಗಿಂಗ್’ ಎಂಬ ಹೆಸರಿನಲ್ಲಿ ಪ್ರಸಾರವಾದ ಈ ಕಾರ್ಯಕ್ರಮ ಆಡಳಿತ ಪಕ್ಷಕ್ಕೆ ಹತ್ತಿರವಾದ ಆಶ್ರಮವೊಂದನ್ನು ಗುರಿಯಾಗಿರಿಸಿಕೊಂಡಂತಿತ್ತು. ಆ ಆಶ್ರಮದವರು ’ದಿವ್ಯ ಸಮಾಜ’ವನ್ನು ಕಟ್ಟುವ ಕನಸು ಕಂಡವರಂತೆ. ಅದಕ್ಕಾಗಿ ದೇಶ-ವಿದೇಶಗಳ ಒಂದಷ್ಟು ಭಕ್ತರಿಗೆ ಆಗಾಗ ಟ್ರೈನಿಂಗ್ ಕಾರ್ಯಕ್ರಮ ಇಟ್ಟುಕೊಳ್ಳುತ್ತಾರೆ.೨೧ ದಿನಗಳ ಈ ಟ್ರೈನಿಂಗ್ ನಲ್ಲಿ ಒಂದು ದಿನ ಬಿಕ್ಷೆ ಬೇಡುವುದು ಕಡ್ಡಾಯ. ಹಾಗೆ ಬಿಕ್ಷೆ ಬೇಡಲು ಬೆಂಗಳೂರಿನ ವಿಜಯನಗರಕ್ಕೆ ಬಂದ ಅನನುಭವಿ ಬಿಕ್ಷುಕರು ಸಾರ್ವಜನಿಕರ ಅನುಮಾನಕ್ಕೆ ಗುರಿಯಾಗಿದ್ದಾರೆ. ಪೋಲಿಸರೂ ಬಂದಿದ್ದಾರೆ.ಮಾದ್ಯಮದವರೂ ಧಾವಿಸಿದ್ದಾರೆ. ಕೊನೆಗೆ ಆಶ್ರಮದ ಪ್ರತಿನಿಧಿಯೂ ಓಡೋಡಿ ಬಂದಿದ್ದಾರೆ. ತಾವು ಯಾಕೆ ಇಂತಹ ಕಾರ್ಯಕ್ರಮ ಯೋಜಿಸಿದ್ದೇವೆ ಮತ್ತು ಅದಕ್ಕೆ ಪೋಲಿಸ್ ಕಮಿಷನರಿಂದ ಅನುಮತಿಯನ್ನು ಪಡೆದುಕೊಂಡಿದ್ದೇವೆ ಎಂಬುದನ್ನು ಸಾರ್ವಜನಿಕರಿಗೆ ವಿವರಿಸಿದ್ದಾರೆ. ಅಲ್ಲಿಗೆ ಸಾರ್ವಜನಿಕರ ತಪ್ಪುಗ್ರಹಿಕೆ ನಿವಾರಣೆಯಾಗಿದೆ.

ಆದರೆ ಈ ಪ್ರಹಸನ ವಿಕೃತ ವ್ಯಖ್ಯಾನದೊಡನೆ ಅರ್ಧ ಘಂಟೆಯ ಕ್ರೈಮ್ ವರದಿಯಾಗಿ ಸುದ್ದಿ ವಾಹಿನಿಯೊಂದರಲ್ಲಿ ಪ್ರಸಾರವಾಗಿದೆ. ಅದರಲ್ಲಿ ಆ ಆಶ್ರಮವನ್ನು ’ಬಿಕ್ಷುಕರ ಟ್ರೈನಿಂಗ್ ಸೆಂಟರ್’ ಎಂದು ಬಿಂಬಿಸಲಾಗಿದೆ. ಅದರ ಸ್ಕ್ರಿಪ್ಟ್ ಬರೆದವರಿಗೆ ಆಧ್ಯಾತ್ಮದ ಗಂಧ ಗಾಳಿಯೂ ಇದ್ದಂತಿರಲಿಲ್ಲ.
ಬಿಕ್ಷುಕರಂತೆ ಕಾಣದ ಭಿಕ್ಷುಕರು ತಮ್ಮ ಪರಿಸರದಲ್ಲಿ ಕಂಡಾಗ ಅಲ್ಲಿನ ನಾಗರಿಕರು ಅನುಮಾನಗೊಳ್ಳುವುದು ಸಹಜ. ಅನುಮಾನ ಪಡಲೇ ಬೇಕು ಕೂಡಾ. ಆದರೆ ಪೂರ್ವಾಪರ ಯೋಚಿಸಬೇಕಾದ ಮಾಧ್ಯಮವೇ ಪಕ್ಷಪಾತಿಯಾಗಿ ವರ್ತಿಸಿದರೆ....? ಆಗ ಹೊಳೆದದ್ದೇ ’ಮಂಗ’ನ ಕೈಯ್ಯಲ್ಲಿ ಮಾಣಿಕ್ಯ’

Friday, December 10, 2010

ನನ್ನಪ್ಪ ಇನ್ನಿಲ್ಲ.


ಚಿತ್ರದಲ್ಲಿರುವವರು ನಮ್ಮ ಅಪ್ಪ ಕಟ್ಟೆಮನೆ ನೇಮಣ್ಣಗೌಡರು. ಇವರು ದಶಂಬರ ೨ರಂದು ದೈವಾಧೀನರಾದರು. ಅವರಿಗೆ ೮೫ ವರ್ಷವಾಗಿತ್ತು.

ನಮ್ಮ ಅಪ್ಪ ಎಂದೊಡನೆ ನನ್ನ ಕಣ್ಮುಂದೆ ಬರುವುದು ಸಣಕಲು ದೇಹದ, ಸ್ವಲ್ಪ ಬಾಗಿದ ಬೆನ್ನಿನ ಎತ್ತರದ ವ್ಯಕ್ತಿ. ಅವರನ್ನು ಮೊದಲು ನೋಡಿದಾಗ ನನ್ನ ಮಗ ಪ್ರಶ್ನಿಸಿದ್ದು ಹೀಗೆ ”ನನ್ನ ಅಜ್ಜನ ಮನೆಯಲ್ಲಿ ಗಾಂದೀಜಿ ಯಾಕಿದ್ದಾರೆ?” ಇದವರ ಹೊರನೋಟದ ವ್ಯಕ್ತಿತ್ವ. ನನ್ನ ದೊಡ್ಡಮ್ಮನ ಮಗ, ಪುರುಷೋತ್ತಮ ಬಿಳಿಮಲೆ ಹೇಳಿದ್ದು, ” ನಾನು ಕಂಡ ಅತ್ಯಂತ ಮುಗ್ಧ, ಪ್ರಾಮಾಣಿಕ ವ್ಯಕ್ತಿ ನನ್ನ ಚಿಕ್ಕಪ್ಪ”. ನನ್ನ ಪತಿ ಶಶಿಧರ್ ಭಟ್ ಕೂಡಾ ನನ್ನಪ್ಪನಲ್ಲಿ ಅದೇ ಮುಗ್ದತೆಯನ್ನು ಕಂಡಿದ್ದರು. ವ್ಯಕ್ತಿಗತವಾಗಿ ಕೂಡಾ ಅವರು ಗಾಂದೀಜಿಯ ಅನುಯಾಯಿಯಂತೆಯೇ ಸ್ವಾವಲಂಬಿಯಾಗಿ ಬದುಕಿದ್ದರು.

೧೯೨೫ನೇ ಇಸವಿ ಮೇ ೧೦ರಂದು ಜನಿಸಿದ ಅಪ್ಪ, ಈ ಲೋಕಕ್ಕೆ ಬಂದೊಡನೆಯೇ ತಾಯಿಯನ್ನು ಕಳೆದುಕೊಂಡರು. ನನ್ನಜ್ಜ ನಾಗಪ್ಪ ಗೌಡರು ಇನ್ನೊಂದು ಮದುವೆಯಾದರು. ಆ ನನ್ನಜ್ಜಿ ನಿಜವಾದ ಅರ್ಥದಲ್ಲಿ ಮಲತಾಯಿಯೇ ಆಗಿದ್ದರು ಎಂದು ಆಕೆಯನ್ನು ಕಣ್ಣಾರೆ ಕಂಡವರ ಬಾಯಿಯಿಂದ ನಾನು ಕೇಳಿದ್ದೇನೆ.

ಅಪ್ಪನಿಗೆ ಒಬ್ಬ ಅಣ್ಣ ಮತ್ತು ಒಬ್ಬ ಅಕ್ಕ ಇದ್ದರು. ಹಾಗೆಯೇ ಚಿಕ್ಕ ಅಜ್ಜಿಯಿಂದ ಹುಟ್ಟಿದ ಇಬ್ಬರು ತಮ್ಮಂದಿರು ಮತ್ತು ಒಬ್ಬ ತಂಗಿ ಇದ್ದರು. ಈ ಆರು ಮಂದಿ ಮಕ್ಕಳಲ್ಲಿ ಎಲ್ಲರ ಅನಾಧರಣೆಗೆ ತುತ್ತಾಗಿ ಬೆಳೆದವರು ನಮ್ಮಪ್ಪನಂತೆ. ಇದೆಲ್ಲಾ ಅಂತೆ-ಕಂತೆಗಳ ಸಂತೆಯಾದರೂ ಆಸ್ತಿ ಹಂಚಿಕೆಯ ವಿಷಯದಲ್ಲಿ ಅಪ್ಪನಿಗೆ ಕೊನೆಯ ಆಯ್ಕೆ ಸಿಕ್ಕಿದ್ದು ಮಾತ್ರ ನಮ್ಮ ಗಮನಕ್ಕೂ ಬಂದಿತ್ತು.

ಅಣ್ಣ-ತಮ್ಮಂದಿರ ಮಧ್ಯೆ ಆಸ್ತಿ ಪಾಲು ಮಾಡುವ ಊರ ಪ್ರಮುಖರು ಯಾರಿಗೂ ಅನ್ಯಾಯವಾಗದಂತೆ ಸಮ ಪಾಲು ಮಾಡುತ್ತಾರೆ. ಪಾಲನ್ನು ಆಯ್ದುಕೊಳ್ಳುವ ಮೊದಲ ಅವಕಾಶ ಅತೀ ಕಿರಿಯರಿಗೆ ಹೋಗುತ್ತದೆ. ಹಾಗೆ ಎಲ್ಲರೂ ಬಿಟ್ಟು ಉಳಿದ ಕಲ್ಲು ಮುಳ್ಳುಗಳಿಂದ ಕೂಡಿದ ಜಾಗ ಮತ್ತು ಕೊಳೆ ರೋಗದ ಹಾಳು ತೋಟ ನಮ್ಮಪ್ಪನ ಪಾಲಿಗೆ ಬಂದಿತ್ತು. ಆ ವರ್ಷ ನಮಗೆ ಸಿಕ್ಕಿದ ಅಡಿಕೆ ಒಂದು ಕ್ವಿಂಟಾಲ್ ಮಾತ್ರ. ಆದರೆ ಫಲವತ್ತಾದ ಕಂಬಳದ ಗದ್ದೆ ಆ ಪಾಲಿನಲ್ಲಿತ್ತು.

ನಾನು ಮತ್ತು ನನ್ನಣ್ಣ ದಯಾನಂದ ನಮ್ಮ ಆದಿ ಮನೆ ಕಟ್ಟೆಮನೆಯಲ್ಲೇ ಜನಿಸಿದ್ದೆವು. ಅದು ತುಂಬಾ ವಿಸ್ತಾರವಾದ ಮನೆ. ಹತ್ತಾರು ಕೊಟಡಿಗಳಿದ್ದವು. ಒಟ್ಟು ಕುಟುಂಬವಾದ ಕಾರಣ ಪ್ರತಿ ದಂಪತಿಗೂ ಪ್ರತ್ಯೇಕವಾದ ಕೊಟಡಿಗಳು. ಆಸ್ತಿ ಹಂಚಿಕೆಯಾದ ಮೇಲೆ ಒಬ್ಬೊಬ್ಬರಾಗಿ ಆ ಮನೆಯಿಂದ ಹೊರನಡೆದರು. ಆದರೆ ನಮಗೆ ಬೇರೆ ಮನೆಯಿರಲಿಲ್ಲ.

ಆದಿಮನೆಯನ್ನು ನಾವೆಲ್ಲಾ ಇಂದಿಗೂ ದೊಡ್ಡಮನೆ ಎಂದೇ ಕರೆಯುತ್ತೇವೆ. ಚಿತ್ರ ಚಿತ್ತಾರದ ಗೋದಿ ಕಂಬಗಳಿರುವ ಪಡಸಾಲೆ ಆ ಮನೆಯ ವಿಶೇಷ ಆಕರ್ಷಣೆ. ಇಂತಹದೇ ಇನ್ನೊಂದು ಮನೆ ಆ ಊರಲ್ಲಿದೆ. ಅದು ಕೂಜುಗೋಡು ಮನೆ. ಒಂದು ತಿಂಗಳ ಹಿಂದೆ ನಿರ್ದೇಶಕ ಪಿ. ಶೇಷಾದ್ರಿಯವರು ಇದೇ ಮನೆಗಳಲ್ಲಿ ತಮ್ಮ ಹೊಸ ಚಿತ್ರ ’ಬೆಟ್ಟದ ಜೀವ’ ದ ಚಿತ್ರೀಕರಣ ಮಾಡಿದ್ದರು.

ಒಂದೇ ತರಹದ ಆ ಮನೆಗಳ ಬಗ್ಗೆ ಹೇಳುವ ಮೊದಲು ಕಟ್ಟೆಮನೆ ಮನೆತನದ ಬಗ್ಗೆ ಹೇಳಬೇಕು. ನಾವು ವಲಸಿಗರು. ಘಟ್ಟದ ಮೇಲಿನಿಂದ ಇಳಿದು ಬಂದವರು. ಸುಮಾರು ಕ್ರಿಸ್ತ ಶಕ ೧೫೦೦ರಲ್ಲಿ ಹೇಮಾವತಿ ನದಿ ತೀರದಿಂದ ಬಿಸಿಲೆ ಘಾಟ್ ಮಾರ್ಗವಾಗಿ ದನ ಹೊಡೆದುಕೊಂಡು ತುಳುನಾಡಿಗೆ ಬಂದವರು ನಾವು. ಜಾನಪದ ವಿದ್ವಾಂಸರಾದ ಪುರುಷೋತ್ತಮ ಬಿಳಿಮಲೆಯವರು ಮೌಕಿಕ ಪರಂಪರೆಯಿಂದ ತಿಳಿದುಕೊಂಡಂತೆ ಎರಡು ಕಾರಣಗಳಿಂದ ನಮ್ಮ ಹಿರಿಯರು ಆ ಊರನ್ನು ಬಿಟ್ಟಿರಬಹುದು ಎಂದು ಅಭಿಪ್ರಾಯಪಡುತ್ತಾರೆ. ಒಂದು ಆಗ ಆ ಬಾಗವನ್ನು ಆಳುತ್ತಿದ್ದ ಲಿಂಗಾಯಿತ ಧರ್ಮದವರಾದ ಇಕ್ಕೇರಿ ವಂಶಸ್ಥರ ಕಿರುಕುಳಕ್ಕೆ ಬೆದರಿ ಓಡಿ ಹೋಗಿರಬಹುದು. ಇನ್ನೊಂದು ಆ ಕಾಲಘಟ್ಟದಲ್ಲಿ ಹೇಮಾವತಿ ನದಿ ಪ್ರದೇಶದಲ್ಲಿ ಕೆಂಡದ ಮಳೆ ಸುರಿದಿತ್ತೆಂಬ ಐತಿಹ್ಯವಿದೆ. ಅಂದರೆ ಭೀಕರ ಬರಗಾಲ ಬಂದಿರಬೇಕು. ಒಟ್ಟಿನಲ್ಲಿ ನಮ್ಮ ಹಿರಿಯರಲ್ಲಿ ಒಂದು ಗುಂಪು ಮಡಿಕೇರಿ ಮಾರ್ಗವಾಗಿ ಬಾಗಮಂಡಲಕ್ಕೆ ಬಂದು ನೆಲೆ ನಿಂತು ಕುಂಭಗೌಡನ ಮನೆ ಎಂಬ ಪ್ರತ್ಯೇಕ ಮನೆತನವಾಯ್ತು.

ತುಳುನಾಡಿಗೆ ಬಂದು ಕುಮಾರಧಾರ ನದಿ ಸುತ್ತಮುತ್ತಲಲ್ಲಿ ನೆಲೆ ನಿಂತ ನಮ್ಮ ಇನ್ನೊಂದು ಶಾಖೆ ಕಟ್ಟೆಮನೆ ಮೊತ್ತಮೊದಲ ಬಾರಿಗೆ ಆ ಪ್ರದೇಶಕ್ಕೆ ನೇಗಿಲನ್ನು ಪರಿಚಯಿಸಿತಂತೆ. ಅಂದರೆ ಆಧುನಿಕ ಕೃಷಿ ಪದ್ಧತಿಯನ್ನು ಜನಪ್ರಿಯಗೊಳಿಸಿತಂತೆ. ಅಲ್ಲಿಯವರೆಗೆ ಅಲ್ಲಿನ ಜನ ಕುಮೇರಿ ಬೆಳೆ ಮಾತ್ರ ಬಿತ್ತುತ್ತಿದ್ದರು. ನೇಗಿಲಿಗೆ ತುಳು ಭಾಷೆಯಲ್ಲಿ ’ನಾಯೆರ್’ ಎನ್ನುತ್ತಾರೆ. ನಮ್ಮ ’ಬಳಿ’ ಅಂದರೆ ಗೋತ್ರ ಕೂಡಾ ನಾಯೆರ್. ಇಲ್ಲಿಗೆ ಬಂದ ನಮ್ಮ ಕುಟುಂಬ ಮತ್ತೆ ಎರಡು ಹೋಳಾಗಿ ಒಂದು ’ಕೂಜುಗೋಡು’ ಮನೆತನವಾಯ್ತು. ಇನ್ನೊಂದು ’ಕಟ್ಟೆಮನೆ’ ಮನೆತನವಾಯ್ತು.
ಐನಿಕಿದು ಮತ್ತು ಬಾಳುಗೋಡು ಗ್ರಾಮಗಳಲ್ಲಿ ಹಂಚಿಕೊಂಡಿರುವ ಈ ಮನೆತನಗಳಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿವೆ. ಜನಸಂಖ್ಯೆ ಸಾವಿರದ ಹತ್ತಿರ ತಲುಪಬಹುದು. ಬಹುಶಃ ಕೂಜಗೌಡ, ಕಟ್ಟೆಗೌಡ ಮತ್ತು ಕುಂಭಗೌಡ ಎಂಬ ಅಣ್ಣ- ತಮ್ಮಂದಿರ ಹೆಸರಿನಲ್ಲಿ ಮೂರು ಮನೆತನಗಳು ಜನ್ಮ ತಾಳಿರಬಹುದು. ಯಾಕೆಂದರೆ ಈ ಮೂರೂ ಮನೆತನಗಳಿಗೆ ಘಟ್ಟದ ಮೇಲಿನ ಹಾಸನ ಜಿಲ್ಲೆಯ ಹೊಸಕೋಟೆ ಕೆಂಚಮ್ಮ ಮನೆದೇವರು. ಪರಸ್ಪರ ಈ ಕುಟುಂಬಗಳ ನಡುವೆ ವೈವಾಹಿಕ ಸಂಬಂಧಗಳಿಲ್ಲ.

ಕಟ್ಟೆಮನೆ ಮನೆತನದ ಬಗ್ಗೆ ಸುಳ್ಯ ಪರಿಸರದ ಒಕ್ಕಲಿಗ ಗೌಡರಲ್ಲಿ ವಿಶೇಷ ಗೌರವವಿದೆ. ದೈವ-ದೇವತಾ ಕಾರ್ಯಗಳಲ್ಲಿ ಮೊದಲ ಗೌರವವನ್ನು ಈ ಮನೆತನದವರಿಗೆ ನೀಡಲಾಗುತ್ತಿದೆ. ನನಗೆ ಈಗಲೂ ನೆನಪಿದೆ; ನಾನು ಚಿಕ್ಕಂದಿನಲ್ಲಿ ಒಂದು ಸತ್ಯನಾರಾಯಣ ಪೂಜೆಗೆ ಹೋಗಿದ್ದೆ. ಅಲ್ಲಿ ಪೂಜೆ ಮುಗಿದ ಮೇಲೆ ’ಯಾರದರೂ ಕಟ್ಟೆಮನೆಯವರು ಇದ್ದರೆ ಮುಂದೆ ಬನ್ನಿ’ ಎಂದು ಕರೆದು ಮೊದಲ ಪ್ರಸಾದವನ್ನು ನನಗೆ ಕೊಟ್ಟಿದ್ದರು. ನಾವಿಲ್ಲವಾದರೆ ನಮ್ಮ ಸಂಬಂಧಿಕರಿಗೆ ಆ ಗೌರವ ಸಲ್ಲುತ್ತಿತ್ತು. ಈಗ ಆ ಸಂಪ್ರದಾಯ ಇದ್ದಂತಿಲ್ಲ.

ಈ ಗೌರವಕ್ಕೆ ಕಟ್ಟೆಮನೆ ಪಾತ್ರವಾಗಲೂ ಇನ್ನೂ ಒಂದು ಕಾರಣವಿದೆ. ಅದು ಶೃಂಗೇರಿ ಪೀಠಕ್ಕೂ ಕಟ್ಟೆಮನೆಗೂ ಇರುವ ಸಂಬಂಧ. ಸುಳ್ಯ ಸೀಮೆಯ ಒಕ್ಕಲಿಗರಿಂದ ಕಾಣಿಕೆಯನ್ನು ಸಂಗ್ರಹಿಸುವ ಅಧಿಕಾರವನ್ನು ಶೃಂಗೇರಿ ಪೀಠ ಕಟ್ಟೆಮನೆಗೆ ನೀಡಿತ್ತು. ಪೀಠ ಕೊಟ್ಟ ತಾಮ್ರದ ತೋಳಬಂದಿಯನ್ನು ಧರಿಸಿ ಕಟ್ಟೆಯ ಮೇಲೆ ಕುಳಿತು ಆ ಮನೆತನದ ಹಿರಿಯ ಕರ ವಸೂಲು ಮಾಡುತ್ತಿದ್ದರಂತೆ. ಆ ತೋಳಬಂದಿ ಈಗಲೂ ನಮ್ಮ ಆದಿಮನೆಯಲ್ಲಿದೆ. ಅದಕ್ಕೆ ಶೃಂಗೇರಿ ಪೀಠದಲ್ಲಿ ದಾಖಲೆಗಳಿವೆ.

೧೮೩೭ರಲ್ಲಿ ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯೊಳಗೊಂಡಂತೆ ಬ್ರಿಟಿಷರ ವಿರುದ್ಧ ದಂಗೆಯೆದ್ದ ’ಅಮರ ಸುಳ್ಯ ದಂಗೆ’ ಅಥವಾ ’ಕಲ್ಯಾಣಪ್ಪನ ಕಾಟಕಾಯಿ’ ಹೋರಾಟದ ಮುಂಚೂಣಿಯಲ್ಲಿ ಕಟ್ಟೆಮನೆಯವರಿದ್ದರು.
ಇಂಥ ಕಟ್ಟೆಮನೆಯಲ್ಲಿ ಜನಿಸಿದವರಿಗೆ ಕೆಲವು ಕಟ್ಟುಪಾಡುಗಳಿದ್ದವು. ಬಹುಶಃ ಎಲ್ಲಾ ಐತಿಹಾಸಿಕ ಹಿನ್ನೆಲೆಯುಳ್ಳ ಮನೆತನಗಳಲ್ಲಿ ಇದಿರುತ್ತದೆ. ಅದೆಂದರೆ ಸಾರಾಯಿ ಕುಡಿಯಬಾರದು, ಜೂಜಾಡಬಾರದು, ಕೋಳಿಅಂಕದಲ್ಲಿ ಭಾಗವಹಿಸಬಾರದು.... ಒಟ್ಟಿನಲ್ಲಿ ಮನೆತನದ ಗೌರವಕ್ಕೆ ಕುಂದುಂಟಾಗುವ ಯಾವ ಕೆಲಸವನ್ನೂ ಮಾಡಬಾರದು. ನಮ್ಮಪ್ಪ ಅದನ್ನು ಚಾಚೂ ತಪ್ಪದೆ ಪಾಲಿಸಿದ್ದರು.
ಇಂತಹ ಹಿನ್ನೆಲೆಯುಳ್ಳ ನಮ್ಮಪ್ಪ ಆದಿಮನೆಯನ್ನು ಬಿಟ್ಟು ತಮ್ಮ ಸ್ವಂತ ಗೂಡು ಕಟ್ಟಿಕೊಳ್ಳಲು ಹೊರಟರು.

ಕುಕ್ಕೆಸುಬ್ರಹ್ಮಣ್ಯ ಸಮೀಪದ ಐನಕಿದು ಗ್ರಾಮದ ಆದಿಮನೆಯಿಂದ ಸುಮಾರು ನಾಲ್ಕು ಮೈಲು ದೂರದಲ್ಲಿರುವ ಬಾಳುಗೋಡು ಗ್ರಾಮದ ಪನ್ನೆ ಎಂಬಲ್ಲಿ ನಮ್ಮ ಆಸ್ತಿ ಇತ್ತು. ಬೆಳಿಗ್ಗೆ ಬೇಗನೆ ಎದ್ದು ಬುತ್ತಿ ಕಟ್ಟಿಕೊಂಡು ಕೆಲಸದಾಳು ಗುಂಡ ಬೈರನನ್ನು ಕರೆದುಕೊಂಡು ನಮ್ಮಪ್ಪ ಪನ್ನೆಗೆ ಬರುತ್ತಿದ್ದರು. ಗುಂಡ ಮತ್ತು ನಮ್ಮಪ್ಪ ಇಬ್ಬರೇ ಸೇರಿ ಒಂದು ರೂಂ, ಅಡಿಗೆ ಮನೆ ಮತ್ತು ವಿಶಾಲವಾದ ವರಾಂಡದ ಗಟ್ಟಿಯಾದ ಸೋಗೆ ಮನೆಯೊಂದನ್ನು ಕಟ್ಟಿದ್ದರು. ಅವರು ತಂದ ಬುತ್ತಿಯನ್ನು ಪಕ್ಕದಲ್ಲಿಯೇ ಇದ್ದ ಅಂಟುವಾಳ ಕಾಯಿಯ ಪುಟ್ಟ ಗಿಡವೊಂದಕ್ಕೆ ನೇತು ಹಾಕುತ್ತಿದ್ದರು. ಅನಂತರ ದೊಡ್ಡ ಮರವಾಗಿ ಕ್ವಿಂಟಾಲ್ ಗಟ್ಟಲೆ ಕಾಯಿ ಬಿಡುತ್ತಿದ್ದ ಆ ಮರ ಭಾವನಾತ್ಮಕವಾಗಿ ನಮಗೆಲ್ಲಾ ತುಂಬಾ ಹತ್ತಿರವಾಗಿತ್ತು.

ಕಷ್ಟ ಕಾರ್ಪಣ್ಯಗಳ ಮಧ್ಯೆಯೂ ಸ್ವಸಾಮರ್ಥ್ಯದಿಂದ ಬದುಕನ್ನು ಕಟ್ಟಿಕೊಂಡ ನಮ್ಮಪ್ಪ ಕ್ರಮೇಣ ಅರ್ಥಿಕವಾಗಿ ಸಧೃಢವಾಗತೊಡಗಿದರು. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಎಂಟನೇ ಕ್ಲಾಸ್ ತನಕ ಓದಿದ್ದ ನನ್ನಪ್ಪ ವಿಧ್ಯೆಯ ಮಹತ್ವವನ್ನು ಅರಿತಿದ್ದರು. ನಮ್ಮನ್ನೆಲ್ಲಾ ವಿದ್ಯಾವಂತರಾಗಿಸುವುದೇ ಅವರ ಗುರಿಯಾಗಿತ್ತು, ಹೈಸ್ಕೂಲ್, ಕಾಲೇಜುಗಳು ದೂರದೂರಿನಲ್ಲಿ ಇದ್ದ ಕಾರಣದಿಂದ ಅದು ಸುಲಭ ಸಾಧ್ಯವಾಗಿರಲಿಲ್ಲ.
ಒಂದು ದಿನ ಸೊಸೈಟಿಯ ಜಪ್ತಿ ವಾಹನ ನಮ್ಮ ಮನೆ ಮುಂದೆ ಬಂದು ನಿಂತಿತು. ನಾವೆಲ್ಲಾ ಕಂಗಾಲಾದೆವು. ಯಾಕೆಂದರೆ ನಾವು ಸಾಲ ಮಾಡಿರಲಿಲ್ಲ. ವಿಚಾರಿಸಿದಾಗ ತಿಳಿಯಿತು; ನಮ್ಮಪ್ಪನ ಹೆಸರಲ್ಲಿ ನಮ್ಮ ದೊಡ್ಡಪ್ಪ ಸಾಲಮಾಡಿದ್ದರು. ಅಪ್ಪನಿಂದ ಉಪಾಯವಾಗಿ ಸಹಿ ಹಾಕಿಸಿಕೊಂಡಿದ್ದರು. ಜಪ್ತಿಯನ್ನು ತಾತ್ಕಾಲಿಕವಾಗಿ ತಡೆಯಲಾದರೂ ಅವರಿಗೆ ಸ್ವಲ್ಪ ಹಣ ನೀಡಲೇಬೇಕಾಗಿತ್ತು. ಮನೆಯಲ್ಲಿ ಒಂದು ಪೈಸೆಯೂ ಇರಲಿಲ್ಲ. ಆದರೆ ಹಿಂದಿನ ದಿನ ತಾನೇ ನಮ್ಮ ಆಮ್ಮ ತವರು ಮನೆಗೆ ಹೋಗಿ ಬಂದಿದ್ದರು. ನಮ್ಮ ಅಜ್ಜ ಶ್ರೀಮಂತರು. ಅವರಿಗೆ ಇಬ್ಬರೇ ಹೆಣ್ಣುಮಕ್ಕಳು. ಬರುವಾಗ ನಮ್ಮ ತಾಯಿಗೆ ಅವರು ಸ್ವಲ್ಪ ದುಡ್ಡು ಕೊಟ್ಟಿದ್ದರು. ಅದನ್ನೇ ನನ್ನ ಅಮ್ಮ ತಂದು ಅಪ್ಪನ ಕೈಯ್ಯಲಿಟ್ಟರು.ಸೊಸೈಟಿಯವರು ಸಾಲ ಕಟ್ಟಲು ವಾಯಿದೆ ಕೊಟ್ಟು ಹೊರಟರು. ಆದರೆ ಇದರಿಂದಾಗಿ ನಾವು ಬಹು ದೊಡ್ಡ ಪಾಠ ಕಲಿತೆವು.

ನನ್ನ ಅಣ್ಣ ಆಗ ಪಿಯುಸಿ ಓದುತ್ತಿದ್ದ. ಆತ ಓದು ನಿಲ್ಲಿಸಿ ಮನೆಯ ಜವಾಬ್ದಾರಿ ವಹಿಸಿಕೊಂಡ. ಮಣ್ಣಿನೊಡನೆ ಗುದ್ದಾಟಕಿಳಿದ. ’ಭೂಮಿ ನನ್ನನ್ನು ನೋಡಿ ಹೆದರಬೇಕು’ ಅಂದುಕೊಳ್ಳುತ್ತಲೇ ಒಂದಿಂಚೂ ಭೂಮಿಯನ್ನೂ ಬಿಡದೆ ಕೃಷಿ ಮಾಡಿದ. ಅಡಿಕೆ, ತೆಂಗು, ಬಾಳೆ, ಕರಿಮೆಣಸು, ಕೊಕ್ಕೋ... ನಮ್ಮ ಜಮೀನು ಸಮೃದ್ಧಿಯಿಂದ ಬೀಗತೊಡಗಿತು. ತಾಯಿ ಕೆಂಚಮ್ಮನ ದಯೆಯಿಂದ ಮಿನಿ ಲಾರಿ, ಕಾರು ಕೊಂಡುಕೊಂಡ. ವಿಶಾಲವಾದ ಮನೆ ಕಟ್ಟಿಸಿದ. ಅಧುನಿಕ ದನದ ಕೊಟ್ಟಿಗೆ ಕಟ್ಟಿಸಿದ. ಪ್ರಗತಿಪರ ಕೃಷಿಕನಾಗಿ ಬೆಳೆದ. ಅವುಗಳ ನಡುವೆಯೇ ತಂಗಿಯರನ್ನೂ ಓದಿಸಿದ.

ಅಪ್ಪ, ಅಣ್ಣನಿಗೆ ಮಾರ್ಗದರ್ಶಕರಾದರು. ಅಮ್ಮ ಎಲ್ಲರಿಗೂ ಬೆನ್ನೆಲುಬಾಗಿ ನಿಂತರು. ಸರಿಕರ ಎದುರು ನಾವೆಲ್ಲಾ ತಲೆಯೆತ್ತಿ ನಡೆದೆವು. ಬದುಕಿನ ಇಳಿಸಂಜೆಯಲ್ಲಿ ಅಪ್ಪ ನೆಮ್ಮದಿಯ ಜೀವನವನ್ನು ಕಂಡರು. ಕೊನೆಯದಿನಗಳಲ್ಲಿ ನಾವೆಲ್ಲಾ ಮಕ್ಕಳು ಅವರ ಬಳಿಯಲ್ಲೇ ಇದ್ದೆವು. ಅದರಲ್ಲೂ ಅತ್ತಿಗೆ ಮತ್ತು ಅಮ್ಮ ಅವರನ್ನು ಮಗುವಿನಂತೆ ನೋಡಿಕೊಂಡರು. ಇಡೀ ಊರು ಅವರ ಅಂತಿಮ ಯಾತ್ರೆಯಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿತು. ಈಗವರು ನಮ್ಮ ತೆಂಗಿನ ತೋಟದ ನಡುವೆ ನೆಮ್ಮದಿಯಿಂದ ಮಲಗಿದ್ದಾರೆ.

Tuesday, November 23, 2010

ರಾಜಕಾರಣಿಗಳೂ, ಪತ್ರಕರ್ತರೂ ಮತ್ತು ಮಠಾಧೀಶರು.

ಇವತ್ತು ಕೆಂಡಸಂಪಿಗೆ ವೆಬ್ ಸೈಟ್ ನೋಡುತ್ತಲಿದ್ದೆ. ಬಸವರಾಜು ಅವರು ’ರಾಜಕಾರಣಿಗಳೂ, ಪತ್ರಕರ್ತರೂ’ ಎಂಬ ಲೇಖನ ಬರೆದಿದ್ದರು. ಅದನ್ನು ಓದಿ ಮುಗಿಸುತ್ತಿರುವಾಗಲೇ ಸುದ್ದಿವಾಹಿನಿಗಳಲ್ಲಿ ತುಮಕೂರಿನ ಸಿದ್ದಗಂಗಾಸ್ವಾಮಿಗಳ ಬೈಟ್ ಪ್ರಸಾರವಾಗುತ್ತಿತ್ತು. ಅವರು ಹೇಳುತ್ತಿದ್ದರು; ಯಡಿಯೂರಪ್ಪ ಶ್ರಮಜೀವಿ. ಗಾಮೀಣ ಭಾಗದಲ್ಲಿ ಅವರು ಜನಪ್ರಿಯರಾಗಿದ್ದಾರೆ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ..... ಹೀಗೆ ಅವರ ಮಾತು ಮುಂದುವರಿದಿತ್ತು.

ಹಾಗೆ ನೋಡಿದರೆ ಇವತ್ತಿನ ದಿನವೇ ಲಿಂಗಾಯಿತ ಸ್ವಾಮಿಗಳ ಪ್ರತಿಭಟನಾ ದಿನ. ಎಲ್ಲಾ ಲಿಂಗಾಯಿತ ಸ್ವಾಮಿಗಳು, ಅರ್ಥಾತ್ ಜಗದ್ಗುರುಗಳು ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಬೀದಿಗಿಳಿದ ದಿನ. ಹಾಗೆ ಅವರು ಬೀದಿಗಿಳಿದದ್ದು ನ್ಯಾಯಯುತವಾದುದೇ!. ಮಠ ಮಾನ್ಯಗಳಿಗೆ ರಾಜ್ಯದ ಬೊಕ್ಕಸದಿಂದ ಕೋಟಿ ಕೋಟಿ ಹಣವನ್ನು ಬಾಚಿ ಕೊಟ್ಟ ಪ್ರಭುಗಳ ಋಣ ಸಂದಾಯ ಮಾಡಬೇಡವೇ?

ಸಿದ್ದಗಂಗಾ ಸ್ವಾಮಿಗಳನ್ನು ಇಡೀ ನಾಡು ಗೌರವಿಸುತ್ತದೆ. ಅವರು ಮಠವನ್ನು ಕಟ್ಟಿಕೊಂಡರೂ ಯಾವುದೇ ಒಂದು ಜಾತಿಗೆ ಸೀಮಿತವಾಗಿ ನಡೆದುಕೊಂಡವರಲ್ಲ. ಆದರೆ ಶತಾಯುಷಿ ಅನ್ನಿಸಿಕೊಂಡ ಮೇಲೆ ಅವರು ಬದಲಾದಂತೆ ಕಾಣುತ್ತಿದೆ. ಅವರು ಲಿಂಗಾಯಿತ ಸಮುದಾಯಕ್ಕೆ ಮಾತ್ರ ಸೇರಿದ ಸ್ವಾಮೀಜಿಯೇನೋ ಎಂದು ಭಾಸವಾಗುತ್ತಿದೆ.

ಎರಡು ವರ್ಷಗಳ ಹಿಂದಿನ ಘಟನೆ;
ನಾಡ ಹಬ್ಬವಾದ ಮೈಸೂರು ದಸರಾದ ಉದ್ಘಾಟನೆಗಾಗಿ ಆಗಿನ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿಯವರು ಸಿದ್ದಗಂಗಾಸ್ವಾಮಿಗಳನ್ನು ಗೌರವದಿಂದ ಕರೆದಿದ್ದರು. ಅವರು ಕೂಡಾ ಸಂತೋಷದಿಂದ ಒಪ್ಪಿಕೊಂಡಿದ್ದರು.
ಆದರೆ ಅವರು ಉದ್ಘಾಟನೆ ಮಾಡಲಿಲ್ಲ. ಕಾರಣ ಕುಮಾರಸ್ವಾಮಿ ವಚನ ಭ್ರಷ್ಟರಾದದ್ದು ಸ್ವಾಮಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಗೆ ಕೊಟ್ಟ ಮಾತಿನಂತೆ ೨೦ ತಿಂಗಳ ಆಢಳಿತದ ನಂತರ ಮುಖ್ಯಮಂತ್ರಿ ಗಾದಿಯನ್ನು ಬಿಟ್ಟುಕೊಡಬೇಕಾಗಿತ್ತು. ಯಡಿಯೂರಪ್ಪ ಅದನ್ನು ಅಲಂಕರಿಸಬೇಕಾಗಿತ್ತು. ಆದರೆ ಹಾಗಾಗಲಿಲ್ಲ.
ಈಗ ಕರ್ನಾಟಕದ ಬಹುತೇಕ ಎಲ್ಲಾ ವೀರಶೈವ ಮಠಾದೀಶರು ಬಹಿರಂಗವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ನಿಂತಿದ್ದಾರೆ. ಕೊಳದ ಮಠದ ಸ್ವಾಮೀಜಿಯಂತೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವಿಧಾನ ಪರಿಷತ್ತಿನಲ್ಲಿ ಮಠಾದೀಶರಿಗೂ ಪ್ರಾತಿನಿಧ್ಯವಿರಬೇಕು ಎಂದು ಆಗ್ರಹಿಸಿದರು.

ಸ್ವಜನಪಕ್ಷಪಾತವೆಂಬುದು ಕೇವಲ ರಾಜಕಾರಣಿಗಳಿಗೆ ಸ್ವತ್ತಲ್ಲ!

ಮಠಾದೀಶರನ್ನು ಪಕ್ಕದಲ್ಲಿಟ್ಟುಕೊಂಡು, ಕಂಡ ಕಂಡ ದೇವಸ್ಥಾನಗಳಿಗೆ ಬೇಟಿಕೊಡುತ್ತಾ, ಹೋಮ ಹವನಗಳಲ್ಲಿ ಭಾಗವಹಿಸುತ್ತಾ ಕುರ್ಚಿಯನ್ನು ಉಳಿಸುಕೊಳ್ಳುವುದನ್ನೇ ಕಾಯಕವನ್ನಾಗಿಸಿಕೊಂಡ ಮುಖ್ಯಮಂತ್ರಿಗಳಿಗೆ ದೂರದರ್ಶಿತ್ವವಿಲ್ಲದ ಜನಪ್ರಿಯ ಕಾರ್ಯಕ್ರಮಗಳೇ ಅಭಿವೃದ್ಧಿ ಯೋಜನೆಗಳಾಗಿ ಭಾಸವಾಗುತ್ತಿದೆ. ಹಾಗಾಗಿಯೇ ಅವರಿಗೆ ಕಳೆದ ವರ್ಷ ನೆರೆಹಾವಳಿಯಿಂದ ತತ್ತರಿಸಿದ ಉತ್ತರ ಕರ್ನಾಟಕದ ಜನತೆಗೆ ಸೂರು ಕಟ್ಟಿಕೊಡುವುದಕ್ಕಿಂತ ಮುಖ್ಯವಾಗಿ ಭಾಗ್ಯಲಕ್ಷ್ಮಿ ಕಾರ್ಯಕ್ರಮದಲ್ಲಿ ಸೀರೆ ಹಂಚುವುದೇ ಮುಖ್ಯವಾಗುತ್ತದೆ.
ತಮ್ಮ ಜನಪ್ರಿಯ ಕಾರ್ಯಕ್ರಮಗಳ ಯಥೇಚ್ಛ ಜಾಹೀರಾತುಗಳನ್ನು ಮಾಧ್ಯಮಗಳಿಗೆ ನೀಡಿ ಅವರನ್ನು ಸಂತುಷ್ಟಗೊಳಿಸಿದರು. ಆದರೂ ಮಾಧ್ಯಮಗಳು ಅವರ ವಿರುದ್ಧ ತಿರುಗಿಬಿದ್ದವು. ಯಡಿಯೂರಪ್ಪ ಅವರಿಗೆ ಸಹಜವಾಗಿ ಸಿಟ್ಟು ಬಂದಿದೆ. ಪತ್ರಕರ್ತರಿಗೆ ಸ್ವಲ್ಪವಾದರೂ ಕೃತಜ್ನತೆ ಬೇಡವೇ?
ಯಡಿಯೂರಪ್ಪನವರಿಗೆ ತಾನು ಈ ಸ್ಥಿತಿಯಲ್ಲಿ, ಬೆತ್ತಲಾಗಿ ನಿಲ್ಲಲು ದೇವೆಗೌಡ ಮತ್ತು ಅವರ ಮಗ ಕುಮಾರಸ್ವಾಮಿಯೇ ಕಾರಣ ಎಂದು ನಂಬಿಕೊಂಡಿದ್ದಾರೆ. ಹಾಗಾಗಿ ಆ ’ಅಪ್ಪ ಮಕ್ಕಳನ್ನು ಬಿಡುವುದಿಲ್ಲ’ ಎಂದು ಹಲ್ಲು ಮಸೆಯುತ್ತಿದ್ದಾರೆ. ಚಿಕ್ಕ ಪುಟ್ಟ ವಿಷಯಗಳನ್ನೆಲ್ಲಾ ವಿಜೃಂಬಿಸಿ ತನ್ನನ್ನು ಖಳನಾಯಕನನ್ನಾಗಿ ಬಿಂಬಿಸಿದ ಮಾಧ್ಯಮಗಳ ಮೇಲೆ ಹರಿಹಾಯುತ್ತಿದ್ದಾರೆ. ಸಧ್ಯಕ್ಕೆ ಇವೆರಡೂ ಅವರ ವೈರಿ ಸ್ಥಾನದಲ್ಲಿದೆ.
ಅವರ ಸಿಟ್ಟು ಸಹಜವಾದುದೇ. ಕುಮಾರಸ್ವಾಮಿ ಮಾಡಲಾರದ್ದೇನನ್ನೂ ಇವರು ಮಾಡಿಲ್ಲ. ಇವರು ಅಧಿಕಾರಕ್ಕೆ ಹೊಸಬರು. ಎನೋ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾರೆ. ಆದರೆ ಕುಮಾರಸ್ವಾಮಿ ನಾಜೂಕಯ್ಯ. ಅವರ ಮೈಗೆ ಅವರಪ್ಪ ಚೆನ್ನಾಗಿ ಎಣ್ಣೆಹಚ್ಚಿದ್ದಾರೆ!
ಇನ್ನು ಮಾಧ್ಯಮದವರಿಗೆ ಎನು ಬೇಕೋ ಅದನ್ನು ಹೇಗೆ ಕೊಡಬೇಕೆಂಬುದು ಅಧಿಕಾರಸ್ಥ ರಾಜಕಾರಣಿಗಳಿಗೆ ಚೆನ್ನಾಗಿ ಗೊತ್ತಿದೆ. ಹಿಂದೆಲ್ಲಾ ದೀಪಾವಳಿ ಬೋನಸ್ಸು ಕೊಡುತ್ತಿದ್ದರು. ಅದು ತಿಂಗಳ ಪೇಮೆಂಟ್ ಗೆ ಇಳಿದು ಈಗ ದಿನಗೂಲಿಗೆ ಇಳಿದಿದೆಯಂತೆ. ಯವುದಕ್ಕೂ ಇರಲಿ ಎಂದುಕೊಂಡು ರಾಜಕಾರಣಿಗಳೇ ಈಗ ಸುದ್ದಿಚಾನಲ್ ಗಳ ಒಡೆಯರಾಗುತ್ತಿದ್ದಾರೆ. ಪತ್ರಕರ್ತರ ಹಿಂಡನ್ನೇ ಖರೀದಿ ಮಾಡುವುದು ಹೆಚ್ಚು ಲಾಭದಾಯಕ.

ಎರಡು ದಿನಗಳ ಹಿಂದಿನ ಘಟನೆಯೊಂದರ ಉದಾಹರಣೆ ಕೊಡುವುದಾರೆ, ಮುಖ್ಯಮಂತ್ರಿಗಳ ಆಪ್ತವಲಯದಿಂದ ಸಿಡಿಯೊಂದನ್ನು ಕನ್ನಡದ ಮೂರು ಪ್ರಮುಖ ಸುದ್ದಿವಾಹಿನಿಗಳಿಗೆ ಕಳುಹಿಸಿಕೊಡಲಾಗಿತ್ತು. ಜನಾರ್ಧನ ರೆಡ್ಡಿ ಮುಖ್ಯಮಂತ್ರಿಗಳ ವಿರುದ್ಧ ಷಡ್ಯಂತರ ರೂಪಿಸುತ್ತಿರುವ ಚಿತ್ರಣ ಅದರಲ್ಲಿತ್ತು. ಒಂದು ಚಾನಲ್ ಅದನ್ನು ತಡವಾಗಿ ಪ್ರಸಾರ ಮಾಡಿತು. ಇನ್ನೆರಡು ಚಾನಲ್ ಅದನ್ನು ಏನು ಮಾಡಿತೋ ಗೊತ್ತಾಗಲೇ ಇಲ್ಲ!

ನೈತಿಕತೆಯ ವಿಚಾರಕ್ಕೆ ಬಂದರೆ ಈಗ ಮಠಾದೀಶರು, ರಾಜಕಾರಣಿಗಳು, ಪತ್ರಕರ್ತರು ಒಂದೇ ಸಾಲಿನಲ್ಲಿ ನಿಲ್ಲುತ್ತಾರೆ.
ಆದರೂ ಕಳವಳಪಡಬೇಕಾಗಿಲ್ಲ. ನಮ್ಮದು ವೈವಿಧ್ಯಮಯ ದೇಶ. ಪ್ರತಿವ್ಯವಸ್ಥೆಗೂ ಪರ್ಯಾಯ ವ್ಯವಸ್ಥೆಯೊಂದು ಇದ್ದೇ ಇರುತ್ತದೆ. ಶಿಷ್ಟ ಸಾಹಿತ್ಯದಷ್ಟೆ ಪ್ರಭಲವಾದ ಜನಪದ ಸಾಹಿತ್ಯ ಇಲ್ಲಿ ಅನಾಚೂನವಾಗಿ ಹರಿದು ಬಂದಿದೆ. ಪತ್ರಿಕೆ, ಟಿವಿಗಳು ಸತ್ಯವನ್ನು ಮರೆಮಾಚಲು ಪ್ರಯತ್ನಿಸಿದರೂ ಚೌಕಟ್ಟುಗಳಿಲ್ಲದ ಬ್ಲಾಗ್, ಪೇಸ್ ಬುಕ್, ಟ್ವೀಟ್ಟರ್ ನಂಥ ಸಾಮಾಜಿಕ ಜಾಲ ತಾಣಗಳಿವೆ. ಕೈಯಲ್ಲಿ ಜಂಗಮವಾಣಿಯಿದೆ. ಸುದ್ದಿಯಾಚೆಗಿನ ಸುದ್ದಿಯನ್ನು ತಿಳಿದುಕೊಳ್ಳುವ ಕುತೂಹಲ ನಮಗಿರಬೇಕು. ಸಮಾಜಮುಖಿ ಚಿಂತನೆ ಇರಬೇಕು ಅಷ್ಟೆ.

Sunday, November 14, 2010

’ಪುಟಾಣಿ ಪಾರ್ಟಿ’- ಕನ್ನಡ ವಾಹಿನಿಗಳ ನಿರ್ಲಕ್ಷ್ಯ






ಇಂದು ಮಕ್ಕಳ ದಿನಾಚರಣೆ. ನಾನೊಂದು ಮಕ್ಕಳ ಮಕ್ಕಳ ಸಿನಿಮಾ ನೋಡಿದೆ; ಅದು ಪಿ.ಎನ್.ರಾಮಚಂದ್ರ ಅವರ ’ಪುಟಾಣಿ ಪಾರ್ಟಿ’. ಮಕ್ಕಳ ಸಿನಿಮಾ ಅಂದರೆ ಹೀಗೆಯೇ ಇರಬೇಕು ಎಂಬ ಸಿದ್ಧ ಸಿದ್ಧಾಂತಗಳನ್ನೆಲ್ಲಾ ಪಕ್ಕಕ್ಕೆ ತಳ್ಳಿ ತನ್ನದೇ ದಾರಿಯನ್ನು ಕಂಡುಕೊಂಡ ಚಿತ್ರ ಇದು.

ಮಕ್ಕಳ ಚಿತ್ರ ಅಂದ ಕೂಡಲೇ ನಮ್ಮ ನೆನಪಿಗೆ ಬರುವುದು; ಪುಟಾಣಿ ಏಜಂಟ್ ೧.೨.೩, ಸಿಂಹದ ಮರಿ ಸೈನ್ಯ, ಸೂಪರ್ ನೋವಾ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಬಂದ ಬೆಟ್ಟದ ಹೂವು, ಚಿನ್ನಾರಿ ಮುತ್ತ ಇತ್ಯಾದಿ... ಆದರೆ ಇವೆಲ್ಲ ಸ್ವಲ್ಪ ಮಟ್ಟಿಗೆ ದೊಡ್ಡವರ ದೃಷ್ಟಿಕೋನದಿಂದ ನೋಡಿದ ಮಕ್ಕಳ ಚಿತ್ರಗಳು.ಆದರೆ ಪುಟಾಣಿ ಪಾರ್ಟಿ ಹಾಗಿಲ್ಲ.

ಗ್ರಾಮ ಸ್ವರಾಜ್ಯದ ಕನಸು ಕಂಡವರು ಗಾಂಧೀಜಿ. ಅದೇ ಕಲ್ಪನೆಯಲ್ಲಿ ಮೂಡಿದ್ದು ಪಂಚಾಯ್ತು ರಾಜ್ ಮಸೂದೆ. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಗಳಾಗಿದ್ದಾಗ ಅದನ್ನು ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟದಲ್ಲಿ ಜಾರಿಗೆ ತಂದಿದ್ದರು. ಪುಟಾಣಿ ಪಾರ್ಟಿಯಲ್ಲಿ ಇದೇ ಅಧಿಕಾರ ವಿಕೇಂದ್ರಿಕರಣ ತತ್ವದ ಎಳೆಯಿದೆ.
ಗ್ರಾಮ ಪಂಚಾಯ್ತಿಯಂಥ ಸ್ಥಳಿಯ ಆಡಳಿತದಲ್ಲಿ ಮಕ್ಕಳ ಸಮಿತಿಯೊಂದು- ’ಪುಟಾಣಿ ಪಾರ್ಟಿ’-ಮಹತ್ವದ ಪಾತ್ರ ವಹಿಸುತ್ತದೆ. ಸಾಮಾಜಿಕ ಸಮಸ್ಯೆಗಳಿಗೆ ಧ್ವನಿಯಾಗುತ್ತದೆ. ಸಾಮಾಜಿಕ ಕಳಕಳಿಯುಳ್ಳ ಉಪಾಧ್ಯಾಯಿನಿಯೊಬ್ಬರು ಮಕ್ಕಳ ಚಟುವಟಿಕೆಗಳಿಗೆ ಪ್ರೇರಕ ಶಕ್ತಿಯಾಗಿ ನಿಲ್ಲುತ್ತಾರೆ.
ಸಿನಿಮಾದಲ್ಲಿ ನಾಟಕೀಯತೆ ಇಲ್ಲ. ಸೇಟ್ ಮೆಂಟ್ ಗಳಿಲ್ಲ. ಸಿನಿಮಾದ ಆಶಯ ಸಿನಿಮಾದ ಭಾಗವಾಗಿ ಬರುತ್ತದೆ. ಸಂಯಮದ ನಿರೂಪಣೆಯಿದೆ. ಧಾರವಾಡದ ಆಡುಮಾತಿನ ಸೊಗಡಿದೆ. ಅಲ್ಲಿನ ಸ್ಥಳೀಯ ಮಕ್ಕಳ ಸಹಜಾಭಿನಯವಿದೆ. ಎಲ್ಲಕ್ಕಿಂತಲೂ ಮುಖ್ಯವಾಗುವುದು ಇಡೀ ವ್ಯವಸ್ಥೆಯೇ ಭ್ರಷ್ಟಗೊಂಡಾಗ ಮಕ್ಕಳ ಮೂಲಕ ಆಶಾವಾದವನ್ನು ಬಿತ್ತುವುದಿದೆಯಲ್ಲಾ ಅದು ನಿಜಕ್ಕೂ ಗ್ರೇಟ್.

ಕನ್ನಡದ ಪ್ರತಿಭೆಯೊಂದು ಹೊಸ ಪ್ರಯತ್ನಗಳಿಗೆ ಮುಂದಾದಾಗ ಅದಕ್ಕೆ ನಾವು ಪ್ರೋತ್ಸಾಹ ನೀಡಬೇಕು. ಅದರಲ್ಲೂ ತಾಯ್ನಾಡಿನಿಂದ ದೂರವಾಗಿ ಬದುಕುತ್ತಾ ಕನ್ನಡದ ಕೈಂಕರ್ಯದಲ್ಲಿ ತೊಡಗಿಕೊಂಡಿರುವವರ ಬಗ್ಗೆ ನಮಗೆ ಪ್ರೀತಿ, ಗೌರವಗಳಿರಬೇಕು.

ಪುಟಾಣಿ ಪಾರ್ಟಿ ನಿರ್ದೇಶಕರಾದ ಪಿ.ಎನ್.ರಾಮಚಂದ್ರ ಅವರು ಉಡುಪಿಯವರಾದರೂ ಬದುಕು ಕಟ್ಟಿಕೊಂಡಿರುವುದು ದೂರದ ಮುಂಬಯಿಯಲ್ಲಿ. ಪುಣೆಯ ಪಿಲಂ ಇನ್ ಸ್ಟಿಟ್ಯೂಟ್ ಪದವಿಧರರು. ಇವರ ತುಳು ಚಲನಚಿತ್ರ ’ಸುದ್ದ’ ೨೦೦೭ರಲ್ಲಿ ನವದೆಹಲಿಯಲ್ಲಿ ನಡೆದ ಒಷಿಯನ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಸುದ್ದ ಎಂದರೆ ಶುದ್ಧಿಕಾರ್ಯ; ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುವುದು.ಇದು ತುಳುನಾಡಿನಲ್ಲಿ ಆಚರಿಸುವ ಒಂದು ಧಾರ್ಮಿಕ ವಿಧಿ.
ಪುಟಾಣಿ ಪಾರ್ಟಿ ರಾಮಚಂದ್ರರ ಎರಡನೆ ಚಿತ್ರ. ಕಡಿಮೆ ವೆಚ್ಚದಲ್ಲಿ ತಯಾರಾದ ಈಚಿತ್ರ ಉತ್ತಮ ಮಕ್ಕಳ ಚಿತ್ರವೆಂದು ರಾಷ್ಟ್ರ ಪ್ರಶಸ್ತಿ ಪಡೆಯಿತು. ಕೈರೋದಲ್ಲಿ ನಡೆದ ೨೦ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದೆ. ಇಂಥ ಚಿತ್ರವನ್ನು ಮಕ್ಕಳದಿನಾಚರಣೆಯಂದು ತಮ್ಮ ತಾಯ್ನಾಡಿನ ಬಂಧುಗಳು ನೋಡಿ ಆನಂಧಿಸಲಿ; ಪ್ರೋತ್ಸಾಹಿಸಲಿ ಎಂಬ ಉದ್ದೇಶದಿಂದ ಅವರು ಕನ್ನಡದ ಟಿವಿ ಚಾನಲ್ ಗಳನ್ನು ಸಂಪರ್ಕಿಸಿದ್ದರು. ಮಾಧ್ಯಮದ ಗೆಳೆಯರ ನೆರವನ್ನು ಕೋರಿದ್ದರು ಯಾವುದೂ ಫಲ ನೀಡಲಿಲ್ಲ.

ರಾಮಚಂದ್ರರಿಗೆ ಗೊತ್ತಿಲ್ಲದಿರಬಹುದು ಸುದ್ದಿ ಚಾನಲ್ ಗಳು ರಾಜಕಾರಣಿಗಳ ಮಂಗಾಟವನ್ನು ಕವರ್ ಮಾಡುವುದರಲ್ಲಿ ಬಿಜಿ. ಮನೋರಂಜನಾ ಚಾನಲ್ ಗಳು ಟಿಅರ್ ಪಿ ಮೇಲಾಟದಲ್ಲಿ ರಿಯಾಲಿಟಿ ಶೋಗಳ ಹಿಂದೆ ಬಿದ್ದಿವೆ. ಸಂಬಂಧಪಟ್ಟವರು ಮನಸ್ಸು ಮಾಡಿದ್ದರೆ ಒಂದೂಕಾಲು ಘಂಟೆಯ ಈ ಚಿತ್ರವನ್ನು ಯಾರು ಬೇಕಾದರೂ ಪ್ರಸಾರ ಮಾಡಬಹುದಿತ್ತು. ಥಿಯೇಟರ್ ಗಳಂತೂ ಪ್ರಯೋಗಾತ್ಮ ಚಿತ್ರಗಳಿಂದ ಮಾರು ದೂರ.

ಇಂದು ಪುಟಾಣಿ ಪಾರ್ಟಿ ಲೋಕಸಭಾ ಚಾನಲ್ ನಲ್ಲಿ ಪ್ರಸಾರದ ಭಾಗ್ಯ ಕಂಡಿತು.ಈ ಹಿಂದೆ ಸಾಂಗತ್ಯದ ಗೆಳೆಯರ ಪ್ರಯತ್ನದಿಂದ ಕೆಲವು ಜನ ಪುಟಾಣಿ ಪಾರ್ಟಿಯನ್ನು ನೋಡಿದ್ದರು. ಎಲ್ಲಾ ಬಾಗಿಲುಗಳು ಮುಚ್ಚಿದಾಗಲೂ ಯಾವುದೋ ಒಂದು ಬಾಗಿಲು ನಮಗಾಗಿ ತೆರೆದಿರುತ್ತದೆ.ಅದು ಪುಟಾಣಿ ಪಾರ್ಟಿಯ ಆಶಯವೂ ಹೌದು.

Thursday, November 11, 2010

ಜಯಮಾಲಳಿಗೇಕೆ ಅಯ್ಯಪ್ಪನ ಮೋಹ?




ನಾಲ್ಕು ವರ್ಷಗಳ ಹಿಂದೆ ಅಂದರೆ ೨೦೦೬ರ ಆಗಸ್ಟ್೫ರಂದು ನಟಿ ಜಯಮಾಲಾ ಅವರು ತಾನು ತನ್ನ ೨೭ನೇ ವಯಸ್ಸಿನಲ್ಲಿ ಶಬರಿಮಲೆಯ ಅಯ್ಯಪ್ಪನ ದರ್ಶನ ಪಡೆದು ಆತನ ಪಾದಗಳನ್ನು ಸ್ಪರ್ಶಿಸಿದ್ದೇನೆ ಎಂದು ಮಾಧ್ಯಮಗಳೆದುರು ಹೇಳಿಕೊಂಡರು. ಅನಾರೋಗ್ಯಪೀಡಿತರಾದ ತಮ್ಮ ಪತಿಯ ಶ್ರೆಯೋಭಿಲಾಷೆಗಾಗಿ ಅವರು ಈ ಯಾತ್ರೆ ಕೈಗೊಂಡಿದ್ದರು.

ಅವರ ಹೇಳಿಕೆ ದೇಶಾದಾದ್ಯಂತ ಸಂಚಲನವನ್ನುಂಟು ಮಾಡಿತು. ಧಾರ್ಮಿಕ ಮನೋಭಾವದ ಜನರು ಛೇ ಆಕೆ ಹಾಗೆ ಮಾಡಬಾರದಿತ್ತು ಎಂದು ನೊಂದುಕೊಂಡರು.
ಜಯಮಾಲಾ ಹೇಳಿಕೆ ನೀಡಿದ ಬೆನ್ನಲ್ಲೆ ಇನ್ನೊಬ್ಬ ನಟಿ ಗಿರಿಜಾ ಲೋಕೆಶ್ ಕೂಡಾ ತಾವು ಅಯ್ಯಪ್ಪನ ದರ್ಶನ ಪಡೆದಿರುವುದಾಗಿ ಹೇಳಿಕೊಂಡರು.
ಕಾಕತಾಳಿಯವೆಂದರೆ ಇಬ್ಬರೂ ಒಂದೇ ವರ್ಷ ಅಯ್ಯಪ್ಪನ ದರ್ಶನ ಪಡೆದಿರುವುದಾಗಿ ಹೇಳಿಕೊಂಡಿದ್ದರು. ಅದು ೧೯೮೭ರಲ್ಲಿ.

ಅವತ್ತಿನ ಜಯಮಾಲರ ಹೇಳಿಕೆ ಈಗ ನಾಲ್ಕು ವರ್ಷಗಳ ನಂತರ ಮತ್ತೆ ಮರುಜೀವ ಪಡೆದುಕೊಂಡಿದೆ. ಆಕೆಯ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕೇರಳ ಪೋಲಿಸರು ಮುಂದಾಗಿದ್ದಾರೆ. ಭಾರತೀಯ ದಂಡ ಸಂಹಿತೆಯ ೨೯೫ ಎ [ಇದು ಉದ್ದೇಶಪೂರ್ವಕವಾಗಿ ತಪ್ಪು ಮಾಡುವುದನ್ನು ವಿವರಿಸುತ್ತದೆ.] ಕಲಮಿನಡಿ ದೋಷರೋಪಣಾ ಪಟ್ಟಿ ಸಲ್ಲಿಸಲು ನಿರ್ಧರಿಸಲಾಗಿದೆ.

ಜಯಮಾಲಾಗೆ ಇದೆಲ್ಲಾ ಬೇಕಿತ್ತೇ?

ಜಯಮಾಲಾ ತುಳುನಾಡಿನ ಹೆಣ್ಣುಮಗಳು. ಅದು ಮಾತೃಪ್ರಧಾನ ಕುಟುಂಬ ವ್ಯವಸ್ಥೆ ಒಪ್ಪಿಕೊಂಡಿರುವ ನಾಡು. ಇಂದಿಗೂ ಅಲ್ಲಿನ ಮಹಿಳೆಯರು ಸ್ವಾಭಿಮಾನಿಗಳೂ, ಛಲವಂತರೂ, ಧೈರ್ಯಶಾಲಿಗಳೂ, ಆಧುನಿಕ ಮನೋಧರ್ಮದವರೂ ಆಗಿದ್ದಾರೆ. ನಿಜವಾದ ಅರ್ಥದಲ್ಲಿ ಅವರು ಸ್ತ್ರೀವಾದಿಗಳು. ಆದರೂ ಧಾರ್ಮಿಕ ವಿಧಿವಿಧಾನಗಳಲ್ಲಿ, ಆಚರಣೆಯಲ್ಲಿ ಅವರನ್ನು ಅಲ್ಲಿನ ಪುರುಷ ಸಮಾಜ ತಮ್ಮ ಸರಿಸಮಾನರಂತೆ ಕಾಣುವುದಿಲ್ಲ.

ಕೇರಳದ ಕಾಸರಗೋಡು ಸೇರಿದಂತೆ ಅವಿಭಜಿತ ದಕ್ಷಿಣಕನ್ನಡವನ್ನು ತುಳುನಾಡೆಂದು ಕರೆಯಲಾಗುತ್ತದೆ. ಇಲ್ಲಿ ದೇವರಿಗಿಂತಲೂ ದೈವಗಳು ಹೆಚ್ಚು ಪ್ರಭಾವಶಾಲಿ. ದೈವಗಳೆಂದರೆ ಭೂತಗಳು. ಹಿಂದೆ ಇದೇ ನೆಲದಲ್ಲಿ ಬದುಕಿ ಬಾಳಿದ್ದ ವ್ಯಕ್ತಿಗಳು ಸಹವ್ಯಕ್ತಿಗಳ ಕುತಂತ್ರದಿಂದಾಗಿ ದುರಂತಮರಣಕ್ಕಿಡಾಗಿ ಕಾಲಾಂತರದಲ್ಲಿ ದೈವಗಳಾಗಿ ಜನ- ಜಾನುವಾರುಗಳನ್ನು ರಕ್ಷಿಸುವ ರಕ್ಷಕ ದೈವಗಳಾಗಿ ಪೂಜನೀಯರಾಗುತ್ತಾರೆ.

ಇಂತಹ ದೈವಗಳಿರುವ ಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ.ನಮಗೂ ಅಲ್ಲಿಗೆ ಪ್ರವೇಶ ಬೇಕು ಎಂದು ತುಳುನಾಡಿನ ಯಾವ ಮಹಿಳೆಯೂ ಧ್ವನಿಯೆತ್ತಿದ ಉದಾಹರಣೆ ನನಗೆ ಗೊತ್ತಿಲ್ಲ.


ಇಂದಿಗೂ ಧರ್ಮಸ್ಥಳದಲ್ಲಿರುವ ಅಣ್ಣಪ್ಪ ಪಂಜುರ್ಲಿಯ ಬೆಟ್ಟಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ. ತೀರ ಇತ್ತೀಚಿನವರೆಗೂ ಕುಕ್ಕೆಸುಬ್ರಹ್ಮಣ್ಯದಲ್ಲಿರುವ ಕುಮಾರಪರ್ವತವನ್ನು ಮಹಿಳೆಯರು ಏರುವಂತಿರಲಿಲ್ಲ. ಈಗ ಮಹಿಳೆಯರು ಅಲ್ಲಿಗೆ ಟ್ರೆಕ್ಕಿಂಗ್ ಬರುತ್ತಾರೆ.

ಇಂತಹ ತುಳುನಾಡಿನ ಹೆಣ್ಣುಮಗಳು ಜಯಮಾಲಾ, ಹರಿಹರರ ಸಂಯೋಗದಿಂದ ಜನಿಸಿದ ಸ್ತೀ ದ್ವೇಷಿಯಾದ ಅಯ್ಯಪ್ಪನ ಪಾದವನ್ನು ಟಚ್ ಮಾಡಲು ಯಾಕಾದರೂ ಹೋದರೋ! ಹಾಗೊಂದು ವೇಳೆ ಪ್ರಾರ್ಥಿಸಲೇಬೇಕೆಂದಿದ್ದರೆ ಕರಾವಳಿಗೇ ವಿಶಿಷ್ಟ ದೇವರಾದ ಅವನಪ್ಪ ಮಹಾಲಿಂಗೇಶ್ವರನಿರಲಿಲ್ಲವೇ? ಸರ್ವಶಕ್ತೆಯಾದ ಭಗವತಿಯಿರಲಿಲ್ಲವೇ?

ದೈವ ನಂಬಿಕೆ ಎನ್ನುವುದು ತೀರಾ ವೈಯಕ್ತಿಕವಾದುದು. ಅನ್ಯಥಾ ಶರಣಂ ನಾಸ್ತಿ’ ಎಂದು ಮೊರೆಯಿಟ್ಟದ್ದನ್ನು ಜಗಜ್ಜಾಹೀರುಗೊಳಿಸಬಾರದು.

ಕಳೆದ ವಾರ ನಮ್ಮ ರಿಯಾಲಿಟಿ ಶೋ ಒಂದರ ಶೂಟಿಂಗ್ ಗಾಗಿ ಉಳ್ಳಾಲ್ತಿ ಭೂತದ ಸ್ಥಾನಕ್ಕೆ ನಾನು ಹೋಗಿದ್ದೆ. ನಮ್ಮ ಕ್ಯಾಮರಮ್ಯಾನ್ ಗೆ ನಮಗೆ ಎಂತಹ ಶಾಟ್ಸ್ ಬೇಕೆಂದು ಸೂಚನೆ ಕೊಟ್ಟು ನಾನು ದೂರದಲ್ಲಿ ನಿಂತಿದ್ದೆ. ಆದರೂ ಉತ್ಸಾಹ, ಕುತೂಹಲ. ’ನಾನಲ್ಲಿಗೆ ಬರಬಹುದೇ’ ಎಂದು ಕೇಳಿದೆ. ’ನಮ್ಮ ಪೂಜಾರಿಯವರು ಮಹಿಳೆಯರೂ ಇಲ್ಲಿಗೆ ಬರಬಹುದು ಎಂದಿದ್ದಾರೆ’ ಎಂದರು.ನಾನು ದೈರ್ಯದಿಂದ ಮುಂದಡಿಯಿಟ್ಟೆ. ಆದರೆ ಶೂಟಿಂಗ್ ಮುಗಿಸಿ ಬರುತ್ತಿರುವಾಗ ಮಧ್ಯರಾತ್ರಿ, ಕಾಡಿನ ಮದ್ಯೆ ನಮ್ಮ ಕಾರು ಕೆಟ್ಟು ನಿಂತಿತು. ಹೇಗೋ ವಿಷಯ ತಿಳಿದ ಉಳ್ಳಾಲ್ತಿಯ ಪೂಜಾರಿ ಪೋನ್ ಮಾಡಿ ’ನಮ್ಮ ದೈವಕ್ಕೆ ನಿಮ್ಮಿಂದ ಎನೋ ಸೇವೆ ಆಗಬೇಕಾಗಿದೆ.ಒಂದು ಹರಕೆ ಹೇಳಿಕೊಳ್ಳಿ’ಎಂದರು. ಆದರೂ ಎರಡು ದಿನ ನಾವು ಅಲ್ಲಿಯೇ ಇರಬೇಕಾಯಿತು. ಅದೊಂದು ರೋಚಕ ಅನುಭವ .ಅದರ ಬಗ್ಗೆ ಇನ್ನೊಮ್ಮೆ ಬರೆಯುತ್ತೇನೆ.

ಅಹಂಕಾರಕ್ಕೆ ಉದಾಸೀನ ಮದ್ದಾಗಬೇಕು ಎಂಬುದು ಹಿಂದಿನಿಂದಲೂ ಬಂದ ನಾಣ್ಡುಡಿ. ನಾವು ಅವರಿಗೆ ಬೇಡವಾದರೆ ಅವರೂ ನಮಗೆ ಬೇಡ. ಅಷ್ಟೇ.ಅಯ್ಯಪ್ಪನ ವಿಷಯಕ್ಕೂ ಇದು ಅನ್ವಯಿಸುತ್ತದೆ.

Saturday, October 30, 2010

ಶ್ರೀ ರಾಮ ಸ್ತ್ರೀ ವಿರೋಧಿಯೇ..........?







UÀgÀÄqÀ ¥ÀÅgÁtzÀ°è M0zÀÄ ¸À¤ßªÉñÀzÀ G¯ÉèÃR«zÉ. ²ªÀ£À ªÀÄqÀ¢AiÀiÁzÀ ¥ÁªÀðw vÀ£Àß ªÀÄUÀÄ UÀt¥ÀwAiÀÄ£ÀÄß vÀzÉÃPÀavÀÛ¢0zÀ £ÉÆÃqÀÄwÛzÁݼÉ. CrUÀrUÉ ªÀÄÄzÀÄÝ ªÀiÁqÀÄwÛzÁݼÉ. ²ªÀ EzÀ£É߯Áè UÀªÀĤ¸ÀÄwÛzÁÝ£É. CªÀ£À°è FµÉåð ªÉƼÀPÉAiÉÆqÉAiÀÄÄvÀÛzÉ. ¨ÉÆÃ¼É ±À0PÀgÀ »0zÀÄ ªÀÄÄ0zÀÄ AiÉÆÃa¸ÀzÉà ªÀÄUÀ£À vÀ¯ÉAiÀÄ£ÀÄß M0zÉÃnUÉ PÀvÀÛj¹ ©qÀÄvÁÛ£É. UÀt¥ÀwAiÀÄ PÀvÀÛ£ÀÄß PÀvÀÛj¹zÀ E£ÉÆß0zÀÄ PÀxÉ J®èjUÀÆ UÉÆwÛgÀĪÀ0vÀºÀÄzÉÃ.

¥ÁªÀðw ¸ÁߣÀPÉÌ ºÉÆgÀmÁUÀ ¨ÁV°£À°è UÀt¥ÀwAiÀÄ£ÀÄß PÁªÀ°j¸ÀÄvÁÛ¼É. F UÀt¥Àw AiÀiÁgÉ0zÀgÉ, ¥ÁªÀðwAiÀÄ ªÉÄÊAiÀÄ PÉƼɬÄ0zÀ gÀÆ¥ÀÅUÉÆ0qÀªÀ£ÀÄ. CzÀPÉÌ ¥ÁªÀðw fêÀ vÀÄ0©gÀÄvÁÛ¼É. ¥ÁªÀðw F »0zÉ ¸ÁߣÀ ªÀiÁqÀĪÁUÀ AiÀiÁgÀ£ÀÄß PÁªÀ¯ÁV Ej¸ÀÄwÛzÀݼÀÄ? M0zÀÄ ªÀÄUÀÄ«£À ªÀÄÆwð ªÀiÁqÀĪÀµÀÄÖ PÉÆ¼É CªÀ¼À ªÉÄÊAiÀÄ°è ¸À0UÀæºÀªÁVvÉÛÃ....... J0§ÄzɯÁè E°è C¥Àæ¸ÀÄÛvÀ «ZÁgÀ.

CªÀÄä£À ªÀiÁ£À gÀPÀëuÉUÁV ¨ÁV°£À°è PÁªÀ®Ä ¤0vÀ UÀt¥Àw, CªÀÄä£À UÀ0qÀ ²ªÀ£À£Éßà ¨ÁV®°è vÀqÉzÀÄ ©lÖ. vÀ£Àß ¥ÀwßAiÀÄ£ÀÄß £ÉÆÃqÀ®Ä CrØ¥Àr¸À®Ä EªÀ£ÁågÀÄ..... J0zÀÄ ¹nÖ¤0zÀ ²ªÀ UÀt¥ÀwAiÀÄ vÀ¯ÉAiÀÄ£ÀÄß PÀrzÀÄ©lÖ. F JgÀqÀÄ ¸À0zÀ¨sÀðUÀ¼À°è PÁtĪÀÅzÀÄ ²ªÀ¤UÉ ¥ÀwßAiÉÄqÉUÉ EzÀÝ "¥ÉǸɹªï£É¸ï". CzÀÄ ºÀwÛPÀ̯ÁUÀzÀ jÃw. EzÀÄ ªÉÄïÉÆßÃlPÉÌ PÀ0qÀÄ §gÀĪÀ «µÀAiÀÄ. F PÀxÉAiÀÄ°è ²ªÀ UÀt¥ÀwAiÀÄ vÀ¯ÉAiÀÄ£ÀÄß PÀvÀÛj¹ ©qÀÄvÁÛ£É. E°è UÀªÀĤ¸ÀvÀPÀÌ E£ÉÆß0zÀÄ «ZÁgÀ J0zÀgÉ, UÀt¥Àw ¥ÁªÀðwAiÀÄ ªÀÄUÀ, ²ªÀ£À ªÀÄUÀ£À®è!

²ªÀ£À£ÀÄß ¸Àä±Á£À ¨sÉÊgÁV J£ÀÄߪÀªÀjzÁÝgÉ. DzÀgÉ DvÀ wÃgÁ ªÁåªÉÆû PÀÆqÀ. °0UÀ ªÀÄvÀÄÛ ¥Át¦ÃoÀzÀ PÀ®à£ÉAiÉÄà ¸ÁPÀÄ, CªÀ£À «µÀAiÀiÁPÁ0PÉëUÀ½UÉ. DvÀ CzsÀð£ÁjñÀégÀ. vÀ£Àß zÉúÀzÀ CzsÀð ¨sÁUÀzÀ°è ¥ÀwßUÉ £É¯ÉAiÀÄÆgÀ®Ä ©lÖªÀ£ÀÄ. ¥ÀæPÀÈw ªÀÄvÀÄÛ ¥ÀÅgÀĵÀ ¸À0UÀªÀÄzÀ CvÀÄå£ÀßvÀ, PÀ¯ÁvÀäPÀvÉAiÀÄ PÀ®à£ÉAiÉÄà CzsÀð £ÁjñÀégÀzÀ ¸ÀȶÖ.

DzÀgÉ, £ÀªÀÄä §ºÀÄvÉÃPÀ ªÀÄ»¼ÉAiÀÄgÀÄ ²æÃgÁªÀÄ£À0vÀºÀ UÀ0qÀ vÀªÀÄUÉ ¥ÀwAiÀiÁV zÉÆgÀPÀ° J0zÀÄ ºÀ0§°¸ÀÄvÁÛgÉ. EªÀjUÉ ¹ÛçÃAiÀÄ£ÀÄß ¸ÀªÀiÁ£À UËgÀªÀ¢0zÀ PÀ0qÀ ²ªÀ£ÉÃPÉ EµÀÖªÁUÀ°®è? AiÀiÁªÀÅzÉÆà ¸ÀzÀÄzÉÝñÀ¢0zÀ UÀ0UÉAiÀÄ£ÀÄß ²gÀzÀ ªÉÄÃ¯É zsÀj¹zÀÝ£ÀÄß ©lÖgÉ ²ªÀ ¥Àwß ¤µÀ×£ÁVAiÉÄà G½zÀÄPÉÆ0qÀªÀ£ÀÄ. §ºÀıÀB ²ªÀ ªÀÄvÀÄÛ gÁªÀÄgÀ°è £ÀªÀÄä ªÀÄ»¼ÉAiÀÄgÀÄ ºÀ½îAiÀÄ ºÀÄqÀÄUÀ ªÀÄvÀÄÛ ¥ÉÃmÉ ºÀÄqÀÄUÀ£À°è EgÀĪÀ C0vÀgÀªÀ£ÀÄß PÀ0rgÀ¨ÉÃPÀÄ. E°, ºÁªÀÅ, ºÀÄ°, £À0¢, £À«®Ä, D£ÉUÀ¼À ¥ÀjªÁgÀzÉÆqÀ£É ¸Àä±Á£ÀzÀ°è ªÁ¹¸ÀĪÀ ²ªÀ F ªÀÄtÂÚUÉ ºÀwÛgÀzÀªÀ£ÀÄ. C0vÀºÀªÀ£À£ÀÄß EµÀÖ¥ÀlÖgÉ, ªÉÊPÀÄ0oÀzÀ ªÉʨsÉÆÃUÀªÉ°è §gÀ¨ÉÃPÀÄ?

²æÃgÁªÀÄ£À0vÀºÀ UÀ0qÀ, vÀ£ÀUÉ ¥ÀwAiÀiÁV zÉÆgÀPÀ° J0zÀÄ ºÀ0§°¸À®Ä PÁgÀtUÀ¼ÉägÀ§ºÀÄzÀÄ? ¹Ûçà ¸ÀªÀÄÄzÁAiÀÄPÉÌ M½vÀ£ÀÄß ªÀiÁqÀĪÀ AiÀiÁªÀ WÀ£À PÁAiÀÄðªÀ£ÀÄß £ÀªÀÄä ²æÃgÁªÀÄZÀ0zÀæ ªÀiÁrzÁÝ£É? ²æÃgÁªÀÄZÀ0zÀæ£À ºÉ¸Àj£ÉÆqÀ£É ¸ÉÃjPÉÆ0rgÀĪÀ UÀÄt «±ÉõÀtUÀ¼ÀÄ ¥ÀæªÀÄÄRªÁV ªÀÄÆgÀÄ. DvÀ ¦vÀÈ ªÁPÀå ¥Àj¥Á®PÀ, ªÀÄAiÀiÁðzÁ ¥ÀÅgÀĵÉÆÃvÀÛªÀÄ, KPÀ ¥Àwß ªÀævÀ¸ÀÜ. ¦vÀÈ ªÁPÀå ¥Àj¥Á®PÀ£ÁV DvÀ gÁdåªÀ£ÀÄß vÉÆgÉzÀÄ, ªÀ£ÀªÁ¸ÀPÉÌ vÉgÀ½zÀÄÝ DvÀ£À PÀÄlÄ0§zÀ D0vÀjPÀ «µÀAiÀÄ. ªÀÄAiÀiÁðzÁ ¥ÀÅgÀĵÉÆÃvÀÛªÀÄ£ÁV DvÀ£À ªÀvÀð£É K¤zÀÝgÀÆ CzÀÄ gÁdPÁAiÀÄðPÉÌ ¸À0§0¢ü¹zÀÄÝ. E£ÀÄß KPÀ ¥Àwß EzÉAiÀÄ®è, CzÀÄ M0zÀÄ ºÉtÂÚ£À eÉÆvÉV£À ¸À0§0zsÀPÉÌ ¸À0§0¢ü¹zÁÝzÀÝj0zÀ CzÀgÀ §UÉÎ £À£ÀUÉ PÀÄvÀƺÀ®«zÉ.

gÁªÀĤUÉ ¸Àé0vÀ ªÀåQÛvÀé J0§Ä¢®è. DvÀ AiÀiÁgÀ PÉÊAiÀÄ®Æè ¨ÉÃPÁzÀgÀÆ zÁ¼ÀªÁUÀ§ºÀÄzÁzÀ ¤ªÉÆðû ªÀåQÛ. ¥ÀǪÁð¥ÀgÀ «ZÁgÀ ªÀiÁqÀzÉà DvÀ E£ÁågÉÆà ºÉýzÀ DzÉñÀUÀ¼À£ÀÄß eÁj ªÀiÁqÀÄwÛzÀÝ. DvÀ §zÀÄQ£ÀÄzÀÝPÀÆÌ ¨ÉÃgÉAiÀĪÀgÀ ¤zÉðñÀ£ÀzÀ0vÉ §zÀÄQzÀ. DvÀ¤UÉ £ÉÃgÀªÁV ¢lÖvÀ£À¢0zÀ §zÀÄPÀ£ÀÄß JzÀÄj¸ÀĪÀÅzÀÄ UÉÆwÛgÀ°®è. AiÀiÁgÉÆà ºÉýzÀgÉ0zÀÄ gÁdå vÉÆgÉzÀÄ PÁrUÉ ºÉÆÃzÀ.

F ªÉÆzÀ¯Éà «±Áé«ÄvÀæ ºÉýzÀ£É0zÀÄ RgÀ zsÀƵÀtgÀ£ÀÄß PÉÆ0¢zÀÝ. ªÀ£ÀªÁ¸ÀzÀ ¸ÀªÀÄAiÀÄzÀ°è ¸ÀÄVæêÀ ºÉýzÀ£É0zÀÄ ªÁ°AiÀÄ£ÀÄß ªÀÄgÉAiÀÄ°è ¤0vÀÄ PÉÆ0zÀ. ¸ÁªÀiÁ£Àå CUÀ¸À£ÉƧâ£À ªÀiÁvÀÄ PÉý ¹ÃvÉAiÀÄ£ÀÄß PÁrUÉ CnÖzÀ. AiÀiÁgÉÆà ¥ÀÅgÉÆûvÀgÀ ¥Àæ¯ÉÆèsÀ£É¬Ä0zÀ ±ÀÆzÀæ vÀ¥À¹é ±À0¨sÀÄPÀ£À PÉÆ¯É ªÀiÁrzÀ. §ºÀıÀB ¸Àé0vÀ ¤zsÁðgÀ vÉUÉzÀÄPÉÆ0qÀÄ ªÀiÁrzÀ KPÉÊPÀ PÉ®¸À J0zÀgÉ ¹ÃvÉAiÀÄ£ÀÄß CVß ¥ÀjÃPÉëUÉ M¼À¥Àr¹zÀÄÝ ªÀiÁvÀæ.

²æÃgÁªÀÄZÀ0zÀæ ¹Ûçà «gÉÆâüAiÀiÁV¢ÝgÀ§ºÀÄzÉÃ? ºËzÀÄ J£ÀÄߪÀÅzÀPÉÌ gÁªÀiÁAiÀÄtzÀ°è, ºÀ®ªÁgÀÄ ¤zÀ±Àð£ÀUÀ¼ÀÄ zÉÆgÀPÀÄvÀÛªÉ.

DvÀ¤UÉ ¹ÛçÃAiÀÄgÀ §UÉÎ UËgÀªÀ EgÀ°®è. CªÀgÀ£ÀÄß £ÉÃgÀªÁV JzÀÄj¸ÀĪÀÅzÀÄ CªÀ¤0zÀ ¸ÁzsÀåªÁUÀÄwÛgÀ°®. CzÀgÀ ªÉÆzÀ® ¸ÀĽªÀÅ ¹UÀĪÀÅzÀÄ ªÀ£ÀªÁ¸ÀPÉÌ ºÉÆgÀlÄ ¤0vÀ ¸À0zÀ¨sÀðzÀ°è. P˸À®å¼À PÀtÂÚÃjUÉ C°è ¨É¯É EgÀ°®è. ¥À±ÁÑvÁÛ¥À¢0zÀ vÀ¤ß0zÀ DzÀ CZÁvÀÄAiÀÄðªÀ£ÀÄß ªÀÄvÉÛ ¸Àj¥Àr¸À¯É0zÀÄ §0zÀ PÉÊPÉìÄAiÀÄ ¨ÉÃrPÉUÉ C°è ªÀÄ£ÀßuÉ EgÀ°®è. J®èQÌ0vÀ «ÄV¯ÁV CªÀ¤0zÀ H«Äð¼ÉUÉ WÉÆÃgÀ C£ÁåAiÀĪÁ¬ÄvÀÄ. Erà gÁªÀiÁAiÀÄtzÀ°è ¥ÀÅgÀĵÀ ¥ÁvÀæUÀ¼É®è fêÀ «gÉÆâü ¤®ÄªÀ£Éßà vÀ¼É¢zÀÝgÉ ¹Ûçà ¥ÁvÀæUÀ¼ÀzÀÄÝ ªÀiË£À gÉÆÃzÀ£À.

gÁªÀÄ PÁrUÉ ºÉÆgÀlÄ ¤0vÁUÀ ¹ÃvÉ »0¨Á°¹zÀ¼ÀÄ. ®PÀë÷ät eÉÆvÉAiÀÄ°è §0zÀ. gÁªÀÄ MvÁ۬ĹzÀÝgÉ ®PÀë÷ät gÁªÀÄ £Ár£À¯Éèà G½AiÀÄÄwÛzÀÝ. PÉÆ£ÉAiÀÄ ¥ÀPÀë H«Äð¼ÉAiÀÄ£ÁßzÀgÀÆ eÉÆvÉAiÀÄ°è PÀgÉzÀÄPÉÆ0qÀÄ ¨Á J0¢zÀÝgÉ ®PÀë÷ät CtÚ£À DeÉÕAiÀÄ£ÀÄß ²gÀ¸Á ªÀ»¸ÀÄwÛzÀÝ. ²æÃgÁªÀĤUÉ ¹ÛçÃAiÀÄgÀ C0vÀgÀ0UÀzÀ CjªÀÅ EgÀ°®è. CªÀvÁgÀ ¥ÀÅgÀĵÀ£ÁzÀ ²æÃgÁªÀÄ ¹Ûçà «gÉÆâüAiÀiÁVzÀÝ. ºÁUÁVAiÉÄà ªÀÄÄ0¢£À ²æÃPÀȵÀÚ CªÀvÁgÀzÀ°è DvÀ ¹ÛçïÉÆî£ÁzÀ.

DvÀ£À ¹Ûçà «gÉÆâü zsÉÆÃgÀuÉ £ÀªÀÄUÉ ¸ÀàµÀÖªÁV UÉÆvÁÛUÀĪÀÅzÀÄ ªÁ° ªÀzsÉAiÀÄ ¸À0zÀ¨sÀðzÀ°è. vÀªÀÄä ¸ÀÄVæêÀ£À ªÀÄqÀ¢AiÀiÁzÀ vÁgÉAiÀÄ£ÀÄß CtÚ ªÁ° PÀgÉvÀ0zÀÄ vÀ£Àß ªÀÄ£ÉAiÀÄ°è ElÄÖPÉÆ0qÀ. F zÀÆgÀ£ÀÄß ²æÃgÁªÀÄ£À°è ¸ÀÄVæêÀ vÀ0zÁUÀ gÁªÀÄ »0zÀÄ ªÀÄÄ0zÀÄ AiÉÆÃa¸ÀĪÀÅ¢®è. PÀ¤µÀ× «ZÁgÀuÉAiÀÄ£ÀÆß £ÀqɸÀzÉà ªÁ°AiÀÄ£ÀÄß ªÀÄgÉAiÀÄ°è ¤0vÀÄ PÉÆ0zÉà ©lÖ. ºÁUÉ ªÀiÁqÀĪÀÅzÀgÀ ªÀÄÆ®PÀ ¹Ûçà C¹ÛvÀéªÀ£Éßà ¤gÁPÀj¹ ©qÀÄvÁÛ£É. EzÀgÀ eÉÆvÉUÉ £ÁåAiÀÄ ¤ÃrPÉAiÀÄ£ÀÄß KPÀ¥ÀQëÃAiÀÄUÉƽ¸ÀÄvÁÛ£É. M0zÀÄ ªÉÃ¼É vÁgÉ EµÀÖ ¥ÀmÉÖà ªÁ°AiÀÄ eÉÆvÉ ºÉÆgÀlÄ ºÉÆÃVzÀÝgÉÃ...........?

²æÃgÁªÀÄ ¹ÛçÃAiÀÄgÀ ªÉÄÃ¯É J¸ÀVzÀ PËæAiÀÄðzÀ ¥ÀgÀªÀiÁªÀ¢ü J0zÀgÉ ±ÀÆ¥Àð£ÀTAiÀÄ Q«, ªÀÄÆUÀÄ ªÀÄvÀÄÛ ªÉƯÉUÀ¼À£ÀÄß PÀvÀÛj¹zÀÄÝ. ¹ÛçÃvÀézÀ ¥ÀæwÃPÀªÁzÀ ªÉƯÉUÀ¼ÀÄ, ¸Ë0zÀAiÀÄðzÀ ¥ÀæwÃPÀªÁzÀ ªÀÄÆUÀ£ÀÄß PÀvÀÛj¹ «gÀÆ¥ÀUÉƽ¸À®Ä M§â ¸Áår¸ïÖUÉ ªÀiÁvÀæ ¸ÁzsÀå. CªÀ¼ÀÄ ªÀiÁrzÀÝ vÀ¥ÁàzÀgÀÆ K£ÀÄ?

±ÁåªÀĸÀÄ0zÀgÀ£ÁzÀ ²æÃgÁªÀÄ£À ¸Ë0zÀAiÀÄðPÉÌ ªÀÄ£À¸ÉÆÃvÀÄ, "£Á£ÀÄ ¤£ÀߣÀÄß ¦æÃw¸ÀÄvÉÛãÉ, £À£ÀߣÀÄß ªÀÄzÀĪÉAiÀiÁUÀÄ" C0zÀzÀÄÝ. M°zÀÄ §0zÀ ¥ÉæêÀÄ® ªÀÄ£À¹ì£ÀªÀ¼À£ÀÄß C0UÀZÉÒÃzsÀ£À ªÀiÁr «gÀÆ¥ÀUÉƽ¹zÀÄÝ ªÀÄAiÀiÁðzÁ ¥ÀÅgÀĵÉÆÃvÀÛªÀÄ£À WÀ£ÀvÉUÉ vÀPÀÄÌzÁzÀzÉÝÃ?

¤gÁPÀgÀuÉAiÀÄ£ÀÄß ¸ÀÆa¸À®Ä ¨ÉÃgÉ zÁjUÀ¼Éà EgÀ°®èªÉÃ?

¹Ûçà C¹ÛvÀézÀ ¤gÁPÀgÀuÉAiÉÄà ²æÃgÁªÀÄ£À ¸ÁÜ¬Ä ¨sÁªÀ. CªÀ£À ªÀåQÛvÀézÀ M¼ÀUÉ, ¥ÉǼÀÄîvÀ£À«vÀÄÛ. ºÁUÁVAiÉÄà D PÁ® WÀlÖzÀ ¥ÀÅgÀĵÀ ¥ÀæzsÁ£À ¸ÀªÀiÁd ²æÃgÁªÀÄ£À£ÀÄß vÀ£Àß zÁ¼ÀªÀ£ÁßV §¼À¹PÉÆ0rvÀÄÛ. D ªÀiË®åUÀ¼À£ÀÄß PÁ¥ÁrPÉÆ0qÀÄ §0zÀzÀݵÉÖà CªÀ£À ªÉÄïÉä.

M¼ÀUÉƼÀUÉ SÁ°AiÀiÁVzÀÝ ²æà gÁªÀÄ ºÉÆgÀUÉ J®è z˧ð®åUÀ¼À£ÀÄß «ÄÃjzÀ ªÀåQÛAiÀÄ0vÉ PÁt¹PÉƼÀÄîwÛzÀÝ.

¹ÛçÃAiÀÄgÀ zÀȶ֬Ä0zÀ £ÉÆÃrzÀgÉ gÁªÀĤV0vÀ gÁªÀt£Éà JµÉÆÖà ªÁ¹. DvÀ ¹ÃvÉAiÀÄ£ÀÄß PÀzÉÆÝAiÀÄÄÝ C±ÉÆÃPÀ ªÀ£ÀzÀ°è ElÖgÀÆ CªÀ¼À£ÀÄß UËgÀªÀ¢0zÀ £ÀqɹPÉÆrzÀÝ. CªÀ¼À£ÀÄß M°¹PÉƼÀî®Ä ¥ÀæAiÀÄw߸ÀÄwÛzÀÝ. C0zÀgÉ CªÀ½UÉÆ0zÀÄ C©ü¥ÁæAiÀÄ«zÉ, ªÀÄ£À¹ìzÉ J0§ÄzÀÄ CªÀ¤UÉ UÉÆwÛvÀÄÛ.

DzÀgÉ ²æÃgÁªÀÄ ªÀiÁrzÉÝãÀÄ?

¸À0±ÀAiÀÄ¢0zÀ CªÀ¼À£ÀÄß CVߥÀjÃPÉëUÉ FqÀÄ ªÀiÁrzÀÝ. PÉÆ£ÉUÉ vÀÄ0§Ä UÀ©üðtÂAiÀÄ£ÀÄß ¤zÀðAiÉĬÄ0zÀ PÁrUÉ CnÖzÀ. PÉÆ£ÉUÉ ®ªÀ - PÀıÀgÀÄ vÀ£Àß ªÀÄPÀ̼É0zÀÄ UÉÆvÁÛzÁUÀ ¹ÃvÉAiÀÄ£ÀÄß CAiÉÆÃzsÉåUÉ PÀgÉvÀgÀ®Ä ªÀÄ£À¸ÀÄì ªÀiÁrzÀÝ. DzÀgÉ ¹ÃvÉ M¦àPÉÆ0qÀ¼ÉÃ? E®è. DPÉ ¨sÀÆ«Ä ©jzÀÄ M¼ÀUÀqÉ ¸ÉÃj ºÉÆÃzÀ¼ÀÄ J0zÀÄ gÁªÀiÁAiÀÄt ºÉüÀÄvÀÛzÉ.

DzÀgÉ DPÉ vÀ£ÀUÁzÀ CªÀªÀiÁ£À¢0zÀ £ÉÆ0zÀÄ ¨Á«UÉÆÃ, PÀgÉUÉÆà ©zÀÄÝ DvÀäºÀvÉå ªÀiÁrPÉÆ0qÀ¼É0§ÄzÀÄ ºÉZÀÄÑ ¸Àj. ಅಕೆ ಅಮ್ಮ ಭೂದೇವಿಯ ಒಡಲಲ್ಲಿ ಸೇರಿಹೋದ ಜಾಗ ಸೀತಾಮಡಿಯನ್ನು ನಾನು ನೋಡಿದ್ದೇನೆ. ಅಲ್ಲೀಗ ಆಕೆಗೆ ದೇವಸ್ಥಾನವನ್ನು ಕಟ್ಟಲಾಗಿದೆ. ಜನವಸತಿ ಕಮ್ಮಿಯಿರುವ ಉತ್ತರಪ್ರದೇಶದ ಆ ಜಾಗವನ್ನು ಪರಿಶೀಲಿಸಿದರೆ ಅದು ಹಿಂದೆ ಆಳವಾದೆ ಕೆರೆಯಾಗಿರಬೇಕೆಂದು ಭಾಸವಾಗುತ್ತದೆ. ²æÃgÁªÀÄ ¹Ûçà ¥ÀgÀ ¤®ÄªÀ£ÀÄß ¸ÀªÀiÁ¢ü ªÀiÁrzÀÝ£ÀÄß EzÀÄ ¸À0PÉÃw¸ÀÄvÀÛzÉ.

gÁªÀiÁAiÀÄtzÀ°è AiÀiÁªÀ ¹Ûçà ¥ÁvÀæªÀÇ gɧ¯ï DUÀĪÀÅzÉà E®è. ¸Àé®à ªÀÄnÖUÉ gɧ¯ï DzÀªÀ¼É0zÀgÉ, ±ÀÆ¥Àð£ÀT. vÀ£ÀUÁzÀ CªÀªÀiÁ£ÀªÀ£ÀÄß CtÚ gÁªÀt£À°è ºÉý CªÀ£À£ÀÄß gÉÆaÑUÉ©â¸ÀÄvÁÛ¼É. G½zÀªÀgɯÁè M¼ÀV0zÉƼÀUÉ £ÀgÀ½zÀªÀgÉÃ. PÉÊPÉÃ¬Ä ªÀÄvÀÄÛ ªÀÄ0xÀgÉ M0zÀÄ «ÄwAiÉƼÀUÉ vÀªÀÄä C¹ÛvÀéªÀ£ÀÄß vÉÆÃj¸À®Ä ¥ÀæAiÀÄvÀß ¥ÀnÖzÁÝgÉ. ¹ÃvÉ §0zÀ PÀµÀÖªÀ£Éß®è ºÀ®Äè PÀaÑ ¸À»¸ÀÄvÁÛ¼É. vÀÄn ©ZÀÄѪÀÅ¢®è.

a£ÀßzÀ f0PÉ ¨ÉÃPÉ0zÀÄ ºÀoÀ »r¢zÀÝ£ÀÄß ©lÖgÉ CªÀ¼À ªÀÄ£À¸ÀÄì J®Æè ©aÑPÉƼÀÄîªÀÅ¢®è. UÀ0qÀ£À£ÀÄß CZÀ®ªÁV £À0©zÀ¼ÀÄ. ¨sÁgÀwÃAiÀÄ ¹ÛçÃAiÀÄ PÀvÀðªÀåzÀ0vÉ ªÀÄPÀ̼À£ÀÄß ºÉvÀÄÛ ¸ÁQ ¸À®» UÀ0qÀ£À PÉÊUÉ M¦à¹ ¸Àw zsÀªÀÄðªÀ£ÀÄß ¥Á°¸ÀÄvÁÛ¼É.

DzÀgÉ ²ªÀ£À ºÉ0qÀw ¥ÁªÀðw ºÁUÀ®è. DPÉ ±ÀQÛ ¸ÀégÀƦtÂ. ¹ÛçÃAiÀÄ PÀvÀðÈvÀé ±ÀQÛAiÀÄ°è £À0©PÉ ElÖ¼ÀÄ. M0zÀÄ jÃwAiÀÄ°è EªÀgÀzÀÄ DzÀ±ÀðzÀ zÁ0¥ÀvÀå. C£ÀÄgÀÆ¥À eÉÆÃr. zÀPÀë gÁd£À ªÀÄUÀ¼ÁzÀ zÁPÁë¬Ät vÀªÀgÀÄ ªÀÄ£ÉAiÀÄ°è CªÀªÀiÁ£ÀªÁ¬ÄvÉ0zÀÄ C°èAiÉÄà EzÀÝ AiÀÄdÕ PÀÄ0qÀPÉÌ ºÁj DvÀäºÀvÉå ªÀiÁrPÉÆ0qÀ¼ÀÄ. ²ªÀ M0nAiÀiÁzÀ. WÉÆÃgÀ vÀ¥À¹ìUÉ PÀĽvÀ. zÁPÁë¬Ät ¥ÀªÀðvÀ gÁd¤UÉ ªÀÄUÀ¼ÁV ºÀÄnÖ ¥ÁªÀðwAiÀiÁzÀ¼ÀÄ. vÁ£ÀÆ vÀ¥À¸Àì£ÁßZÀj¸ÀÄvÀÛ ²ªÀ£À£ÀÄß M°¹PÉÆ0qÀÄ ªÀÄgÀÄ ªÀÄzÀĪÉAiÀiÁzÀ¼ÀÄ.

EzÀÄ M0zÀÄ jÃwAiÀÄ d£Áä0vÀgÀzÀ ¸À0§0zsÀ. DzÀ PÁgÀtªÉà ºÀoÀ »rzÀÄ ¥ÁªÀðw UÀt¥ÀwAiÀÄ£ÀÄß ªÀÄvÉÛ §zÀÄQ¹PÉÆ0qÀ¼ÀÄ. ¥ÁªÀðw ²ªÀ¤UÉ M°zÀÄ §0zÀªÀ¼ÀÄ. ¹ÃvÉAiÀÄ£ÀÄß gÁªÀÄ ¥ÀtzÀ°è UÉzÀÄÝ vÀ0zÀªÀ£ÀÄ. M°zÀÄ §gÀĪÀÅzÀPÀÆÌ UÉzÀÄÝ vÀgÀĪÀÅzÀPÀÆÌ ªÀåvÁå¸À EzÉAiÀÄ®èªÉÃ? ºÁVzÀÝgÀÆ £ÀªÀÄä ªÀÄ»¼ÉAiÀÄjUÉ ²ªÀ£ÉÃPÉ EµÀÖªÁUÀĪÀÅ¢®è? EzÀPÉÌ GvÀÛgÀªÀ£ÀÄß PÉÆqÀĪÀÅzÀÄ CµÀÄÖ ¸ÀÄ®¨sÀªÀ®è.

¸Á»vÀåPÉÌ £ÉÆ¨É¯ï ¥Àæ±À¹Û ¥ÀqÉzÀ ¹ÃªÀÄ£ï zÀ ¨ÉÆêÁ vÀªÀÄä "¸ÉPÉ0qï ¸ÉPïì" ¥ÀŸÀÛPÀzÀ°è »ÃUÉ ºÉüÀÄvÁÛgÉ:

"¸ÀªÀĸÀÛ ªÀÄ£ÀÄPÀÄ®ªÉà UÀ0qÁV ©nÖzÉ, DvÀ ºÉtÚ£ÀÄß ºÉtÂÚ£À ¸ÁéAiÀÄvÀÛvÉAiÀÄ°è «ªÀj¸ÀzÉà vÀ£ÀUÉ ¸À0§0¢ü¹zÀ0vÉ, vÀ£Àß zÀȶÖPÉÆãÀPÉÌ C£ÀÄUÀÄtªÁV ªÁåSÁ夸ÀÄvÁÛ£É. ºÉtÄÚ ¸ÀévÀ0vÀæ ªÀåQÛAiÀÄ®è. DPÉAiÀÄ C¹ÛvÀé UÀ0qÀ¹£À C¥ÀàuÉAiÀÄ°èzÉ."

C0zÀgÉ E°è ºÉtÄÚ PÀÆqÀ ¥ÀÅgÀĵÀ ¥ÀgÀªÁVAiÉÄà AiÉÆÃa¸ÀÄvÁÛ¼É. CªÀ½UÉ UÉÆwÛ®èzÀ0vÉ. ¥ÀÅgÀĵÀ ¥ÀæzsÁ£À ªÀiË®åUÀ¼À£Éßà DPÉ ¥ÉÇö¸ÀÄvÁÛ¼É. ºÁUÁV CªÀ½UÉ ²ªÀ¤V0vÀ gÁªÀÄ£Éà ªÀÄÄRå£ÁUÀÄvÁÛ£É.

[ಹಿಂದೆಂದೋ ಬರೆದ ಲೇಖನವನ್ನು ಮಂಗಳೂರಿನ ನಿಯತಕಾಲಿಕವೊಂದು ಮರುಮುದ್ರಣಕ್ಕಾಗಿ ಕೇಳಿದೆ. ಅಲ್ಲಿಗೆ ಕಳಿಸುವಾಗ ಬ್ಲಾಗಿಗೂ ಪೋಸ್ಟ್ ಮಾಡಿದೆ.ಸ್ವಲ್ಪ ಬಿಝಿ ಕಣ್ರಿ ನಾನು. ಕ್ಷಮೆಯಿರಲಿ]



Sunday, October 17, 2010

ಎದೆಯು ನರಳಿ ಮೊರೆಯುತಿದೆ









ಇಂದು ಕೊನೆಯ ಎರಡು ಮಕ್ಕಳನ್ನು ಕೊಟ್ಟುಬಿಟ್ಟೆ. ಯೋಗ್ಯ ಮನೆಗಳನ್ನು ಮಕ್ಕಳು ಸೇರಿದರೆಂಬ ಸಮಾಧಾನ ಇದೆಯಾದರೂ ಅದಕ್ಕೂ ಮೀರಿದ ಬಿಕ್ಕಳಿಕೆಯಿಂದಾಗಿ ಇದನ್ನು ಕೀ ಮಾಡಲು ಸಾಧ್ಯವಾಗದೆ ಕಣ್ಣೀರು ಹರಿಯುತ್ತಿದೆ. ದುಪ್ಪಟ ಒದ್ದೆಯಾಗುತ್ತದೆ. ಮೂಗು ಉರಿಯುತ್ತಿದೆ. ಈ ಮೂರೂವರೆ ತಿಂಗಳಲ್ಲಿ ಅವು ನನಗೆ ಕೊಟ್ಟ ಭಾವನಾತ್ಮಕ ಆಸರೆಯನ್ನು ಇದುವರೆಗೆ ಯಾರೂ ಕೊಟ್ಟ ನೆನಪು ನನಗಿಲ್ಲ. ನನ್ನ ಮೂರುವರೆ ತಿಂಗಳ ಪ್ರತಿಕ್ಷಣವೂ ಅವುಗಳಿಗಾಗಿಯೇ ಮೀಸಲಾಗಿತ್ತು. ಅವುಗಳಿಗೂ ನಾನೇ ಸರ್ವಸ್ವವಾಗಿದ್ದೆ.

ಬೆಳಿಗ್ಗೆ ನಾನು ಏಳುವುದನ್ನೇ ಅವು ಕಾಯುತ್ತಾ ಕುಳಿತ್ತಿರುತ್ತಿದ್ದವು. ನಿಗದಿತ ಸಮಯವಾದರೂ ನಾನು ಏಳದೆ ಇದ್ದಾಗ ಅವು ಕುಂಯಿಗುಡುತ್ತಾ ತಮ್ಮ ಪುಟ್ಟ ಪುಟ್ಟ ಕಾಲುಗಳಿಂದ ಮೃದುವಾಗಿ ಪರಚುತ್ತಿದ್ದವು. ಎದ್ದ ಮೇಲೆ ಅವು ಸದಾ ನನ್ನ ಹಿಂಬಾಲಕರು. ಯಾಕೆಂದರೆ ಅವು ಪಗ್ ಜಾತಿಗೆ ಸೇರಿದವು. ಹಚ್ ಪೋನ್, ನಂತರ ವೋಡಪೋನ್ ಎಂದು ಹೆಸರು ಬದಲಾಯಿಸಿಕೊಂಡ ಪೋನಿನ ಬ್ರಾಡ್ ಅಂಬಾಸಿಡರ್ ಇವು!.ರಾತ್ರಿ ಕುತ್ತಿಗೆಯನ್ನು ಪರಚಿ, ಕಿವಿಯನ್ನು ಕಚ್ಚಿ ಕಚಗುಳಿಯಿಟ್ಟು ಅಲ್ಲಿಯೇ ತಲೆಯಿಟ್ಟು ಮಲಗಿಬಿಡುತ್ತಿದ್ದವು

ಮೂರುವರೆ ತಿಂಗಳ ಕಾಲ ಅಕ್ಷರಶಃ ದ್ವೀಪವಾಸಿಯಾಂತಾಗಿಸಿ, ನನ್ನೆಲ್ಲಾ ಹವ್ಯಾಸ, ಚಟುವಟಿಗಳನ್ನು ನಿಯಂತ್ರಿಸಿ, ನನ್ನ ನಿದ್ದೆಯನ್ನು ಅಪಹರಿಸಿ, ಮೈ ಮನಗಳನ್ನು ಬಳಲಿಸಿದರೂ ಅವು ಪ್ರೀತಿಯ ಮುದ್ದೆಯಂತಿದ್ದವು.

ಈಗ ಅವು ನನ್ನ ಮಡಿಲಲ್ಲಿ ಇಲ್ಲ.

ಅವುಗಳ ಅಮ್ಮ ಊಟ ಮಾಡದೆ ಮುದುಡಿ ಮಲಗಿದೆ. ನನ್ನ ಗಂಟಲಲ್ಲಿಯೂ ಅನ್ನ ಇಳಿಯುತ್ತಿಲ್ಲ. ಉರಿಯುತ್ತಿರುವ ಕಣ್ಣಿಗೆ ಒಂಚೂರು ವಿಶ್ರಾಂತಿ ಬೇಕಾಗಿದೆ. ಈಗ ನಾನೂ ಮಲಗಿ, ಮುಂದೊಂದು ದಿನ ಆ ಪುಟ್ಟ ಕಂದಮ್ಮಗಳ ವಿವರವಾಗಿ ಬರೆಯುತ್ತೇನೆ.

Wednesday, September 29, 2010

’ರಿಯಾಲಿಟಿ ಶೋ’ಗಳ ವೈನೋದಿಕ ಹಿಂಸೆ




ಇಪ್ಪತ್ತು ವರ್ಷಗಳ ಹಿಂದಿನ ಸಮಾಚಾರ; ’ಮನ್ವಂತರ’ ಎಂಬ ರಾಜಕೀಯ ವಾರಪತ್ರಿಕೆಯ ಮುಖಾಂತರ ನಾನು ಪತ್ರಿಕಾರಂಗಕ್ಕೆ ಅಡಿಯಿಟ್ಟೆ. ಆ ಪತ್ರಿಕೆಯ ಸಹ ಪ್ರಕಟಣಾ ಮಾಸಪತ್ರಿಕೆಯೊಂದಿತ್ತು. ಅದರ ಹೆಸರು ’ಸುರತಿ’. ಮಾರುಕಟ್ಟೆಯಲ್ಲಿ ಅದಕ್ಕೆ ಪೈಪೋಟಿ ನೀಡುತ್ತಿರುವ ಇನ್ನೊಂದು ಮಾಸಪತ್ರಿಕೆಯಿತ್ತು. ಅದರ ಹೆಸರು ’ರತಿವಿಜ್ನಾನ’. ಸರ್ಕ್ಯೂಲೇಶನಿನಲ್ಲೂ ಪರಸ್ಪರ ಪೈಪೋಟಿ ನೀಡುತ್ತಿದ್ದ ಆ ಪತ್ರಿಕೆಗಳ ಒಟ್ಟು ಪ್ರಸರಣ ಸಂಖ್ಯೆ ಐದು ಲಕ್ಷ ದಾಟಿ ಹೋಗುತ್ತಿತ್ತು.

ಪ್ರಸರಣದ ದೃಷ್ಟಿಯಿಂದ ನೋಡಿದರೆ ಅವೆರಡು ಪತ್ರಿಕೆಗಳು ಜನಪ್ರಿಯವಾದ ಮಾಸಪತ್ರಿಕೆಗಳು. ಆದರೆ ಅವು ಮನುಷ್ಯನ ಬೇಸಿಕ್ ಇನ್ಸ್ಟಿಂಗ್ಟ್ ಆದ ಲೈಂಗಿಕ ಕುತೂಹಲವನ್ನು, ತಣಿಸುವ, ಕೆರಳಿಸುವ ಪುಸ್ತಕಗಳು ಅಷ್ಟೆ. ’ಸೆಗಣಿಯಲ್ಲಿ ಸಾವಿರ, ಮಧ್ಯಾಹ್ನಕ್ಕೆ ಲಯ’ ಎಂಬಂತೆ ಅದರಿಂದಾಚೆಗೆ ಅವುಗಳಿಗೆ ಪ್ರತ್ಯೇಕ ಐಡೆಂಟಿಟಿ ಇರಲಿಲ್ಲ.

ಅದು ಮುದ್ರಣ ಮಾಧ್ಯಮದ ಸಾರ್ವಭೌಮತ್ವದ ಕಾಲಘಟ್ಟ. ಈಗ ಏನಿದ್ದರೂ ದೃಶ್ಯ ಮಾಧ್ಯಮದ ಯುಗ. ಸರ್ಕ್ಯೂಲೇಷನ್ ಎಂಬುದು ಹಿಂದಕ್ಕೆ ಸರಿದು ಟಿ.ಆರ್.ಪಿ ಎಂಬ ಭೂತ ಟಿ.ವಿಯನ್ನು ಆಳುತ್ತಿರುವ ಕಾಲ. ಇಲ್ಲೂ ಅದೇ ಟೆಕ್ನಿಕ್; ಮನುಷ್ಯನ ಮೂಲಭೂತ ಕಾಮನೆಗಳನ್ನು ತಣಿಸುವುದು. ಮನುಷ್ಯ ಮೂಲತಃ ಕ್ರೂರಿ. ಆತ ಹಿಂಸ್ರಾ ಪಶು. ಆತನಲ್ಲಿರುವ ಆಕ್ರಮಣಶೀಲತೆ ಸೂಕ್ತ ಸಂದರ್ಭಕ್ಕಾಗಿ ಹೊಂಚು ಹಾಕುತ್ತಿರುತ್ತದೆ.

ಇತ್ತೀಚೆಗೆ ಜನಪ್ರಿಯವಾಗುತ್ತಿರುವ ಟಿ.ವಿ ಧಾರಾವಾಹಿಗಳನ್ನೇ ನೋಡಿ; ಟಿ,ಅರ್.ಪಿ ಗ್ರಾಪ್ ಉರ್ಧ್ವಮುಖಿಯಾಗಿ ಸಾಗಿದ್ದು, ಸಾಗುತ್ತಿರುವುದು; ಸಚ್ ಕಾ ಸಾಮ್ನ್, ಇಮೋಷನಲ್ ಅತ್ಯಾಚಾರ್, ಕನ್ನಡದ ಹಳ್ಳಿಹೈದ ಪ್ಯಾಟೆಗೆ ಬಂದ...ಮುಂತಾದ ಭಾವಕೋಶವನ್ನು ಕಲುಷಿತಗೊಳಿಸುವ ದಾರಾವಾಹಿಗಳಿಗೆ ಮಾತ್ರ. ಇದರ ಜೊತೆಗೆ ಕೃತ್ರಿಮತೆಯನ್ನೇ ಢಾಳಾಗಿ ತೋರಿಸುವ ಸ್ವಯಂವರದ ಧಾರಾವಾಹಿಗಳು, ಖಾಸಗಿ ಬದುಕನ್ನು ನಾಟಕಿಯವಾಗಿ ರಂಗದ ಮೇಲೆ ತಂದು ಸಾರ್ವಜನಿಕರ ಬಾಯಿಗೆ ಎಲೆಯಡಿಕೆಯಾಗಿಸುವ ಕಥೆಯಲ್ಲ ಜೀವನಗಳು; ಬದುಕು ಜಟಕಾ ಬಂಡಿಗಳು. ಸಾವಿನಾಚೆಗೆ ಏನಿದೆ ಎಂಬ ಮನುಷ್ಯನ ಅನಾದಿ ಕಾಲದ ಜಿಜ್ನಾಸೆಯನ್ನು, ಸಹಜ ಕುತೂಹಲವನ್ನು ಮಾರುಕಟ್ಟೆಯ ಮೌಲ್ಯಗಳಿಗೆ ಬಾಗಿಸುತ್ತಿರುವ ಜನ್ಮಾಂತರಗಳು, ಹೀಗೇ ಉಂಟುಗಳು..!

ಟಿ.ಅರ್.ಪಿ ಗ್ರಾಪ್ ಮೇಲೆರಿದಂತೆಲ್ಲಾ ಚಾನಲ್ ಗಳಿಗೆ ಅಡ್ ರೆವಿನ್ಯು ಜಾಸ್ತಿಯಾಗುತ್ತದೆ. ಟಿ.ಅರ್.ಪಿ ಅಂದರೆ ಟಾರ್ಗೆಟ್ ರೇಟಿಂಗ್ ಪಾಯಿಂಟ್. ಇದು ಜನಪ್ರಿಯ ಟಿ.ವಿ ಪ್ರೋಗ್ರಾಮ್ ಗಳ ಪಟ್ಟಿಯನ್ನು ಕೊಡುತ್ತದೆ. ಕನ್ನಡದಲ್ಲಿ ಪ್ರತಿ ಬುದವಾರದಂದು ಈ ಪಟ್ಟಿ ಬಿಡುಗಡೆಯಾಗುತ್ತದೆ. ಹಾಗಾಗಿ ವಾರಕೊಮ್ಮೆ ಟಿ.ವಿ ನಿರ್ಮಾಪಕರ ಎದೆಬಡಿತ ಏರುಪೇರಾಗುತ್ತದೆ!. ಯಾಕೆಂದರೆ ರೇಟಿಂಗ್ ಇಲ್ಲ ಎಂಬ ಕಾರಣದಿಂದಾಗೆ ಹಲವು ಸದಭಿರುಚಿಯ ಕಾರ್ಯಕ್ರಮಗಳು ವೈಂಡ್ ಅಫ್ ಆದ ಉದಾಹರಣೆ ಟಿ.ವಿ ಇತಿಹಾಸಕ್ಕಿದೆ.

ಟಿ.ಅರ್.ಪಿಯನ್ನು ಯಾರು ನಿರ್ಧರಿಸುತ್ತಾರೆ? ವಿಕ್ಷಕರು. ಆದರೆ ಎಲ್ಲಾ ವಿಕ್ಷಕರಲ್ಲ. ಆಯ್ದ ವೀಕ್ಷಕರು. ಅದರ ನಿರ್ವಹಣೆಯನ್ನು ಏಜನ್ಸಿಯೊಂದು ಮಾಡುತ್ತದೆ. ಅವರು ಆಯ್ದ ಕೆಲವರ ಮನೆಗಳಲ್ಲಿ ’ಪೀಪಲ್ಸ್ ಮೀಟರ್’ ಎಂಬ ಉಪಕರಣವೊಂದನ್ನು ಅಳವಡಿಸುತ್ತಾರೆ. ಆ ಮನೆಯವರು ಯಾವ ಚಾನಲ್, ಯಾವ ಪ್ರೋಗ್ರಾಮನ್ನು ಎಷ್ಟೊತ್ತು ನೋಡುತ್ತಾರೆ ಎಂಬುದರ ಮೇಲೆ ಕಾರ್ಯಕ್ರಮಗಳ ಜನಪ್ರಿಯತೆಯನ್ನು ಏಜನ್ಸಿ ಸಂಯೋಜಿಸುತ್ತದೆ. ಅದೇ ಟಿ.ಅರ್.ಪಿ. ಆದರೆ ಅದರ ನಿಖರತೆಯ ಬಗ್ಗೆಯೇ ಈಗೀಗ ಸಂಶಯ ವ್ಯಕ್ತವಾಗುತ್ತಿದೆ.

ಕರ್ನಾಟಕದಲ್ಲಿ ಬೆಂಗಳೂರನ್ನು ಹೊರತುಪಡಿಸಿ ಒಟ್ಟು ೮ ಟಿ.ಅರ್.ಪಿ ಸೆಂಟರ್ ಗಳಿವೆ.ಅದನ್ನು ಟಿ.ವಿ ಭಾಷೆಯಲ್ಲಿ ಅರ್.ಒ.ಕೆ ಎಂದು ಕರೆಯುತ್ತಾರೆ. ಅಂದರೆ ರೆಸ್ಟ್ ಅಫ್ ಕರ್ನಾಟಕ. ಅವು ಮೈಸೂರು, ಮಂಗಳೂರು, ದಾವಣಗೆರೆ, ಹುಬ್ಬಳಿ, ಗದಗ, ಬೆಳಗಾವಿ, ಗುಲ್ಬರ್ಗಾ ಮತ್ತು ರಾಯಚೂರು. ಜಾಹಿರಾತುದಾರರು ಈ ಸೆಂಟರ್ ಗಳಿಗಿಂತಲೂ ಬೆಂಗಳೂರಿಗೇ ಹೆಚ್ಚು ಗಮನ ಕೊಡುತ್ತಾರೆ. ಯಾಕೆಂದರೆ ಬೆಂಗಳೂರಲ್ಲಿ ಹೆಚ್ಚು ದುಡ್ಡು ಓಡಾಡುತ್ತದೆ. ಇಲ್ಲಿಯ ಜನರ ಖರೀದಿ ಶಕ್ತಿ ಜಾಸ್ತಿ ಎಂಬುದು ಅವರ ತರ್ಕ. ಹಾಗಾಗಿ ಈ ನಗರವೊಂದರಲ್ಲೇ ಸುಮಾರು ೧೮೦ ಮನೆಗಳಲ್ಲಿ ಟಿ.ಅರ್.ಪಿ ಮಾಪನವಾದ ’ಪೀಪಲ್ಸ್ ಮೀಟರ್’ ಗಳನ್ನು ಅಳವಡಿಸಲಾಗಿದೆ.

ಇದರರ್ಥ ಇಷ್ಟೆ; ಟಿ.ವಿ ಮಾಧ್ಯಮದವರ ಲೆಕ್ಕಾಚಾರದಲ್ಲಿ ಗ್ರಾಮಾಂತರ ಪ್ರದೇಶದ, ಬಹುಸಂಖ್ಯಾತ ಜನರು ಟಿ.ವಿ ವೀಕ್ಷಕರೇ ಅಲ್ಲ. ಅಡ್ ರೆವಿನ್ಯೂ ತರುವ ಟಿ.ಅರ್.ಪಿ ಸೆಂಟರ್ ನ ಜನರಿಗಾಗಿ ಅವರು ಕಾರ್ಯಕ್ರಮವನ್ನು ತಯಾರಿಸಬೇಕು. ಅಂದರೆ ಆಧುನಿಕ ಮನೋಭಾವದ, ಉಳ್ಳವರ ಮನೋರಂಜನೆಗಾಗಿ ಕಾರ್ಯಕ್ರಮ ಹಣೆಯಬೇಕು. ನಿಜಕ್ಕೂ ಅದೊಂದು ಸವಾಲು. ಸಾಹಸ, ಹಾಸ್ಯ ಮತ್ತು ಭಾವುಕತೆಯ ಹದವಾದ ಮಿಶ್ರಣದ ಕಾರ್ಯಕ್ರಮಗಳು ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುತ್ತದೆ. ಆದರ ತಯಾರಿಕೆಗೆ ಶ್ರಮ ಮತ್ತು ಪ್ರತಿಭೆ ಬೇಕು. ಮುಖ್ಯವಾಗಿ ಹೃದಯವಂತಿಕೆ ಬೇಕು. ಅದಿಲ್ಲವಾದರೆ ಏನಾಗುತ್ತದೆ ಎಂಬುದಕ್ಕೆ ಇತ್ತೀಚೆಗೆ ಪ್ರಸಾರವಾಗುತ್ತಿರುವ ’ಹಳ್ಳಿಹೈದ ಪ್ಯಾಟೆಗೆ ಬಂದ’ ರಿಯಾಲಿಟಿ ಶೋ ಉತ್ತಮ ಉದಾಹರಣೆ.

ಇಲ್ಲಿ ಎಲ್ಲವೂ ಇದೆ. ಆದರೆ ಹೃದಯವಂತಿಕೆ ಇಲ್ಲ. ಹಳ್ಳಿಯ ಎಳೆಂಟು ಹುಡುಗರನ್ನು ಪೇಟೆಗೆ ತಂದು ಹಾಕಿದ್ದಾರೆ. ಅವರಿಗೆ ನಾಗರಿಕೆ ನಡವಳಿಕೆಗಳನ್ನು[!] ಕಲಿಸಲು ಒಬ್ಬೊಬ್ಬ ಹುಡುಗಿಯರನ್ನು ನೇಮಿಸಲಾಗಿದೆ. ಅವರ ವೇಷ ಭೂಷಣಗಳನ್ನು ನೋಡಿಯೇ ಪಾಪ ಆಹುಡುಗರು ದಂಗಾಗಿರಬೇಕು! ಅಮೇಲೆ ಶುರು ನೋಡಿ, ಅವರಿಗೆ ನಾಗರಿಕ ನಡತೆಯನ್ನು ಕಲಿಸುವ ಪಾಠಗಳು; ಮಾಲ್ ಗಳಲ್ಲಿ ಬಿಕ್ಷೆ ಬೇಡುವುದು, ಬ್ರಿಗೇಡ್ ರೋಡ್ ನಲ್ಲಿ ಹುಡುಗಿಯರ ಮೊಬೈಲ್ ನಂಬರ್ ಗಳನ್ನು ಕಲೆಕ್ಟ್ ಮಾಡುವುದು, ಇಂಗ್ಲೀಷ್ ಕಲಿಯುವುದು, ಯಾರ್ಯರನ್ನೊ ಕಾಡಿ ಬೇಡಿ ಮೆಜೆಸ್ಟಿಕ್ ತಲುಪುವುದು, ಹುಡುಗಿಯರನ್ನು ಹೊತ್ತುಕೊಂಡು ಕೆಸರಿನಲ್ಲಿ ಓಡುವುದು. ಇದೆಲ್ಲಕಿಂತಲೂ ಬೀಬತ್ಸಕರವಾದ ಇನ್ನೊಂದು ಟಾಸ್ಕ್ ಇತ್ತು, ಅತೀ ಹೆಚ್ಚು ಯಾರು ತಿನ್ನುತ್ತಾರೆ, ಕುಡಿಯುತ್ತಾರೆ ಅಂತ. ಅದರಲ್ಲಿ ಸ್ಪರ್ಧಿಗಳಿಗೆ ಗೊತ್ತಿಲ್ಲದಂತೆ ಭೇದಿ ಮಾತ್ರೆ ಹಾಕಿರ್ತಾರೆ. ಆದರೆ ಟಾಯ್ಲೆಟ್ಗೆ ಹೋದ್ರೆ ಸ್ಪರ್ಧೆಯಿಂದ ಹೊರ ಹೋಗಬೇಕಾಗುತ್ತಾದೆ. ದೇಹ ಭಾದೆಯನ್ನು ತಡೆದುಕೊಂಡು ಅವರು ಒದ್ದಾಡುವುದು ನೋಡುವಾಗ ಇದು ಅಮಾನವೀಯ ಅನ್ನಿಸಿಬಿಡುತ್ತಾದೆ. ಇನ್ನು ಆ ಹಳ್ಳಿ ಹುಡುಗರ ಜೋತೆ ಪೇಟೆ ಹುಡುಗಿಯರನ್ನು ರೆಸ್ಲಿಂಗ್ [ಕುಸ್ತಿ] ಆಡಿಸುವುದು ಖಂಡಿತವಾಗಿಯೂ ಆರೋಗ್ಯಕರ ಟಾಸ್ಕ್ ಅನ್ನಿಸುವುದಿಲ್ಲ. ಯಾವ ಮನಸ್ಥಿತಿಯಿಂದ ಅವರು ಪ್ಯಾಟೆಗೆ ಬಂದರೋ ಅದೇ ಮನಸ್ಥಿತಿಯೊಂದಿಗೆ ಅವರು ಹಳ್ಳಿಗೆ ಮರಳಲು ಸಾಧ್ಯವೇ? ಅವರ ಮುಗ್ಧತೆಯನ್ನು ನಾಶ ಮಾಡಿದ ಶಾಪ ಯಾರನ್ನು ತಟ್ಟುತ್ತದೆ?

ಇದೇ ಚಾನಲಿನ ’ಪ್ಯಾಟೆ ಹುಡ್ಗೀರ ಹಳ್ಳಿ ಲೈಪ್’ ಇದಕ್ಕೆ ಹೋಲಿಸಿದರೆ ಚೆನ್ನಾಗಿತ್ತು, ಯಾಕೆಂದರೆ ಹಳ್ಳಿಯಲ್ಲಿ ಮುಕ್ತವಾದ ವಾತಾವರಣವಿರುತ್ತದೆ. ಅವರಲ್ಲಿ ಇನ್ನೂ ಅಂತಃಕರಣ ಉಳಿದಿರುತ್ತದೆ. ಹೊರಗಿನಿಂದ ಬಂದವರನ್ನು ಕೂಡ ಅವರು ಕ್ರಮೇಣ ತಮ್ಮವರೆಂದು ಒಪ್ಪಿಕೊಂಡುಬಿಡುತ್ತಾರೆ. ನಗರದ ಜನತೆಯದು ಕವರ್ಡ್ ಮನಸ್ಥಿತಿ, ಅವರು ಯಾರನ್ನು ನಂಬಲಾರರು. ಹಳ್ಳಿ ಹುಡುಗರಿಗೆ ಮೊಬೈಲ್ ನಂಬರ್ ಕಲೆಕ್ಟ್ ಮಾಡುವುದು, ಲಿಪ್ಟ್ ಪಡೆಯುವುದು ಹಾಗಾಗಿಯೇ ತುಂಬಾ ಕಷ್ಟವಾಗಿದ್ದು. ನಾಗರಿಕ ಜನರ ಕೈಯಲ್ಲಿ ಸಿಕ್ಕು ಅವರು ಪಡುವ ಪರಿಪಾಟಲು ಕಂಡಾಗ ೨೦ ವರ್ಷಗಳ ಹಿಂದೆ ಹಳ್ಳಿಯಿಂದ ನೇರವಾಗಿ ಬೆಂಗಳೂರೆಂಬ ಮಾಯಾಂಗನೆಯ ತೆಕ್ಕೆಗೆ ಬಂದು ಬಿದ್ದ ನನ್ನದೇ ಅನುಭವ ಮರುಕಳಿಸಿದಂತಾಯಿತು. ರಾಜೇಶನೆಂಬ ಹಳ್ಳಿ ಹುಡುಗನಲ್ಲಿ ನನ್ನನ್ನು ನಾನು ಕಂಡುಕೊಂಡೆ.

ಇನ್ನು, ನಿರೂಪಕ ಅಕುಲ್ ಬಾಲಾಜಿಯ ಇಂಗೀಷ್ ಶೈಲಿಯ ಕನ್ನಡ ಉಚ್ಛಾರಣೆ ಮತ್ತು ಅವರು ಹುಡುಗಿಯರನ್ನು ಬಹುವಚನದಲ್ಲೂ ಹುಡುಗರನ್ನು ಏಕವಚನದಲ್ಲೂ ಸಂಬೋಧಿಸುವುದು. ಹುಡಿಗಿಯರಿಗೆ ಗಂಭೀರವಾಗಿ ಬಯ್ಯುವುದು,ಹುಡುಗರಿಗೆ ಅದನ್ನೇ ಗೇಲಿ ಮಾಡುತ್ತಾ ಎಚ್ಚರಿಸುವುದು ಅವರು ನಗರ ಪಕ್ಷಪಾತಿ ಎಂಬುದನ್ನು ತೋರಿಸುತ್ತದೆ. ಇನ್ನು ಸ್ಕ್ರಿಪ್ಟ್ ಮತ್ತು ವಾಯ್ಸ್ ಒವರ್ ವೈನೋದಿಕ ಹಿಂಸೆಗೆ ಅತ್ಯುತ್ತಮ ಉದಾಹರಣೆ. ಅವಕಾಶ ಸಿಕ್ಕಾಗಲೆಲ್ಲಾ ಇಡೀ ಗ್ರಾಮೀಣ ಜನತೆಯನ್ನು, ಅವರ ನಂಬಿಕೆಗಳನ್ನು ಮತ್ತು ಅವರ ಕಪ್ಪು ವರ್ಣವನ್ನು ಲೇವಡಿ ಮಾಡಲಾಗಿದೆ. ಇದಲ್ಲದೆ ಆ ಹುಡುಗರ ಬಾಯಲ್ಲಿ ಪ್ರೀತಿ, ಪ್ರೇಮ, ಮುತ್ತು ಎಂಬ ಮಾತುಗಳನ್ನೆಲ್ಲಾ ಆಡಿಸಿ ಕಾಮನೆಗಳನ್ನು ಕೆರಳಿಸುವ ಪ್ರಯತ್ನವೂ ನಡೆಯುತ್ತಿದೆ.

ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ ನನ್ನ ಗೆಳತಿಯೊಬ್ಬಳು ಹೇಳುತ್ತಿದ್ದಳು; ಅಲ್ಲಿ ’ಡಿವೈಡ್ ಅಂಡ್ ರೂಲ್’ ಅಂದರೆ ಒಡೆದು ಆಳುವ ನೀತಿಯನ್ನು ಅನುಸರಿಸಲಾಗುತ್ತದೆಯೆಂದು. ಸ್ಪರ್ಧಿಗಳಲ್ಲೇ ಪೈಪೋಟಿಯನ್ನು ಹುಟ್ಟು ಹಾಕಿ ಪರಸ್ಪರ ಅಪನಂಬಿಕೆಯನ್ನು ಸೃಷ್ಟಿಸುವುದು. ಪ್ರತಿಯೊಬ್ಬರಿಗೂ ಗೆಲ್ಲುವ ತವಕ. ಹಳ್ಳಿಹೈದ....ದಲ್ಲಿ ಪ್ಯಾಟೆ ಸುಂದರಿಯರಿಗೆ ಮಾತ್ರ ಗೆಲ್ಲುವ ತವಕ .ಹೈದರಿಗೆ ಇಲ್ಲಿಂದ ತಪ್ಪಿಸಿಕೊಂಡು ಊರಿಗೆ ಓಡುವ ತುಡಿತ. ಬಹುಶಃ ಕಾರ್ಯಕ್ರಮದ ನಿಬಂಧನೆಗಳು ಮತ್ತು ಆಕರ್ಷಣೆಗಳು ಅವರನ್ನು ’ಇಲ್ಲಿರಲಾರೆ ಅಲ್ಲಿಗೆ ಪೋಗಲಾರೆ’ ಎಂದು ಕಟ್ಟಿ ಹಾಕಿರಬಹುದು.

ಹಳ್ಳಿ ಜನರ ಬಡತನ, ಅಸಹಾಯಕತೆ ಮತ್ತು ಮುಗ್ಧತೆ ಟಿ.ವಿಯಲ್ಲಿ ಮಾರಾಟದ ಸರಕಾಗುತ್ತಿದೆ. ಅದ್ದೂರಿಯ ಬಂಗಲೆಗಳಲ್ಲಿ ಕುಳಿತು, ಕುರುಕುಲು ತಿಂಡಿ ತಿನ್ನುತ್ತಾ ನಗರಗಳ ಸುಶಿಕ್ಷಿತ ಜನರು ಇದನ್ನು ಎಂಜಾಯ್ ಮಡುತ್ತಾರೆ! ಹಾಗೆಂದು ಅವರನ್ನು ಹೃದಯಹೀನರೆಂದು, ಗ್ರಾಮೀಣ ಜನರನ್ನು ಉಪೇಕ್ಷೆಸುವರೆಂದು ಅನ್ನುವ ಹಾಗಿಲ್ಲ. ಯಾಕೆಂದರೆ ಕಳೆದ ಬಾರಿ ಉತ್ತರ ಕರ್ನಾಟಕದ ಜನತೆ ನೆರೆ ಹಾವಳಿಯಿಂದ ಬದುಕು ಕಳೆದುಕೊಂಡಾಗ ಮುಖ್ಯಮಂತ್ರಿಗಳ ಜೋಳಿಗೆಗೆ ಕೋಟ್ಯಾಂತರ ರೂಪಾಯಿಗಳನ್ನು ಹಾಕಿದವರು ಇದೇ ಪೇಟೆ ಜನರು.

ಇದೇ ನಗರದ ಸೆಲೆಬ್ರಿಟಿಗಳನ್ನು ಅಚ್ಚರಿಯ ಕಣ್ಣುಗಳಿಂದ ನೋಡುತ್ತಿದ್ದ ಹಳ್ಳಿ ಜನರೆದುರು ಅವರ ಖಾಸಗಿ ಬದುಕನ್ನು ತೆರೆದಿಟ್ಟು ಮಾದರಿಗಳನ್ನು ಒಡೆಯುವ ಪ್ರಯತ್ನವೂ ಕಿರು ತೆರೆಯಲ್ಲಿ ನಿರಂತರ ನಡೆಯುತ್ತಿದೆ. ಸಾಮಾಜಿಕ ಹೊಣೆಗಾರಿಕೆಯೆಂಬುದು ದೃಶ್ಯ ಮಾಧ್ಯಮದ ನಿಘಂಟಿನಲ್ಲಿಲ್ಲದ ಪದ. ಇದೇ ಚಾನಲ್ ನವರು ಹಿಂದೆ ಸ್ವಯಂವರ ರಿಯಾಲಿಟಿ ಶೋ ಒಂದು ಮಾಡಿದ್ದರು. ಅದರಲ್ಲಿ ಭಾಗವಹಿಸಲು ವಧುಗಳು ಮುಂದೆ ಬರದಾದಾಗ ಕಿರುತೆರೆ ನಟಿಯರನ್ನೇ ಬಾಡಿಗೆ ವಧುಗಳಾಗಿ ತಂದು ವಿವಾಹಕಾಂಕ್ಷಿಗಳನ್ನು ಬೆಚ್ಚಿ ಬೀಳಿಸಿದ ಇತಿಹಾಸವೂ ಇದಕ್ಕಿದೆ.

ನಾನು ಇದನ್ನು ಬರೆಯುವ ಹೊತ್ತಿಗಾಗಲೇ ಪುತ್ತೂರಿನ ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ಮಾಧವ ಭಾವಿಕಟ್ಟೆಯವರು ’ ಹಳ್ಳಿ ಹೈದ ಪ್ಯಾಟೆಗೆ ಬಂದ’ ಕಾರ್ಯಕ್ರಮದ ಬಗ್ಗೆ ತೀವ್ರ ಅಸಮಾಧಾನಗೊಂಡು ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆಗಳನ್ನು ಮಾಡಿಕೊಳ್ಳೊತ್ತಿದ್ದಾರೆ. ಹಳ್ಳಿ ಜನರನ್ನು ಸ್ನಾನ ಮಾಡದವರು, ತಲೆ ಬಾಚಿಕೊಳ್ಳದವರು, ಕಾಡುಜನರಂತೆ ಬದುಕುತ್ತಾರೆ ಎಂಬಂತೆ ಚಿತ್ರಿಸಲಾಗಿದೆ; ಗ್ರಾಮೀಣ ಜನರನ್ನು ಅವಮಾನಿಸಲಾಗಿದೆ ಎಂಬುದು ಅವರ ಆರೋಪ. ನಾನು ಮಾತಾಡಿಸಿದ ಬಹುತೇಕ ಜನರ ಅಭಿಪ್ರಾಯವೂ ಇದೇ ಆಗಿದೆ.


’ಹಳ್ಳಿ ಹೈದ ಪ್ಯಾಟೆಗೆ ಬಂದ’ ಎಂಬ ರಿಯಾಲಿಟಿ ಶೋದ ಕೆಲವು ಎಪಿಸೋಡುಗಳನ್ನು ನೋಡಿದೆ. ಅದು ನನಗೆ ಇಷ್ಟನ್ನೆಲಾ ಬರೆಯಲು ಪ್ರಚೋದಿಸಿತು. ಅದಕ್ಕಾಗಿ ಆ ಶೋ ದ ಕ್ರಿಯೇಟಿವ್ ಹೆಡ್ ಗೆ ನನ್ನ ಕೃತಜ್ನತೆಗಳು!

[ ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ ]

Thursday, September 2, 2010

ದ್ರೌಪದಿಗೆ ಕೃಷ್ಣನಂತೆ.......!?





ಈಗೀಗ ಒಂಟಿಯಾಗಿ ಇರುವುದೇ ಹೆಚ್ಚು ಖುಷಿಯನ್ನು ಕೊಡುತ್ತದೆ. ಯಾವಾಗಲೂ ಅಷ್ಟೇ. ಮೌನದೊಡನೆ ಸಂವಾದ ಸಾಧ್ಯವಾಗುವಷ್ಟು ಶಬ್ದಗಳ ಜೊತೆ ಆಗುವುದಿಲ್ಲ. ಚಿಕ್ಕಂದಿನಿಂದಲೂ ಮನೆ, ಶಾಲೆಗಳಲ್ಲಿ ಕಲಿತದ್ದಕ್ಕಿಂತಲೂ ತೋಟ, ಗದ್ದೆ, ಕಾಡು, ನದಿ, ಗೋಮಾಳಗಳಲ್ಲಿ ಕಲಿತದ್ದೇ ಹೆಚ್ಚು.

ಮಲೆನಾಡಿನಲ್ಲಿ ಹುಟ್ಟಿ ಬೆಳೆದ ಎಲ್ಲರೂ ಹಾಗೇ. ಬಾಲ್ಯದಲ್ಲಿ ಗೋಪಾಲಕರಾಗುತ್ತಾರೆ, ಇಲ್ಲವೆ ಗೋಪಿಕೆಯರಾಗುತ್ತಾರೆ. ಅವರ ಸುತ್ತಮುತ್ತ ದನಕರುಗಳಿರುತ್ತವೆ; ನದಿಯಿರುತ್ತವೆ; ಕಾಡಿರುತ್ತದೆ; ಬೆಟ್ಟಗುಡ್ಡವಿರುತ್ತದೆ; ಮನೆಯವರ ಜೊತೆ ಮುನಿಸಿಕೊಂಡರೆ ಸುತ್ತಮುತ್ತ ಯಶೋಧೆಯರಿರುತ್ತಾರೆ; ಆಳುಗಳಿರುತ್ತಾರೆ. ಒಟ್ಟಿನಲ್ಲಿ ಸಮೃದ್ಧ ಬಾಲ್ಯ.

ಈಗ ಬೆಂಗಳೂರಿನಲ್ಲಿರುವ ನನಗೆ ಒಂಟಿತನ ಅನಿರ್ವಾಯ. ಅದು ಆಧುನಿಕ ಬದುಕಿನ ಕೊಡುಗೆ! ಎರಡು ವರ್ಷಗಳ ಹಿಂದೆ ನಾನು ಬ್ಲಾಗ್ ಆರಂಭಿಸಿದಾಗ ಇದನ್ನೇ ಬರೆದುಕೊಂಡಿದ್ದೆ;
ಒರ್ವನೇ ನಿಲುವೆ ನೀನುತ್ಕಟಕ್ಷಣಗಳಲಿ
ಧರ್ಮಸಂಕಟಗಳಲಿ, ಜೀವಸಮರದಲಿ
ನಿರ್ವಾಣದೀಕ್ಷೆಯಲಿ, ನಿರ್ಯಾಣಘಟ್ಟದಲಿ
ನಿರ್ಮಿತ್ರನಿರಲು ಕಲಿ-ಮಂಕುತಿಮ್ಮ.

ಡಿ.ವಿ.ಜಿಯವರ ಕಗ್ಗದ ಈ ಪದ್ಯ ನನ್ನ ಉತ್ಕಟ ಕ್ಷಣಗಳಲ್ಲಿ ನನಗೆ ಎಲ್ಲವನ್ನು ಎದುರಿಸುವ ಶಕ್ತಿಯನ್ನು ನೀಡುತ್ತದೆ. ಹಾಗಿದ್ದರೂ ಬಾಲ್ಯದಿಂದಲೂ ಗೆಳೆತನದ ಬಗ್ಗೆ ನನಗೆ ತುಂಬಾ ಉದಾತ್ತವಾದ ಭಾವನೆಯಿತ್ತು; ಆದರ್ಶ ಕಲ್ಪನೆಯಿತ್ತು, ಇಂದಿಗೂ ಅಷ್ಟು ಸುಲಭವಾಗಿ ನಾನು ಯಾರನ್ನೂ ’ಇವರು ನನ್ನ ಪ್ರೆಂಡ್’ ಎಂದು ಹೇಳಿಕೊಳ್ಳುವುದಿಲ್ಲ. ಇವರು ನನ್ನ ಪರಿಚಯದವರು, ಕ್ಲಾಸ್ ಮೇಟ್, ಕೊಲಿಗ್, ಪ್ಯಾಮಿಲಿ ಪ್ರೆಂಡ್, ರಿಲೇಟಿವ್, ಬೇಕಾದವರು ಎಂದೆಲ್ಲಾ ಹೇಳಿಕೊಳ್ಳುತ್ತೇನೆ. ಆದರೆ ’ಪ್ರೆಂಡ್’ ಎಂಬ ಪದವನ್ನು ಅತ್ಯಂತ ಜಾಗರೂಕತೆಯಿಂದ ಉಪಯೋಗಿಸುತ್ತೇನೆ. ಯಾರಾದರೂ ’ ನಿಂಗೆ ತುಂಬಾ ಬೇಕಾದವರು, ಆತ್ಮೀಯರಾದವರು ಯಾರು?’ ಎಂದು ಕೇಳಿದರೆ ತಕ್ಷಣ ಕಣ್ಮುಂದೆ ದ್ರೌಪದಿಯ ಸಖ ಕೃಷ್ಣ ಕಾಣಿಸಿಕೊಳ್ಳುತ್ತಾನೆ.

ದ್ರೌಪದಿಯ ಸಖ ಕೃಷ್ಣ ಎನ್ನಲು ಕಾರಣವಿದೆ, ಆತ ಆಕೆಯ ಬೌದ್ಧಿಕ ಸಂಗಾತಿ. ಇಡೀ ಮಹಾಭಾರತದಲ್ಲಿ ದ್ರೌಪದಿಯ ಶಕ್ತಿಯನ್ನು ಅರಿತವನು ಕೃಷ್ಣ ಮಾತ್ರ. ಅವಳ ಸಮಗ್ರ ವ್ಯಕ್ತಿತ್ವದ ಆಳ ವಿಸ್ತಾರಗಳು ಆತನಿಗೆ ಗೊತ್ತಿತ್ತು. ಎಲ್ಲರೆದುರಲ್ಲಿ ಅವರವರ ಭಾವಕ್ಕೆ ತಕ್ಕಂತೆ ಗೋಚರವಾಗುತ್ತಿದ್ದ ಕೃಷ್ಣ ಒಂದು ಮೆಟ್ಟಿಲು ಎತ್ತರದಲ್ಲಿಯೇ ಇರುತ್ತಿದ್ದ. ಆದರೆ ದ್ರೌಪದಿಯ ಎದುರಿನಲ್ಲಿ ಮಾತ್ರ ಸಮಾನ ನೆಲೆಯಲ್ಲಿ ಸ್ಪಂದಿಸುತ್ತಿದ್ದ, ಅವರ ನಡುವೆ ಹೃದಯ ಸಂವಾದವಿತ್ತು. ಮೌನದಲ್ಲೂ ಮಾತಿತ್ತು.

ದ್ರೌಪದಿ ಅಸಹಾಯಕ ಹೆಣ್ಣಲ್ಲ. ಆದರೂ ನೆರವು ಬೇಕೆಂದಾಗ ಅವಳು ಯಾಚಿಸಿದ್ದು ತನ್ನ ವೀರಾಧಿವೀರ ಗಂಡರನ್ನಲ್ಲ. ಆಪತ್ಬಾಂಧವ ಕೃಷ್ಣನನ್ನು. ಅವನಲ್ಲಿ ಆಕೆಗೆ ಅಂತಹ ನಂಬಿಕೆಯಿತ್ತು. ಗಂಡು-ಹೆಣ್ಣಿನ ನಡುವಿನ ಸಂಬಂಧಕ್ಕೆ ಹೊಸ ವ್ಯಾಖ್ಯೆಯನ್ನು ಬರೆದವರು ಅವರು.

ಪ್ರೀತಿ ದೇವನಂತಿರುವ, ಬೆಚ್ಚನೆಯ ಭಾವವನ್ನು ಮೂಡಿಸುವ ಆ ಕೃಷ್ಣ ಸದಾ ನನ್ನ ಜತೆಗಿರುತ್ತಾನೆ. ಅವನ ಕಿರುಬೆರಳನ್ನು ಹಿಡಿದು, ಸಮುದ್ರಗುಂಟ ಹೆಜ್ಜೆ ಹಾಕುತ್ತಾ ಬದುಕಿನ ಅನೇಕ ಸವಾಲುಗಳನ್ನು ನಾನು ಎದುರಿಸಿದ್ದೇನೆ.

ನಿಜ, ಪರಿಪೂರ್ಣವಾದ ಸಂಬಂಧವೊಂದಕ್ಕಾಗಿ ನಾವೆಲ್ಲರೂ ಸದಾ ಹಾತೊರೆಯುತ್ತಿರುತ್ತೇವೆ. ಆ ಹುಡುಕಾಟ ನಮ್ಮನ್ನು ಎಲ್ಲೆಲ್ಲಿಯೋ ಕೊಂಡೊಯ್ಯುತ್ತದೆ. ಅದೃಷ್ಟವಿದ್ದರೆ ಒಂಚೂರಾದರೂ ದಕ್ಕೀತು, ಇಲ್ಲವದಾರೆ ನಿರಾಶೆ, ದುಃಖ, ಹತಾಶೆ ತಪ್ಪಿದ್ದಲ್ಲ. ಯಾಕೆಂದರೆ ಪರಿಪೂರ್ಣತೆ ಎನ್ನುವುದೇ ಒಂದು ಆದರ್ಶ. ಅದು ಎಂದೂ ವಾಸ್ತವವಾಗುವುದಿಲ್ಲ. ಆದರೆ ಕೃಷ್ಣನದು ಪರಿಪೂರ್ಣವಾದ ವ್ಯಕ್ತಿತ್ವ. ಅವನ ವ್ಯಕ್ತಿತ್ವ ಎಲ್ಲವನ್ನೂ, ಎಲ್ಲರನ್ನೂ ತನ್ನೊಳಗೆ ಲೀನವಾಗಿಸಿಕೊಳ್ಳುತ್ತದೆ. ಒಬ್ಬ ಸ್ತ್ರೀ ಬಯಸುವ ಎಲ್ಲವೂ ಅವನಲ್ಲಿದೆ.

ಒಬ್ಬ ಸ್ತ್ರೀಯ ನಿಡಿದಾದ ಬದುಕಿನಲ್ಲಿ ಪುರುಷ ವಹಿಸುವ ಎಲ್ಲಾ ಪಾತ್ರಗಳನ್ನು ಒಬ್ಬನೇ ಕೃಷ್ಣ ವಿವಿಧ ರೂಪಗಳಲ್ಲಿ ವಹಿಸಿಬಿಡುತ್ತಾನೆ. ಬಾಲ್ಯದಲ್ಲಿ ಈಕೆ ಗೋಪಿಕೆಯಾದರೆ ಆತ ಮುರಳಿಲೋಲ. ಯೌವನದಲ್ಲಿ ಇವಳು ರಾಧೆಯಾದರೆ ಆತ ರಾಸಲೀಲೆಯಾಡುವ ಮಾಧವ. ಆದರ್ಶ ದಾಂಪತ್ಯದಲ್ಲಿ ಇವಳು ರುಕ್ಮಿಣಿಯಾದರೆ ಅವನು ಕೃಷ್ಣ. ತಾಯ್ತನದಲ್ಲಿ ಇವಳು ಯಶೋಧರೆಯಾದರೆ ಅವನು ಬೆಣ್ಣೆಚೋರ. ದಾಂಪತ್ಯ ಕಲಹದಲ್ಲಿ ಇವಳು ಸತ್ಯಭಾಮೆಯಾದರೆ ಅವನು ಓಲೈಸುವ ಚಿತ್ತಚೋರ. ಯಾರೂ ಇಲ್ಲವೆಂದು ಮೊರೆಯಿಟ್ಟರೆ ಅವನು ಅನಾಥರಕ್ಷಕ.

ಇಷ್ಟೆಲ್ಲಾ ಆಗಿದ್ದರೂ ಒಬ್ಬ ದ್ರೌಪದಿಗೆ ಮಾತ್ರ ಅವನು ಆತ್ಮಬಂಧು. ಯಾಕೆಂದರೆ ಮೇಲಿನ ಯಾವ ಸಂದರ್ಭದಲ್ಲೂ ಅವಳಿಗೆ ಕೃಷ್ಣ ಆದರ್ಶವಾಗಿರಲಿಲ್ಲ. ಅವಳು ಸಾಮಾನ್ಯ ಹೆಣ್ಣಾಗಿರಲಿಲ್ಲ. ಅವಳ ಹುಟ್ಟಿಗೆ ನಿರ್ಧಿಷ್ಟ ಕಾರಣವಿತ್ತು. ಹಾಗಾಗಿ ಅವಳು ಋಣಾನುಬಂಧಕ್ಕೆ ಒಳಗಾದವಳಲ್ಲ; ಯಾರಿಗೂ ಸೇರಿದವಳಲ್ಲ. ತಾನು ಯಾರಿಗೋ ಸೇರಿದವಳಾಗಿರಬೇಕೆಂದು ಪ್ರತಿಯೊಬ್ಬ ಹೆಣ್ಣೂ ಬಯಸುತ್ತಾಳೆ. ಯಾಕೆಂದರೆ ಹೆಣ್ಣಿನಲ್ಲೊಂದು ಅರ್ಪಣಾ ಭಾವವಿರುತ್ತದೆ. ದ್ರೌಪದಿಗೆ ಅರ್ಪಿಸಿಕೊಳ್ಳುವುದಕ್ಕೆ ಯಾರೂ ಇರಲಿಲ್ಲ!.

ತಂದೆ ದ್ರುಪದನಿಗೆ ದ್ರೋಣನ ಮೇಲೆ ಸೇಡು ತೀರಿಸಿಕೊಳ್ಳುವುದಕ್ಕೆ ಅವಳೊಂದು ವಾಹಕವಾಗಿದ್ದಳು. ಪಾಂಡವರು ಅವಳನ್ನು ಬಯಸಿ ಪಡೆದವರಲ್ಲ. ಹಾಗಿರುವಾಗ ಅವಳು ಜೀವದುಂಬಿ ಯಾರನ್ನು ಪ್ರೀತಿಸಬೇಕು? ಮಕ್ಕಳನ್ನೇ? ಅವು ಕೂಡಾ ಅವಳ ದೇಹವನ್ನು ಹರಿದು ಹಂಚಿ ಉಂಡ ಗಂಡಸರದಲ್ಲವೇ? ಅಗ್ನಿಯಲ್ಲಿ ಹುಟ್ಟಿದವಳು; ಅಗ್ನಿಯಂತೆಯೇ ತೀಕ್ಷಣವಾಗಿ ಯೋಚಿಸುವವಳು. ಮೇಲೆ ತಣ್ಣಗಿದ್ದರೂ ಒಳಗೊಳಗೇ ಕಠೋರನಾಗಿದ್ದ ಕೃಷ್ಣ ಅವಳಿಗೆ ಹತ್ತಿರನಾದ. ಅವನನ್ನೇ ಅವಳು ಬುದ್ದಿಪೂರ್ವಕವಾಗಿ ನಂಬಿದಳು.

ಸಾಮಾನ್ಯ ಗೃಹಿಣಿಯೂ ಸೇರ್‍ಇದಂತೆ ಹೆಣ್ಣೊಬ್ಬಳ ಮನಸ್ಸಿನಲ್ಲಿ ಎಷ್ಟೊಂದು ತೀವ್ರವಾದ ಭಾವನೆಗಳು ಇರುತ್ತವೆಯೆಂದರೆ ಅದನ್ನು ಒಬ್ಬ ಕೃಷ್ಣ ಮಾತ್ರ ಅರ್ಥ ಮಾಡಿಕೊಳ್ಳಬಲ್ಲ. ಅದೂ ದ್ರೌಪದಿಗೊಲಿದ ಕೃಷ್ಣ ಮಾತ್ರ!

ಒಬ್ಬ ಹೆಣ್ಣುಮಗಳು ದ್ರೌಪದಿಯ ಮನಸ್ಥಿತಿಯನ್ನು ತಲುಪುವುದು ನಲುವತ್ತು ದಾಟಿದ ಮೇಲೆಯೇ. ಈ ಹೊತ್ತಿಗಾಗಲೇ ಪುರುಷನೊಬ್ಬ ಆಕೆಯ ಬದುಕಿನಲ್ಲಿ ಏನೇನು ಪಾತ್ರ ವಹಿಸಬಹುದೋ ಅದೆಲ್ಲವನ್ನೂ ವಹಿಸಿ ಆಗಿರುತ್ತದೆ. ತಂದೆ, ಅಣ್ಣ-ತಮ್ಮ, ಗೆಳೆಯ, ಗಂಡ, ಮಗ, ಸಹೋದ್ಯೊಗಿ, ಮೇಲಾಧಿಕಾರಿ, ನೆರೆಮನೆಯಾತ- ಇವೆಲ್ಲಾ ಮುಖಗಳ ಪರಿಚಯ ಆಕೆಗಾಗಿದೆ. ಹೆಣ್ಣೊಬ್ಬಳ ಪಾಲಿಗೆ ಈ ’ಗಂಡಸು’ ಅನ್ನುವವನು ’ಇಷ್ಟೇ’ ಎಂಬ ಅನುಭವ ಅವಳಿಗೆ ಸ್ವಲ್ಪವಾದರೂ ಆಗಿರುತ್ತದೆ. ಈ ಅನುಭವ ಗಂಡಸಿನೆಡೆಗೆ ನೋಡುವ ಆಕೆಯ ನೋಟವನ್ನು ಬದಲಿಸಿದೆ.

ಸಾಮಾನ್ಯ ಗೃಹಿಣಿಯಾದರೆ ’ಇಷ್ಟೇ’ ಎಂಬ ತೀರ್ಮಾನದೊಂದಿಗೆ ಬದುಕು ಯಥಾ ಪ್ರಕಾರ ಸಾಗುತ್ತಿರುತ್ತದೆ. ಅವಳು ಮೇಲ್ನೋಟಕ್ಕೆ ಸಂತೃಪ್ತ ಗೃಹಿಣಿಯಾಗಿಯೂ ಕಾಣಿಸಿಕೊಳ್ಳಬಹುದು. ಆದರೆ ಸ್ವಲ್ಪ ವಿಭಿನ್ನವಾಗಿ ಯೋಚಿಸುವ ಮಹಿಳೆಯರು ’ಇನ್ಯಾವುದಕ್ಕೋ’ ಹುಡುಕಾಟ ಆರಂಭಿಸಿಬಿಡುತ್ತಾರೆ. ನನ್ನ ಮಟ್ಟಿಗೆ ಸೀಮಿತಗೊಳಿಸಿ ಹೇಳುವುದಾರೆ ಅದು ಕೃಷ್ಣನಿಗಾಗಿ ದ್ರೌಪದಿ ಹುಡುಕಾಡಿದಂತೆ.

ಹಿಂದೆಯೇ ಹೇಳಿದಂತೆ ಈ ಹುಡುಕಾಟ ದಾರಿ ತಪ್ಪಿದರೆ? ಅತ್ಯಂತ ಪ್ರಕ್ಷುಬ್ದಗೊಂಡ ಮನಸ್ಥಿತಿಯಲ್ಲಿ ಅದರ ಭಾರವನ್ನು ಎಲ್ಲಿಯಾದರೂ ಇಳುಹಬೇಕೆಂದು ಅನ್ನಿಸುವುದು ಸಹಜ. ಆದರೆ ಕೈ ನೀಡಲು ಯಾರೂ ಇಲ್ಲದಿದ್ದರೆ? ಅಂಥ ಸನ್ನಿವೇಶದಲ್ಲಿ ತಲೆಯ ಮೇಲಿನ ಭಾರವನ್ನು ಹೊತ್ತು ಹಾಕಲೇಬೇಕು.

ಅಂಥದೊಂದು ಸ್ಥಿತಿಯಲ್ಲಿ ನಾನೊಮ್ಮೆ ಏನು ಮಾಡಿದೆ ಗೊತ್ತಾ? ಚಂದ್ರಶೇಖರ ಪಾಟೀಲರ ’ಲೇಖಕರ ವಿಳಾಸ ಪುಸ್ತಕ’ ನನ್ನಲ್ಲಿತ್ತು.ಅದರಲ್ಲಿ ನಾನು ತುಂಬಾ ಮೆಚ್ಚುವ ಲೇಖಕರೊಬ್ಬರ ದೂರವಾಣಿ ನಂಬರ್ ಇತ್ತು. ಸಭೆ ಸಮಾರಂಭಗಳಲ್ಲಿ ಅವರನ್ನು ನೋಡಿದ್ದೆ. ಕೆಲವೊಮ್ಮೆ ಮಾತಾಡಿಸಿಯೂ ಇದ್ದೆ. ಅವರಿಗೆ ಕರೆ ಮಾಡಿ ನನ್ನ ಸಮಸ್ಯೆ ಹೇಳಿಕೊಳ್ಳಲೆತ್ನಿಸಿದೆ. ಹೇಳ ಹೇಳುತ್ತಲೇ ಬಿಕ್ಕಳಿಸಿ ಅತ್ತುಬಿಟ್ಟೆ. ಅವರು ಸಮಾಧಾನದಿಂದಲೇ ಆಲಿಸಿದರು. ಒಂದೂ ಮಾತಾಡದಿದ್ದರೂ ಕೆಲವೊಮ್ಮೆ ’ಆಲಿಸುವ’ ಕಿವಿಗಳು ಎಷ್ಟು ಸಾಂತ್ವನ ನೀಡುತ್ತವೆ ಅಲ್ಲವೇ? ನನ್ನ ಗೆಳತಿಯೊಬ್ಬಳ ಬದುಕಿನಲ್ಲಿ ನಡೆದ ಘಟನೆಯಿದು; ಕನ್ನಡದ ಸಂವೇದನಾಶೀಲ ಬರಗಾರರೊಬ್ಬರ ಮೇಲೆ ಆಕೆಗೆ ಹುಚ್ಚು ಮೋಹ, ಅವರ ಬರವಣಿಗೆಯಿಂದ ಪ್ರಭಾವಿತಳಾಗಿ ಹಿಂದು ಮುಂದು ಯೋಚಿಸದೆ ಅವರನ್ನವಳು ಆರಾಧಿಸತೊಡಗಿದಳು. ಅದೂ ನಿರಂತರ ಆರು ವರ್ಷಗಳ ಕಾಲ.

ನಮ್ಮ ಬರಹಗಾರರನ್ನು ಹತ್ತಿರದಿಂದ ಬಲ್ಲವರಿಗೆ ಅವರ ವಿಕ್ಷಿಪ್ತ ನಡವಳಿಕೆಗಳ ಪರಿಚಯ ಇರುತ್ತದೆ, ಅವರ ಭಾವ ಜಗತ್ತೇ ಬೇರೆ. ಬಾಹ್ಯ ಜಗತ್ತೇ ಬೇರೆ. ಇದು ಅರಿವಾಗುವ ಹೊತ್ತಿಗೆ ಅವಳು ಬಹು ದೂರ ಸಾಗಿ ಬಂದಿದ್ದಳು. ಕೊನೆಗೆ ಡಿಪ್ರೆಶನ್ನಿಗೆ ಒಳಗಾದಳು. ಅದರಿಂದ ಹೊರಬರಲು ಅವಳು ಮಾನಸಿಕ ತಜ್ನರ ಮೊರೆ ಹೋಗಬೇಕಾಯಿತು.

ಕೃಷ್ಣನ ಹುಡುಕಾಟ ಹೊರಗಡೆ ಯಾಕೆ ಆಗಬೇಕು, ಗಂಡನೇ ಗೆಳೆಯನೂ ಆಗಲಾರನೇ? ಎಂದು ಕೆಲವರಿಗನ್ನಿಸಬಹುದು. ಆದರೆ ಗಂಡ ಯಾವತ್ತಿದ್ದರೂ ಗಂಡನೇ!. ಆ ಶಬ್ದದ ಅರ್ಥವೇ ’ಒಡೆಯ’. ಆತ ತನ್ನ ಒಡೆತನದ ಹಕ್ಕನ್ನು ಚಲಾಯಿಸಿಯೇ ಚಲಾಯಿಸುತ್ತಾನೆ. ಎಷ್ಟಾದರೂ ಗಂಡಸು ದೈಹಿಕವಾಗಿ ಐಕ್ಯವಾಗುವುದನ್ನು ಬಯಸುತ್ತಾನೆ. ಹೆಣ್ಣು ಮಾನಸಿಕವಾಗಿ ಐಕ್ಯವಾಗುವ ಕನಸು ಕಾಣುತ್ತಾಳೆ. ಹಾಗಾಗಿ ಕೆಲವೊಂದು ಸೂಕ್ಷ್ಮಭಾವನೆಗಳು, ಗುಟ್ಟುಗಳು, ತಲ್ಲಣಗಳನ್ನು ಹಂಚಿಕೊಳ್ಳಲು ಹೆಣ್ಣೊಬ್ಬಳು ’ಕೃಷ್ಣ’ನನ್ನು ಹಂಬಲಿಸುವುದು ತಪ್ಪೆಂದು ನನಗೆ ತೋರುವುದಿಲ್ಲ.

ಅದರೆ ನನಗೆ ಗೊತ್ತಿದೆ, ’ಕೃಷ್ಣ’ ನಮಗೆ ಎಂದೂ ಸಿಗಲಾರ. ಸಿಗಬಾರದು ಕೂಡಾ. ಹುಡುಕಾಟ ನಿರಂತರವಾಗಿರಬೇಕು. ಅವನ ಮುರಳಿಯ ದಿವ್ಯಗಾನ ಸದಾ ನಮ್ಮ ಕಿವಿಯಲ್ಲಿ ಮೊರೆಯುತ್ತಿರಬೇಕು. ಆ ಮೂಲಕ ನಮ್ಮ ದುರ್ಭರ ಕ್ಷಣಗಳನ್ನು ಗೆಲ್ಲುವ ಅಂತಃಶಕ್ತಿ ನಮ್ಮಲ್ಲೇ ಮೂಡಿಬರಬೇಕು. ಆ ಧೀಶಕ್ತಿ ಸ್ತ್ರೀಯರಲ್ಲಿ ಇದೆ ಎಂಬುದು ನನ್ನ ಬಲವಾದ ನಂಬಿಕೆ.

[೨೦೦೪ರಲ್ಲಿ ’ಹಂಗಾಮ’ ಕ್ಕಾಗಿ ಬರೆದ ಬರಹವನ್ನು ಒಂಚೂರು ಎಡಿಟ್ ಮಾಡಿದ್ದೇನೆ]

Thursday, August 26, 2010

’ಸ್ಮೃತಿ ವಿಸ್ಮೃತಿ; ಭಾರತೀಯ ಸಂಸ್ಕೃತಿ’- ವಿಭಿನ್ನ ಚಿಂತನೆಯ ಕೃತಿ


ಭಾನುವಾರ, ಆಗಸ್ಟ್ ೨೯ರಂದು ಬೆಳಿಗ್ಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಎಸ್.ಎನ್. ಬಾಲಗಂಗಾಧರ ರಾವ್ ಅವರ ”ಹೀದನ್ ಇನ್ ಹಿಸ್ ಬ್ಲೈಂಡ್ನೆಸ್” ಕೃತಿಯ ಕನ್ನಡಾನುವಾದ ”ಸ್ಮೃತಿ ವಿಸ್ಮೃತಿ; ಭಾರತೀಯ ಸಂಸ್ಕೃತಿ” ಬಿಡುಗಡೆಯಾಗಲಿದೆ.

ಕನ್ನಡಿಗರಾದ ಬಾಲಗಂಗಾಧರನಾಥರು ಕಳೆದ ಮೂರು ದಶಕಗಳಿಂದ ಬೆಲ್ಜಿಯಂನ ಗೆಂಟ್ ವಿಶ್ವವಿದ್ಯಾನಿಲಯದಲ್ಲಿ ಸಂಸ್ಕೃತಿಗಳ ತುಲನಾತ್ಮಕ ಅಧ್ಯಯನ ವಿಭಾಗದ ನಿರ್ದೇಶಕರಾಗಿದ್ದಾರೆ. ವಿಭಿನ್ನ ಮಾನವ ಸಂಸ್ಕೃತಿಗಳ ಕುರಿತು ಪರ್ಯಾಯವಾದ ದೃಷ್ಟಿಕೋನವೊಂದು ಬೆಳೆಸುವ ನಿಟ್ಟಿನಲ್ಲಿ ಅವರು ಸಂಶೋಧನೆಯನ್ನು ಕೈಗೊಂಡಿದ್ದಾರೆ. ಅದರ ಫಲಶ್ರುತಿಯಾಗಿ ಈ ಪುಸ್ತಕ ಹೊರಬಂದಿದೆ.

ಪಾಶ್ಚಾತ್ಯ ಸಂಸ್ಕೃತಿ ಚಿಂತಕರ ಪ್ರಕಾರ, ಎಲ್ಲಾ ಸಂಸ್ಕೃತಿಗಳು ಒಂದಿಲ್ಲೊಂದು ಪ್ರಕಾರದ ರಿಲೀಜನ್ ಅನ್ನು ಹೊಂದಿರುತ್ತವೆ; ರಿಲೀಜನ್ ಗಳು ಇಲ್ಲದ ಸಂಸ್ಕೃತಿಗಳೇ ಇಲ್ಲ.ಆದರೆ ಬಾಲಗಂಗಾಧರನಾಥರು ಪಾಶ್ಚ್ಯಾತ್ಯರ ಗ್ರಹಿಕೆಯನ್ನು ಅಲ್ಲಗೆಳೆಯುತ್ತಾ’ ರಿಲೀಜನ್ ಸಾಂಸ್ಕೃತಿಕ ಸಾರ್ವತಿಕವಲ್ಲ’ ಎಂದು ವಾದಿಸುತ್ತಾರೆ. ಅವರ ವಾದವು ಮುಂದುವರೆದು ಹೇಗೆ ಕ್ರಿಶ್ಚಿಯನ್ ಥಿಯಾಲಜಿಯು ಎಲ್ಲಾ ಸಂಸ್ಕೃತಿಗಳು ಒಂದಿಲ್ಲೊಂದು ಪ್ರಕಾರದ ರಿಲೀಜನ್ನುಗಳನ್ನು ಹೊಂದಿದೆ ಎಂದು ಪಾಶ್ಚಿಮಾತ್ಯಾರು ಗ್ರಹಿಸಿಕೊಳ್ಳುವಂತೆ ಹಾಗು ಅದರಿಂದುಂಟಾದ ಪರಿಣಾಮಗಳೇನು? ಎಂಬ ಪ್ರಶ್ನೆಯ ಕುರಿತು ತೀರಾ ತರ್ಕಬದ್ಧವಾಗಿ, ಹಾಗು ವಿವರಣಾತ್ಮಕವಾಗಿ ಚರ್ಚಿಸಿದ್ದಾರೆ. ಭಾರತದ ಇಂದಿನ ಸಂದರ್ಭದಲ್ಲಿ ಕೂಡ ಹಲವಾರು ಬಗೆ ಹರಿಯದ ಸಮಸ್ಯೆಗಳನ್ನು ಅರ್ಥ್ಯೈಸಿಕೊಳ್ಳಲು ಈ ಪುಸ್ತಕ ನೆರವಾಗುತ್ತದೆ.

೫೭೨ ಪುಟಗಳ ಈ ಪುಸ್ತಕದಲ್ಲಿ ಒಟ್ಟು ನಾಲ್ಕು ಭಾಗಗಳಿವೆ; ೧೨ ಅಧ್ಯಾಯಗಳಿವೆ. ಮೊದಲನೆಯ ಅಧ್ಯಾಯದಲ್ಲಿ ರಿಲಿಜನ್ನಿನ ವಿದ್ವಾಂಸರಲ್ಲಿ ಇರುವ ಅಸಂಗತತೆಯನ್ನು ಲೇಖಕರು ಎತ್ತಿ ತೋರಿಸುತ್ತಾರೆ.
೨,೩,೪ನೇ ಅಧ್ಯಾಯಗಳು ರಿಲಿಜನ್ನು ಎಲ್ಲಾ ಸಂಸ್ಕೃತಿಗಳಿಗೂ ಸಾಮಾನ್ಯವಾದ ಸಂಗತಿ ಎಂಬ ಧೋರಣೆಯ ಉಗಮ,ಮತ್ತು ವಿಕಾಸ ಹೇಗಾಯಿತು? ಪ್ರಪಂಚದ ತುಂಬೆಲ್ಲಾ ಹಿಂದೂಯಿಸಂ, ಶಿಂಟೋಯಿಸಂ ಇತ್ಯಾದಿ ರಿಲಿಜನ್ ಗಳು ಹೇಗೆ ಸೃಷ್ಟಿಯಾದವು ಎಂಬುದರ ಐತಿಹಾಸಿಕ ಅವಲೋಕನವಾಗಿದೆ.
೫,೬,೭ನೇ ಅಧ್ಯಾಯಗಳು ರಿಲಿಜನ್ನಿನ ಕುರಿತ ಆಧುನಿಕ ಸಿದ್ಧಾಂತಗಳು ಥಿಯಾಲಜಿಗಳನ್ನು ತಿರಸ್ಕರಿಸಿ ವೈಜ್ನಾನಿಕ ವಿಧಾನದಲ್ಲಿ ರಿಲಿಜನ್ನಿನ ಅಧ್ಯಯನವನ್ನು ನಡೆಸುತ್ತಿವೆಯೆಂಬುದಾಗಿ ಹೇಳಿಕೆಯಿದ್ದರೂ ಕೂಡ ಅವು ಮೂಲತಃ ಥಿಯಾಲಜಿಯದೇ ಸೆಕ್ಯೂಲರ್ ರೂಪಗಳು ಎಂಬುದನ್ನು ನಿರ್ದೇಶಿಸುತ್ತದೆ.
೮,೯, ೧೦ನೇ ಅಧ್ಯಾಯಗಳಲ್ಲಿ ಲೇಖಕರು ರಿಲಿಜನ್ನಿನ ಕುರಿತು ಸಿದ್ಧಾಂತವನ್ನು ಕಟ್ಟುವ ಪ್ರಯತ್ನಕ್ಕೆ,
ತೊಡಗುತ್ತಾರೆ.
೧೧ ಮತ್ತು ೧೨ನೇ ಅಧ್ಯಾಯಗಳಲ್ಲಿ ರಿಲಿಜನ್ ಇಲ್ಲದ ಸಂಸ್ಕೃತಿಗಳಿಗೂ ಅದು ಇರುವ ಸಂಸ್ಕೃತಿಗಳಿಗೂ ನಡುವೆ ತುಲನಾತ್ಮಕ ಅಧ್ಯಯನವನ್ನು ನಡೆಸಬಹುದಾದ ಸಾಧ್ಯತೆಯನ್ನು ಶೋಧಿಸುತ್ತಾರೆ.

ಪುಸ್ತಕದ ಮುಖಪುಟದ ಆಯ್ಕೆಯನ್ನು ಎಷ್ಟು ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಂಡಿದ್ದಾರೆ ಅಂದರೆ ಪುಸ್ತಕದ ಹೂರಣವನ್ನು ಚಿತ್ರವೇ ಹಿಡಿದಿಟ್ಟುಕೊಂಡಿರುವಂತಿದೆ.ಇದು ಮೂಲತ ನರಸಿಂಹನ ಚಿತ್ರ.ಲುಡುವಿಕೋ ವಾರ್ಥೆಮಾ ಎಂಬ ಇಟಲಿ ಪ್ರವಾಸಿ ೧೫೦೫ರಲ್ಲಿ ಕ್ಯಾಲಿಕಟಿನ ರಾಜನನ್ನು ಭೇಟಿ ಮಾಡಿದಾಗ ಆತನು ಪೂಜಿಸುತ್ತಿದ್ದ ನರಸಿಂಹನನ್ನು ಕಂಡು ತಾನು ಅರ್ಥೈಸಿಕೊಂಡಿದ್ದನ್ನು ತನ್ನ ಪ್ರವಾಸಿ ಕಥನದಲ್ಲಿ ವಿವರಿಸಿದ್ದನು. ಅದನ್ನು ಓದಿ ಜರ್ಮನ್ ಚಿತ್ರಕಾರನೊಬ್ಬನು ಚಿತ್ರಿಸಿದ ಚಿತ್ರವಿದು. ೧೬ನೇ ಶತಮಾನದಲ್ಲಿ ಐರೋಪ್ಯರು ಮೊಟ್ಟ ಮೊದಲ ಬಾರಿಗೆ ಭಾರತೀಯ ಸಂಸ್ಕೃತಿಯನ್ನು ಸಂಧಿಸಿದಾಗ ಅವರು ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯ ಕಣ್ಣಿಂದ ಎಲ್ಲಿನ ಆಚರಣೆಗಳನ್ನು ವೀಕ್ಷಿಸಿದರು.ಅವರಿಗೆ ಭಾರತೀಯ ಮೂರ್ತಿ ಪೂಜೆಯು ಪ್ರಾಚೀನ ಪೇಗನ್ನರ ಮೂರ್ತಿ ಪೂಜೆಯಂತೆ ಪಾಪವಾಗಿ ಹಾಗೂ ದೋಷಪೂರ್ಣವಾಗಿ ಕಂಡಿತಲ್ಲದೆ, ಅದು ಡೆವಿಲ್ಲನ ಪೂಜೆ ಎಂಬುದಾಗಿ ಭಾವಿಸಿದರು. ಆ ಮೂರ್ತಿಯ ಕೀರಿಟವನ್ನು ಕ್ಯಾಥೋಲಿಕ್ ಪೋಪನ ಕಿರೀಟಕ್ಕೆ ಹೋಲಿಸುವುದೂ ಗಮನಾರ್ಹ.

ಈ ವಿದ್ವತ್ಪೂರ್ಣ ಕೃತಿಯನ್ನು ಕುವೆಂಪು ವಿಶ್ವವಿದ್ಯಾನಿಲಯದ ’ಸ್ಥಳಿಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ’ದ ನಿರ್ದೇಶಕರಾಗಿರುವ ರಾಜರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಹೆಗ್ಗೋಡಿನ ಅಕ್ಷರ ಪ್ರಕಾಶನದಿಂದ ಪ್ರಕಟವಾಗಿದೆ. ಬೆಲೆ ರೂ ೪೧೫

Monday, July 19, 2010

ಬೈರಪ್ಪನವರ ಕವಲು; ಸ್ತ್ರೀ ವಿರೋಧಿ ವಕಾಲತ್ತು




ಎಸ್.ಎಲ್ ಬೈರಪ್ಪನವರ ಹೊಸ ಕಾದಂಬರಿ ’ಕವಲು’ವಿನ ೧೪ನೇ ಪುಟದಲ್ಲಿ ಒಂದು ಸಂಭಾಷಣೆ ಬರುತ್ತದೆ; ”ಓದಿದ ಗಂಡಸರೆಲ್ಲ ಎಂಗಸರಾಗ್ತಾರೆ. ಓದಿದ ಎಂಗಸರೆಲ್ಲಾ ಗಂಡಸರಾಗ್ತಾರೆ. ಗಂಡಸರು ಗಂಡಸರಾಗಿ ಎಂಗಸರು ಎಂಗಸರಾಗಿ ಇರಬೇಕಾದರೆ ಯಾರೂ ಓದಕೂಡದು” ಇದನ್ನು ಹೇಳುವಾತ ಒಬ್ಬ ಪೋಲಿಸ್ ಕಾನ್ಸ್ಟೇಬಲ್.
ಕಥಾನಾಯಕ ಜಯಕುಮಾರ್ ವಾರ್ಷಿಕ ೧೨೦ ಕೋಟಿ ವ್ಯವಹಾರ ನಡೆಸುವ ’ಜಯಂತಿ ಹೈಪ್ರಿಸಿಶನ್’ ಪ್ಯಾಕ್ಟರಿಯ ಮಾಲೀಕ. ಈಗ ಎರಡನೇ ಪತ್ನಿಯ ಮೇಲೆ ಕೌಟುಂಬಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮಹಿಳಾ ಠಾಣೆಯೊಂದರಲ್ಲಿ ಬಂದಿತನಾಗಿದ್ದಾನೆ. ಅವನನ್ನು ನೋಡಿ ಕಾನ್ಸ್ಟೇಬಲ್ ಅನುಕಂಪದಿಂದ ನುಡಿಯುವ ಮಾತುಗಳಿವು. ಈ ಸಂಭಾಷಣೆಯೇ ಇಡೀ ಕಾದಂಬರಿಯ ತಿರುಳೂ ಆಗಿದೆ.

ಬೈರಪ್ಪನವರಿಗೆ ಅಧುನಿಕ ಮನೋಭಾವದ, ಸ್ವತಂತ್ರ ವ್ಯಕ್ತಿತ್ವದ ಮಹಿಳೆಯರ ಬಗ್ಗೆ ಅಪಾರ ಅಸಹನೆಯಿದೆ; ತಿರಸ್ಕಾರವಿದೆ. ಅದರ ಜೊತೆಗೆ ಶಿಥಿಲಗೊಳ್ಳುತ್ತಿರುವ ಕುಟುಂಬ ವ್ಯವಸ್ಥೆಯ ಬಗ್ಗೆ ವ್ಯಥೆಯಿದೆ. ಕೌಟುಂಬಿಕ ಮೌಲ್ಯಗಳು ಕುಸಿಯುತ್ತಿರುವುದಕ್ಕೆ ಮಹಿಳೆಯೇ ಕಾರಣ ಎಂಬುದು ಅವರ ಬಲವಾದ ನಂಬಿಕೆ. ಇದನ್ನವರು ಕಾದಂಬರಿಯುದ್ದಕ್ಕೂ ಬರುವ ಸ್ತ್ರೀ ಪಾತ್ರಗಳ ಮುಖಾಂತರ ಬಿಂಬಿಸಲೆತ್ನಿಸಿದ್ದಾರೆ. ಕಥಾನಾಯಕನ ದಿವಂಗತ ಮೊದಲ ಪತ್ನಿ ವೈಜಯಂತಿ,ಅವರ ಮನೆಗೆಲಸದ ಸಹಾಯಕಿ ದ್ಯಾವಕ್ಕ ಮತ್ತು ಆತನ ತಮ್ಮನ ಪತ್ನಿ ಪಾರ್ವತಿಯನ್ನು ಬಿಟ್ಟು ಉಳಿದ ಎಲ್ಲಾ ಮಹಿಳೆಯರನ್ನು ಉಗ್ರ ವಿಮೋಚನವಾದಿಗಳನ್ನಾಗಿ ಇಲ್ಲವೇ ಜಾರಿಣಿಯರನ್ನಾಗಿ, ವಂಚಕರನ್ನಾಗಿ, ಮನೆಮುರುಕರನ್ನಾಗಿ ಚಿತ್ರಿಸಿದ್ದಾರೆ. ಅವರ ಬಳೆಯಿಲ್ಲದ ಕೈ, ಕುಂಕುಮವಿಲ್ಲದ ಹಣೆ,ಸರವಿಲ್ಲದ ಕತ್ತು ಸೂತಕದ ಕಳೆಯೆಂದು ಕಾದಂಬರಿಯುದ್ದಕ್ಕೂ ಮತ್ತೆ ಮತ್ತೆ ಪ್ರಸ್ತಾಪವಾಗುತ್ತಲೇ ಇರುತ್ತದೆ. ಇವರು ಹೀಗಾಗಲು ಉನ್ನತ ವಿದ್ಯಾಭಾಸ ಪಡೆದುದೇ ಕಾರಣವೆಂದು ಬಿಂಬಿಸಲಾಗಿದೆ. ಈ ವಿದ್ಯಾವಂತೆಯರೆಲ್ಲಾ ಕೌಟುಂಬಿಕ ದೌರ್ಜನ್ಯ ವಿರೋಧಿ ಕಾನೂನನ್ನು ಪುರುಷರ ಶೋಷಣೆಗೆ ಅಸ್ತ್ರವಾಗಿ ಬಳಸುತ್ತಿದ್ದಾರೆ ಎಂಬುದು ಬೈರಪ್ಪನವರ ವಾದ.

ವಿವಾಹ ಬಾಹಿರ ಸಂಬಂಧಗಳು ಬೈರಪ್ಪನವರ ಹಿಂದಿನ ಕಾದಂಬರಿಗಳಲ್ಲಿ ಸಾಮಾನ್ಯ. ಆದರೆ ಅಲ್ಲೆಲ್ಲ ಅದಕ್ಕೊಂದು ತಾರ್ಕಿಕ ಹಿನ್ನೆಲೆಯಿರುತ್ತಿತ್ತು. ಆದರೆ ಇಲ್ಲಿ ಅದು ಗಂಡಸರ ಹಕ್ಕು, ಮಹಿಳೆ ಮಾಡಿದರೆ ಅಪರಾಧ ಎನ್ನುವಂತೆ ಪ್ರತಿಪಾದಿಸಲಾಗಿದೆ. ಹೆಂಗಸರ ಲೈಂಗಿಕ ಸ್ವಾತಂತ್ರ್ಯವನ್ನು ಘೋರ ಅಪರಾಧವೆಂದು ಚಿತ್ರಿತವಾಗಿದೆ. ಮಾತ್ರವಲ್ಲ ಮಹಿಳಾ ವಿಮೋಚನವಾದಿಗಳನ್ನು ಸಲಿಂಗಕಾಮಿಗಳೆಂದು ಬಿಂಬಿಸಲು ಸರಾಪ ಎಂಬ ಪಾತ್ರವನ್ನು ತರಲಾಗಿದೆ. ಡಾಕ್ಟರ್ಸ್, ಲಾಯರುಗಳು, ವಿಶ್ವವಿದ್ಯಾಲಯಗಳ ಪ್ರೋಪೆಸರುಗಳು ಸೇರಿದ ಕ್ರಿಮಿನಲ್ ಗಳ ದೊಡ್ಡ ಜಾಲವೆಂದು ಮಹಿಳಾವಾದಿಗಳನ್ನು ತೋರಿಸಲಾಗಿದೆ.

ಕಾದಂಬರಿಯಲ್ಲಿ ಬೈರಪ್ಪನವರು ಎತ್ತಿಕೊಳ್ಳುವ ಇನ್ನೊಂದು ಬಹು ದೊಡ್ಡ ಜಿಜ್ನಾಸೆ ಎಂದರೆ; ಪತ್ನಿಯಾದವಳು ಪತಿಯನ್ನು ಏಕವಚನದಲ್ಲಿ ಕರೆಯುವುದು ಸರಿಯೇ ಎಂಬುದು. ಮದುವೆಗೆ ಮೊದಲು ಮಂಗಳೆ ಏಕವಚನದಲ್ಲಿ ಕರೆದರೂ ಹಾಸುಗೆಯಲ್ಲಿ ರಸಭಂಗವಾಗದ ಕಥಾನಾಯಕ ಮದುವೆಯ ನಂತರ ಏಕವಚನದಲ್ಲಿ ಕರೆದಾಗ ನಿಷ್ಖ್ರ್‍ಇಯನಾಗುತ್ತಾನೆ. ದೊರೆರಾಜು ಎಂಬ ರಾಜಕಾರಣಿ ಮತ್ತು ಇಳಾ ಮೇಡಂ ನಡುವೆಯೂ ಏಕವಚನದ ಜಿಜ್ನಾಸೆಯಿದೆ. ಇದೇ ರೀತಿಯಲ್ಲಿ ಕಾದಂಬರಿಯುದ್ದಕ್ಕೂ ’ಮೇಲ್ ಇಗೋ’ ವಿಜೃಂಬಿಸಿದೆ.

ಸಾಮಾನ್ಯವಾಗಿ ಬೈರಪ್ಪನವರ ಕಾದಂಬರಿಗಳಲ್ಲಿ ಕಂಡುಬರುವ ಅಧ್ಯಯನಶೀಲತೆ ಕಾದಂಬರಿಗೆ ಆಳವನ್ನು ತಂದುಕೊಡುತ್ತದೆ; ಶೈಲಿ ಓದುಗರನ್ನು ಸೆರೆಹಿಡಿಯುತ್ತದೆ. ಆದರೆ ಕವಲಿನಲ್ಲಿ ಇವೆರಡೂ ಇಲ್ಲ. ಮೇಲ್ಮಟ್ಟದ ಸ್ತ್ರೀ ವಿರೋಧಿ ವಕಾಲತ್ತು ಇದೆ ಅಷ್ಟೆ.

ಮಹಿಳೆ ತನ್ನ ಕರ್ತವ್ಯಗಳನ್ನು ಮರೆತು ವ್ಯಯಕ್ತಿಕ ಬದುಕಿಗೆ ಮಾತ್ರ ಗಮನ ಕೊಡುತ್ತಿದ್ದಾಳೆ ಎಂಬುದು ಕಾದಂಬರಿಕಾರರ ಗ್ರಹಿಕೆ.ಆದರೆ ಭಾರತೀಯ ಸಮಾಜದಲ್ಲಿ ಗೃಹಿಣಿ ಧರ್ಮ ಇರುವಂತೆಯೇ ಗೃಹಸ್ಥ ಧರ್ಮ ಎಂಬುದಿದೆ. ಅದನ್ನು ಸ್ವಲ್ಪ ಮಟ್ಟಿಗಾದರೂ ಪಾಲಿಸಿದರೆ ಮಾತ್ರ ಕುಟುಂಬ ವ್ಯವಸ್ಥೆ ಉಳಿದುಕೊಳ್ಳಲು ಸಾಧ್ಯ. ಸ್ವಸ್ಥ ಸಮಾಜ ರೂಪುಗೊಳ್ಳಲು ಸಾಧ್ಯ. ಆ ಹೊಣೆಗಾರಿಕೆಯನ್ನು ಇವತ್ತಿನ ದಂಪತಿಗಳು ನಿಭಾಯಿಸುತ್ತಿದ್ದಾರೆಯೇ ಎಂಬುದನ್ನು ಬೈರಪ್ಪನಂಥ ಜನಪ್ರಿಯ ಕಾದಂಬರಿಕಾರರು ಶೋಧಿಸಬೇಕಾಗಿದೆ. ಒಬ್ಬ ಗಂಡಸು ಮಗನಾಗಿ, ಗಂಡನಾಗಿ, ಅಪ್ಪನಾಗಿ, ಕುಟುಂಬದ ಯಜಮಾನನಾಗಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದಾನೆಯೇ? ಮಗಳಾಗಿ, ಪತ್ನಿಯಾಗಿ, ಅಮ್ಮನಾಗಿ, ಗೃಹಿಣಿಯಾಗಿ ಒಬ್ಬ ಮಹಿಳೆ ನಿರ್ವಹಿಸಿದಷ್ಟು ಹೊಣೆಗಾರಿಕೆಯನ್ನು ಒಬ್ಬ ಗಂಡಸು ನಿರ್ವಹಿಸುತ್ತಿಲ್ಲವೆಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದನ್ನು ಕಾದಂಬರಿಕಾರನೊಬ್ಬ ಸಮಾಜಶಾಸ್ತ್ರಜ್ನನ ರೀತಿಯಲ್ಲಿ ವಿಶ್ಲೇಷಿಸಬೇಕಾಗುತ್ತದೆ. ಅದನ್ನು ಬೈರಪ್ಪನವರು ಮಾಡುವುದಿಲ್ಲ ಯಾಕೆಂದರೆ ಅವರು ಅಧುನಿಕತೆಯನ್ನು ಒಪ್ಪಿಕೊಳ್ಳಲಾರರು. ಅವರ ಬದಲಾವಣೆಯೆನಿದ್ದರೂ ಸಂಪ್ರದಾಯಿಕ ಕೌಟುಂಬಿಕ ವ್ಯವಸ್ಥೆಯೊಳಗಡೆಯೇ ಆಗಬೇಕು. ಹಾಗಾಗಿಯೇ ಜಯಕುಮಾರನ ಬುದ್ದಿಮಾಂದ್ಯ ಮಗಳನ್ನು ಅವನ ಅಕ್ಕನ ಮಗ, ವಿದೇಶದಲ್ಲಿ ಎರಡು ಹೆಂಗಸರ ಜೊತೆ ಸಂಬಂಧವಿದ್ದು ಈಗ ಭಾರತಕ್ಕೆ ಬಂದು ನೆಲೆಸಿರುವ ನಚಿಕೇತನ ಜೊತೆ ಮದುವೆ ಮಾಡಿಸಿ ಸುಖ ದಾಂಪತ್ಯದ ಮಾದರಿಯನ್ನು ಕೊಡುತ್ತಾರೆ. ಮಂಗಳೆಯನ್ನು ಶಿಕ್ಷಿಸುವ ಭರದಲ್ಲಿ ಅವಳನ್ನು ಜೀವವಿರೋಧಿಯಾಗಿ, ಭಾವನಾರಹಿತಳಾಗಿ ಚಿತ್ರಿಸಲಾಗಿದೆ. ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸ ಪಡೆದ ಇಂಗೀಷ್ ಪ್ರೋಪೆಸರ್ ಇಳಾಮೇಡಂ ಅನ್ನು ವ್ಯಕ್ತಿತ್ವ ಮಾರಿಕೊಂಡಂತೆ ಚಿತ್ರಿಸಿ ರಾಜಕಾರಣಿಯೊಬ್ಬನ ’ಕೀಪ್’ ಮಾಡಿದ್ದಾರೆ.

ಸ್ತ್ರಿ ಸಂವೇದನೆಗಳನ್ನು ಗೌರವಿಸುವ, ಆಕೆಯ ಅನನ್ಯತೆಯನ್ನು ಒಪ್ಪಿಕೊಳ್ಳುವ, ಸಮಾನತೆಗಾಗಿ ತುಡಿಯುವ ಎಲ್ಲರೂ ಉಪೇಕ್ಷಿಸಬೇಕಾದ ಕಾದಂಬರಿಯಿದು.

[ಜುಲೈ ೧೯ರಂದು ಕನ್ನಡ ಪ್ರಭದಲ್ಲಿ ಪ್ರಕಟವಾದ ಬರಹ]

Monday, July 5, 2010

ಮಾಧ್ಯಮಗಳಲ್ಲಿ ಮಹಾ ಕಾವ್ಯಗಳ ಮರು ಓದು




ಮಹಾ ಕಾವ್ಯಗಳು ಸೃಜನಶೀಲ ಮನಸ್ಸುಗಳನ್ನು ಮತ್ತೆ ಮತ್ತೆ ಕಾಡುತ್ತವೆ; ಕೆಣಕುತ್ತವೆ; ಅವರ ಕಲ್ಪನೆಯ ಮೂಸೆಯಲ್ಲಿ ರೂಪಾಂತರ ಹೊಂದುತ್ತವೆ. ಭಾರತೀಯ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣಗಳು ಅಂಥ ಬತ್ತದ ಕಣಜಗಳು. ಪ್ರಕಾಶ ಝಾ ಮತ್ತು ಮಣಿರತ್ನರು ಆ ಕಣಜಕ್ಕೆ ಕೈ ಹಾಕಿ ’ರಾಜನೀತಿ’ ಮತ್ತು ’ರಾವಣ’ ಎಂಬ ಸಿನೇಮಾಗಳನ್ನು ತಯಾರಿಸಿದ್ದಾರೆ.ಅದ್ದೂರಿ ಪ್ರಚಾರದೊಂದಿಗೆ ತೆರೆ ಕಂಡ ಈ ಚಿತ್ರಗಳು ನಿರೀಕ್ಷೆಯ ಯಶಸ್ಸನ್ನು ಕಾಣಲಿಲ್ಲ. ಮಹಾಕಾವ್ಯದ ಹರಹನ್ನು ಹೊಂದಿರುವ ಕುವೆಂಪುರವರ ಕಾದಂಬರಿ ’ಮಲೆಗಳಲ್ಲಿ ಮದುಮಗಳು’ ಕೂಡಾ ರಂಗ ಪ್ರಯೋಗವಾಗಿ ದಾಖಲೆಯಾಯಿತೇ ಹೊರತು ಯಶಸ್ಸನ್ನು ಕಾಣಲಿಲ್ಲ ಎಂದು ನಾಟಕ ನೋಡಿದವರ ಬಾಯಿಂದ ಕೇಳಿದ್ದೇನೆ.

ಯಾಕೆ ಹೀಗೆ? ಜನ ಮಾನಸದಲ್ಲಿ ನೆಲೆ ನಿಂತಿರುವ ಕಥೆ/ಕೃತಿಯೊಂದನ್ನು ಇನ್ನೊಂದು ಮಾಧ್ಯಮಕ್ಕೆ ಅಳವಡಿಸಿದಾಗ ಪ್ರೇಕ್ಷಕ ಪೂರ್ವನಿರ್ಧಾರಿತ ಮನಸ್ಸಿನೊಂದಿಗೆ ಅದನ್ನು ನೋಡಲು ಬರುತ್ತಾನೆ. ಆತ ಮೂಲ ಕೃತಿಯೊಡನೆ ಇದನ್ನು ಹೊಲಿಸಿ ನೋಡುತ್ತಾನೆ. ನಿರ್ದೇಶಕ ಹೊಸತೇನನ್ನು ಕೊಟ್ಟಿದ್ದಾನೆ ಎಂದು ಹುಡುಕಾಡುತ್ತಾನೆ. ಪ್ರೇಕ್ಷಕನಿಗೆ ಗೊತ್ತಿದೆ; ’ಅದು’ ಇದಾಗದು. ಎಷ್ಟೆಂದರೂ ಇದು ಅದರ ರೀಮೆಕ್. ಇದೇ ಅದಾಗಲು ಪ್ರಯತ್ನಿಸಿದರೆ ಪ್ರೇಕ್ಷಕನನ್ನು ಗೆಲ್ಲಲು ಸಾಧ್ಯವಾಗದು. ಮಣಿರತ್ನಂರವರ ’ರಾವಣ’ ಅದೇ ಆಗಲು ಪ್ರಯತ್ನಿಸಿದೆ. ಸೋತಿದೆ.

ರಾವಣದಲ್ಲಿ ಕಥೆಯೇ ಇಲ್ಲ.ಕೇವಲ ದೃಶ್ಯ ವೈಭವಗಳಷ್ಟೆ ಒಂದು ಸಿನೆಮಾವನ್ನು ಗೆಲ್ಲಿಸಲು ಸಾಧ್ಯವಾಗದು. ನಿರ್ದೇಶಕನಿಗೆ ಕಥನ ಕಲೆ ಗೊತ್ತಿರಬೇಕು. ಭಾರತೀಯ ಪ್ರೇಕ್ಷಕನಿಗಂತೂ ಕಥೆಯೇ ಮುಖ್ಯ.
ರಾಜನೀತಿಯಲ್ಲಿ ಕಥೆ ಇದೆ. ಅದ್ದೂರಿ ತಾರಾ ಸಮೂಹವಿದೆ. ಆದರೆ ಹೀರೊ ಇಲ್ಲ. ಎಲ್ಲಾ ಪಾತ್ರಗಳೂ ವಿಲನ್ ಗಳೇ. ಪ್ರತಿ ಪ್ರೇಮಿನಲ್ಲಿಯೂ ನಮಗೆ ಮಹಾಭಾರತ ನೆನಪಾಗುತ್ತದೆ. ಹಾಗಾಗಿ ಸಿನೇಮಾ ವಾಚ್ಯವಾಗಿದೆ.
ಸಿನೇಮಾವೊಂದು ಬಿಡುಗಡೆಗೆ ಪೂರ್ವದಲ್ಲಿಯೇ ಇದು ಇಂತಹ ಕಾವ್ಯದ ಆಧಾರವೆಂದು ಅದ್ದೂರಿ ಪ್ರಚಾರ ನೀಡಬಾರದು. ಸಿನೇಮಾ ನೋಡಿದ ಪ್ರೇಕ್ಷಕನಿಗೆ ಮಹಾಭಾರತ ಇಲ್ಲವೆ ರಾಮಾಯಣದ ಪಾತ್ರಗಳು, ಘಟನೆಗಳು ನೆನಪಾಗಬೇಕು.

ಕುವೆಂಪುರವರ ’ಮಲೆಗಳಲ್ಲಿ ಮದುಮಗಳು’ ಮಹಾಕಾವ್ಯದ ವಿಸ್ತಾರವನ್ನು ಹೊಂದಿರುವ, ಮಲೆನಾಡಿನ ಸಮಗ್ರ ಚಿತ್ರಣವನ್ನು ಸರಳವಾಗಿ ಕಟ್ಟಿಕೊಡುವ ಬೃಹತ್ ಕಾದಂಬರಿ.ಇಂತಹ ಕಾದಂಬರಿ ರಂಗಪ್ರಯೋಗಕ್ಕೆ ಒಳಪಡುತ್ತಿದೆ ಎಂಬುದನ್ನು ಕೇಳಿದಾಗಲೇ ಅಚ್ಚರಿಯಾಗಿತ್ತು. ಕೆಲವರಿಗೆ ಅದಕ್ಕಿಂತಲೂ ಅಚ್ಚರಿಯಾಗಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅದಕ್ಕೆ ಮಂಜೂರು ಮಾಡಿದ ಹಣದ ಮೊತ್ತ. ಬಹುಶಃ ಆ ಹಣದಲ್ಲಿ ನಮ್ಮ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದೊಂದು ನಾಟಕೋತ್ಸವವನ್ನು ಏರ್ಪಡಿಸಬಹುದಿತ್ತು ಎಂಬುದು ಅವರ ತಕರಾರು.

ಇದೆಲ್ಲಾ ನಿಜವೇ. ಆದರೆ ಕೇಂದ್ರ ಪಾತ್ರವಿಲ್ಲದ, ಅತ್ಯಲ್ಪ ನಾಟಕೀಯ ಘಟನೆಗಳಿರುವ, ಕೇವಲ ವಿವರಣೆಗಳಲ್ಲೇ ಮಲೆನಾಡಿನ ಸಮಗ್ರ ಚಿತ್ರಣವನ್ನು ಕಟ್ಟಿಕೊಡುವ ೭೧೮ ಪುಟಗಳ ಮಹಾ ಕಾದಂಬರಿ’ ಮಲೆಗಳಲ್ಲಿ ಮದುಮಗಳು’ ನ್ನು ಯಶಸ್ವಿಯಾಗಿ ರಂಗಕ್ಕೆ ಅಳವಡಿಸುವುದಕ್ಕೆ ಧೈರ್ಯ, ಪ್ರತಿಭೆ ಮತ್ತು ಆರ್ಥಿಕ ಸಾಮರ್ಥ್ಯ ಎಲ್ಲವೂ ಬೇಕು.

ಬಸವಲಿಂಗಯ್ಯನವರಿಗೆ ದೈರ್ಯ ಇತ್ತು. ಅವರು ನಾಟಕಕ್ಕೆ ಆಯ್ಕೆ ಮಾಡಿಕೊಳ್ಳುವ ವಸ್ತುಗಳೇ ಅದನ್ನು ಪ್ರತಿಫಲಿಸುತ್ತಿದ್ದವು. ಈ ಮೊದಲೇ ಅವರು ಕುವೆಂಪುರವರ ’ಶೂದ್ರ ತಪಸ್ವಿ’ ಕಾರ್ನಾಡರ ’ಅಗ್ನಿ ಮತ್ತು ಮಳೆ’ ದೇವನೂರು ಮಹಾದೇವರ ’ಕುಸುಮ ಬಾಲೆ’ ’ದ್ಯಾವನೂರು’ಗಳನ್ನು ರಂಗರೂಪಕ್ಕೆ ಅಳವಡಿಸಿದ್ದರು. ಇನ್ನು ಪ್ರತಿಭೆಯೂ ಇತ್ತು. ಯಾಕೆಂದರೆ ಅವರು ಎನ್ ಎಸ್ ಡಿ ಪಧವಿದರರು. ಆರ್ಥಿಕ ಸಹಾಯಕ್ಕಾಗಿ ಅವರು ಸರಕಾರದೆಡೆ ನೋಡಲೇಬೇಕಾಗಿತ್ತು. ಮೈಸೂರಿನಲ್ಲಿರುವ ’ರಂಗಾಯಣ’ ರೆಪರ್ಟರಿ ಸರಕಾರದ ಅಂಗ ಸಂಸ್ಥೆ. ಅಲ್ಲಿಯ ಕಲಾವಿದರೆಲ್ಲಾ ಸರಕಾರಿ ನೌಕರರು. ಬಸವಲಿಂಗಯ್ಯನವರಿಗೆ ಅವಕಾಶ ಒದಗಿ ಬಂತು. ಮದುಮಗಳು ರಂಗಕ್ಕೆ ಬಂದಳು.

ಮಾಧ್ಯಮಗಳಲ್ಲಿ ಮದುಮಗಳ ರಂಗಪ್ರಯೋಗದ ಬಗ್ಗೆ ಹಲವು ಅಭಿಪ್ರಾಯಗಳು ಬಂದವು. ಬೆಂಗಳೂರಿನಲ್ಲಿರುವ ನನಗೆ ಮೈಸೂರಿನಲ್ಲಿ ನಡೆದ ಪ್ರಯೋಗವನ್ನು ನೋಡಲಾಗಲಿಲ್ಲ. ಆದರೆ ಅದು ಒಂಬತ್ತು ಘಂಟೆಗಳ ಸುದೀರ್ಘ ಅವಧಿಯ ಪ್ರಯೋಗವೆಂದು ಕೇಳಿ ಮತ್ತೊಮ್ಮೆ ಅಚ್ಚರಿಯಾಯಿತು. ನಾವು ಕರಾವಳಿಯ ಜನ. ರಾತ್ರಿಯಿಡಿ, ಒಂಬತ್ತು ಘಂಟೆಗಳ ಯಕ್ಷಗಾನವನ್ನು ನೋಡುತ್ತ ಬೆಳೆದು ಬಂದವರು. ಅಂಥ ನನ್ನೂರ ಜನರೇ ಇಂದು ಮೂರು ಘಂಟೆಗಳ ಯಕ್ಷಗಾನಕ್ಕೆ ಒಗ್ಗಿಕೊಂಡಿದ್ದಾರೆ. ಯಕ್ಷಗಾನದ ಯಕ್ಷ, ಕಿನ್ನರ, ಗಂದರ್ವ ಲೋಕವೇ ಕಾಲನ ತೆಕ್ಕೆಯಲ್ಲಿ ಮಸುಕಾಗಿದೆ. ಇನ್ನು ಜೀವಂತ ರಂಗಭೂಮಿಯಾದ ನಾಟಕ ಪ್ರೇಕ್ಷಕನ ಏಕಾಗ್ರತೆಯನ್ನು ಬಯಸುತ್ತೆ. ೧೫೦ ಪಾತ್ರಗಳು,೫೮ ದೃಶ್ಯ, ೪೮ ಹಾಡು, ೬೭ ನಟರು ನಾಲ್ಕು ವಿರಾಮವಿರುವ ಈ ನಾಟಕಕ್ಕೆ ಆರು ತಿಂಗಳ ತಯಾರಿ ನಡೆಸಲಾಗಿತ್ತು.

ಖಂಡಿತವಾಗಿಯೂ ರಂಗಾಯಣ ಮಾತ್ರ ಇಂತಹ ಪ್ರಯೋಗಗಳನ್ನು ಮಾಡಲು ಸಾಧ್ಯ. ಆದರೆ ಅದನ್ನು ರಾಜ್ಯದ ಎಲ್ಲಾ ರಂಗಪ್ರೇಮಿಗಳು ನೋಡುವಂತಾಗಬೇಕು ಯಾಕೆಂದರೆ ಅದಕ್ಕೆ ವ್ಯಯವಾಗಿರೋದು ಪ್ರಜೆಗಳ ತೆರಿಗೆ ಹಣ. ಅದಕ್ಕಾಗಿ ನಾಟಕದ ಅವಧಿಯನ್ನು ಕಡಿಮೆಗೊಳಿಸಿ ಅದನ್ನು ರಾಜ್ಯಾದ್ಯಂತ ತಿರುಗಾಟಕ್ಕೆ ಅಣಿಗೊಳಿಸಬೇಕು.

ಈ ಸಂದರ್ಭದಲ್ಲಿ ಪೀಟರ್ ಬ್ರೂಕ್ ರ ’ಮಹಾಭಾರತ’ ನೆನಪಾಗುತ್ತದೆ. ಒಂಬತ್ತು ಘಂಟೆಗಳ ಈ ನಾಟಕದ ಸ್ಕ್ರೀನ್ ಪ್ಲೆಗಾಗಿ ಅವರು ಎಂಟು ವರ್ಷ ಕೆಲಸ ಮಾಡಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಕಲಾವಿದರನ್ನು ಆಯ್ಕೆ ಮಾಡಲಾಗಿತ್ತು. ಒಟ್ಟು ನಲ್ವತ್ತೆರಡು ಕಲಾವಿದರಲ್ಲಿ ದ್ರೌಪದಿ ಪಾತ್ರ ಮಾಡಿದ್ದು ಭಾರತದ ಮಲ್ಲಿಕಾ ಸಾರಾಭಾಯಿ. ೫ ಮಿಲಿಯನ್ ಡಾಲರ್ ವೆಚ್ಚದಲ್ಲಿ ತಯಾರಾದ ಈ ನಾಟಕದಲ್ಲಿ ಆಪ್ರಿಕಾದ ಕಪ್ಪು ವರ್ಣದವರೇ ಜಾಸ್ತಿಯಿದ್ದರು. ಜೊತೆಗೆ ರವೀಂದ್ರನಾಥ ಠಾಕೂರರ ಸಂಗೀತವಿತ್ತು.ಅದರ ಕಾಸ್ಟ್ಯೂಮ್ ವಾಸ್ತವಕ್ಕೆ ಹತ್ತಿರವಿತ್ತು. ಚಕ್ರವ್ಯೂಹದ ರಚನೆ ನಿರ್ದೇಶಕರ ಸೃಜನಶೀಲತೆಗೆ ಕನ್ನಡಿ ಹಿಡಿದಂತಿತ್ತು. ಬಹುರಾಷ್ಟ್ರೀಯ, ಬಹುಜನಾಂಗೀಯ ಕಲಾವಿದರಿದ್ದ ಈ ತಂಡ ನಾಲ್ಕು ವರ್ಷಗಳ ಕಾಲ ಪ್ರಪಂಚದಾದ್ಯಂತ ತಿರುಗಾಟ ನಡೆಸಿತ್ತು. ಅನಂತರ ಅದು ಆರು ಘಂಟೆಗಳ ಟೀವಿ ಧಾರಾವಾಯಿಯಾಗಿ ಚಿತ್ರಿಕರಿಸಲಾಯಿತು.ಅದು ದೂರದರ್ಶನದಲ್ಲಿಯೂ ಬಿತ್ತರಗೊಂಡಿತು. ಕೊನೆಗೆ ಮೂರು ಘಂಟೆಗಳ ನಾಟಕವಾಗಿಸಿ ಅದರ ಡಿವಿಡಿ ರಿಲೀಸ್ ಮಾಡಲಾಯ್ತು.

ನಾಟಕ, ಸಿನೇಮಾದಂತಹ ಪ್ರಭಾವಿ ಮಾಧ್ಯಮಕ್ಕೆ ಸಮೂಹವನ್ನು ಸಮ್ಮೋಹನಗೊಳಿಸುವ ಶಕ್ತಿ ಇದೆ. ಅದು ನಮಗೆ ಮನರಂಜನೆಯನ್ನು ನೀಡಬೇಕು.ಇಲ್ಲವೇ ಅದು ಪ್ರದರ್ಶನದಾಚೆಯೂ ಕೆಲಕಾಲ ನಮ್ಮನ್ನು ಕಾಡಬೇಕು. ಅಥವಾ ಇನ್ಯಾವುದಕ್ಕೊ ನಮ್ಮನ್ನು ಸಕಾರಾತ್ಮಕವಾಗಿ ಪ್ರೆರೇಪಿಸಬೇಕು. ಅದ್ಯಾವುದನ್ನು ರಾವಣ ಮತ್ತು ರಾಜನೀತಿ ಮಾಡುವುದಿಲ್ಲ.
ಮಲೆಗಳಲ್ಲಿ ಮದುಮಗಳು ಏನು ಮಾಡಿದೆಯೆಂಬುದು ಮೈಸೂರಿನ ರಂಗಾಸಕ್ತರು ಮತ್ತು ಅಲ್ಲಿಗೆ ಹೋಗಿ ನಾಟಕ ನೋಡಲು ವ್ಯವಧಾನ ಮತ್ತು ಸಾಮರ್ಥ್ಯವಿದ್ದ ಕೆಲವರಿಗಷ್ಟೆ ಗೊತ್ತಾಗಿದೆ!
[ ಕನ್ನಡಪ್ರಭದ ಸಾಪ್ತಾಹಿಕದಲ್ಲಿ ಪ್ರಕಟವಾದ ಲೇಖನ]

Saturday, May 29, 2010

ಸುಚೇಂದ್ರಪ್ರಸಾದರ ’ಪ್ರಪಾತ’ಕ್ಕೆ ಹರಿದು ಬಂದ ತೊರೆಗಳು





ಅನ್ನವನ್ನು ಅರಸಿಕೊಂಡು ಕೊಲ್ಲಿ ರಾಷ್ಟ್ರಗಳಿಗೆ ವಲಸೆ ಹೋದ ನನ್ನೂರ ಜನರನ್ನು ತವರೂರಿಗೆ ಹೊತ್ತು ತರುತ್ತಿದ್ದ ವಿಮಾನ ಮೇ ೨೨ರ ಶನಿವಾರ ಬೆಳಿಗ್ಗೆ ಬಜ್ಪೆ ಸಮೀಪದ ಕೆಂಜಾರು ಗುಡ್ಡದ ೩೦೦ ಅಡಿ ಪ್ರಪಾತಕ್ಕೆ ಬಿದ್ದು ಹೊತ್ತಿ ಉರಿಯಿತು. ೬ ಸಿಬ್ಬಂದಿ, ೧೮ ಕಂದಮ್ಮಗಳು ಸೇರಿದಂತೆ ೧೫೮ ಜನ ಉರಿದು ಕರಕಲಾದರು. ೮ ಜನ ಅದೃಷ್ಟವಂತರು ಬದುಕುಳಿದರು.

ಮೃತ್ಯು ಬಂದು ಅಪ್ಪಳಿಸಿದ ಪರಿಯನ್ನು, ಆಪ್ತರ ಆಕ್ರಂದನವನ್ನು ದೃಶ್ಯ ಮಾಧ್ಯಮಗಳಲ್ಲಿ ನೋಡಿ ಭಾರವಾದ ಮನಸ್ಥಿತಿಯಲ್ಲಿರುವಾಗಲೇ ಗೆಳತಿ ಸುಧಾಶರ್ಮ ಚವತ್ತಿ ಪೋನ್ ಮಾಡಿ ಮರುದಿನ ಸುಚೇಂದ್ರಪ್ರಸಾದರ ’ಪ್ರಪಾತ’ದ ಶೋ ಇದೆ ಹೋಗೋಣ್ವಾ? ಎಂದರು.

ಒಂದು ಪ್ರಪಾತದಿಂದ ಇನ್ನೊಂದು ಪ್ರಪಾತಕ್ಕೆ ಯಾನ ಮಾಡಲು ಮನಸ್ಸನ್ನು ಸಿದ್ಧ ಮಾಡಿಕೊಳ್ಳತೊಡಗಿದೆ. ನಟ ಸುಚೇಂದ್ರಪ್ರಸಾದ್ ರಂಗಭೂಮಿಯ ಹಿನ್ನೆಲೆಯೆಯವರು. ರಂಗಭೂಮಿ ಎಂಬುದು ಎಲ್ಲಾ ಕಲೆಗಳ, ಇನ್ನೊಂದರ್ಥದಲ್ಲಿ ಎಲ್ಲಾ ತೆವಲುಗಳ ಸಂಗಮ ಸ್ಥಳ. ಹಾಗಾಗಿ ಅವರ ಸಾಹಸವನ್ನೊಮ್ಮೆ ನೋಡೋಣವೆಂದುಕೊಂಡು ಭಾನುವಾರ ಮಧ್ಯಾಹ್ನ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಿಜಾಯ್ಸ್ ಗೆ ಹೋದೆ.

ಭಾರದ್ವಾಜ ಮುನಿ ಸಂಸ್ಕೃತದಲ್ಲಿ ಬರೆದಿರುವ ವೈಮಾನಿಕ ಶಾಸ್ತ್ರ ಕುರಿತಾದ ’ಯಂತ್ರ ಸಾರಸ್ವ’ ಕ್ಕೆ ಭಾಷ್ಯವನ್ನು ಬರೆದಿರುವ ಅನೇಕಲ್ ಸುಬ್ಬರಾಯ ಶಾಸ್ತ್ರಿ ಕುರಿತಾದ ಚಿತ್ರ ’ಪ್ರಪಾತ’. ಹಾಗೆಂದು ಅದು ಸಾಕ್ಷ್ಯ ಚಿತ್ರವಲ್ಲ. ಸಾಕ್ಷ್ಯ ಚಿತ್ರದಂತೆ ಆರಂಭಗೊಂಡರೂ ಮುಂದೆ ಹಲವು ಆಯಾಮಗಳನ್ನು ಪಡೆದುಕೊಳ್ಳುತ್ತಾ ಎರಡು ಗಂಟೆಗಳ ಪೂರ್ಣ ಪ್ರಮಾಣದ ಚಲನಚಿತ್ರವಾಗಿ ರೂಪಾಂತರ ಪಡೆದಿದೆ. ಇಂತಹ ಚಿತ್ರವನ್ನು ನಿರ್ಮಿಸುವ ಸಾಹಸ ಮಾಡಿದವರು ಮಾರುತಿ ಎಸ್ ಜಡಿ ಅವರ್.

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹೊಸೂರು ತಾಲೂಕಿನಲ್ಲಿ೧೮೧೬ರಲ್ಲಿ ಜನಿಸಿದ ಶಾಸ್ತ್ರಿಗಳು ’ಯಂತ್ರ ಸಾರಸ್ವ’ ವನ್ನು ಅಧ್ಯಯನ ಮಾಡಿ ೧೯೦೩ರಲ್ಲೇ ಸ್ವದೇಶಿ ನಿರ್ಮಿತ ವಿಮಾನವನ್ನು ಉಡಾಯಿಸಿದ್ದರೆಂಬ ಪ್ರತಿತಿಯಿದೆ. ಕೇವಲ ಒಂದೇ ಶತಮಾನದಲ್ಲಿ ಐತಿಹ್ಯವಾಗಿ ನಂತರ ದಂತಕಥೆಯಾಗಿ ವಿಸ್ಮೃತಿಗೆ ಸಂದಿದ ಸಾಧಕರಿವರು.

ಇಂಥ ಸಾಧಕರನ್ನು’ ಅವರ ಸಾಧನೆಯನ್ನು ಅನ್ವೇಶಕ ದೃಷ್ಟಿಯಿಂದ ನೋಡಿದ್ದಾರೆ ನಿರ್ದೇಶಕ ಸುಚೇಂದ್ರಪ್ರಸಾದ್. ಶಾಸ್ತ್ರೀಯಂಥ ಮೇರುಸದೃಷ ವ್ಯಕ್ತಿತ್ವದವರನ್ನು ಮತ್ತವರ ಸಾಧನೆಯನ್ನು ನಾವು ಪ್ರಪಾತದಲ್ಲಿ ನಿಂತು ನೋಡುತ್ತಿದ್ದೇವೆ. ಅಥವ ಅವರ ಜ್ನಾನದ ಆಳವನ್ನು ಶಿಖರದ ತುದಿಯಲ್ಲಿ ನಿಂತು ನೋಡುತ್ತಿದ್ದೇವೆ. ಅದು ಬೌದ್ಧಿಕತೆಯ ಪ್ರಪಾತ ಎಂಬುದು ಪ್ರಸಾದ್ ಗ್ರಹಿಕೆ.

ಅಪರೂಪಕ್ಕೆ ಆ ಜ್ನಾನಶಿಖರಗಳನ್ನು ಮುಟ್ಟುವ ಪ್ರಯತ್ನ ಮಾಡಿದವರು ಆ ಜ್ನಾನವನ್ನು ಬೇರೆಯವರಿಗೂ ಹಂಚದೆ ತಮ್ಮಲ್ಲಿಯೇ ಬಚ್ಚಿಟ್ಟುಕೊಳ್ಳುವ ಪ್ರಯತ್ನಿಸುತ್ತಾರೆ; ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಾರೆ. ಅಲ್ಪರಂತೆ ವರ್ತಿಸುತ್ತಾರೆ. ಇಂಥ ಅರೆಬೆಂದವರ ಪಾತ್ರದಲ್ಲಿ ದತ್ತಣ್ಣ, ಕೃಷ್ಣ ಅಡಿಗ, ಶಿವರಾಂ, ವಿದ್ಯಾಮೂರ್ತಿ, ಸೇತುರ್‍ಆಂ ಪಾತ್ರದ ಒಳಹೊಕ್ಕು ಅಭಿನಯಿಸಿದ್ದಾರೆ. ಮಾತ್ರವಲ್ಲ ವರ್ತಮಾನದಲ್ಲಿರುವ ಹಲವರನ್ನು ಅನುಕರಣೆ ಮಾಡಿದ್ದಾರೆ. ಅನ್ವೇಶಕನ ಪಾತ್ರದಲ್ಲಿ ಅಮಾನ್ ಅವರದು ಸಂಯಮದ ಅಬಿನಯ. ಆತನ ವಿದ್ಯಾರ್ಥಿ ಮಿತ್ರನ ಪಾತ್ರದಲ್ಲಿರುವ ಸಂತೋಷ್, ಅಡಿಗರ ’ವರ್ಧಮಾನ’ ಕವನದ ನಾಯಕನನ್ನು ನೆನಪಿಸುತ್ತಾರೆ. ಕೆ.ಎಸ್.ಎಲ್ ಸ್ವಾಮಿ, ಸ್ರೀನಿವಾಸಪ್ರಭು ಸೇರಿದಂತೆ ಪ್ರತಿಯೊಬ್ಬರದ್ದೂ ಸಹಜಾಭಿನಯ. ಚಿತ್ರದ ಒಟ್ಟಂದಕ್ಕೆ ಶಶಿಧರ್.ಕೆ ಅವರ ಕ್ಯಾಮರ ವರ್ಕ್ ಮತ್ತು ಎಡಿಟರ್ ಗಳಾದ ಲಿಂಗರಾಜು ಮತ್ತು ನಾಗೇಶ್ ರ ಕಾಣಿಕೆ ದೊಡ್ಡದು.

’ಪ್ರಪಾತ’ದಲ್ಲಿ ನಿರ್ದೇಶಕರ ಪ್ರತಿಭೆ ಚಿಕ್ಕಚಿಕ್ಕ ಶಶಕ್ತ ತೊರೆಗಳಾಗಿ ಪ್ರಪಾತಕ್ಕೆ ಹರಿದಿದೆ-ಆಹ್ವಾನಿತ ಪ್ರೇಕ್ಷಕರು ಕೂಡಾ ತೊರೆಗಳಾಗಿ ಹರಿದು ಬಂದಿದ್ದಾರೆ. ಆದರೆ ಅವೆಲ್ಲಾ ಒಂದಾಗಿ ಜೀವನದಿಯಾಗಿ ಹರಿದ ಅನುಭವವಾಗುವುದಿಲ್ಲ. ಅದರೂ ಇಷ್ಟೆಲ್ಲಾ ಚಿಂತನೆಗೆ, ವಾದಕ್ಕೆ, ಊಹೆಗೆ ಕಾರಣವಾದ ಈ ಚಿತ್ರವನ್ನು ಖಂಡಿತವಾಗಿಯೂ ಒಮ್ಮೆ ನೋಡಬಹುದು. ಸಧ್ಯದಲ್ಲಿಯೇ ನಿರ್ಧೇಶಕರು ಇದರ ಇನ್ನೊಂದು ಪ್ರದರ್ಶನವನ್ನು ಏರ್ಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

[ ಕನ್ನಡ ಪ್ರಭದ ಸಾಪ್ತಾಹಿಕ ಪ್ರಭದಲ್ಲಿ ಪ್ರಕಟವಾದ ಬರಹ ]





Monday, May 10, 2010

.....ಎನ್ನನು ಮಾರಿ ಕಾಂಚಾಣವನ್ನು ಕೊಂಡರೇ?






’ಹರಕೆಯ ಕುರಿ’ ಎಂಬುದೊಂದು ನಾಟಕವನ್ನು ಚಂದ್ರಶೇಖರ ಕಂಬಾರರು ೧೯೮೩ರಲ್ಲಿ ಬರೆದಿದ್ದಾರೆ. ಇದರಲ್ಲಿ ರಾಜಕೀಯವೆಂಬುದು ನಮ್ಮ ಮನೆಯ ಪಡಸಾಲೆ, ಅಡುಗೆಮನೆಗಳನ್ನು ನಮಗರಿವಿಲ್ಲದಂತೆ ಆವರಿಸಿಕೊಳ್ಳುತ್ತಿರುವ ಪರಿಯನ್ನು ಸೂಕ್ಷವಾಗಿ ಹಿಡಿದಿಟ್ಟಿದ್ದಾರೆ. ಗಂಡ-ಹೆಂಡತಿಯೆಂಬ ಎರಡೇ ಪಾತ್ರವಿರುವ ಈ ನಾಟಕ ಬದಲಾಗುತ್ತಿರುವ ಮಧ್ಯಮ ವರ್ಗದ ತಳಮಳದ ಜೀವನಶೈಲಿಯನ್ನು ಹಿಡಿದಿಡುವ ಪ್ರಯತ್ನ ಮಾಡಿತ್ತು. ಅನಂತರ ಅದು ಸಿನಿಮಾ ಆಗಿ ರಾಷ್ಟ್ರಪ್ರಶಸ್ತಿಯನ್ನೂ ಪಡೆಯಿತು.

ಈಗ ರಾಜಕೀಯವೆಂಬುದು ಮನೆಯನ್ನು ಮಾತ್ರವಲ್ಲ ಮನಸ್ಸಿನೊಳಗೂ ಪ್ರವೇಶ ಪಡೆದಿದೆ. ಭಾವನೆಗಳನ್ನೂ ಆಳತೊಡಗಿದೆ. ಮನುಷ್ಯ ಸಂಬಂಧಗಳನ್ನು ಹಾಳುಮಾಡತೊಡಗಿದೆ. ಮಾನವೀಯವಾಗಿ ನೋಡಬೇಕಾದ ಘಟನೆಗಳಿಗೂ ರಾಜಕೀಯ ಮೆತ್ತಲಾಗುತ್ತಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಮಂತ್ರಿಯಾಗಿದ್ದ ಹಾಲಪ್ಪನವರ ಅತ್ಯಾಚಾರ ಪ್ರಕರಣವನ್ನೇ ನೋಡಿ; ಅಲ್ಲಿ ಸಚಿವರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಚಂದ್ರಾವತಿ ಎಂಬ ಮಹಿಳೆ ದೂರು ಕೊಟ್ಟಿದ್ದಾರೆ. ಜೊತೆಗೆ ಅತ್ಯಾಚಾರ ನಡೆಯಿತ್ತೆನ್ನಲಾದ ಸಂದರ್ಭದ ವಿಡಿಯೋ ಕ್ಲಿಪ್ಪಿಂಗ್ಸ್ ಅನ್ನು ಸಾಕ್ಶ್ಯವಾಗಿ ನೀಡಲಾಗಿದೆ. ಕೇಸ್ ರಿಜಿಸ್ಟರ್ ಮಾಡಿಕೊಂಡು ಅರೋಪಿಯನ್ನು ಬಂದಿಸಲು ಇಷ್ಟು ಸಾಕು. ಯಾಕೆಂದರೆ ಭಾರತೀಯ ಸಮಾಜದಲ್ಲಿ ಮಹಿಳೆಯೊಬ್ಬಳು ತನ್ನ ಮೇಲೆ ಅತ್ಯಾಚಾರ ನಡೆದಿದೆಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳುವುದೇ ಘಟನೆಯ ಗಂಭೀರತೆಯನ್ನು ಸೂಚಿಸುತ್ತದೆ. ಆಕೆಗೆ ಗೊತ್ತಿದೆ. ಭವಿಷ್ಯದಲ್ಲಿ ತನ್ನನ್ನು ಮತ್ತು ತನ್ನ ಮಕ್ಕಳನ್ನು ಸಮಾಜ ತುಚ್ಚವಾಗಿ ಕಾಣುತ್ತದೆಯೆಂದು. ಹಾಗಿದ್ದು ಕೂಡಾ ಆಕೆ ಆ ರಿಸ್ಕ್ ತೆಗೆದುಕೊಳ್ಳುತ್ತಾಳೆಂದರೆ ಅದಕ್ಕೆ ಬಲವಾದ ಕಾರಣವಿರಲೇಬೇಕು. ಆ ಕಾರಣ ಏನೆಂಬುದು ನಿಷ್ಪಕ್ಷಪಾತವಾದ ತನಿಖೆಯಿಂದ ಗೊತ್ತಾಗಬೇಕು.
ದೃಶ್ಯಮಾಧ್ಯಮದಲ್ಲಿ ಬಾಡಿಲಾಂಗ್ವೇಜ್ ಎಂಬುದು ಬಹಳ ಪ್ರಮುಖವಾದುದು. ಹಾಲಪ್ಪ ಅತ್ಯಾಚಾರ ಪ್ರಕರಣದ ವಿಡಿಯೋ ಕ್ಲಿಪ್ಪಿಂಗ್ಸ್ ನೋಡುತ್ತಿದ್ದರೆ ಇದರ ನಿರ್ದೇಶಕ ಆಕೆಯ ಗಂಡ ವೆಂಕಟೇಶಮೂರ್ತಿಯೇ ಇರಬಹುದೆಂಬ ಸಂಶಯ ಮೂಡುತ್ತದೆ. ಮನೆಯ ಮರ್ಯಾದೆಯನ್ನು ಬೀದಿಗೆ ತರುವುದರಿಂದ ಆತನಿಗೇನು ಲಾಭವಿದೆ ಎನ್ನುವ ಪ್ರಶ್ನೆ ಸಹಜ. ಗಾಳಿ ಸುದ್ದಿಯ ಪ್ರಕಾರ ಹಾಲಪ್ಪನ ರಾಜಕೀಯ ಎದುರಾಳಿಗಳ ಜೊತೆ ವ್ಯವಹಾರ ಕುದುರಿಸಿ ಕಾಂಚಾಣವನ್ನು ಬಾಚಿಕೊಂಡಿದ್ದಾನೆ. ಆತನ ರಾಜಕೀಯ ವರ್ಚಸ್ಸು ಹೆಚ್ಚಾಗಿದೆ. ಗಂಡು ಹೆಣ್ಣಿನ ಆಪ್ತ ಸಂಬಂಧ ಕೂಡಾ ವ್ಯಾಪಾರಿಕರಣಗೊಳ್ಳುತ್ತಿರುವ ಪರಿಯಿದು.

ಸಭಾಪರ್ವದಲ್ಲಿ ದ್ರೌಪದಿಯನ್ನು ದುಶ್ಯಾಸನ ರಾಜಸಭೆಗೆ ಎಳೆದು ತಂದಾಗ ಆಕೆ ಅಲ್ಲಿದ್ದವರನ್ನು ಉದ್ದೇಶಿಸಿ ಹೀಗೆನ್ನುತ್ತಾಳೆ ” ಪತಿಗಳೆನ್ನನು ಮಾರಿ ಧರ್ಮ ಸ್ಥಿತಿಯನ್ನು ಕೊಂಡರು” ಈಗ ಚಂದ್ರಾವತಿಯದೂ ಅದೇ ಸ್ಥಿತಿ. ’ಎನ್ನ ಮಾನವನು ಮಾರಿ ಕಾಂಚಣವನು ಕೊಂಡರು’ ಎಂದು ಆಕೆ ಕಣ್ಣೀರು ಸುರಿಸಬೇಕಾಗಿದೆ. ಯಾಕೆಂದರೆ ಈಗ ಆಕೆಯ ಮೇಲೆ ನಿಜವಾದ ಅತ್ಯಾಚಾರ ನಡೆಯುತ್ತಿದೆ. ಮಾದ್ಯಮಗಳು ಆ ಕೆಲಸವನ್ನು ನಿರಂತರವಾಗಿ ನಡೆಸುತ್ತಿವೆ. ದೇಹದ ಮೇಲಾಗುವ ಅತ್ಯಾಚಾರ ತೊಳೆದರೆ ಹೋಗುತ್ತದೆ. ಆದರೆ ಮನಸ್ಸಿನ ಮೇಲಾಗುವ ಅತ್ಯಾಚಾರ? ಬಹುಶಃ ಪದ್ಮಪ್ರಿಯ ನೆನಪಿಗೆ ಬರುತ್ತಾರೆ. ಅದು ಕೊಲೆಯೋ ಆತ್ಮಹತ್ಯೆಯೋ ಎಂಬುದು ಇವತ್ತಿಗೂ ಗೊತ್ತಾಗಿಲ್ಲ. ಅದೊಂದು ”ಮರ್ಯಾದೆ ಕೊಲೆ” ಎಂಬ ಅನುಮಾನ ಆಗಲೂ ಇತ್ತು ಈಗಲೂ ಇದೆ..
ಗಂಡ ಅಂದರೆ ರಕ್ಷಕ. ಅರ್ಜುನನ ಬಿರುದೇ ನೋಡಿ ಮೂರು ಲೋಕದ ಗಂಡ. ರಕ್ಷಕನಾದವನೇ ಭಕ್ಷಕನಾದರೆ? ಮಹಿಳೆಯರನ್ನು ಮಾತೆಯರೆಂದು ಮಾತುಗಳಲ್ಲಿ ಗೌರವಿಸುವ ನಮ್ಮಬಿಜೆಪಿ ಸರಕಾರ ಕೃತಿಯಲ್ಲಿ ಅವರ ಮಾನವನ್ನು ಬೀದಿಯಲ್ಲಿ ಹರಾಜು ಹಾಕುತ್ತಿದೆ. ರಾಜಕೀಯದ ಚದುರಂಗದಾಟದಲ್ಲಿ ಅವರನ್ನು ದಾಳಗಳಂತೆ ಉಪಯೋಗಿಸಿಕೊಳ್ಳುತ್ತಿದೆ. ಶೋಭಾ ಕರಂದ್ಲಾಜೆಯ ಉದಾಹರಣೆಯೇ ಸಾಕಲ್ಲ...! ಯೆಡಿಯೂರಪ್ಪನನ್ನು ಮಣಿಸಲು ಶೋಭಳ ಚಾರಿತ್ಯವಧೆ ಮಾಡಲಾಯ್ತು. ಹಾಲಪ್ಪನನನ್ನು ಕೆಡವಲು ಚಂದ್ರಾವತಿಯ ಬಲಿ ಪಡೆಯಲಾಯಿತೇ? ರಾಜಕಾರಣಿಗಳು ಅಷ್ಟಮದಗಳಿಂದ ಬೀಗುತ್ತಿದ್ದಾರೆ. ಇದಕ್ಕೆ ರೇಣುಕಾಚಾರ್ಯ, ಗಣಿದೊರೆಗಳಿಗಿಂತ ಬೇರೆ ಉದಾಹರಣೆ ಬೇಕೆ?

ಇದನ್ನೆಲ್ಲಾ ಗಮನಿಸುತ್ತಿರುವಾಗ ಮತ್ತೆ ಕುಮಾರವ್ಯಾಸನೇ ನೆನಪಾಗುತ್ತಾನೆ. ”ಅರಸು ರಾಕ್ಷಸ, ಮಂತ್ರಿಯೆಂಬುವ ಮೊರೆವ ಹುಲಿ, ಪರಿವಾರ ಹದ್ದಿನ ನೆರವಿ,ಬಡವರ ಬಿನ್ನಪವವಿನ್ನಾರು ಕೇಳುವರು, ಉರಿವುರಿವುತಿದೆ ದೇಶ ” ಅಧಿಕಾರದ ಚುಕ್ಕಾಣಿ ಹಿಡಿದವರು, ಸಾರ್ವಜನಿಕ ಬದುಕಿನಲ್ಲಿರುವವರು ಸಾಧ್ಯವಾದಷ್ಟೂ ಸಚ್ಛಾರಿತ್ಯ ಹೊಂದಿರಬೇಕು. ಇಲ್ಲವಾದರೆ ಇವರೆಲ್ಲಾ ವಿಷಯ ಲಂಪಟರು ಎಂಬ ಭಾವನೆ ಜನ ಸಾಮಾನ್ಯರಲ್ಲಿ ಮೂಡಿಬಿಡುತ್ತದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಹಾಲಪ್ಪನ ಅತ್ಯಾಚಾರ ಪ್ರಕರಣದಂಥ ಘಟನೆಗಳು ಪದೇ ಪದೇ ನಡೆಯುತ್ತಿದ್ದರೆ, ಅದನ್ನು ಮಾಧ್ಯಮಗಳು ಅತಿರಂಜಿತವಾಗಿ ವರ್ಣಿಸುತ್ತಿದ್ದರೆ, ಅದು ಸಮಾಜದ ಮೇಲೆ ಬೀರಬಹುದಾದ ವ್ಯತಿರಿಕ್ತ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ನಮ್ಮ ಮನೆಗೆ ಬರುವ ಪುರುಷ ಅಥಿತಿಗಳನ್ನು ಪತಿಯ ಅನುಪಸ್ಥಿತಿಯಲ್ಲೂ ನಾವು ಗೌರವದಿಂದ ಆಧರಿಸಿ ಸತ್ಕರಿಸುತ್ತೇವೆ. ಅದನ್ನು ಅಕ್ಕಪಕ್ಕದವರು ಅನುಮಾನದಿಂದ ನೋಡುವ ಸಂದರ್ಭ ಬಂದರೆ...?ಬಹುಶಃ ಬಿಜೆಪಿ ಸರಕಾರ ಮಹಿಳೆಯರನ್ನು ಹದಿನೈದನೆ ಶತಮಾನಕ್ಕೆ ಕೊಂಡೊಯ್ಯುತ್ತಿರಬೇಕು.
ಲೇಖನದ ಆರಂಭದಲ್ಲಿ ನಾಟಕಕಾರರನ್ನು ಪ್ರಸ್ತಾಪಿಸಿರುವುದು ಪ್ರಾಸಂಗಿಕವಲ್ಲ; ಉದ್ದೇಶ ಪೂರ್ವಕ. ಯಾಕೆಂದರೆ ಹಿಂದೆಲ್ಲಾ ಅನ್ಯಾಯವಾದಾಗ ನೈತಿಕ ಬೆಂಬಲಕ್ಕಾಗಿ ನಾವು ಸಾಹಿತಿ-ಕಲಾವಿದರತ್ತ ನೋಡುತ್ತಿದ್ದೆವು; ಮಾಧ್ಯಮದ ಬೆಂಬಲ ಕೋರುತಿದ್ದೆವು.ಅವರ ಪ್ರತಿಕ್ರಿಯೆಯನ್ನು ಕಾತರದಿಂದ ನಿರೀಕ್ಷಿಸುತ್ತಿದ್ದೆವು. ಆದರೆ ಇಂದು ಸಾಹಿತಿಗಳು ಮೌನಕ್ಕೆ ಜಾರಿದ್ದಾರೆ. ಪತ್ರಿಕಾರಂಗ ಉಧ್ಯಮವಾಗಿದೆ. ಪತ್ರಕರ್ತರೆಲ್ಲಾ ಮದ್ಯವರ್ತಿಗಳಾಗುತ್ತಿದ್ದಾರೆ.ಸುದ್ದಿಯನ್ನೂ ಔತಣವನ್ನಾಗಿ ನೀಡುತ್ತಿದ್ದಾರೆ. ಅವರೆಲ್ಲರ ಒಂದು ಕೈ ಉಳ್ಳವರ ಜೇಬಿನಲ್ಲಿದೆ. ಕಾಲೊಂದು ರಾಜಕೀಯದಂಗಣದಲ್ಲಿದೆ.

ಮೊನ್ನೆ ಹಾಲಪ್ಪನವರು ರಾಜೀನಾಮೆ ಕೊಟ್ಟ ಮರುದಿನ ಕನ್ನಡದ ಸುದ್ದಿವಾಹಿನಿಯೊಂದು ಅವರ ಸಂದರ್ಶನ ಮಾಡುತ್ತಿತ್ತು. ಸಂದರ್ಶಕನ ಪ್ರಶ್ನೆಗಳಿಗೆ ಮಾಜಿ ಸಚಿವರು ತುಂಬು ಆತ್ಮವಿಶ್ವಾಸದಿಂದ ಉತ್ತರಿಸುತ್ತಿದ್ದರು. ತನ್ನ ರಕ್ಷಣೆಗೆ ಸರಕಾರ ಮತ್ತು ಪಕ್ಷ ಟೊಂಕ ಕಟ್ಟಿ ನಿಂತಿದೆ ಎಂಬುದು ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿತ್ತು. ಹಿಂದಿನ ದಿನ ಪತ್ರಿಕೆಯಲ್ಲಿ ಬಂದ ವರದಿಯ ಬಗ್ಗೆ ಕೇಳಿದಾಗ ”ಬರೆದವರೇನು ಕುಲದೀಪ್ ನಯ್ಯರಾ?” ಎಂದು ಪ್ರಶ್ನಿಸಿಬಿಟ್ಟರು ಮಾಜಿ ಸಚಿವ ಹರತಾಳ್ ಹಾಲಪ್ಪ. ಅದು ಪತ್ರಿಕೋಧ್ಯಮದ ನೈತಿಕತೆಗೆ ಎಸೆದ ಪ್ರಶ್ನೆಯಾಗಿತ್ತು. ಅರೋಪಿ ಸ್ಥಾನದಲ್ಲಿರುವ ರಾಜಕಾರಣಿಯೊಬ್ಬ ಲೈವ್ ಸಂದರ್ಶನವೊಂದರಲ್ಲಿ ಪತ್ರಕರ್ತನೊಬ್ಬನ ಬಗ್ಗೆ ಆ ರೀತಿ ವ್ಯಂಗ್ಯವಾಡುತ್ತಾನೆ ಎಂದರೇ? ಅಪರಾಧಿ ಭಾವದಿಂದ ಕುಗ್ಗಿ ಹೋಗಬೇಕಾದ ಸಂದರ್ಭವದು.

ಹೊಣೆಗಾರಿಕೆಯನ್ನು ಹೊರಬೇಕಾದವರೆ ಹೊಂದಾಣಿಕೆಯನ್ನು ಮಾಡಿಕೊಂಡರೆ ಜನಸಾಮಾನ್ಯರ ಪಾಡೆನು? ದುಡ್ಡು ಎಲ್ಲವನ್ನೂ ಆಳುತ್ತದೆ, ಕೊನೆಗೆ ಹೆಂಡತಿಯ ಶೀಲವನ್ನೂ ಕೂಡಾ ಎಂದಾಗಬಾರದಲ್ಲವೇ?

[ಪ್ರಜಾವಾಣಿಯಲ್ಲಿ ಪ್ರಕಟವಾದ ಲೇಖನ]

Saturday, March 27, 2010

ಹಕ್ಕುಗಳ ಅಂಗಳದಲ್ಲಿ ವಿವಾಹ ಪೂರ್ವ ಲೈಂಗಿಕತೆ






ಇಬ್ಬರು ಪ್ರಾಯ ಪ್ರಬುದ್ಧರ ನಡುವಿನ ವಿವಾಹ ಪೂರ್ವ ಲೈಂಗಿಕ ಸಂಬಂಧ ಮತ್ತು ಲಿವಿಂಗ್ ಟುಗೆದರ್ [ಕೂಡಿ ಬಾಳುವಿಕೆ] ಅಪರಾಧವಲ್ಲವೆಂದು ಸುಪ್ರಿಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಚಿತ್ರ ನಟಿ ಖುಷ್ಬು ತನ್ನ ಮೇಲಿರುವ ೨೨ ಕ್ರಿಮಿನಲ್ ಮೊಕದ್ದಮೆಗಳನ್ನು ವಜಾಗೊಳಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್ ಆಕೆಯ ಮೇಲಿನ ದೂರುಗಳಲ್ಲಿ ಯಾವುದೇ ಹುರುಳಿಲ್ಲ ಎಂದಿದೆ.

೨೦೦೫ರಲ್ಲಿ ತಮಿಳು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಿವಾಹ ಪೂರ್ವ ಲೈಂಗಿಕ ಸಂಬಂಧ ಮತ್ತು ಕನ್ಯತ್ವದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ವಿವಾಹ ಪೂರ್ವ ಲೈಂಗಿಕ ಸಂಬಂಧ ತಪ್ಪಲ್ಲ ಎಂಬರ್ಥದಲ್ಲಿ ಮಾತಾಡಿದ್ದರು. ಅದು ಸಂಪ್ರದಾಯವಾದಿಗಳನ್ನು ಕೆರಳಿಸಿತ್ತು. ಜನಪ್ರಿಯ ನಟಿಯಾಗಿದ್ದ ಆಕೆಯ ಹೇಳಿಕೆ ಯುವ ಜನಾಂಗದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಎಂಬುದು ಅವರ ವಾದವಾಗಿತ್ತು. ಅದಕ್ಕಾಗಿ ಆಕೆಯ ಮೇಲೆ ತಮಿಳುನಾಡಿನಾದ್ಯಂತ ೨೨ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಾಗಿತ್ತು. ೨೦೦೮ರಲ್ಲಿ ಮದ್ರಾಸ್ ಹೈಕೋರ್ಟ್ ಆಕೆಯ ವಿರುದ್ಧ ತೀರ್ಪು ನೀಡಿತ್ತು. ಅದನ್ನು ಖುಷ್ಬು ಸುಪ್ರಿಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

ಇದಿಗ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮುರ್ತಿ ಕೆ.ಜೆ. ಬಾಲಕೃಷ್ಣನ್, ದೀಪಕ್ ವರ್ಮ, ಬಿ.ಎಸ್.ಚವಾಣ್ ಅವರನ್ನೊಳಗೊಂಡ ತ್ರೀಸದಸ್ಯ ಪೀಠವು ವಿವಾಹಪೂರ್ವ ಲೈಂಗಿಕ ಸಂಬಂಧ ಮತ್ತು ಲಿವಿಂಗ್ ಟುಗೆದರನ್ನು ಭಾರತೀಯ ಸಂವಿಧಾನದ ಕಲಂ ೨೧ರ ವ್ಯಾಪ್ತಿಯಡಿ ತಂದು ಖುಷ್ಬು ಪರವಾಗಿ ಅಭಿಪ್ರಾಯ ನೀಡಿದೆ. ಕಲಂ ೨೧ ವ್ಯಕ್ತಿಯೊಬ್ಬ ಘನತೆ, ಗೌರವಗಳಿಂದ ಸ್ವತಂತ್ರವಾಗಿ ಬದುಕುವ ಹಕ್ಕನ್ನು ನೀಡುತ್ತದೆ.ವಿವಾಹ ಪೂರ್ವ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸುವ ಯಾವುದೇ ಕಾನೂನು ನಮ್ಮಲಿಲ್ಲ. ಅದು ಅವಳ ವೈಯಕ್ತಿಕ ಆಯ್ಕೆ. ಅದವಳ ಬದುಕಿನ ಹಕ್ಕು. ಅದು ಹೇಗೆ ಅಪರಾಧವಾಗುತ್ತದೆ? ಎಂದಿದೆ ನ್ಯಾಯಪೀಠ.

ಅದಕ್ಕವರು ಪುರಾಣದ ಸಮರ್ಥನೆಯನ್ನೂ ನೀಡುತ್ತಾರೆ. ಕೃಷ್ಣ ಮತ್ತು ರಾಧೆಯರ ಸಂಬಂಧ ಲಿವಿಂಗ್ ಟುಗೆದರ್ ಆಗಿತ್ತು ಎಂಬುದು ಅವರ ಅಭಿಪ್ರಾಯ. ಭಾರತಿಯರ ಮನಸ್ಸಿನಲ್ಲಿ ಪರಿಶುಭ್ರ ಪ್ರೇಮಕ್ಕೆ ಸಂವಾದಿಯಾಗಿ ರಾಧಾಕೃಷ್ಣರಿದ್ದಾರೆ ನಿಜ. ಆದರೆ ಅವರು ಪ್ರೇಮಿಗಳಾಗಿದ್ದರೇ ಎಂಬುದು ಚರ್ಚಾಸ್ಪದ ವಿಷಯ. ಯಾಕೆಂದರೆ ಮಹಾಭಾರತದಲ್ಲಿ ರಾಧಾಕೃಷ್ಣರ ಪ್ರಸ್ತಾಪ ಬರುವುದು ಗೋಕುಲದಲ್ಲಿ ಮಾತ್ರ. ಬಾಲಕನಾಗಿದ್ದಾಗ ಕೃಷ್ಣ ಗೋಕುಲ ನಿವಾಸಿಯಾಗಿದ್ದ. ಅಲ್ಲಿ ರಾಧೆಯಿದ್ದಳು. ಆಕೆ ಗಂಡುಳ್ಳ ಗರತಿಯಾಗಿದ್ದಳು. ಆಕೆಗೆ ಮಕ್ಕಳಿದ್ದ ಪ್ರಸ್ತಾಪವಿಲ್ಲ. ಕೃಷ್ಣ ಅಸಾಧ್ಯ ತುಂಟನಾಗಿದ್ದ. ಇಂಪಾಗಿ ಕೊಳಲು ನುಡಿಸುತ್ತಿದ್ದ. ಬಾಲಕನಾಗಿದ್ದಾಗಲೇ ಮಾವ ಕಂಸನನ್ನು ಕೊಲ್ಲಲು ಬಿಲ್ಲಹಬ್ಬದ ನೆಪದಲ್ಲಿ ಮಧುರೆಗೆ ಹೊರಟು ಹೋಗುತ್ತಾನೆ. ಮತ್ತೆಂದೂ ಆತ ಗೋಕುಲಕ್ಕೆ ಮರಳುವುದಿಲ್ಲ. ಕೊಳಲನ್ನೂ ಮುಟ್ಟುವುದಿಲ್ಲ. ಮತ್ತೆ ಅವರು ಕೂಡಿ ಬಾಳಿದ್ದು ಯಾವಾಗ?

ವಿವಾಹಪೂರ್ವ ಲೈಂಗಿಕತೆ ಅಪರಾಧವಲ್ಲ ಹಕ್ಕು ಎಂದಾದರೆ, ಹಕ್ಕು ಇದ್ದಲ್ಲಿ ಕರ್ತವ್ಯವೂ ಇರಬೇಕಲ್ಲವೇ? ಕರ್ತವ್ಯ ಎಂದರೆ ಹೊಣೆಗಾರಿಕೆ. ಜೊತೆಯಾಗಿ ಬದುಕಿದ ಆ ಜೋಡಿಗೆ ಅಪ್ಪಿತಪ್ಪಿ ಮಗುವಾದರೆ ಅದನ್ನು ಸಾಕುವ ಜವಾಬ್ದಾರಿ ಯಾರದು? ಗಂಡು ವಿಶ್ವಾಮಿತ್ರ ಹಸ್ತ ತೋರಿಸಿದರೆ ಹೆಣ್ಣು ತನಗೆ ಅನ್ಯಾಯವಾಗಿದೆಯೆಂದು ಗಂಡಿನ ಮನೆ ಮುಂದೆ ಧರಣಿ ಕೂರುತ್ತಿದ್ದಳು; ಪೋಲಿಸ್ ಸ್ಟೇಷನ್ ಮೆಟ್ಟಲೇರುತ್ತಿದ್ದಳು. ಕಾನೂನು ಅವಳ ನೆರವಿಗೆ ಬರುತ್ತಿತ್ತು. ಸಮಾಜ ಅನುಕಂಪ ತೋರುತ್ತಿತ್ತು. ಆದರೆ ಇನ್ನು ಮುಂದೆ ಲೈಂಗಿಕ ಶೋಷಿತಳೆಂಬ ಪದಕ್ಕೆ ಅರ್ಥವಿರಲಾರದು. ಹೆಣ್ಣು ಗಂಡಿನ ಭೋಗದ ವಸ್ತು ಎಂಬುದಕ್ಕೆ ಇನ್ನೂ ಹೆಚ್ಚು ಪುಷ್ಟಿ ದೊರೆಯಬಹುದು. ಒಬ್ಬಳೊಡನೆ ಚಕ್ಕಂದವಾಡುತ್ತಲೇ ಮತ್ತೊಬ್ಬಳನ್ನು ಮದುವೆಯಾಗಬಹುದು. ಅಂತೂ ಹಾದರಕ್ಕೆ ಕಾನೂನಿನ ಅನುಮತಿ ದೊರಕಿದಂತಾಗಿದೆ.

ವಿವಾಹ ಪೂರ್ವ ಲೈಂಗಿಕತೆ ಮತ್ತು ಲಿವಿಂಗ್ ಟುಗೆದರ್ ಮೆಲ್ನೋಟಕ್ಕೆ ಒಂದರಂತೆ ಕಂಡರೂ ಇವೆರಡಕ್ಕೂ ಅಪಾರ ಅಂತರವಿದೆ. ವಿವಾಹ ಪೂರ್ವ ಲೈಂಗಿಕ ಸಂಬಂಧದಲ್ಲಿ ದೈಹಿಕ ತೃಷೆಯೇ ಮುಖ್ಯವಾಗಿರುತ್ತದೆ. ಭಾವನಾತ್ಮಕ ಸಂಬಂಧಕ್ಕೆ ಎಡೆಯಿರುವುದಿಲ್ಲ. ಅಥವಾ ಗಂಡು ತನ್ನ ಮರಳು ಮಾತುಗಳಿಂದ ಭಾವುಕ ಸಂಬಂಧದೊಳಗೆ ಕೆಡವಿಕೊಳ್ಳಬಹುದು. ಹೆಣ್ಣಿನ ಅಸಹಾಯಕತೆಯನ್ನು, ಮುಗ್ಧತೆಯನ್ನು ಗಂಡು ದುರ್ಭಳಕೆ ಮಾಡಿಕೊಳ್ಳಬಹುದು. ಹಸಿ ಹಸಿಯಾಗಿ ಹೇಳುವುದಾದರೆ ಇದನ್ನೇ ’ಇಟ್ಟುಕೊಳ್ಳುವುದು’ ಎನ್ನಬಹುದು. ಆದರೆ ಲಿವಿಂಗ್ ಟುಗೆದರಿನಲ್ಲಿ ಗಂಡು ಹೆಣ್ಣು ಇಬ್ಬರು ವಿದ್ಯಾವಂತರು. ಭಾವುಕವಾಗಿ ಬಂದಿಸಲ್ಪಟ್ಟವರು.ಇವರಲ್ಲಿ ಸೆಕ್ಸ್ ಮುಖ್ಯವಲ್ಲ. ಪರಸ್ಪರ ನಂಬಿಕೆ ಮುಖ್ಯ. ಆದರೆ ಎರಡೂ ಸಂಬಂಧಗಳೂ ಮದುವೆಯೆಂಬ ಸಂಸ್ಥೆಗೆ ಬೀಳುವ ಹೊಡೆತಗಳೇ. ಕೌಟುಂಬಿಕ ಚೌಕಟ್ಟುಗಳಿಂದ ಜಾರಿ ಬಿದ್ದ ಇಟ್ಟಿಗೆಗಳೇ.

ನಿಜ. ನ್ಯಾಯ ಪೀಠ ತನ್ನ ಅಭಿಪ್ರಾಯವನ್ನಷ್ಟೇ ಹೇಳಿದೆ. ಅಂತಿಮ ತೀರ್ಪು ಕಾಯ್ದಿರಿಸಿದೆ. ನ್ಯಾಯ ಪೀಠವೇನಾದರೂ ಖುಷ್ಬು ವಿರುದ್ಧವಾಗಿ ತೀರ್ಪು ನೀಡಿದ್ದರೆ ಧಾರ್ಮಿಕ ಮೂಲಭೂತವಾದಿಗಳು ವಿಜೃಂಭಿಸುತ್ತಿದ್ದರು. ಹಾಗಾಗಲಿಲ್ಲ. ಒಳ್ಳೆಯದೇ. ಆದರೆ ಕೋರ್ಟ್ ಅಭಿಪ್ರಾಯವನ್ನೇ ಯುವ ಜನಾಂಗ ತಮ್ಮ ನಡವಳಿಕೆಗಳಿಗೆ ಗುರಾಣಿಯನ್ನಾಗಿ ಬಳಸಿಕೊಂಡರೆ? ಆ ಸಾಧ್ಯತೆ ಇದ್ದೇ ಇದೆ. ಆದರೂ ಅಷ್ಟು ಕಳವಳಪಡಬೇಕಾದ ಅವಶ್ಯಕತೆಯಿಲ್ಲ. ಮೈಯೇ ಬೇರೆ, ಮನಸ್ಸೇ ಬೇರೆ. ದೈಹಿಕ ವಾಂಛೆಗಳೇ ಮನಸ್ಸನ್ನು ದೀರ್ಘ ಕಾಲ ಆಳಲಾಗದು.

ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಟಿ ನೀನಾಗುಪ್ತ ಮದುವೆಯಾಗದೆ ಮಗು ಪಡೆದಾಗ ಸಮಾಜ ಬೆಚ್ಚಿ ಬಿದ್ದಿತ್ತು. ನಮ್ಮ ಯುವತಿಯರಿಗೆ ಆಕೆ ಮಾದರಿಯಾಗಿಬಿಟ್ಟರೆ ಎಂದು ಭಯ ಪಟ್ಟಿತು. ಆದರೆ ಹಾಗೇನೂ ಆಗಲಿಲ್ಲ. ಅಲ್ಲೊಬ್ಬರು ಇಲ್ಲೊಬ್ಬರು ಆ ದೈರ್ಯ ಮಾಡಿದರಷ್ಟೆ. ಭಾರತಿಯ ಸಮಾಜ ತುಂಬಾ ವಿಶಿಷ್ಟವಾದುದು. ಇಲ್ಲಿಯ ಸಂಸ್ಕೃತಿ,ನೈತಿಕ ಮೌಲ್ಯಗಳು ಜನರ ಜೀನ್ಸ್ ನಲ್ಲೇ ಪ್ರೋಗ್ರಾಮ್ ಆಗಿದೆ. ಆದರೆ ನೈತಿಕತೆಯೇ ಬೇರೆ ಕಾನೂನೇ ಬೇರೆ.

ನಮ್ಮ ಸಮಾಜ ಬದಲಾಗುತ್ತಿದೆ. ನಮ್ಮ ಸರಕಾರಗಳು, ನಮ್ಮ ನ್ಯಾಯಾಂಗ ವ್ಯವಸ್ಥೆ ಅದನ್ನು ಗುರುತಿಸಿದೆ. ಕಳೆದ ವರ್ಷ ಜುಲೈನಲ್ಲಿ ದೆಹಲಿ ಹೈಕೋರ್ಟ್, ಇಬ್ಬರು ವಯಸ್ಕರು ಪರಸ್ಪರ ಸಮ್ಮತಿಯಿಂದ ಸಲಿಂಗಕಾಮದಲ್ಲಿ ತೊಡಗುವುದು ಅಪರಾಧವಲ್ಲ ಎಂದು ತೀರ್ಪು ನೀಡಿತ್ತು. ಅದಕ್ಕೂ ಹಿಂದೆ ೨೦೦೮ರ ಅಕ್ಟೋಬರ್ ನಲ್ಲಿ ಮಹಾರಾಷ್ಟ್ರ ಸರಕಾರವು, ಶಾಸ್ತ್ರೋಕ್ತ ಅಥವಾ ಕಾನೂನು ಬದ್ಧ ವಿಧಿ ವಿಧಾನಗಳ ಹೊರತಾಗಿಯೂ ಪುರುಷ ಮತ್ತು ಮಹಿಳೆ ಸಕಾರಣಗಳಿಂದಾಗಿ ದೀರ್ಘ ಕಾಲ ಒಟ್ಟಿಗೆ ವಾಸಿಸುತ್ತಿದ್ದರೆ ಅಂತಹ ಪ್ರಕರಣಗಳಲ್ಲಿ ಅವರನ್ನು ದಂಪತಿಗಳೆಂದು ಮಾನ್ಯ ಮಾಡಬೇಕೆಂದು ಹೇಳಿತ್ತು.

ಧಾರ್ಮಿಕ ಕಟ್ಟುಪಾಡುಗಳು ಸುಸಂಸ್ಕೃತ, ಸ್ವಸ್ಥ ಸಮಾಜ ಕಟ್ಟಿಕೊಳ್ಳುವ ಕಾಲಘಟ್ಟದಲ್ಲಿ ರಚನೆಗೊಂಡಂತವು.ಅವುಗಳು ಮನುಷ್ಯ ಸರ್ವಕಾಲದಲ್ಲೂ ಹೀಗೆಯೇ ಇರಬೇಕೆಂದು ನಿರ್ದೇಶಿಸುತ್ತದೆ. ಆದರೆ ಸಮಾಜಿಕ ನಡವಳಿಕೆಗಳನ್ನು ಗಮನಿಸಿಕೊಂಡು, ಅರ್ಥೈಸಿಕೊಂಡು ಕಾನೂನನ್ನು ರೂಪಿಸಲಾಗುತ್ತದೆ. ವಿವಾಹದಿಂದ ಹೊರತಾದ ಸಂಬಂಧದಿಂದ ಹುಟ್ಟಿದ ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಕೊಡಬೇಕೆಂದು ಸುಪ್ರಿಂಕೋರ್ಟ್ ಈ ಹಿಂದೆ ತೀರ್ಪು ನೀಡಿದೆ. ಕಾನೂನೇ ಬೇರೆ, ನೈತಿಕತೆಯೇ ಬೇರೆ.

ಈಗ ಖುಷ್ಬು ಪ್ರಕರಣದಲ್ಲಿ ಬದಲಾಗುತ್ತಿರುವ ಸಮಾಜವನ್ನು, ಜನರ ಜೀವನ ಶೈಲಿಯನ್ನು, ಯುವ ಜನಾಂಗದ ಮನಸ್ಥಿತಿಯನ್ನು ಗಮನಿಸಿ ವಿವಾಹ ಪೂರ್ವ ಲೈಂಗಿಕತೆ ಅಪರಾಧವಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಇದು ಧಾರ್ಮಿಕ ಕಟ್ಟುಪಡುಗಳಿಗಿಂತಲೂ ಬದುಕು ಮಿಗಿಲಾದುದು ಎಂಬುದನ್ನು ದೃಢಪಡಿಸುತ್ತದೆ.

[ಮಾ.೨೬ ರಂದು ಪ್ರಜಾವಾಣಿಯಲ್ಲಿ ಪ್ರಕಟವಾದ ಬರಹ ]

Thursday, March 25, 2010

ಮೀಸಲಾತಿ; ಸ್ತ್ರೀ ಕುಲಂ ತಾನೊಂದೆ ವಲಂ




ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸಂಬಂಧಿಸಿದಂತೆ ಸಂವಿಧಾನ ತಿದ್ದುಪಡಿಗೆ ರಾಜ್ಯಸಭೆ ಒಪ್ಪಿಗೆ ನೀಡಿದೆ. ಆದು ಶಾಸನ ರೂಪ ಪಡೆಯಲು ಲೋಕಸಭೆಯ ಅಂಗೀಕಾರ ಮುದ್ರೆ ಬೇಕು. ಅದು ಸಿಗಬಹುದೆ? ಎಂಬುದೀಗ ಪ್ರಶ್ನೆ.

ಬಿಹಾರದ ಅರ್ ಜೆಡಿಯ ಲಾಲೂ ಪ್ರಸಾದ್ ಯಾದವ್, ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಮಹಾರಾಷ್ಟ್ರದ ನ್ಯಾಷನಲಿಸ್ಟ್ ಕಾಂಗ್ರೇಸ್ ಪಾರ್ಟಿಯ ಶರದ್ ಪವಾರ್ ಮತ್ತು ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷದ ಮಾಯಾವತಿ ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ವಿರೋಧವಿದೆ ಎಂದು ಡಂಗೂರ ಸಾರಿದ್ದಾರೆ. ತೃಣಮೂಲ ಕಾಂಗ್ರೇಸಿನ ಮಮತಾ ಬ್ಯಾನರ್ಜಿ ಇವರಿಗೆ ಸಾಥ್ ನೀಡಿದ್ದಾರೆ.

ಅವರೆಲ್ಲರ ಒಕ್ಕೊರಲ ವಾದ ಏನೆಂದರೆ; ಮಹಿಳಾ ಮೀಸಲಾತಿಯಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ಒಳಮೀಸಲಾತಿ ನೀಡಬೇಕು. ಇಲ್ಲವಾದರೆ ಈ ಸೌಲಭ್ಯವನ್ನು ಮೇಲ್ವರ್ಗದ ಪ್ರಭಾವಿ ಮಹಿಳೆಯರು ಮಾತ್ರ ಪಡೆದುಕೊಳ್ಳುತ್ತಾರೆ. ಮಹಿಳಾ ವಿಧೇಯಕದ ಸದುದ್ಧೇಶದ ದುರುಪಯೋಗವಾಗುತ್ತದೆ. ಯೋಚಿಸತಕ್ಕ ವಾದವೇ.

ಹೌದು, ಈ ವಿಧೇಯಕದ ನೆರವಿಲ್ಲದೆಯೂ ಬಹುತೇಕ ರಾಜಕೀಯ ಪಕ್ಷಗಳು ತಮ್ಮ ಕುಟುಂಬದ, ಆಪ್ತ ವರ್ಗದ ಮಹಿಳೆಯರನ್ನು ರಾಜಕೀಯಕ್ಕೆ ಎಳೆದು ತಂದಿದ್ದಾರೆ. ಎಳೆದು ತಂದಿದ್ದಾರೆ ಎಂದು ಯಾಕೆ ಹೇಳುತ್ತಿದ್ದೇನೆಂದರೆ ಆ ಮಹಿಳೆಯರನ್ನು ಸೂತ್ರದ ಗೊಂಬೆಗಳನ್ನಾಗಿಸಿಕೊಂಡು ಗಂಡಸರು ಅದಿಕಾರ ಚಲಾಯಿಸುತ್ತಿದ್ದಾರೆ. ಇದಕ್ಕೆ ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿರುವ ಲಾಲೂಗಿಂತ ಬೇರೆ ಉದಾಹರಣೆ ಬೇಕೆ? ಅನಕ್ಷರಸ್ಥ ಪತ್ನಿಗೂ ಮುಖ್ಯಮಂತ್ರಿ ಪದವಿ ದಯಪಾಲಿಸಿದ ಮಹಾನ್ ವ್ಯಕ್ತಿ ಇವರು! ಮುಲಾಯಂ ಸಿಂಗ್ ಯಾದವ್ ಏನು ಕಮ್ಮಿಯಿಲ್ಲ ತಮ್ಮ ಸೊಸೆಯನ್ನು ಸಂಸತ್ತಿಗೆ ಕಳುಹಿಸಿದವರಿವರು. ಇವರನ್ನೇ ಮೇಲ್ಪಂಕ್ತಿಯಾಗಿಸಿಕೊಂಡು ಪ್ರಭಾವಿ ರಾಜಕಾರಣಿಗಳು ತಮ್ಮ ಕುಟುಂಬದ ಮಹಿಳಾ ಸದಸ್ಯರನ್ನು, ಗೆಳತಿಯರನ್ನು, ಪ್ರೇಯಸಿಯರನ್ನು ಶಾಸನ ಸಭೆಗಳಿಗೆ ಆರಿಸಿ ಕಳುಹಿಸಬಹುದೆಂಬ ಅನುಮಾನ ಜನ ಸಾಮಾನ್ಯರಿಗೆ ಇದ್ದೇ ಇದೆ.

ಆದರೆ, ಭಾರತದ ಪುರಾಣ, ಇತಿಹಾಸಗಳನ್ನು ಗಮನಿಸಿದರೆ ಎಲ್ಲಾ ವರ್ಗದ ಮಹಿಳೆಯರು ಒಂದೇ, ಅವರೆಲ್ಲಾ ಶೋಷಿತರು. ನಮ್ಮ ಶ್ರೇಣಿಕೃತ ಸಮಾಜ ವ್ಯವಸ್ಥೆಯಲ್ಲಿ ಅಂತ್ಯಜರು ಹೇಗೆ ಗುಲಾಮರಾಗಿದ್ದರೋ ಹಾಗೆಯೇ ಉತ್ತಮ ಕುಲದ ಸ್ತ್ರೀಯರಿಗೂ ಸ್ವಂತ ಅಸ್ತಿತ್ವವಿರಲಿಲ್ಲ. ಆದರೂ ಕ್ರೌರ್ಯ ತುಂಬಿದ ಸಮಾಜ ವ್ಯವಸ್ಥೆಯಲ್ಲಿ ಮಾನವೀಯತೆಯನ್ನು ತೋರಿದವರು ಅವರೇ. ಅದಕ್ಕೆ ಬೇಕಾದಷ್ಟು ಉದಾಹರಣೆಗಳನ್ನು ಹೆಕ್ಕಿ ತೆಗೆಯಬಹುದು. ಚಾವಡಿಯಲ್ಲಿ ನಡೆಯುವ ಕ್ರೌರ್ಯಕ್ಕೆ ಹಿತ್ತಿಲ ಬಾಗಿಲಲ್ಲಿ ಸಾಂತ್ವನ ಸಿಗುತ್ತಿತ್ತು. ಮನೆಯೊಡತಿ ಆಳುಮಗನ ಸಂಕಷ್ಟಗಳಿಗೆ ತಾಯಾಗುತ್ತಿದ್ದಳು.

ಅಷ್ಟು ದೂರದ ಮಾತೇಕೆ, ಮೊನ್ನೆ ರಾಜ್ಯಸಭೆಯಲ್ಲಿ ಮಹಿಳಾ ಮೀಸಲು ವಿಧೇಯಕ ಅಂಗೀಕಾರ ಪಡೆದೊಡನೆ ಎಲ್ಲಾ ಸದಸ್ಯರೂ ಪಕ್ಷಭೇದ ಮರೆತು ಸಂತಸದಿಂದ ಪರಸ್ಪರ ಅಭಿನಂಧಿಸಿಕೊಳ್ಳಲಿಲ್ಲವೇ? ಅದು ತೋರಿಕೆಯದಂತೂ ಅಗಿರಲಿಕ್ಕಿಲ್ಲ. ಯಾಕೆಂದರೆ ಅವರು ಆ ಸ್ಥಾನಕ್ಕೆ ಏರಬೇಕಾದರೆ ತಮ್ಮದೇ ಪಕ್ಷದವರು ಸೇರಿದಂತೆ ಪುರುಷ ರಾಜಕಾರಣಿಗಳು ಒಡ್ಡಿದ ಸವಾಲುಗಳು, ರಚಿಸಿದ ಷಡ್ಯಂತರಗಳು ನೆನಪಿಗೆ ಬಂದಿರಬಹುದು. ಇಂಥ ಏಕತ್ವದ ಮನಸ್ಸನ್ನು ಒಡೆಯುವ ಪ್ರಯತ್ನವನ್ನು ಲಾಲೂತ್ರಯರು ನಡೆಸುತ್ತಿದ್ದರೇನೋ ಎಂಬ ಗುಮಾನಿ ನನಗೆ.

‘ಒಲ್ಲದ ಗಂಡಂಗೆ ಮೊಸರಲ್ಲಿ ಕಲ್ಲಂತೆ’ ಮಹಿಳಾ ಮೀಸಲಾತಿಯನ್ನು ವಿರೋಧಿಸುವವರಿಗೆ ’ಒಳಮೀಸಲಾತಿ ಬೇಕು’ ಎಂಬುದೊಂದು ಪಿಳ್ಳೆ ನೆವ. ಇಲ್ಲವಾದರೆ ಅವರವರ ಪಕ್ಷಗಳಲ್ಲೇ ಮಹಿಳೆಯರನ್ನು ಮುಂದಕ್ಕೆ ತರಬಹುದಲ್ಲ. ಅವರೇ ಆಂತರಿಕ ಮೀಸಲಾತಿ ಅಳವಡಿಸಿಕೊಳ್ಳಬಹುದಲ್ಲಾ. ಅವರು ಹಾಗೆ ಮಾಡಲಾರರು. ಮಹಿಳೆಯರು ಬರೀಯ ಕಾರ್ಯಕರ್ತರಾಗಿಯೇ ಉಳಿಯಬೇಕು. ಮೆರವಣಿಗೆ, ಪ್ರತಿಭಟನೆಗಳಿಗೆ ಜನ ಬೇಕಲ್ಲಾ..ಪುರುಷ ರಾಜಕಾರಣಿಗಳಿಗಿರೊದು ಮೂಲತಃ ಭಯ. ಮಹಿಳೆಯ ಕರ್ತೃತ್ವ ಶಕ್ತಿಯ ಭಯ. ಅವರನ್ನು ಎಷ್ಟೇ ತುಳಿದರೂ ಅವರು ಅಲ್ಲಿಂದಲೇ ಜೀವಶಕ್ತಿಯನ್ನು ತುಂಬಿಕೊಳ್ಳುತ್ತಾರೆ. ಜನಾನುರಾಗ ಗಳಿಸುತ್ತಾರೆ. ಒಂದು ವೇಳೆ ಅವರಿಗೆ ಮೀಸಲಾತಿ ದೊರಕಿಬಿಟ್ಟರೆ ತಾವು ನಿರುದ್ಯೋಗಿಗಳಾಗುವ ಭಯ. ಆ ಭಯವೇ ರಾಜ್ಯಸಭಾ ಸದಸ್ಯರೊಬ್ಬರ ಬಾಯಿಂದ ’ಮಸೂದೆಗೆ ಒಪ್ಪಿಗೆ ನೀಡುವುದೆಂದರೆ ಬಲಿದಾನ ಅಥವಾ ಆತ್ಮಹತ್ಯೆ ಮಾಡಿಕೊಂಡಂತೆ’ ಎಂದು ಹೇಳಿಸುತ್ತದೆ.

ಲೋಕಸಭೆಯ ಒಟ್ಟು ಸಂಖ್ಯೆ ೫೪೩. ಇದರಲ್ಲಿ ಮಹಿಳೆಯರು ಕೇವಲ ೫೯. ಮೀಸಲಾತಿ ದೊರೆತರೆ ಮಹಿಳೆಯರ ಸಂಖ್ಯೆ ೧೮೦ಕ್ಕೇರುತ್ತದೆ. ಕರ್ನಾಟಕದಲ್ಲಿ ವಿಧಾನಸಭೆಯ ಸಂಖ್ಯಾಬಲ ೨೨೪. ಮಹಿಳಾ ಶಾಸಕರ ಸಂಖ್ಯೆ ಕೇವಲ ೫. ಮೀಸಲಾತಿ ದೊರಕಿದರೆ ಅದು ೭೪ಕ್ಕೇರುತ್ತದೆ. ದೇಶದ೨೮ ರಾಜ್ಯಗಳಲ್ಲಿನ ಒಟ್ಟು ಶಾಸಕರು,೪೦೩೦. ಇದರಲ್ಲಿ ಮಹಿಳೆಯರ ಸಂಖ್ಯೆ ಕೇವಲ ೩೧೧. ಮೀಸಲಾತಿ ದೊರಕಿದರೆ ಇವರ ಸಂಖ್ಯೆ ೧೩೩೦ಕ್ಕೇರುತ್ತದೆ.

ಪ್ರಜಾಪ್ರಭುತ್ವದಲ್ಲಿ ಸಂಖ್ಯಾಬಲವೇ ಶಕ್ತಿಯುತವಾದುದು. ಶಾಸನ ಸಭೆಗಳಲ್ಲಿ ಮಹಿಳೆಯರ ಬಲ ಹೆಚ್ಚಿದರೆ ಅವರು ಮಹಿಳಾ ಸಮಸ್ಯೆಗಳಿಗೆ ಧ್ವನಿಯಾಗಬಲ್ಲರು. ಪುರುಷ ಜಗತ್ತಿಗೆ ಅರ್ಥವಾಗದ ಹಲವಾರು ಸಮಸ್ಯೆಗಳು ಮಹಿಳೆಯಲ್ಲಿವೆ. ಅವನ್ನು ಮಹಿಳಾ ನೆಲೆಯಿಂದಲೇ ನೋಡಬೇಕಾಗುತ್ತದೆ; ಅದನ್ನು ಮಹಿಳೆ ಮಾತ್ರ ಅರ್ಥ ಮಾಡಿಕೊಳ್ಳಬಲ್ಲಳು. ಮೊನ್ನೆ ಮೊನ್ನೆ ಘಟಿಸಿದ ನೆರೆಹಾವಳಿ ದುರಂತವನ್ನೇ ನೋಡಿ; ಸಂತ್ರಸ್ತರನ್ನು ನೋಡಲು ನಮ್ಮ ಘನ ಸರಕಾರದ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿ ವರ್ಗ ಎಲ್ಲವೂ ಅಲ್ಲಿಗೆ ಹೋಗಿತ್ತು. ಆದರೆ ಅವೆಲ್ಲಾ ಮಾನವೀಯವಾಗಿ ವರ್ತಿಸಿತ್ತಾ ಎಂಬುದು ಪ್ರಶ್ನಾರ್ಹ. ಆದರೆ ಹಂಪೆಯ ಕನ್ನಡ ವಿ.ವಿಯ ಮಹಿಳಾ ಅಧ್ಯಯನ ಸಂಸ್ಥೆಯ ತಂಡವೊಂದು ಅಲ್ಲಿಗೆ ಹೋಗಿ ಪರಿಸ್ಥಿತಿಯ ಅವಲೋಕನ ನಡೆಸಿ ವರದಿಯನ್ನು ಸಿದ್ದಪಡಿಸಿತು. ಅದರಲ್ಲಿ ೧೦ ಅಡಿ ಅಗಲ ೧೫ ಅಡಿ ಉದ್ದದ ಶೆಡ್ಡುಗಳಲ್ಲಿ ಮಹಿಳೆಯರು, ಬಾಣಂತಿಯರು, ಬಾಲಕಿಯರು ಅನುಭವಿಸುತ್ತಿದ್ದ ಮಾನಸಿಕ ಮತ್ತು ದೈಹಿಕ ಹಿಂಸೆಗಳ ವಿವರವನ್ನು ನೀಡಲಾಗಿದೆ. ಮಳೆಯ ಹೊಡೆತಕ್ಕೆ ಸಿಲುಕಿ ಎಲ್ಲವನ್ನು ಬಿಟ್ಟು ಪ್ರಾಣ ಉಳಿಸಿಕೊಳ್ಳಲು ಉಟ್ಟ ಬಟ್ಟೆಯಲ್ಲಿ ಓಡಿ ಬಂದಿದ್ದ ಮಹಿಳೆಯರು ತಮ್ಮ ಮಾಸಿಕ ಋತುಸ್ರಾವವನ್ನು ತಡೆಯುವುದಕ್ಕಾಗಿ ಬಟ್ಟೆಯಿಲ್ಲದೆ ಸಂಕಟಪಡುತ್ತಿದ್ದ ವಿಚಾರ ಒಬ್ಬ ಪುರುಷನ ಮನಸ್ಸಿಗೆ ಇಳಿಯಲು ಸಾಧ್ಯವೇ?. ಅದು ಮಹಿಳೆಗೆ ಮಾತ್ರ ಅರ್ಥವಾಗುವ ಸಂಗತಿ. ಲೇಖಕಿ ನಾಗವೇಣಿಯವರಿಗೆ ಒಮ್ಮೆ ಮಹಿಳಾ ಖೈದಿಗಳನ್ನು ಭೇಟಿ ಮಾಡುವ ಸಂದರ್ಭ ಬಂದಿತ್ತು. ಆಗ ಅಲ್ಲಿರುವ ಖೈದಿಗಳು ’ಇನ್ನೊಮ್ಮೆ ಬಂದಾಗ ಒಂದಷ್ಟು ಹಳೆಯ ಕಾಟನ್ ಬಟ್ಟೆಗಳನ್ನು ತರ್ತೀರಾ’ ಎಂದು ಕೇಳಿಕೊಂಡಿದ್ದರಂತೆ.

ಮಹಿಳೆಯರಿಗೆ ಮೀಸಲಾತಿ ದೊರಕಿದರೆ ಶಾಸನ ಸಭೆಗಳಲ್ಲಿ ಸಾಮಾಜಿಕ ಸಮಸ್ಯೆಗಳು ಹೆಚ್ಚು ಅರ್ಥಪೂರ್ಣವಾಗಿ ಚರ್ಚೆಯಾಗಬಹುದು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಪಿಡುಗು, ಕೌಟುಂಬಿಕ ಹಿಂಸೆ, ಕುಡಿಯುವ ನೀರು, ಶೌಚಾಲಯ ನಿರ್ಮಾಣದಂತ ಮೂಲಭೂತ ಸಮಸ್ಯೆಗಳ ಚರ್ಚೆಯಲ್ಲಿ ಪಕ್ಷ ಬೇಧ ಮರೆತು ಮಹಿಳೆಯರು ಪಾಲ್ಗೊಳ್ಳಬಹುದು. ರೈತರ ಸಮಸ್ಯೆಗಳನ್ನು ಹೆಚ್ಚು ಮಾನವೀಯವಾಗಿ ಆಲಿಸಬಹುದು. ಯಾಕೆಂದರೆ ಕೃಷಿಯನ್ನು ಕಂಡು ಹಿಡಿದವಳು ಮಹಿಳೆಯೇ. ಯಡಿಯೂರಪ್ಪನವರ ಪತ್ನಿ ಮೈತ್ರಾದೇವಿ, ಉಡುಪಿ ಶಾಸಕ ರಘುಪತಿಭಟ್ ಪತ್ನಿ ಪದ್ಮಪ್ರಿಯ ಸೇರಿದಂತೆ ಹಲವು ಆತ್ಮಹತ್ಯೆಗಳ ನಿಜ ಕಾರಣಗಳು ಗೊತ್ತಾಗಬಹುದು. ಕರ್ನಾಟಕದಲ್ಲಂತೂ ಶೋಭಾ ಕರಂದ್ಲಾಜೆಯಂತ ಮಹಿಳೆ ಪಕ್ಷಕ್ಕಿಬ್ಬರಿದ್ದರೂ ಸಾಕು, ಸರಕಾರಕ್ಕೆ ಮೂಗುದಾರ ಹಾಕಬಹುದು. ಮುಖ್ಯವಾಗಿ ರಾಜಕೀಯ ಅಪರಾಧಿಕರಣ ಕಡಿಮೆಯಾಗಬಹುದು. ನಮ್ಮ ದೇಶದಲ್ಲಿ ಹಲವಾರು ಮಹಿಳೆಯರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಿದೆ. ಆದರೆ ಮಹಿಳೆಯೊಬ್ಬಳು ಹಣಕಾಸು ಮತ್ತು ಗೃಹ ಇಲಾಖೆಯನ್ನು ನಿರ್ವಹಿಸಿದ ದಾಖಲೆ ಇದ್ದಂತಿಲ್ಲ. ಮುಂಬರುವ ದಿನಗಳಲ್ಲಿ ಅದನ್ನೂ ನೋಡುವ ಭಾಗ್ಯ ಒದಗಬಹುದು.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಅನುಮೋದನೆಗೊಂಡರೆ ಅನಂತರದಲ್ಲಿ ಅದು ಕನಿಷ್ಟ ಹದಿನಾಲ್ಕು ರಾಜ್ಯಗಳ ವಿದಾನಸಭೆ ಮತ್ತು ಪರಿಷತ್ತುಗಳಲ್ಲಿ ಅಂಗೀಕಾರಗೊಳ್ಳಬೇಕು. ಅನಂತರವೇ ಅದು ರಾಷ್ಟ್ರಪತಿಗಳ ಮುದ್ರೆ ಪಡೆದು ಕಾನೂನಾಗುತ್ತದೆ. ಅದು ಬಹಳ ದೀರ್ಘವಾದ ಪ್ರಕ್ರಿಯೆ. ಈ ಮಧ್ಯೆ ಯಾರ್ಯಾರು ಕೈಕೊಡ್ತಾರೋ ಹೇಳಲಾಗದು. ಮುಖ್ಯವಾಗಿ ಬಿಜೆಪಿಯನ್ನು ನಂಬಲಾಗದು. ಅದು ಹಿಂದು ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಪಕ್ಷ. ಹಿಂದು ಸಂಸ್ಕೃತಿ ನಿಂತಿರುವುದೇ ಕುಟುಂಬ ವ್ಯವಸ್ಥೆಯೇ ಮೇಲೆ. ಮಹಿಳೆಯರು ರಾಜಕೀಯ ಪ್ರಜ್ನೆ ಬೆಳೆಸಿಕೊಂಡು ರಾಜಕಾರಣ ಮಾಡತೊಡಗಿದರೆ, ಸಮಾನತೆಯ ಕನಸು ಕಾಣತೊಡಗಿದರೆ ಕೌಟುಂಬಿಕ ರಚನೆ ಶಿಥಿಲಗೊಳ್ಳುತ್ತದೆ. ಅದು ಬಿಜೆಪಿಗೆ ಬೇಡ.

೨೦೦೬ರ ಘಟನೆಗಳನ್ನು ನೆನಪಿಸಿಕೊಳ್ಳಿ; ಪ್ರಧಾನ ಮಂತ್ರಿ ಗಾಧಿಗೆ ಸೋನಿಯಾ ಗಾಂಧಿಯ ಹೆಸರು ಕಾಂಗ್ರೇಸ್ ಪಕ್ಷದಿಂದ ಸೂಚಿತವಾಗಿತ್ತು. ಆಗ ಬಿಜೆಪಿ ಪಕ್ಷ ಘಟವಾಣಿ ಅತ್ತೆಯಂತೆ ಪೂತ್ಕರಿಸಿತ್ತು. ’ಸೋನಿಯ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಂಡು ವಿಧವೆಯ ಬಾಳು ಬದುಕುತ್ತೇನೆ’ ಎಂಬ ಹೇಳಿಕೆಯನ್ನು ಸುಷ್ಮಾ ಸ್ವರಾಜ್ ನೀಡಿಬಿಟ್ಟರು. ಬಳ್ಳಾರಿಯಲ್ಲಿ ಅರಶಿನ ಕುಂಕುಮ ಶೋಭಿತೆಯಾಗಿ ವರಮಾಹಾಲಕ್ಷ್ಮಿ ಪೂಜೆ ಮಾಡುವ ಸುಷ್ಮ, ದೆಹಲಿಯಲ್ಲಿ ಬಿಜೆಪಿಯ ವಕ್ತಾರರಾಗಿಬಿಡುತ್ತಾರೆ. ಅರ್ಥಾತ್ ಪುರುಷರಂತೆ ಯೋಚಿಸುವ ಮಹಿಳೆಯಾಗುತ್ತಾರೆ. ಇಂತಹ ಪಕ್ಷದಿಂದ ಮಹಿಳಾ ಮೀಸಲಾತಿಗೆ ಬೆಂಬಲವನ್ನು ನಿರೀಕ್ಷಿಸುವುದು ಕಷ್ಟ.

ಆದರೂ ಸೋನಿಯ ಪ್ರಯತ್ನದಲ್ಲಿ ನಂಬಿಗೆಯಿಡಬಹುದು. ಆಕೆಯಲ್ಲಿ ಇನ್ನೊಬ್ಬರನ್ನು ಅನುನಯಿಸುವ ಕಲೆ ಇದೆ. ಕ್ಷಮಾ ಗುಣವಿರುವವರಿಗೆ ಅನುನಯ ಕಲೆ ಒಲಿಯುತ್ತದೆ. ನಮ್ಮ ಪುರುಷರಲ್ಲಿ ಕೂಡ ನಮಗೆ ಭರವಸೆಯಿದೆ. ಯಾಕೆಂದರೆ ಅರ್ಧ ನಾರೀಶ್ವರನ ಕಲ್ಪನೆ ಹುಟ್ಟಿದ್ದು ಈ ಮಣ್ಣಿನಲ್ಲಿಯೇ; ಈ ಜಗತ್ತಿನ ಅತ್ಯುನ್ನತ ಶಕ್ತಿಯನ್ನು ಸ್ತ್ರೀಯೊಡನೆ ಸಮೀಕರಿಸಿದ್ದು ಇಲ್ಲಿಯೇ. ಮತ್ತು ಈ ಕಲ್ಪನೆ, ಹೋಲಿಕೆ ಮೊಳಕೆಯೊಡೆದದ್ದು ಪುರುಷನಲ್ಲಿಯೇ. ಇದು ನಮ್ಮ ನಂಬಿಕೆ.

[ ’ಸುಧಾ’ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ]

Sunday, March 14, 2010

ಸಹಸ್ರಾರು ಮಹಿಳೆಯರ ಸ್ಫೂರ್ತಿ ತುಳುನಾಡ ’ಸಿರಿ’


ಸ್ವಾಭಿಮಾನಕ್ಕೆ, ಛಲಕ್ಕೆ, ದಿಟ್ಟತನಕ್ಕೆ, ಪ್ರತಿಭಟನೆಗೆ ಒಳಗೊಳಗಿನ ಗಟ್ಟಿತನಕ್ಕೆ ಮಹಿಳೆಯರು ಯಾರನ್ನು ಮಾದರಿಗಳನ್ನಾಗಿ ತೆಗೆದುಕೊಳ್ಳಬಹುದು? ಇತಿಹಾಸ ಮತ್ತು ವರ್ತಮಾನದಲ್ಲಿ ಅವರವರ ಭಾವಕ್ಕೆ ತಕ್ಕಂತೆ ಅನೇಕ ಹೆಸರುಗಳು ಕಣ್ಮುಂದೆ ಸುಳಿದಾಡಬಹುದು. ಆದರೆ ಪುರಾಣಕ್ಕೆ ಹೊರಳಿದರೆ ನೆನಪಾಗುವ ಹೆಸರು ಎರಡೇ; ಅಂಬೆ ಮತ್ತು ದ್ರೌಪಧಿ.

ಆದರೆ ದ್ರೌಪಧಿಯನ್ನೂ ಮೀರಿಸುವ ಹೆಣ್ಣೊಬ್ಬಳು ತುಳುನಾಡಿನಲ್ಲಿದ್ದಳು. ಅವಳೇ ಸಿರಿ. ತುಳು ಮಹಾಕಾವ್ಯ ’ಸಿರಿ ಪಾಡ್ದನ’ದ ಕೇಂದ್ರ ಪಾತ್ರ ಅದು. ಲೋಕರೂಢಿಗೆ ವಿರುದ್ಧವಾಗಿ ಬದುಕಿದವಳು. ಚೌಕಟ್ಟುಗಳನ್ನು ಮೀರಲೆತ್ನಿಸಿದವಳು. ಪ್ರತಿಭಟನೆಯ ಅಗ್ನಿಕುಂಡದಂತಿದ್ದವಳು ಸಿರಿ.

’ಸಿರಿ’ ೪ ತಲೆಮಾರುಗಳ ಕಥೆಯನ್ನು ಹೇಳುತ್ತದೆ. ಅಂದರೆ ಸಿರಿ, ಅವಳ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮಕ್ಕಳ ಕಥೆ. ಸಿರಿ ಪಾಡ್ದನ ೧೫,೬೮೩ ಸಾಲುಗಳ ದೀರ್ಘ ಕಾವ್ಯ. ಹೋಮರನ ’ಇಲಿಯೆಡ್’ ನಲ್ಲಿ ಇದಕ್ಕಿಂತ ಕೇವಲ ೫ ಸಾಲು ಹೆಚ್ಚಿದೆಯಷ್ಟೆ. ಆದರೆ ಇದು ಮುಖ್ಯವಾಗಿ ಸಿರಿಯ ಕಥೆ.

ಸಿರಿ, ಕೇವಲ ತುಳು ಜಾನಪದದಲ್ಲಿ ಚಿತ್ರಿತವಾದ ಕಾಲ್ಪನಿಕ ಮಹಿಳೆಯಲ್ಲ. ಆಕೆ ಇಂದಿಗೂ ತುಳು ಜನಮಾನಸದಲ್ಲಿ ನೆಲೆನಿಂತಿದ್ದಾಳೆ. ತುಳುನಾಡು ಅಂದರೆ ಇಂದಿನ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳು. ಅಂದರೆ ಅವಿಭಜಿತ ದ.ಕ ಜಿಲ್ಲೆ. ಮತ್ತು ಕೇರಳದ ಕಾಸರಗೋಡು ಜಿಲ್ಲೆ. ತುಳುನಾಡಿನ ಲಕ್ಷಾಂತರ ಮಹಿಳೆಯರು ಸಿರಿಯಲ್ಲಿ ತಮ್ಮನ್ನು ಸಮೀಕರಿಸಿಕೊಂಡು ವರ್ಷದಲ್ಲಿ ಒಂದು ಭಾರಿಯಾದರೂ ಸಿರಿಯಾಗಿ ಪರಕಾಯ ಪ್ರವೇಶ ಪಡೆಯುತ್ತಾರೆ. ಅದಕ್ಕೆ ಅವಕಾಶ ಸಿಗುವುದು ’ಸಿರಿಜಾತ್ರೆ’ಯಲ್ಲಿ. ಪ್ರತಿ ವರ್ಷ ನಂದಳಿಕೆ, ಕವತ್ತಾರು, ನಿಡ್ಗಲ್[ ಬೆಳ್ತಂಗಡಿ]ಗಳಲ್ಲಿ ಹುಣ್ಣಿಮೆಯಂದು ವೈಭವದ ಸಿರಿ ಜಾತ್ರೆ ನಡೆಯುತ್ತದೆ. ಮಾರ್ಚ್ ನಲ್ಲಿ ನಂದಳಿಕೆಯಲ್ಲಿ, ನಂತರ ಕ್ರಮವಾಗಿ ಏಪ್ರಿಲ್,ಮೇ ತಿಂಗಳಿನ ಹುಣ್ಣಿಮೆಗಳಲ್ಲಿ ಕವತ್ತಾರು ಮತ್ತು ನಿಡ್ಗಲ್ ನಲ್ಲಿ ಸಿರಿಜಾತ್ರೆ ನಡೆಯುತ್ತದೆ. ಅದು ಸಂಪೂರ್ಣವಾಗಿ ಮಹಿಳಾ ಜಾತ್ರೆಯೇ. ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಈ ಜಾತ್ರೆ ನಡೆಯುತ್ತದೆ. ಮುಂಬಯಿ, ಕೊಲ್ಲಿ ರಾಷ್ಟ್ರ ಸೇರಿದಂತೆ ವಿದೇಶಗಳಲ್ಲಿರುವ ತುಳುವರು ಮುಖ್ಯವಾಗಿ ಬಂಟ್ಸ್ ಸಮುದಾಯದವರು ಭಯ ಭಕ್ತಿಗಳಿಂದ ಸಿರಿ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.

ವೈಜ್ನಾನಿಕ ದೃಷ್ಟಿಯಿಂದ ನೋಡಿದರೆ ಈ ಸಿರಿ ಜಾತ್ರೆ ಮಾನಸಿಕ ಚಿಕಿತ್ಸಾ ಕೇಂದ್ರದಂತೆ ಕೆಲಸ ಮಾಡುತ್ತದೆ. ಹತ್ತಾರು ಸಾವಿರ ಮಹಿಳೆಯರ ಮೈಮೇಲೆ ಏಕಕಾಲದಲ್ಲಿ ಸಿರಿ ಅವಾಹನೆಗೊಳ್ಳುತ್ತಾಳೆ. ಸಂಸಾರದ ಜಂಜಡಗಳಿಂದ ನೊಂದು ಬೆಂದು ಹೋದ ಅಸಂಖ್ಯ ಮಹಿಳೆಯರು ಆ ರಾತ್ರಿಯ ಮಟ್ಟಿಗೆ ’ಸಿರಿ’ಯಾಗಿ ಪರಿವರ್ತನೆಗೊಳ್ಳುತ್ತಾರೆ. ಅಲ್ಲೊಂದು ’ಮಧ್ಯಂತರ ಜಗತ್ತು’ ಸೃಷ್ಠಿಯಾಗುತ್ತದೆ. ಅಲ್ಲಿ ದುಃಖಿತ ಮಹಿಳೆಯರು ತಮ್ಮ ಬದುಕನ್ನು ರೀಚಾರ್ಜ್ ಮಾಡಿಕೊಳ್ಳುತ್ತಾರೆ. ವರ್ತಮಾನದಲ್ಲಿ, ಇಂದಿಗೂ ಕೂಡಾ ಸಿರಿಯನ್ನು ಸಾವಿರಾರು ಮಹಿಳೆಯರು ’ಈಕೆ ನಮ್ಮವಳು’ ಎಂದು ಒಪ್ಪಿಕೊಳ್ಳಬೇಕಾದರೆ ಆಕೆಯಲ್ಲೇನೋ ವಿಶೇಷ ಇದ್ದಿರಬೇಕಲ್ಲವೇ? ಏನಾಗಿರಬಹುದು ಅದು? ಅದಕ್ಕಾಗಿ ನಾವವಳ ಜೇವನಗಾಥೆಯನ್ನು ತಿಳಿದುಕೊಳ್ಳಬೇಕು.

ಬಹಳ ಹಿಂದೆ ತುಳುನಾಡಿನಲ್ಲಿ ’ಬೆರ್ಮ ಆಳ್ವ’ನೆಂಬ ಶ್ರೀಮಂತನಿದ್ದನು. ಅವನಿಗೆ ಮಕ್ಕಳಿರಲಿಲ್ಲ. ಆ ಚಿಂತೆ ಅವನನ್ನು ಕಾಡುತ್ತಿತ್ತು. ಅವನ ಚಿಂತೆಯ ಕಾರಣವನ್ನು ತಿಳಿದ ಆದಿ ಅಲ್ಲಡೆ ಕುಲಬ್ರಹ್ಮ ದೇವರು ’ನನ್ನ ಮೂಲ ಸ್ಥಾನ ಹಾಳು ಬಿದ್ದಿದೆ ಅದನ್ನು ಜೀರ್ಣೋದ್ದಾರ ಮಾಡಿಸು’ಎಂದು ಅಪ್ಪಣೆ ಕೊಡಿಸುತ್ತಾನೆ. ಹಾಗೆ ಬೆರ್ಮಾಳನು ದೈವ ಸ್ಥಾನ ಕಟ್ಟಿಸಿ,ನಿತ್ಯ ಪೂಜೆಗೆ ಏರ್ಪಾಟು ಮಾಡಿಸುತ್ತಾನೆ. ಸಂತೃಪ್ತನಾದ ದೇವರು ಬ್ರಾಹ್ಮಣ ವೇಷದಿಂದ ಬಂದು ಸಿಂಗಾರದ ಹಾಳೆಯ ಮೇಲೆ ಗಂಧದ ಉಂಡೆಯನ್ನಿಟ್ಟು ಪ್ರಸಾಧ ಕೊಡುತ್ತಾನೆ. ಅದನ್ನು ಕೈಯಲ್ಲಿ ಹಿಡಿದು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಿರುವಾಗ ಅದೊರೊಳಗಿನಿಂದ ಮಗು ಅಳುವುದು ಕೇಳುತ್ತದೆ. ಹೆಣ್ಣು ಮಗು. ಅದನ್ನು ತನ್ನ ಸತ್ಯನಾಪುರದ ಅರಮನೆಗೆ ತಂದು ಬೆರ್ಮಾಅಳ್ವ ಅಕ್ಕರೆಯಿಂದ ಸಾಕುತ್ತಾನೆ. ಆಕೆ ಪ್ರಾಯಪ್ರಬುದ್ಧಳಾದಾಗ ಬಸರೂರಿನ-ಕುಂದಾಪುರ ಸಮೀಪದ- ಕಾಂತುಪೂಂಜನಿಗೆ ಮದುವೆ ಮಾಡಿಕೊಡುತ್ತಾನೆ. ಆಕೆಯ ಹುಟ್ಟು ಹೇಗೆ ನಿಗೂಢವಾಗಿತ್ತೋ ಆಕೆಯ ಮದುವೆ ಕೂಡಾ ಲೋಕಾರೂಢಿಗೆ ವಿರುದ್ಧವಾಗಿತ್ತು. ತನ್ನನ್ನು ಮದುವೆಯಾಗುತ್ತೇನೆಂದು ಅಸೆಪಟ್ಟ ಕಾಂತು ಪೂಂಜನಿಗೆ ಅವಳು ಷರತ್ತನ್ನು ವಿಧಿಸುತ್ತಾಳೆ.ತನ್ನ ತಂದೆಗೆ ಯಾರೂ ಆಶ್ರಯಧಾತರಿಲ್ಲ, ಹಾಗಾಗಿ ತಾನು ಸತ್ಯನಾಪುರದ ಅರಮನೆಯಲ್ಲೇ ಇರುತ್ತೇನೆ, ಇದಕ್ಕೆ ಒಪ್ಪಿದರೆ ಮದುವೆಯಾಗುವುದಾಗಿ ಹೇಳುತ್ತಾಳೆ. ಷರತ್ತು ವಿಧಿಸಿ ಮದುವೆಯಾದ ದಿಟ್ಟ ಹೆಣ್ಣುಮಗಳು ಈಕೆ.

ಸಿರಿ ಗರ್ಭವತಿಯಾಗುತ್ತಾಳೆ. ಸೀಮಂತ ತನ್ನ ಮನೆಯಲ್ಲೇ ಆಗಬೇಕೆಂದು ಕಾಂತುಪೂಂಜ ಅವಳನ್ನು ಬಸ್ರೂರಿಗೆ ಕರೆದುಕೊಂಡು ಬರುತ್ತಾನೆ. ಸೀಮಂತದ ತಯಾರಿ ನಡೆಯುತ್ತದೆ. ಕಾಂತುಪೂಂಜ ಸೀಮಂತಕ್ಕೆ ಸೀರೆ ತರುವಾಗ ದಾರಿಯಲ್ಲಿ ಸೂಳೆ ಮನೆಗೆ ಭೇಟಿ ಕೊಡುತ್ತಾನೆ. ಆಕೆ ಆ ಸೀರೆಯನ್ನು ಉಟ್ಟು ನೋಡುತ್ತಾಳೆ. ಮಾರನೆಯ ದಿನ ಸೀಮಂತದಲ್ಲಿ ಸೀರೆ ಭಾಗಿನ ಕೊಡುವಾಗ ಸಿರಿ, ’ಸೂಳೆ ಉಟ್ಟ ಸೀರೆ ನಾನು ತಗೊಳ್ಳೊದಿಲ್ಲ’ ಎಂದು ಅದನ್ನು ತುಂಬಿದ ಸಭೆಯಲ್ಲಿ ತಿರಸ್ಕರಿಸುತ್ತಾಳೆ. ಕಾಂತು ಪೂಜಾರಿಗೆ ಅವಮಾನವಾಗುತ್ತದೆ.

ಸಿರಿ ಸತ್ಯನಾಪುರದ ಅರಮನೆಗೆ ಹಿಂದಿರುಗಿ ಬರುತ್ತಾಳೆ. ಆಲ್ಲಿ ಗಂಡುಮಗುವಿಗೆ ಜನ್ಮ ಕೊಡುತ್ತಾಳೆ. ಈ ಸುದ್ದಿ ತಿಳಿದರೂ ಮಗುವನ್ನು ನೋಡಲು ಕಾಂತುಪೂಂಜ ಬರುವುದಿಲ್ಲ. ಮಗು ಹುಟ್ಟಿದ ಜಾತಕದ ಪ್ರಕಾರ ”ಅಜ್ಜ ಮಗುವನ್ನು ನೋಡಿದರೆ ಆತನಿಗೆ ಮರಣ ಸಂಭವಿಸುತ್ತದೆ” ಎಂದು ಜ್ಯೋತಿಷಿಗಳು ಭವಿಷ್ಯ ನುಡಿಯುತ್ತಾರೆ. ಒಂದು ದಿನ ಮನೆಯಲ್ಲಿ ಯಾರೂ ಇರುವುದಿಲ್ಲ. ಮಗು ಜೋರಾಗಿ ಅಳುತ್ತಿರುತ್ತದೆ. ಅಜ್ಜ ಬೆರ್ಮಾ ಆಳ್ವ ಅದನ್ನು ಎತ್ತಿಕೊಳ್ಳುತ್ತಾನೆ. ಪರಿಣಾಮವಾಗಿ ಖಾಯಿಲೆ ಬೀಳುತ್ತಾನೆ; ಸತ್ತು ಹೋಗುತ್ತಾನೆ. ಕಾಂತು ಪೂಂಜನಿಗೆ ಸುದ್ದಿ ಮುಟ್ಟಿಸುತ್ತಾರೆ. ಆದರೆ ಕಾಂತುಪೂಂಜ ಬರುವುದಿಲ್ಲ. ಸಿರಿಯೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಪೂರೈಸುತ್ತಾಳೆ. ಸತ್ಯನಾಪುರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತಿದ್ದ ಶಂಕರಾಳ್ವನು ಅವಳ ವಿರುದ್ಧ ತಿರುಗಿಬೀಳುತ್ತಾನೆ. ತನಗೆ ಅರಮನೆಯಲ್ಲಿ ಪಾಲು ಬೇಕೆಂದು ತಗಾದೆ ತೆಗೆಯುತ್ತಾನೆ. ಅವನಿಗೆ ಕಾಂತು ಪೂಂಜ ಕುಮ್ಮಕ್ಕು ಕೊಡುತ್ತಾನೆ. ಊರ ಹತ್ತು ಸಮಸ್ತರಿಗೆ ಶಂಕರಾಳ್ವ ದೂರು ಕೊಡುತ್ತಾನೆ. ಅವರನ್ನು ದುಡ್ಡಿನಿಂದ ಕೊಂಡುಕೊಳ್ಳುತ್ತಾನೆ.

ನೋಡಿ, ಒಬ್ಬ ಹೆಣ್ಣು ಮಗಳನ್ನು ಎಲ್ಲಾ ರೀತಿಯಿಂದಲೂ ಹಣೆಯುವ ಪ್ರಯತ್ನ ನಡೆಯುತ್ತದೆ. ಅವಳು ತನ್ನ ಸಹಾಯಕ್ಕೆ ಬರುವಂತೆ ಮತ್ತೊಮ್ಮೆ ಗಂಡನಿಗೆ ಹೇಳಿಕಳುಹಿಸುತ್ತಾಳೆ. ಅವನು ಮನೆಯಲ್ಲಿದ್ದುಕೊಂಡೇ, ಇಲ್ಲವೆಂದು ಹೇಳಿಕಳುಹಿಸುತ್ತಾನೆ. ಆಕೆ ತಡಮಾಡುವುದಿಲ್ಲ. ಪಂಚಾಯ್ತಿ ನಡೆಯುವ ಸ್ಥಳಕ್ಕೆ ಬಂದು ’ನಿಮ್ಮ ಹತ್ತು ಸಮಸ್ತರ ಕೂಟ ಹಾಳಾಗಲಿ, ಸತ್ಯನಾಪುರ ಅರಮನೆ ಉರಿದು ಹೋಗಲಿ’ ಎಂದು ಶಾಪಕೊಟ್ಟು, ತನ್ನ ಆಪ್ತ ಸೇವಕಿ ದಾರು ಮತ್ತು ಮಗುವಿನೊಂದಿಗೆ ಬಸ್ರೂರಿನ ಗಂಡನ ಮನೆಗೆ ಬಂದು ತನಗೆ ವಿಛ್ಚೇಧನ ಬೇಕು ಎಂದು ಕೇಳುತ್ತಾಳೆ. ಆತ ’ಹೊತ್ತು ಮುಳುಗುವುದರೊಳಗಾಗಿ ಮಾಬುಕಳ ಹೊಳೆ ದಾಟಿದರೆ ನಿನಗೆ ಅದೇ ವಿಛ್ಚೇಧನ, ಸಾದ್ಯವಾಗದಿದ್ದರೆ ಎಳೆದು ತರುತ್ತೇನೆ’ ಎಂದು ಬೆದರಿಸುತ್ತಾನೆ. ತುಂಬ ದೂರದ ಹಾದಿಯನ್ನು ಆಕೆ ಕಷ್ಟಪಟ್ಟು ಕ್ರಮಿಸುತ್ತಾಳೆ. ಮುಂದೆ ಆಕೆಗೆ ಬಿಳಿ ದೇಸಿಂಗರಾಯ ಮತ್ತು ಕರಿ ಕಾಮುರಾಯ ಎಂಬ ಅಣ್ಣತಮ್ಮಂದಿರು ಸಿಗುತ್ತಾರೆ. ಅವರು ಆಕೆಯನ್ನು ಸ್ವಂತ ತಂಗಿಯಂತೆ ನೋಡಿಕೊಳ್ಳುತ್ತಾರೆ. ಆದರೆ ಮಗು ಕುಮಾರ ಅಕಾಲ ಮೃತ್ಯುವಪ್ಪುತ್ತಾನೆ. ಮುಂದೆ ಈಕೆಯ ಸೌಂದರ್ಯವನ್ನು ಕೊಡ್ಸರಾಳನೆಂಬವನು ಕಂಡು ಮರುಳಾಗಿ ಮದುವೆ ಮಾಡಿಕೊಳ್ಳುವ ಬಯಕೆ ವ್ಯಕ್ತ ಪಡಿಸಿದನು. ಅಣ್ಣಂದಿರು ಅವಳಿಗೆ ಮದುವೆ ಮಾಡಿಸಿದರು. ಆಕೆ ಹೆಣ್ಣು ಮಗುವನ್ನು ಹೆತ್ತು, ಅದನ್ನು ಕೊಡ್ಸರಾಳ್ವನ ಮೊದಲ ಹೆಂಡತಿಯ ಕೈಯಲ್ಲಿಟ್ಟು ಸತ್ತು ಹೋಗುತ್ತಾಳೆ. ಆ ಮಗುವಿನ ಹೆಸರು ಸೊನ್ನೆ. ಸೊನ್ನೆಯ ಮಕ್ಕಳೇ ಅಬ್ಬಗ-ದಾರಗೆಯೆಂಬ ಅವಳಿಜವಳಿ ಹೆಣ್ಣುಮಕ್ಕಳು. ಇಂದಿಗೂ ಬಂಟ್ಸ್ ಸಮುದಾಯದವರು ಇವರಿಬ್ಬರನ್ನು ತಮ್ಮ ಕುಲದೈವಗಳೆಂದು ಪೂಜಿಸುತ್ತಾರೆ.

ಹುಟ್ಟಿನಲ್ಲಿ ನಿಗೂಢತೆಯನ್ನು ಉಳಿಸಿಕೊಂಡ, ಷರತ್ತು ಹಾಕಿ ಮದುವೆಯಾದ, ಕಡೆತನಕ ತನ್ನ ತಂದೆಯ ಹಿತಕಾಯ್ದು ಒಬ್ಬಳೇ ಆತನ ಅಂತ್ಯ ಸಂಸ್ಕಾರ ಮಾಡಿದ, ಆಸ್ತಿ ಹಕ್ಕಿಗಾಗಿ ಪುರುಷರೊಂದಿಗೆ ಹೋರಾಡಿ ಸಿಗದಾದಾಗ ಸತ್ಯನಾಪುರದ ಅರಮನೆ ನಾಶವಾಗಲಿ ಎಂದು ಶಾಪ ಕೊಟ್ಟ, ಗಂಡನ ನೈತಿಕತೆಯನ್ನು ಪ್ರಶ್ನಿಸಿದ, ತಾನಾಗಿ ಗಂಡನಿಗೆ ವಿಛ್ಚೇಧನ ನೀಡಿದ, ಮತ್ತೆ ಮರುಮದುವೆಯಾಗಿ ಮಗು ಪಡೆದ ಸಿರಿ ಅಸಮಾನ್ಯ ಹೆಣ್ಣಾಗಿ ತೋರುತ್ತಾಳೆ. ಇಂದು ನಮಗಿದು ಸಹಜವಾಗಿ ತೋರಬಹುದು. ಆದರೆ ಅಂದಿನ ಪುರುಷಪ್ರಧಾನ ಸಮಾಜ ವ್ಯವಸ್ಥೆಯಲ್ಲಿ ಇದು ಅಸಾಮಾನ್ಯವೇ ಸರಿ. ಅದಕ್ಕಾಗಿಯೇ ನಾನವಳನ್ನು ದ್ರೌಪಧಿಗೆ ಹೋಲಿಸಿದ್ದು. ದ್ರೌಪದಿಗೆ ಪರಾಕ್ರಮಿಗಳಾದ ೫ ಮಂದಿ ಗಂಡಂದಿರು ಸದಾ ಅವಳ ಬೆಂಗಾವಲಿಗಿದ್ದರು. ಎಲ್ಲಕ್ಕಿಂತಲೂ ಮಿಗಿಲಾಗಿ ಅವಳನ್ನು ಸದಾ ತಲೆಕಾಯ್ವ ಶ್ರೀಕೃಷ್ಣನಿದ್ದ. ಆದರೆ ಸಿರಿಗೆ ಯಾರೂ ಇರಲಿಲ್ಲ. ಆದರೂ ಆಕೆ ಅನ್ಯಾಯದ ವಿರುದ್ಧ ಸಿಡಿದು ನಿಂತಳು. ತನ್ನ ಹಕ್ಕುಗಳಿಗಾಗಿ ಏಕಾಂಗಿಯಾಗಿ ಹೋರಾಡಿದಳು. ತನ್ನ ಧೀಶಕ್ತಿಯ ಬಗ್ಗೆ ಆಕೆಗೆ ಅಪಾರ ನಂಬಿಕೆಯಿತ್ತು. ಆ ನಂಬಿಕೆಯಿಂದಲೇ ಆಕೆ ಬದುಕಿದಳು. ಬದುಕಿ ಸಾಧಿಸಿದಳು. ಹಾಗಾಗಿಯೇ ಆಕೆ ಆಧುನಿಕ ಮಹಿಳೆಗೆ ಮಾದರಿ, ಸ್ತ್ರೀವಾದಿಗಳಿಗೆ ಸ್ಫೂರ್ತಿ.

[ ಮಾರ್ಚ್ ೧೪ರ ಕನ್ನಡ ಪ್ರಭ ಪತ್ರಿಕೆಯ ಸಾಪ್ತಾಹಿಕದಲ್ಲಿ ಪ್ರಕಟವಾದ ಲೇಖನ ]