Tuesday, November 23, 2010
ರಾಜಕಾರಣಿಗಳೂ, ಪತ್ರಕರ್ತರೂ ಮತ್ತು ಮಠಾಧೀಶರು.
ಹಾಗೆ ನೋಡಿದರೆ ಇವತ್ತಿನ ದಿನವೇ ಲಿಂಗಾಯಿತ ಸ್ವಾಮಿಗಳ ಪ್ರತಿಭಟನಾ ದಿನ. ಎಲ್ಲಾ ಲಿಂಗಾಯಿತ ಸ್ವಾಮಿಗಳು, ಅರ್ಥಾತ್ ಜಗದ್ಗುರುಗಳು ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಬೀದಿಗಿಳಿದ ದಿನ. ಹಾಗೆ ಅವರು ಬೀದಿಗಿಳಿದದ್ದು ನ್ಯಾಯಯುತವಾದುದೇ!. ಮಠ ಮಾನ್ಯಗಳಿಗೆ ರಾಜ್ಯದ ಬೊಕ್ಕಸದಿಂದ ಕೋಟಿ ಕೋಟಿ ಹಣವನ್ನು ಬಾಚಿ ಕೊಟ್ಟ ಪ್ರಭುಗಳ ಋಣ ಸಂದಾಯ ಮಾಡಬೇಡವೇ?
ಸಿದ್ದಗಂಗಾ ಸ್ವಾಮಿಗಳನ್ನು ಇಡೀ ನಾಡು ಗೌರವಿಸುತ್ತದೆ. ಅವರು ಮಠವನ್ನು ಕಟ್ಟಿಕೊಂಡರೂ ಯಾವುದೇ ಒಂದು ಜಾತಿಗೆ ಸೀಮಿತವಾಗಿ ನಡೆದುಕೊಂಡವರಲ್ಲ. ಆದರೆ ಶತಾಯುಷಿ ಅನ್ನಿಸಿಕೊಂಡ ಮೇಲೆ ಅವರು ಬದಲಾದಂತೆ ಕಾಣುತ್ತಿದೆ. ಅವರು ಲಿಂಗಾಯಿತ ಸಮುದಾಯಕ್ಕೆ ಮಾತ್ರ ಸೇರಿದ ಸ್ವಾಮೀಜಿಯೇನೋ ಎಂದು ಭಾಸವಾಗುತ್ತಿದೆ.
ಎರಡು ವರ್ಷಗಳ ಹಿಂದಿನ ಘಟನೆ;
ನಾಡ ಹಬ್ಬವಾದ ಮೈಸೂರು ದಸರಾದ ಉದ್ಘಾಟನೆಗಾಗಿ ಆಗಿನ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿಯವರು ಸಿದ್ದಗಂಗಾಸ್ವಾಮಿಗಳನ್ನು ಗೌರವದಿಂದ ಕರೆದಿದ್ದರು. ಅವರು ಕೂಡಾ ಸಂತೋಷದಿಂದ ಒಪ್ಪಿಕೊಂಡಿದ್ದರು.
ಆದರೆ ಅವರು ಉದ್ಘಾಟನೆ ಮಾಡಲಿಲ್ಲ. ಕಾರಣ ಕುಮಾರಸ್ವಾಮಿ ವಚನ ಭ್ರಷ್ಟರಾದದ್ದು ಸ್ವಾಮಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಗೆ ಕೊಟ್ಟ ಮಾತಿನಂತೆ ೨೦ ತಿಂಗಳ ಆಢಳಿತದ ನಂತರ ಮುಖ್ಯಮಂತ್ರಿ ಗಾದಿಯನ್ನು ಬಿಟ್ಟುಕೊಡಬೇಕಾಗಿತ್ತು. ಯಡಿಯೂರಪ್ಪ ಅದನ್ನು ಅಲಂಕರಿಸಬೇಕಾಗಿತ್ತು. ಆದರೆ ಹಾಗಾಗಲಿಲ್ಲ.
ಈಗ ಕರ್ನಾಟಕದ ಬಹುತೇಕ ಎಲ್ಲಾ ವೀರಶೈವ ಮಠಾದೀಶರು ಬಹಿರಂಗವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ನಿಂತಿದ್ದಾರೆ. ಕೊಳದ ಮಠದ ಸ್ವಾಮೀಜಿಯಂತೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವಿಧಾನ ಪರಿಷತ್ತಿನಲ್ಲಿ ಮಠಾದೀಶರಿಗೂ ಪ್ರಾತಿನಿಧ್ಯವಿರಬೇಕು ಎಂದು ಆಗ್ರಹಿಸಿದರು.
ಸ್ವಜನಪಕ್ಷಪಾತವೆಂಬುದು ಕೇವಲ ರಾಜಕಾರಣಿಗಳಿಗೆ ಸ್ವತ್ತಲ್ಲ!
ಮಠಾದೀಶರನ್ನು ಪಕ್ಕದಲ್ಲಿಟ್ಟುಕೊಂಡು, ಕಂಡ ಕಂಡ ದೇವಸ್ಥಾನಗಳಿಗೆ ಬೇಟಿಕೊಡುತ್ತಾ, ಹೋಮ ಹವನಗಳಲ್ಲಿ ಭಾಗವಹಿಸುತ್ತಾ ಕುರ್ಚಿಯನ್ನು ಉಳಿಸುಕೊಳ್ಳುವುದನ್ನೇ ಕಾಯಕವನ್ನಾಗಿಸಿಕೊಂಡ ಮುಖ್ಯಮಂತ್ರಿಗಳಿಗೆ ದೂರದರ್ಶಿತ್ವವಿಲ್ಲದ ಜನಪ್ರಿಯ ಕಾರ್ಯಕ್ರಮಗಳೇ ಅಭಿವೃದ್ಧಿ ಯೋಜನೆಗಳಾಗಿ ಭಾಸವಾಗುತ್ತಿದೆ. ಹಾಗಾಗಿಯೇ ಅವರಿಗೆ ಕಳೆದ ವರ್ಷ ನೆರೆಹಾವಳಿಯಿಂದ ತತ್ತರಿಸಿದ ಉತ್ತರ ಕರ್ನಾಟಕದ ಜನತೆಗೆ ಸೂರು ಕಟ್ಟಿಕೊಡುವುದಕ್ಕಿಂತ ಮುಖ್ಯವಾಗಿ ಭಾಗ್ಯಲಕ್ಷ್ಮಿ ಕಾರ್ಯಕ್ರಮದಲ್ಲಿ ಸೀರೆ ಹಂಚುವುದೇ ಮುಖ್ಯವಾಗುತ್ತದೆ.
ತಮ್ಮ ಜನಪ್ರಿಯ ಕಾರ್ಯಕ್ರಮಗಳ ಯಥೇಚ್ಛ ಜಾಹೀರಾತುಗಳನ್ನು ಮಾಧ್ಯಮಗಳಿಗೆ ನೀಡಿ ಅವರನ್ನು ಸಂತುಷ್ಟಗೊಳಿಸಿದರು. ಆದರೂ ಮಾಧ್ಯಮಗಳು ಅವರ ವಿರುದ್ಧ ತಿರುಗಿಬಿದ್ದವು. ಯಡಿಯೂರಪ್ಪ ಅವರಿಗೆ ಸಹಜವಾಗಿ ಸಿಟ್ಟು ಬಂದಿದೆ. ಪತ್ರಕರ್ತರಿಗೆ ಸ್ವಲ್ಪವಾದರೂ ಕೃತಜ್ನತೆ ಬೇಡವೇ?
ಯಡಿಯೂರಪ್ಪನವರಿಗೆ ತಾನು ಈ ಸ್ಥಿತಿಯಲ್ಲಿ, ಬೆತ್ತಲಾಗಿ ನಿಲ್ಲಲು ದೇವೆಗೌಡ ಮತ್ತು ಅವರ ಮಗ ಕುಮಾರಸ್ವಾಮಿಯೇ ಕಾರಣ ಎಂದು ನಂಬಿಕೊಂಡಿದ್ದಾರೆ. ಹಾಗಾಗಿ ಆ ’ಅಪ್ಪ ಮಕ್ಕಳನ್ನು ಬಿಡುವುದಿಲ್ಲ’ ಎಂದು ಹಲ್ಲು ಮಸೆಯುತ್ತಿದ್ದಾರೆ. ಚಿಕ್ಕ ಪುಟ್ಟ ವಿಷಯಗಳನ್ನೆಲ್ಲಾ ವಿಜೃಂಬಿಸಿ ತನ್ನನ್ನು ಖಳನಾಯಕನನ್ನಾಗಿ ಬಿಂಬಿಸಿದ ಮಾಧ್ಯಮಗಳ ಮೇಲೆ ಹರಿಹಾಯುತ್ತಿದ್ದಾರೆ. ಸಧ್ಯಕ್ಕೆ ಇವೆರಡೂ ಅವರ ವೈರಿ ಸ್ಥಾನದಲ್ಲಿದೆ.
ಅವರ ಸಿಟ್ಟು ಸಹಜವಾದುದೇ. ಕುಮಾರಸ್ವಾಮಿ ಮಾಡಲಾರದ್ದೇನನ್ನೂ ಇವರು ಮಾಡಿಲ್ಲ. ಇವರು ಅಧಿಕಾರಕ್ಕೆ ಹೊಸಬರು. ಎನೋ ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾರೆ. ಆದರೆ ಕುಮಾರಸ್ವಾಮಿ ನಾಜೂಕಯ್ಯ. ಅವರ ಮೈಗೆ ಅವರಪ್ಪ ಚೆನ್ನಾಗಿ ಎಣ್ಣೆಹಚ್ಚಿದ್ದಾರೆ!
ಇನ್ನು ಮಾಧ್ಯಮದವರಿಗೆ ಎನು ಬೇಕೋ ಅದನ್ನು ಹೇಗೆ ಕೊಡಬೇಕೆಂಬುದು ಅಧಿಕಾರಸ್ಥ ರಾಜಕಾರಣಿಗಳಿಗೆ ಚೆನ್ನಾಗಿ ಗೊತ್ತಿದೆ. ಹಿಂದೆಲ್ಲಾ ದೀಪಾವಳಿ ಬೋನಸ್ಸು ಕೊಡುತ್ತಿದ್ದರು. ಅದು ತಿಂಗಳ ಪೇಮೆಂಟ್ ಗೆ ಇಳಿದು ಈಗ ದಿನಗೂಲಿಗೆ ಇಳಿದಿದೆಯಂತೆ. ಯವುದಕ್ಕೂ ಇರಲಿ ಎಂದುಕೊಂಡು ರಾಜಕಾರಣಿಗಳೇ ಈಗ ಸುದ್ದಿಚಾನಲ್ ಗಳ ಒಡೆಯರಾಗುತ್ತಿದ್ದಾರೆ. ಪತ್ರಕರ್ತರ ಹಿಂಡನ್ನೇ ಖರೀದಿ ಮಾಡುವುದು ಹೆಚ್ಚು ಲಾಭದಾಯಕ.
ಎರಡು ದಿನಗಳ ಹಿಂದಿನ ಘಟನೆಯೊಂದರ ಉದಾಹರಣೆ ಕೊಡುವುದಾರೆ, ಮುಖ್ಯಮಂತ್ರಿಗಳ ಆಪ್ತವಲಯದಿಂದ ಸಿಡಿಯೊಂದನ್ನು ಕನ್ನಡದ ಮೂರು ಪ್ರಮುಖ ಸುದ್ದಿವಾಹಿನಿಗಳಿಗೆ ಕಳುಹಿಸಿಕೊಡಲಾಗಿತ್ತು. ಜನಾರ್ಧನ ರೆಡ್ಡಿ ಮುಖ್ಯಮಂತ್ರಿಗಳ ವಿರುದ್ಧ ಷಡ್ಯಂತರ ರೂಪಿಸುತ್ತಿರುವ ಚಿತ್ರಣ ಅದರಲ್ಲಿತ್ತು. ಒಂದು ಚಾನಲ್ ಅದನ್ನು ತಡವಾಗಿ ಪ್ರಸಾರ ಮಾಡಿತು. ಇನ್ನೆರಡು ಚಾನಲ್ ಅದನ್ನು ಏನು ಮಾಡಿತೋ ಗೊತ್ತಾಗಲೇ ಇಲ್ಲ!
ನೈತಿಕತೆಯ ವಿಚಾರಕ್ಕೆ ಬಂದರೆ ಈಗ ಮಠಾದೀಶರು, ರಾಜಕಾರಣಿಗಳು, ಪತ್ರಕರ್ತರು ಒಂದೇ ಸಾಲಿನಲ್ಲಿ ನಿಲ್ಲುತ್ತಾರೆ.
ಆದರೂ ಕಳವಳಪಡಬೇಕಾಗಿಲ್ಲ. ನಮ್ಮದು ವೈವಿಧ್ಯಮಯ ದೇಶ. ಪ್ರತಿವ್ಯವಸ್ಥೆಗೂ ಪರ್ಯಾಯ ವ್ಯವಸ್ಥೆಯೊಂದು ಇದ್ದೇ ಇರುತ್ತದೆ. ಶಿಷ್ಟ ಸಾಹಿತ್ಯದಷ್ಟೆ ಪ್ರಭಲವಾದ ಜನಪದ ಸಾಹಿತ್ಯ ಇಲ್ಲಿ ಅನಾಚೂನವಾಗಿ ಹರಿದು ಬಂದಿದೆ. ಪತ್ರಿಕೆ, ಟಿವಿಗಳು ಸತ್ಯವನ್ನು ಮರೆಮಾಚಲು ಪ್ರಯತ್ನಿಸಿದರೂ ಚೌಕಟ್ಟುಗಳಿಲ್ಲದ ಬ್ಲಾಗ್, ಪೇಸ್ ಬುಕ್, ಟ್ವೀಟ್ಟರ್ ನಂಥ ಸಾಮಾಜಿಕ ಜಾಲ ತಾಣಗಳಿವೆ. ಕೈಯಲ್ಲಿ ಜಂಗಮವಾಣಿಯಿದೆ. ಸುದ್ದಿಯಾಚೆಗಿನ ಸುದ್ದಿಯನ್ನು ತಿಳಿದುಕೊಳ್ಳುವ ಕುತೂಹಲ ನಮಗಿರಬೇಕು. ಸಮಾಜಮುಖಿ ಚಿಂತನೆ ಇರಬೇಕು ಅಷ್ಟೆ.
Sunday, November 14, 2010
’ಪುಟಾಣಿ ಪಾರ್ಟಿ’- ಕನ್ನಡ ವಾಹಿನಿಗಳ ನಿರ್ಲಕ್ಷ್ಯ


ಇಂದು ಮಕ್ಕಳ ದಿನಾಚರಣೆ. ನಾನೊಂದು ಮಕ್ಕಳ ಮಕ್ಕಳ ಸಿನಿಮಾ ನೋಡಿದೆ; ಅದು ಪಿ.ಎನ್.ರಾಮಚಂದ್ರ ಅವರ ’ಪುಟಾಣಿ ಪಾರ್ಟಿ’. ಮಕ್ಕಳ ಸಿನಿಮಾ ಅಂದರೆ ಹೀಗೆಯೇ ಇರಬೇಕು ಎಂಬ ಸಿದ್ಧ ಸಿದ್ಧಾಂತಗಳನ್ನೆಲ್ಲಾ ಪಕ್ಕಕ್ಕೆ ತಳ್ಳಿ ತನ್ನದೇ ದಾರಿಯನ್ನು ಕಂಡುಕೊಂಡ ಚಿತ್ರ ಇದು.
ಮಕ್ಕಳ ಚಿತ್ರ ಅಂದ ಕೂಡಲೇ ನಮ್ಮ ನೆನಪಿಗೆ ಬರುವುದು; ಪುಟಾಣಿ ಏಜಂಟ್ ೧.೨.೩, ಸಿಂಹದ ಮರಿ ಸೈನ್ಯ, ಸೂಪರ್ ನೋವಾ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಬಂದ ಬೆಟ್ಟದ ಹೂವು, ಚಿನ್ನಾರಿ ಮುತ್ತ ಇತ್ಯಾದಿ... ಆದರೆ ಇವೆಲ್ಲ ಸ್ವಲ್ಪ ಮಟ್ಟಿಗೆ ದೊಡ್ಡವರ ದೃಷ್ಟಿಕೋನದಿಂದ ನೋಡಿದ ಮಕ್ಕಳ ಚಿತ್ರಗಳು.ಆದರೆ ಪುಟಾಣಿ ಪಾರ್ಟಿ ಹಾಗಿಲ್ಲ.
ಗ್ರಾಮ ಸ್ವರಾಜ್ಯದ ಕನಸು ಕಂಡವರು ಗಾಂಧೀಜಿ. ಅದೇ ಕಲ್ಪನೆಯಲ್ಲಿ ಮೂಡಿದ್ದು ಪಂಚಾಯ್ತು ರಾಜ್ ಮಸೂದೆ. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಗಳಾಗಿದ್ದಾಗ ಅದನ್ನು ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟದಲ್ಲಿ ಜಾರಿಗೆ ತಂದಿದ್ದರು. ಪುಟಾಣಿ ಪಾರ್ಟಿಯಲ್ಲಿ ಇದೇ ಅಧಿಕಾರ ವಿಕೇಂದ್ರಿಕರಣ ತತ್ವದ ಎಳೆಯಿದೆ.
ಗ್ರಾಮ ಪಂಚಾಯ್ತಿಯಂಥ ಸ್ಥಳಿಯ ಆಡಳಿತದಲ್ಲಿ ಮಕ್ಕಳ ಸಮಿತಿಯೊಂದು- ’ಪುಟಾಣಿ ಪಾರ್ಟಿ’-ಮಹತ್ವದ ಪಾತ್ರ ವಹಿಸುತ್ತದೆ. ಸಾಮಾಜಿಕ ಸಮಸ್ಯೆಗಳಿಗೆ ಧ್ವನಿಯಾಗುತ್ತದೆ. ಸಾಮಾಜಿಕ ಕಳಕಳಿಯುಳ್ಳ ಉಪಾಧ್ಯಾಯಿನಿಯೊಬ್ಬರು ಮಕ್ಕಳ ಚಟುವಟಿಕೆಗಳಿಗೆ ಪ್ರೇರಕ ಶಕ್ತಿಯಾಗಿ ನಿಲ್ಲುತ್ತಾರೆ.
ಸಿನಿಮಾದಲ್ಲಿ ನಾಟಕೀಯತೆ ಇಲ್ಲ. ಸೇಟ್ ಮೆಂಟ್ ಗಳಿಲ್ಲ. ಸಿನಿಮಾದ ಆಶಯ ಸಿನಿಮಾದ ಭಾಗವಾಗಿ ಬರುತ್ತದೆ. ಸಂಯಮದ ನಿರೂಪಣೆಯಿದೆ. ಧಾರವಾಡದ ಆಡುಮಾತಿನ ಸೊಗಡಿದೆ. ಅಲ್ಲಿನ ಸ್ಥಳೀಯ ಮಕ್ಕಳ ಸಹಜಾಭಿನಯವಿದೆ. ಎಲ್ಲಕ್ಕಿಂತಲೂ ಮುಖ್ಯವಾಗುವುದು ಇಡೀ ವ್ಯವಸ್ಥೆಯೇ ಭ್ರಷ್ಟಗೊಂಡಾಗ ಮಕ್ಕಳ ಮೂಲಕ ಆಶಾವಾದವನ್ನು ಬಿತ್ತುವುದಿದೆಯಲ್ಲಾ ಅದು ನಿಜಕ್ಕೂ ಗ್ರೇಟ್.
ಕನ್ನಡದ ಪ್ರತಿಭೆಯೊಂದು ಹೊಸ ಪ್ರಯತ್ನಗಳಿಗೆ ಮುಂದಾದಾಗ ಅದಕ್ಕೆ ನಾವು ಪ್ರೋತ್ಸಾಹ ನೀಡಬೇಕು. ಅದರಲ್ಲೂ ತಾಯ್ನಾಡಿನಿಂದ ದೂರವಾಗಿ ಬದುಕುತ್ತಾ ಕನ್ನಡದ ಕೈಂಕರ್ಯದಲ್ಲಿ ತೊಡಗಿಕೊಂಡಿರುವವರ ಬಗ್ಗೆ ನಮಗೆ ಪ್ರೀತಿ, ಗೌರವಗಳಿರಬೇಕು.
ಪುಟಾಣಿ ಪಾರ್ಟಿ ನಿರ್ದೇಶಕರಾದ ಪಿ.ಎನ್.ರಾಮಚಂದ್ರ ಅವರು ಉಡುಪಿಯವರಾದರೂ ಬದುಕು ಕಟ್ಟಿಕೊಂಡಿರುವುದು ದೂರದ ಮುಂಬಯಿಯಲ್ಲಿ. ಪುಣೆಯ ಪಿಲಂ ಇನ್ ಸ್ಟಿಟ್ಯೂಟ್ ಪದವಿಧರರು. ಇವರ ತುಳು ಚಲನಚಿತ್ರ ’ಸುದ್ದ’ ೨೦೦೭ರಲ್ಲಿ ನವದೆಹಲಿಯಲ್ಲಿ ನಡೆದ ಒಷಿಯನ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಭಾರತೀಯ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಸುದ್ದ ಎಂದರೆ ಶುದ್ಧಿಕಾರ್ಯ; ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುವುದು.ಇದು ತುಳುನಾಡಿನಲ್ಲಿ ಆಚರಿಸುವ ಒಂದು ಧಾರ್ಮಿಕ ವಿಧಿ.
ಪುಟಾಣಿ ಪಾರ್ಟಿ ರಾಮಚಂದ್ರರ ಎರಡನೆ ಚಿತ್ರ. ಕಡಿಮೆ ವೆಚ್ಚದಲ್ಲಿ ತಯಾರಾದ ಈಚಿತ್ರ ಉತ್ತಮ ಮಕ್ಕಳ ಚಿತ್ರವೆಂದು ರಾಷ್ಟ್ರ ಪ್ರಶಸ್ತಿ ಪಡೆಯಿತು. ಕೈರೋದಲ್ಲಿ ನಡೆದ ೨೦ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದೆ. ಇಂಥ ಚಿತ್ರವನ್ನು ಮಕ್ಕಳದಿನಾಚರಣೆಯಂದು ತಮ್ಮ ತಾಯ್ನಾಡಿನ ಬಂಧುಗಳು ನೋಡಿ ಆನಂಧಿಸಲಿ; ಪ್ರೋತ್ಸಾಹಿಸಲಿ ಎಂಬ ಉದ್ದೇಶದಿಂದ ಅವರು ಕನ್ನಡದ ಟಿವಿ ಚಾನಲ್ ಗಳನ್ನು ಸಂಪರ್ಕಿಸಿದ್ದರು. ಮಾಧ್ಯಮದ ಗೆಳೆಯರ ನೆರವನ್ನು ಕೋರಿದ್ದರು ಯಾವುದೂ ಫಲ ನೀಡಲಿಲ್ಲ.
ರಾಮಚಂದ್ರರಿಗೆ ಗೊತ್ತಿಲ್ಲದಿರಬಹುದು ಸುದ್ದಿ ಚಾನಲ್ ಗಳು ರಾಜಕಾರಣಿಗಳ ಮಂಗಾಟವನ್ನು ಕವರ್ ಮಾಡುವುದರಲ್ಲಿ ಬಿಜಿ. ಮನೋರಂಜನಾ ಚಾನಲ್ ಗಳು ಟಿಅರ್ ಪಿ ಮೇಲಾಟದಲ್ಲಿ ರಿಯಾಲಿಟಿ ಶೋಗಳ ಹಿಂದೆ ಬಿದ್ದಿವೆ. ಸಂಬಂಧಪಟ್ಟವರು ಮನಸ್ಸು ಮಾಡಿದ್ದರೆ ಒಂದೂಕಾಲು ಘಂಟೆಯ ಈ ಚಿತ್ರವನ್ನು ಯಾರು ಬೇಕಾದರೂ ಪ್ರಸಾರ ಮಾಡಬಹುದಿತ್ತು. ಥಿಯೇಟರ್ ಗಳಂತೂ ಪ್ರಯೋಗಾತ್ಮ ಚಿತ್ರಗಳಿಂದ ಮಾರು ದೂರ.
ಇಂದು ಪುಟಾಣಿ ಪಾರ್ಟಿ ಲೋಕಸಭಾ ಚಾನಲ್ ನಲ್ಲಿ ಪ್ರಸಾರದ ಭಾಗ್ಯ ಕಂಡಿತು.ಈ ಹಿಂದೆ ಸಾಂಗತ್ಯದ ಗೆಳೆಯರ ಪ್ರಯತ್ನದಿಂದ ಕೆಲವು ಜನ ಪುಟಾಣಿ ಪಾರ್ಟಿಯನ್ನು ನೋಡಿದ್ದರು. ಎಲ್ಲಾ ಬಾಗಿಲುಗಳು ಮುಚ್ಚಿದಾಗಲೂ ಯಾವುದೋ ಒಂದು ಬಾಗಿಲು ನಮಗಾಗಿ ತೆರೆದಿರುತ್ತದೆ.ಅದು ಪುಟಾಣಿ ಪಾರ್ಟಿಯ ಆಶಯವೂ ಹೌದು.
Thursday, November 11, 2010
ಜಯಮಾಲಳಿಗೇಕೆ ಅಯ್ಯಪ್ಪನ ಮೋಹ?

ನಾಲ್ಕು ವರ್ಷಗಳ ಹಿಂದೆ ಅಂದರೆ ೨೦೦೬ರ ಆಗಸ್ಟ್೫ರಂದು ನಟಿ ಜಯಮಾಲಾ ಅವರು ತಾನು ತನ್ನ ೨೭ನೇ ವಯಸ್ಸಿನಲ್ಲಿ ಶಬರಿಮಲೆಯ ಅಯ್ಯಪ್ಪನ ದರ್ಶನ ಪಡೆದು ಆತನ ಪಾದಗಳನ್ನು ಸ್ಪರ್ಶಿಸಿದ್ದೇನೆ ಎಂದು ಮಾಧ್ಯಮಗಳೆದುರು ಹೇಳಿಕೊಂಡರು. ಅನಾರೋಗ್ಯಪೀಡಿತರಾದ ತಮ್ಮ ಪತಿಯ ಶ್ರೆಯೋಭಿಲಾಷೆಗಾಗಿ ಅವರು ಈ ಯಾತ್ರೆ ಕೈಗೊಂಡಿದ್ದರು.
ಅವರ ಹೇಳಿಕೆ ದೇಶಾದಾದ್ಯಂತ ಸಂಚಲನವನ್ನುಂಟು ಮಾಡಿತು. ಧಾರ್ಮಿಕ ಮನೋಭಾವದ ಜನರು ಛೇ ಆಕೆ ಹಾಗೆ ಮಾಡಬಾರದಿತ್ತು ಎಂದು ನೊಂದುಕೊಂಡರು.
ಜಯಮಾಲಾ ಹೇಳಿಕೆ ನೀಡಿದ ಬೆನ್ನಲ್ಲೆ ಇನ್ನೊಬ್ಬ ನಟಿ ಗಿರಿಜಾ ಲೋಕೆಶ್ ಕೂಡಾ ತಾವು ಅಯ್ಯಪ್ಪನ ದರ್ಶನ ಪಡೆದಿರುವುದಾಗಿ ಹೇಳಿಕೊಂಡರು.
ಕಾಕತಾಳಿಯವೆಂದರೆ ಇಬ್ಬರೂ ಒಂದೇ ವರ್ಷ ಅಯ್ಯಪ್ಪನ ದರ್ಶನ ಪಡೆದಿರುವುದಾಗಿ ಹೇಳಿಕೊಂಡಿದ್ದರು. ಅದು ೧೯೮೭ರಲ್ಲಿ.
ಅವತ್ತಿನ ಜಯಮಾಲರ ಹೇಳಿಕೆ ಈಗ ನಾಲ್ಕು ವರ್ಷಗಳ ನಂತರ ಮತ್ತೆ ಮರುಜೀವ ಪಡೆದುಕೊಂಡಿದೆ. ಆಕೆಯ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕೇರಳ ಪೋಲಿಸರು ಮುಂದಾಗಿದ್ದಾರೆ. ಭಾರತೀಯ ದಂಡ ಸಂಹಿತೆಯ ೨೯೫ ಎ [ಇದು ಉದ್ದೇಶಪೂರ್ವಕವಾಗಿ ತಪ್ಪು ಮಾಡುವುದನ್ನು ವಿವರಿಸುತ್ತದೆ.] ಕಲಮಿನಡಿ ದೋಷರೋಪಣಾ ಪಟ್ಟಿ ಸಲ್ಲಿಸಲು ನಿರ್ಧರಿಸಲಾಗಿದೆ.
ಜಯಮಾಲಾಗೆ ಇದೆಲ್ಲಾ ಬೇಕಿತ್ತೇ?
ಜಯಮಾಲಾ ತುಳುನಾಡಿನ ಹೆಣ್ಣುಮಗಳು. ಅದು ಮಾತೃಪ್ರಧಾನ ಕುಟುಂಬ ವ್ಯವಸ್ಥೆ ಒಪ್ಪಿಕೊಂಡಿರುವ ನಾಡು. ಇಂದಿಗೂ ಅಲ್ಲಿನ ಮಹಿಳೆಯರು ಸ್ವಾಭಿಮಾನಿಗಳೂ, ಛಲವಂತರೂ, ಧೈರ್ಯಶಾಲಿಗಳೂ, ಆಧುನಿಕ ಮನೋಧರ್ಮದವರೂ ಆಗಿದ್ದಾರೆ. ನಿಜವಾದ ಅರ್ಥದಲ್ಲಿ ಅವರು ಸ್ತ್ರೀವಾದಿಗಳು. ಆದರೂ ಧಾರ್ಮಿಕ ವಿಧಿವಿಧಾನಗಳಲ್ಲಿ, ಆಚರಣೆಯಲ್ಲಿ ಅವರನ್ನು ಅಲ್ಲಿನ ಪುರುಷ ಸಮಾಜ ತಮ್ಮ ಸರಿಸಮಾನರಂತೆ ಕಾಣುವುದಿಲ್ಲ.
ಕೇರಳದ ಕಾಸರಗೋಡು ಸೇರಿದಂತೆ ಅವಿಭಜಿತ ದಕ್ಷಿಣಕನ್ನಡವನ್ನು ತುಳುನಾಡೆಂದು ಕರೆಯಲಾಗುತ್ತದೆ. ಇಲ್ಲಿ ದೇವರಿಗಿಂತಲೂ ದೈವಗಳು ಹೆಚ್ಚು ಪ್ರಭಾವಶಾಲಿ. ದೈವಗಳೆಂದರೆ ಭೂತಗಳು. ಹಿಂದೆ ಇದೇ ನೆಲದಲ್ಲಿ ಬದುಕಿ ಬಾಳಿದ್ದ ವ್ಯಕ್ತಿಗಳು ಸಹವ್ಯಕ್ತಿಗಳ ಕುತಂತ್ರದಿಂದಾಗಿ ದುರಂತಮರಣಕ್ಕಿಡಾಗಿ ಕಾಲಾಂತರದಲ್ಲಿ ದೈವಗಳಾಗಿ ಜನ- ಜಾನುವಾರುಗಳನ್ನು ರಕ್ಷಿಸುವ ರಕ್ಷಕ ದೈವಗಳಾಗಿ ಪೂಜನೀಯರಾಗುತ್ತಾರೆ.
ಇಂತಹ ದೈವಗಳಿರುವ ಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ.ನಮಗೂ ಅಲ್ಲಿಗೆ ಪ್ರವೇಶ ಬೇಕು ಎಂದು ತುಳುನಾಡಿನ ಯಾವ ಮಹಿಳೆಯೂ ಧ್ವನಿಯೆತ್ತಿದ ಉದಾಹರಣೆ ನನಗೆ ಗೊತ್ತಿಲ್ಲ.
ಇಂದಿಗೂ ಧರ್ಮಸ್ಥಳದಲ್ಲಿರುವ ಅಣ್ಣಪ್ಪ ಪಂಜುರ್ಲಿಯ ಬೆಟ್ಟಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ. ತೀರ ಇತ್ತೀಚಿನವರೆಗೂ ಕುಕ್ಕೆಸುಬ್ರಹ್ಮಣ್ಯದಲ್ಲಿರುವ ಕುಮಾರಪರ್ವತವನ್ನು ಮಹಿಳೆಯರು ಏರುವಂತಿರಲಿಲ್ಲ. ಈಗ ಮಹಿಳೆಯರು ಅಲ್ಲಿಗೆ ಟ್ರೆಕ್ಕಿಂಗ್ ಬರುತ್ತಾರೆ.
ಇಂತಹ ತುಳುನಾಡಿನ ಹೆಣ್ಣುಮಗಳು ಜಯಮಾಲಾ, ಹರಿಹರರ ಸಂಯೋಗದಿಂದ ಜನಿಸಿದ ಸ್ತೀ ದ್ವೇಷಿಯಾದ ಅಯ್ಯಪ್ಪನ ಪಾದವನ್ನು ಟಚ್ ಮಾಡಲು ಯಾಕಾದರೂ ಹೋದರೋ! ಹಾಗೊಂದು ವೇಳೆ ಪ್ರಾರ್ಥಿಸಲೇಬೇಕೆಂದಿದ್ದರೆ ಕರಾವಳಿಗೇ ವಿಶಿಷ್ಟ ದೇವರಾದ ಅವನಪ್ಪ ಮಹಾಲಿಂಗೇಶ್ವರನಿರಲಿಲ್ಲವೇ? ಸರ್ವಶಕ್ತೆಯಾದ ಭಗವತಿಯಿರಲಿಲ್ಲವೇ?
ದೈವ ನಂಬಿಕೆ ಎನ್ನುವುದು ತೀರಾ ವೈಯಕ್ತಿಕವಾದುದು. ಅನ್ಯಥಾ ಶರಣಂ ನಾಸ್ತಿ’ ಎಂದು ಮೊರೆಯಿಟ್ಟದ್ದನ್ನು ಜಗಜ್ಜಾಹೀರುಗೊಳಿಸಬಾರದು.
ಕಳೆದ ವಾರ ನಮ್ಮ ರಿಯಾಲಿಟಿ ಶೋ ಒಂದರ ಶೂಟಿಂಗ್ ಗಾಗಿ ಉಳ್ಳಾಲ್ತಿ ಭೂತದ ಸ್ಥಾನಕ್ಕೆ ನಾನು ಹೋಗಿದ್ದೆ. ನಮ್ಮ ಕ್ಯಾಮರಮ್ಯಾನ್ ಗೆ ನಮಗೆ ಎಂತಹ ಶಾಟ್ಸ್ ಬೇಕೆಂದು ಸೂಚನೆ ಕೊಟ್ಟು ನಾನು ದೂರದಲ್ಲಿ ನಿಂತಿದ್ದೆ. ಆದರೂ ಉತ್ಸಾಹ, ಕುತೂಹಲ. ’ನಾನಲ್ಲಿಗೆ ಬರಬಹುದೇ’ ಎಂದು ಕೇಳಿದೆ. ’ನಮ್ಮ ಪೂಜಾರಿಯವರು ಮಹಿಳೆಯರೂ ಇಲ್ಲಿಗೆ ಬರಬಹುದು ಎಂದಿದ್ದಾರೆ’ ಎಂದರು.ನಾನು ದೈರ್ಯದಿಂದ ಮುಂದಡಿಯಿಟ್ಟೆ. ಆದರೆ ಶೂಟಿಂಗ್ ಮುಗಿಸಿ ಬರುತ್ತಿರುವಾಗ ಮಧ್ಯರಾತ್ರಿ, ಕಾಡಿನ ಮದ್ಯೆ ನಮ್ಮ ಕಾರು ಕೆಟ್ಟು ನಿಂತಿತು. ಹೇಗೋ ವಿಷಯ ತಿಳಿದ ಉಳ್ಳಾಲ್ತಿಯ ಪೂಜಾರಿ ಪೋನ್ ಮಾಡಿ ’ನಮ್ಮ ದೈವಕ್ಕೆ ನಿಮ್ಮಿಂದ ಎನೋ ಸೇವೆ ಆಗಬೇಕಾಗಿದೆ.ಒಂದು ಹರಕೆ ಹೇಳಿಕೊಳ್ಳಿ’ಎಂದರು. ಆದರೂ ಎರಡು ದಿನ ನಾವು ಅಲ್ಲಿಯೇ ಇರಬೇಕಾಯಿತು. ಅದೊಂದು ರೋಚಕ ಅನುಭವ .ಅದರ ಬಗ್ಗೆ ಇನ್ನೊಮ್ಮೆ ಬರೆಯುತ್ತೇನೆ.
ಅಹಂಕಾರಕ್ಕೆ ಉದಾಸೀನ ಮದ್ದಾಗಬೇಕು ಎಂಬುದು ಹಿಂದಿನಿಂದಲೂ ಬಂದ ನಾಣ್ಡುಡಿ. ನಾವು ಅವರಿಗೆ ಬೇಡವಾದರೆ ಅವರೂ ನಮಗೆ ಬೇಡ. ಅಷ್ಟೇ.ಅಯ್ಯಪ್ಪನ ವಿಷಯಕ್ಕೂ ಇದು ಅನ್ವಯಿಸುತ್ತದೆ.
Saturday, October 30, 2010
ಶ್ರೀ ರಾಮ ಸ್ತ್ರೀ ವಿರೋಧಿಯೇ..........?
UÀgÀÄqÀ ¥ÀÅgÁtzÀ°è M0zÀÄ ¸À¤ßªÉñÀzÀ G¯ÉèÃR«zÉ. ²ªÀ£À ªÀÄqÀ¢AiÀiÁzÀ ¥ÁªÀðw vÀ£Àß ªÀÄUÀÄ UÀt¥ÀwAiÀÄ£ÀÄß vÀzÉÃPÀavÀÛ¢0zÀ £ÉÆÃqÀÄwÛzÁݼÉ. CrUÀrUÉ ªÀÄÄzÀÄÝ ªÀiÁqÀÄwÛzÁݼÉ. ²ªÀ EzÀ£É߯Áè UÀªÀĤ¸ÀÄwÛzÁÝ£É. CªÀ£À°è FµÉåð ªÉƼÀPÉAiÉÆqÉAiÀÄÄvÀÛzÉ. ¨ÉÆÃ¼É ±À0PÀgÀ »0zÀÄ ªÀÄÄ0zÀÄ AiÉÆÃa¸ÀzÉà ªÀÄUÀ£À vÀ¯ÉAiÀÄ£ÀÄß M0zÉÃnUÉ PÀvÀÛj¹ ©qÀÄvÁÛ£É. UÀt¥ÀwAiÀÄ PÀvÀÛ£ÀÄß PÀvÀÛj¹zÀ E£ÉÆß0zÀÄ PÀxÉ J®èjUÀÆ UÉÆwÛgÀĪÀ0vÀºÀÄzÉÃ.
¥ÁªÀðw ¸ÁߣÀPÉÌ ºÉÆgÀmÁUÀ ¨ÁV°£À°è UÀt¥ÀwAiÀÄ£ÀÄß PÁªÀ°j¸ÀÄvÁÛ¼É. F UÀt¥Àw AiÀiÁgÉ0zÀgÉ, ¥ÁªÀðwAiÀÄ ªÉÄÊAiÀÄ PÉÆ¼É¬Ä0zÀ gÀÆ¥ÀÅUÉÆ0qÀªÀ£ÀÄ. CzÀPÉÌ ¥ÁªÀðw fêÀ vÀÄ0©gÀÄvÁÛ¼É. ¥ÁªÀðw F »0zÉ ¸ÁߣÀ ªÀiÁqÀĪÁUÀ AiÀiÁgÀ£ÀÄß PÁªÀ¯ÁV Ej¸ÀÄwÛzÀݼÀÄ? M0zÀÄ ªÀÄUÀÄ«£À ªÀÄÆwð ªÀiÁqÀĪÀµÀÄÖ PÉÆ¼É CªÀ¼À ªÉÄÊAiÀÄ°è ¸À0UÀæºÀªÁVvÉÛÃ....... J0§ÄzɯÁè E°è C¥Àæ¸ÀÄÛvÀ «ZÁgÀ.
CªÀÄä£À ªÀiÁ£À gÀPÀëuÉUÁV ¨ÁV°£À°è PÁªÀ®Ä ¤0vÀ UÀt¥Àw, CªÀÄä£À UÀ0qÀ ²ªÀ£À£Éßà ¨ÁV®°è vÀqÉzÀÄ ©lÖ. vÀ£Àß ¥ÀwßAiÀÄ£ÀÄß £ÉÆÃqÀ®Ä CrØ¥Àr¸À®Ä EªÀ£ÁågÀÄ..... J0zÀÄ ¹nÖ¤0zÀ ²ªÀ UÀt¥ÀwAiÀÄ vÀ¯ÉAiÀÄ£ÀÄß PÀrzÀÄ©lÖ. F JgÀqÀÄ ¸À0zÀ¨sÀðUÀ¼À°è PÁtĪÀÅzÀÄ ²ªÀ¤UÉ ¥ÀwßAiÉÄqÉUÉ EzÀÝ "¥ÉǸɹªï£É¸ï". CzÀÄ ºÀwÛPÀ̯ÁUÀzÀ jÃw. EzÀÄ ªÉÄÃ¯ÉÆßÃlPÉÌ PÀ0qÀÄ §gÀĪÀ «µÀAiÀÄ. F PÀxÉAiÀÄ°è ²ªÀ UÀt¥ÀwAiÀÄ vÀ¯ÉAiÀÄ£ÀÄß PÀvÀÛj¹ ©qÀÄvÁÛ£É. E°è UÀªÀĤ¸ÀvÀPÀÌ E£ÉÆß0zÀÄ «ZÁgÀ J0zÀgÉ, UÀt¥Àw ¥ÁªÀðwAiÀÄ ªÀÄUÀ, ²ªÀ£À ªÀÄUÀ£À®è!
²ªÀ£À£ÀÄß ¸Àä±Á£À ¨sÉÊgÁV J£ÀÄߪÀªÀjzÁÝgÉ. DzÀgÉ DvÀ wÃgÁ ªÁåªÉÆÃ» PÀÆqÀ. °0UÀ ªÀÄvÀÄÛ ¥Át¦ÃoÀzÀ PÀ®à£ÉAiÉÄà ¸ÁPÀÄ, CªÀ£À «µÀAiÀiÁPÁ0PÉëUÀ½UÉ. DvÀ CzsÀð£ÁjñÀégÀ. vÀ£Àß zÉúÀzÀ CzsÀð ¨sÁUÀzÀ°è ¥ÀwßUÉ £É¯ÉAiÀÄÆgÀ®Ä ©lÖªÀ£ÀÄ. ¥ÀæPÀÈw ªÀÄvÀÄÛ ¥ÀÅgÀĵÀ ¸À0UÀªÀÄzÀ CvÀÄå£ÀßvÀ, PÀ¯ÁvÀäPÀvÉAiÀÄ PÀ®à£ÉAiÉÄà CzsÀð £ÁjñÀégÀzÀ ¸ÀȶÖ.
DzÀgÉ, £ÀªÀÄä §ºÀÄvÉÃPÀ ªÀÄ»¼ÉAiÀÄgÀÄ ²æÃgÁªÀÄ£À0vÀºÀ UÀ0qÀ vÀªÀÄUÉ ¥ÀwAiÀiÁV zÉÆgÀPÀ° J0zÀÄ ºÀ0§°¸ÀÄvÁÛgÉ. EªÀjUÉ ¹ÛçÃAiÀÄ£ÀÄß ¸ÀªÀiÁ£À UËgÀªÀ¢0zÀ PÀ0qÀ ²ªÀ£ÉÃPÉ EµÀÖªÁUÀ°®è? AiÀiÁªÀÅzÉÆÃ ¸ÀzÀÄzÉÝñÀ¢0zÀ UÀ0UÉAiÀÄ£ÀÄß ²gÀzÀ ªÉÄÃ¯É zsÀj¹zÀÝ£ÀÄß ©lÖgÉ ²ªÀ ¥Àwß ¤µÀ×£ÁVAiÉÄà G½zÀÄPÉÆ0qÀªÀ£ÀÄ. §ºÀıÀB ²ªÀ ªÀÄvÀÄÛ gÁªÀÄgÀ°è £ÀªÀÄä ªÀÄ»¼ÉAiÀÄgÀÄ ºÀ½îAiÀÄ ºÀÄqÀÄUÀ ªÀÄvÀÄÛ ¥ÉÃmÉ ºÀÄqÀÄUÀ£À°è EgÀĪÀ C0vÀgÀªÀ£ÀÄß PÀ0rgÀ¨ÉÃPÀÄ. E°, ºÁªÀÅ, ºÀİ, £À0¢, £À«®Ä, D£ÉUÀ¼À ¥ÀjªÁgÀzÉÆqÀ£É ¸Àä±Á£ÀzÀ°è ªÁ¹¸ÀĪÀ ²ªÀ F ªÀÄtÂÚUÉ ºÀwÛgÀzÀªÀ£ÀÄ. C0vÀºÀªÀ£À£ÀÄß EµÀÖ¥ÀlÖgÉ, ªÉÊPÀÄ0oÀzÀ ªÉʨsÉÆÃUÀªÉ°è §gÀ¨ÉÃPÀÄ?
²æÃgÁªÀÄ£À0vÀºÀ UÀ0qÀ, vÀ£ÀUÉ ¥ÀwAiÀiÁV zÉÆgÀPÀ° J0zÀÄ ºÀ0§°¸À®Ä PÁgÀtUÀ¼ÉägÀ§ºÀÄzÀÄ? ¹Ûçà ¸ÀªÀÄÄzÁAiÀÄPÉÌ M½vÀ£ÀÄß ªÀiÁqÀĪÀ AiÀiÁªÀ WÀ£À PÁAiÀÄðªÀ£ÀÄß £ÀªÀÄä ²æÃgÁªÀÄZÀ0zÀæ ªÀiÁrzÁÝ£É? ²æÃgÁªÀÄZÀ0zÀæ£À ºÉ¸Àj£ÉÆqÀ£É ¸ÉÃjPÉÆ0rgÀĪÀ UÀÄt «±ÉõÀtUÀ¼ÀÄ ¥ÀæªÀÄÄRªÁV ªÀÄÆgÀÄ. DvÀ ¦vÀÈ ªÁPÀå ¥Àj¥Á®PÀ, ªÀÄAiÀiÁðzÁ ¥ÀÅgÀĵɯÃvÀÛªÀÄ, KPÀ ¥Àwß ªÀævÀ¸ÀÜ. ¦vÀÈ ªÁPÀå ¥Àj¥Á®PÀ£ÁV DvÀ gÁdåªÀ£ÀÄß vÉÆgÉzÀÄ, ªÀ£ÀªÁ¸ÀPÉÌ vÉgÀ½zÀÄÝ DvÀ£À PÀÄlÄ0§zÀ D0vÀjPÀ «µÀAiÀÄ. ªÀÄAiÀiÁðzÁ ¥ÀÅgÀĵɯÃvÀÛªÀÄ£ÁV DvÀ£À ªÀvÀð£É K¤zÀÝgÀÆ CzÀÄ gÁdPÁAiÀÄðPÉÌ ¸À0§0¢ü¹zÀÄÝ. E£ÀÄß KPÀ ¥Àwß EzÉAiÀÄ®è, CzÀÄ M0zÀÄ ºÉtÂÚ£À eÉÆvÉV£À ¸À0§0zsÀPÉÌ ¸À0§0¢ü¹zÁÝzÀÝj0zÀ CzÀgÀ §UÉÎ £À£ÀUÉ PÀÄvÀƺÀ®«zÉ.
gÁªÀĤUÉ ¸Àé0vÀ ªÀåQÛvÀé J0§Ä¢®è. DvÀ AiÀiÁgÀ PÉÊAiÀÄ®Æè ¨ÉÃPÁzÀgÀÆ zÁ¼ÀªÁUÀ§ºÀÄzÁzÀ ¤ªÉÆðû ªÀåQÛ. ¥ÀǪÁð¥ÀgÀ «ZÁgÀ ªÀiÁqÀzÉà DvÀ E£ÁågÉÆÃ ºÉýzÀ DzÉñÀUÀ¼À£ÀÄß eÁj ªÀiÁqÀÄwÛzÀÝ. DvÀ §zÀÄQ£ÀÄzÀÝPÀÆÌ ¨ÉÃgÉAiÀĪÀgÀ ¤zÉðñÀ£ÀzÀ0vÉ §zÀÄQzÀ. DvÀ¤UÉ £ÉÃgÀªÁV ¢lÖvÀ£À¢0zÀ §zÀÄPÀ£ÀÄß JzÀÄj¸ÀĪÀÅzÀÄ UÉÆwÛgÀ°®è. AiÀiÁgÉÆÃ ºÉýzÀgÉ0zÀÄ gÁdå vÉÆgÉzÀÄ PÁrUÉ ºÉÆÃzÀ.
F ªÉÆzÀ¯Éà «±Áé«ÄvÀæ ºÉýzÀ£É0zÀÄ RgÀ zsÀƵÀtgÀ£ÀÄß PÉÆ0¢zÀÝ. ªÀ£ÀªÁ¸ÀzÀ ¸ÀªÀÄAiÀÄzÀ°è ¸ÀÄVæÃªÀ ºÉýzÀ£É0zÀÄ ªÁ°AiÀÄ£ÀÄß ªÀÄgÉAiÀÄ°è ¤0vÀÄ PÉÆ0zÀ. ¸ÁªÀiÁ£Àå CUÀ¸À£ÉƧâ£À ªÀiÁvÀÄ PÉý ¹ÃvÉAiÀÄ£ÀÄß PÁrUÉ CnÖzÀ. AiÀiÁgÉÆÃ ¥ÀÅgÉÆÃ»vÀgÀ ¥Àæ¯ÉÆÃ¨sÀ£É¬Ä0zÀ ±ÀÆzÀæ vÀ¥À¹é ±À0¨sÀÄPÀ£À PÉÆ¯É ªÀiÁrzÀ. §ºÀıÀB ¸Àé0vÀ ¤zsÁðgÀ vÉUÉzÀÄPÉÆ0qÀÄ ªÀiÁrzÀ KPÉÊPÀ PÉ®¸À J0zÀgÉ ¹ÃvÉAiÀÄ£ÀÄß CVß ¥ÀjÃPÉëUÉ M¼À¥Àr¹zÀÄÝ ªÀiÁvÀæ.
²æÃgÁªÀÄZÀ0zÀæ ¹Ûçà «gÉÆÃ¢üAiÀiÁV¢ÝgÀ§ºÀÄzÉÃ? ºËzÀÄ J£ÀÄߪÀÅzÀPÉÌ gÁªÀiÁAiÀÄtzÀ°è, ºÀ®ªÁgÀÄ ¤zÀ±Àð£ÀUÀ¼ÀÄ zÉÆgÀPÀÄvÀÛªÉ.
DvÀ¤UÉ ¹ÛçÃAiÀÄgÀ §UÉÎ UËgÀªÀ EgÀ°®è. CªÀgÀ£ÀÄß £ÉÃgÀªÁV JzÀÄj¸ÀĪÀÅzÀÄ CªÀ¤0zÀ ¸ÁzsÀåªÁUÀÄwÛgÀ°®. CzÀgÀ ªÉÆzÀ® ¸ÀĽªÀÅ ¹UÀĪÀÅzÀÄ ªÀ£ÀªÁ¸ÀPÉÌ ºÉÆgÀlÄ ¤0vÀ ¸À0zÀ¨sÀðzÀ°è. P˸À®å¼À PÀtÂÚÃjUÉ C°è ¨É¯É EgÀ°®è. ¥À±ÁÑvÁÛ¥À¢0zÀ vÀ¤ß0zÀ DzÀ CZÁvÀÄAiÀÄðªÀ£ÀÄß ªÀÄvÉÛ ¸Àj¥Àr¸À¯É0zÀÄ §0zÀ PÉÊPÉìÄAiÀÄ ¨ÉÃrPÉUÉ C°è ªÀÄ£ÀßuÉ EgÀ°®è. J®èQÌ0vÀ «ÄV¯ÁV CªÀ¤0zÀ H«Äð¼ÉUÉ WÉÆÃgÀ C£ÁåAiÀĪÁ¬ÄvÀÄ. Erà gÁªÀiÁAiÀÄtzÀ°è ¥ÀÅgÀĵÀ ¥ÁvÀæUÀ¼É®è fêÀ «gÉÆÃ¢ü ¤®ÄªÀ£Éßà vÀ¼É¢zÀÝgÉ ¹Ûçà ¥ÁvÀæUÀ¼ÀzÀÄÝ ªÀiË£À gÉÆÃzÀ£À.
gÁªÀÄ PÁrUÉ ºÉÆgÀlÄ ¤0vÁUÀ ¹ÃvÉ »0¨Á°¹zÀ¼ÀÄ. ®PÀë÷ät eÉÆvÉAiÀÄ°è §0zÀ. gÁªÀÄ MvÁ۬ĹzÀÝgÉ ®PÀë÷ät gÁªÀÄ £Ár£À¯Éèà G½AiÀÄÄwÛzÀÝ. PÉÆ£ÉAiÀÄ ¥ÀPÀë H«Äð¼ÉAiÀÄ£ÁßzÀgÀÆ eÉÆvÉAiÀİè PÀgÉzÀÄPÉÆ0qÀÄ ¨Á J0¢zÀÝgÉ ®PÀë÷ät CtÚ£À DeÉÕAiÀÄ£ÀÄß ²gÀ¸Á ªÀ»¸ÀÄwÛzÀÝ. ²æÃgÁªÀĤUÉ ¹ÛçÃAiÀÄgÀ C0vÀgÀ0UÀzÀ CjªÀÅ EgÀ°®è. CªÀvÁgÀ ¥ÀÅgÀĵÀ£ÁzÀ ²æÃgÁªÀÄ ¹Ûçà «gÉÆÃ¢üAiÀiÁVzÀÝ. ºÁUÁVAiÉÄà ªÀÄÄ0¢£À ²æÃPÀȵÀÚ CªÀvÁgÀzÀ°è DvÀ ¹ÛçÃ¯ÉÆÃ®£ÁzÀ.
DvÀ£À ¹Ûçà «gÉÆÃ¢ü zsÉÆÃgÀuÉ £ÀªÀÄUÉ ¸ÀàµÀÖªÁV UÉÆvÁÛUÀĪÀÅzÀÄ ªÁ° ªÀzsÉAiÀÄ ¸À0zÀ¨sÀðzÀ°è. vÀªÀÄä ¸ÀÄVæÃªÀ£À ªÀÄqÀ¢AiÀiÁzÀ vÁgÉAiÀÄ£ÀÄß CtÚ ªÁ° PÀgÉvÀ0zÀÄ vÀ£Àß ªÀÄ£ÉAiÀİè ElÄÖPÉÆ0qÀ. F zÀÆgÀ£ÀÄß ²æÃgÁªÀÄ£À°è ¸ÀÄVæÃªÀ vÀ0zÁUÀ gÁªÀÄ »0zÀÄ ªÀÄÄ0zÀÄ AiÉÆÃa¸ÀĪÀÅ¢®è. PÀ¤µÀ× «ZÁgÀuÉAiÀÄ£ÀÆß £ÀqɸÀzÉà ªÁ°AiÀÄ£ÀÄß ªÀÄgÉAiÀÄ°è ¤0vÀÄ PÉÆ0zÉà ©lÖ. ºÁUÉ ªÀiÁqÀĪÀÅzÀgÀ ªÀÄÆ®PÀ ¹Ûçà C¹ÛvÀéªÀ£Éßà ¤gÁPÀj¹ ©qÀÄvÁÛ£É. EzÀgÀ eÉÆvÉUÉ £ÁåAiÀÄ ¤ÃrPÉAiÀÄ£ÀÄß KPÀ¥ÀQëÃAiÀÄUÉÆ½¸ÀÄvÁÛ£É. M0zÀÄ ªÉÃ¼É vÁgÉ EµÀÖ ¥ÀmÉÖà ªÁ°AiÀÄ eÉÆvÉ ºÉÆgÀlÄ ºÉÆÃVzÀÝgÉÃ...........?
²æÃgÁªÀÄ ¹ÛçÃAiÀÄgÀ ªÉÄÃ¯É J¸ÀVzÀ PËæAiÀÄðzÀ ¥ÀgÀªÀiÁªÀ¢ü J0zÀgÉ ±ÀÆ¥Àð£ÀTAiÀÄ Q«, ªÀÄÆUÀÄ ªÀÄvÀÄÛ ªÉƯÉUÀ¼À£ÀÄß PÀvÀÛj¹zÀÄÝ. ¹ÛçÃvÀézÀ ¥ÀæwÃPÀªÁzÀ ªÉƯÉUÀ¼ÀÄ, ¸Ë0zÀAiÀÄðzÀ ¥ÀæwÃPÀªÁzÀ ªÀÄÆUÀ£ÀÄß PÀvÀÛj¹ «gÀÆ¥ÀUÉÆ½¸À®Ä M§â ¸Áår¸ïÖUÉ ªÀiÁvÀæ ¸ÁzsÀå. CªÀ¼ÀÄ ªÀiÁrzÀÝ vÀ¥ÁàzÀgÀÆ K£ÀÄ?
±ÁåªÀĸÀÄ0zÀgÀ£ÁzÀ ²æÃgÁªÀÄ£À ¸Ë0zÀAiÀÄðPÉÌ ªÀÄ£À¸ÉÆÃvÀÄ, "£Á£ÀÄ ¤£ÀߣÀÄß ¦æÃw¸ÀÄvÉÛãÉ, £À£ÀߣÀÄß ªÀÄzÀĪÉAiÀiÁUÀÄ" C0zÀzÀÄÝ. M°zÀÄ §0zÀ ¥ÉæÃªÀÄ® ªÀÄ£À¹ì£ÀªÀ¼À£ÀÄß C0UÀZÉÒÃzsÀ£À ªÀiÁr «gÀÆ¥ÀUÉÆ½¹zÀÄÝ ªÀÄAiÀiÁðzÁ ¥ÀÅgÀĵɯÃvÀÛªÀÄ£À WÀ£ÀvÉUÉ vÀPÀÄÌzÁzÀzÉÝÃ?
¤gÁPÀgÀuÉAiÀÄ£ÀÄß ¸ÀÆa¸À®Ä ¨ÉÃgÉ zÁjUÀ¼Éà EgÀ°®èªÉÃ?
¹Ûçà C¹ÛvÀézÀ ¤gÁPÀgÀuÉAiÉÄà ²æÃgÁªÀÄ£À ¸ÁÜ¬Ä ¨sÁªÀ. CªÀ£À ªÀåQÛvÀézÀ M¼ÀUÉ, ¥ÉǼÀÄîvÀ£À«vÀÄÛ. ºÁUÁVAiÉÄà D PÁ® WÀlÖzÀ ¥ÀÅgÀĵÀ ¥ÀæzsÁ£À ¸ÀªÀiÁd ²æÃgÁªÀÄ£À£ÀÄß vÀ£Àß zÁ¼ÀªÀ£ÁßV §¼À¹PÉÆ0rvÀÄÛ. D ªÀiË®åUÀ¼À£ÀÄß PÁ¥ÁrPÉÆ0qÀÄ §0zÀzÀݵÉÖà CªÀ£À ªÉÄïÉä.
M¼ÀUÉÆ¼ÀUÉ SÁ°AiÀiÁVzÀÝ ²æÃ gÁªÀÄ ºÉÆgÀUÉ J®è z˧ð®åUÀ¼À£ÀÄß «ÄÃjzÀ ªÀåQÛAiÀÄ0vÉ PÁt¹PÉÆ¼ÀÄîwÛzÀÝ.
¹ÛçÃAiÀÄgÀ zÀȶ֬Ä0zÀ £ÉÆÃrzÀgÉ gÁªÀĤV0vÀ gÁªÀt£Éà JµÉÆÖà ªÁ¹. DvÀ ¹ÃvÉAiÀÄ£ÀÄß PÀzÉÆÝAiÀÄÄÝ C±ÉÆÃPÀ ªÀ£ÀzÀ°è ElÖgÀÆ CªÀ¼À£ÀÄß UËgÀªÀ¢0zÀ £ÀqɹPÉÆrzÀÝ. CªÀ¼À£ÀÄß M°¹PÉÆ¼Àî®Ä ¥ÀæAiÀÄw߸ÀÄwÛzÀÝ. C0zÀgÉ CªÀ½UÉÆ0zÀÄ C©ü¥ÁæAiÀÄ«zÉ, ªÀÄ£À¹ìzÉ J0§ÄzÀÄ CªÀ¤UÉ UÉÆwÛvÀÄÛ.
DzÀgÉ ²æÃgÁªÀÄ ªÀiÁrzÉÝãÀÄ?
¸À0±ÀAiÀÄ¢0zÀ CªÀ¼À£ÀÄß CVߥÀjÃPÉëUÉ FqÀÄ ªÀiÁrzÀÝ. PÉÆ£ÉUÉ vÀÄ0§Ä UÀ©üðtÂAiÀÄ£ÀÄß ¤zÀðAiÉĬÄ0zÀ PÁrUÉ CnÖzÀ. PÉÆ£ÉUÉ ®ªÀ - PÀıÀgÀÄ vÀ£Àß ªÀÄPÀ̼É0zÀÄ UÉÆvÁÛzÁUÀ ¹ÃvÉAiÀÄ£ÀÄß CAiÉÆÃzsÉåUÉ PÀgÉvÀgÀ®Ä ªÀÄ£À¸ÀÄì ªÀiÁrzÀÝ. DzÀgÉ ¹ÃvÉ M¦àPÉÆ0qÀ¼ÉÃ? E®è. DPÉ ¨sÀÆ«Ä ©jzÀÄ M¼ÀUÀqÉ ¸ÉÃj ºÉÆÃzÀ¼ÀÄ J0zÀÄ gÁªÀiÁAiÀÄt ºÉüÀÄvÀÛzÉ.
DzÀgÉ DPÉ vÀ£ÀUÁzÀ CªÀªÀiÁ£À¢0zÀ £ÉÆ0zÀÄ ¨Á«UÉÆÃ, PÀgÉUÉÆÃ ©zÀÄÝ DvÀäºÀvÉå ªÀiÁrPÉÆ0qÀ¼É0§ÄzÀÄ ºÉZÀÄÑ ¸Àj. ಅಕೆ ಅಮ್ಮ ಭೂದೇವಿಯ ಒಡಲಲ್ಲಿ ಸೇರಿಹೋದ ಜಾಗ ಸೀತಾಮಡಿಯನ್ನು ನಾನು ನೋಡಿದ್ದೇನೆ. ಅಲ್ಲೀಗ ಆಕೆಗೆ ದೇವಸ್ಥಾನವನ್ನು ಕಟ್ಟಲಾಗಿದೆ. ಜನವಸತಿ ಕಮ್ಮಿಯಿರುವ ಉತ್ತರಪ್ರದೇಶದ ಆ ಜಾಗವನ್ನು ಪರಿಶೀಲಿಸಿದರೆ ಅದು ಹಿಂದೆ ಆಳವಾದೆ ಕೆರೆಯಾಗಿರಬೇಕೆಂದು ಭಾಸವಾಗುತ್ತದೆ. ²æÃgÁªÀÄ ¹Ûçà ¥ÀgÀ ¤®ÄªÀ£ÀÄß ¸ÀªÀiÁ¢ü ªÀiÁrzÀÝ£ÀÄß EzÀÄ ¸À0PÉÃw¸ÀÄvÀÛzÉ.
gÁªÀiÁAiÀÄtzÀ°è AiÀiÁªÀ ¹Ûçà ¥ÁvÀæªÀÇ gɧ¯ï DUÀĪÀÅzÉà E®è. ¸Àé®à ªÀÄnÖUÉ gɧ¯ï DzÀªÀ¼É0zÀgÉ, ±ÀÆ¥Àð£ÀT. vÀ£ÀUÁzÀ CªÀªÀiÁ£ÀªÀ£ÀÄß CtÚ gÁªÀt£À°è ºÉý CªÀ£À£ÀÄß gÉÆaÑUÉ©â¸ÀÄvÁÛ¼É. G½zÀªÀgɯÁè M¼ÀV0zÉÆ¼ÀUÉ £ÀgÀ½zÀªÀgÉÃ. PÉÊPÉÃ¬Ä ªÀÄvÀÄÛ ªÀÄ0xÀgÉ M0zÀÄ «ÄwAiÉÆ¼ÀUÉ vÀªÀÄä C¹ÛvÀéªÀ£ÀÄß vÉÆÃj¸À®Ä ¥ÀæAiÀÄvÀß ¥ÀnÖzÁÝgÉ. ¹ÃvÉ §0zÀ PÀµÀÖªÀ£Éß®è ºÀ®Äè PÀaÑ ¸À»¸ÀÄvÁÛ¼É. vÀÄn ©ZÀÄѪÀÅ¢®è.
a£ÀßzÀ f0PÉ ¨ÉÃPÉ0zÀÄ ºÀoÀ »r¢zÀÝ£ÀÄß ©lÖgÉ CªÀ¼À ªÀÄ£À¸ÀÄì J®Æè ©aÑPÉÆ¼ÀÄîªÀÅ¢®è. UÀ0qÀ£À£ÀÄß CZÀ®ªÁV £À0©zÀ¼ÀÄ. ¨sÁgÀwÃAiÀÄ ¹ÛçÃAiÀÄ PÀvÀðªÀåzÀ0vÉ ªÀÄPÀ̼À£ÀÄß ºÉvÀÄÛ ¸ÁQ ¸À®» UÀ0qÀ£À PÉÊUÉ M¦à¹ ¸Àw zsÀªÀÄðªÀ£ÀÄß ¥Á°¸ÀÄvÁÛ¼É.
DzÀgÉ ²ªÀ£À ºÉ0qÀw ¥ÁªÀðw ºÁUÀ®è. DPÉ ±ÀQÛ ¸ÀégÀƦtÂ. ¹ÛçÃAiÀÄ PÀvÀðÈvÀé ±ÀQÛAiÀÄ°è £À0©PÉ ElÖ¼ÀÄ. M0zÀÄ jÃwAiÀİè EªÀgÀzÀÄ DzÀ±ÀðzÀ zÁ0¥ÀvÀå. C£ÀÄgÀÆ¥À eÉÆÃr. zÀPÀë gÁd£À ªÀÄUÀ¼ÁzÀ zÁPÁë¬Ät vÀªÀgÀÄ ªÀÄ£ÉAiÀİè CªÀªÀiÁ£ÀªÁ¬ÄvÉ0zÀÄ C°èAiÉÄà EzÀÝ AiÀÄdÕ PÀÄ0qÀPÉÌ ºÁj DvÀäºÀvÉå ªÀiÁrPÉÆ0qÀ¼ÀÄ. ²ªÀ M0nAiÀiÁzÀ. WÉÆÃgÀ vÀ¥À¹ìUÉ PÀĽvÀ. zÁPÁë¬Ät ¥ÀªÀðvÀ gÁd¤UÉ ªÀÄUÀ¼ÁV ºÀÄnÖ ¥ÁªÀðwAiÀiÁzÀ¼ÀÄ. vÁ£ÀÆ vÀ¥À¸Àì£ÁßZÀj¸ÀÄvÀÛ ²ªÀ£À£ÀÄß M°¹PÉÆ0qÀÄ ªÀÄgÀÄ ªÀÄzÀĪÉAiÀiÁzÀ¼ÀÄ.
EzÀÄ M0zÀÄ jÃwAiÀÄ d£Áä0vÀgÀzÀ ¸À0§0zsÀ. DzÀ PÁgÀtªÉà ºÀoÀ »rzÀÄ ¥ÁªÀðw UÀt¥ÀwAiÀÄ£ÀÄß ªÀÄvÉÛ §zÀÄQ¹PÉÆ0qÀ¼ÀÄ. ¥ÁªÀðw ²ªÀ¤UÉ M°zÀÄ §0zÀªÀ¼ÀÄ. ¹ÃvÉAiÀÄ£ÀÄß gÁªÀÄ ¥ÀtzÀ°è UÉzÀÄÝ vÀ0zÀªÀ£ÀÄ. M°zÀÄ §gÀĪÀÅzÀPÀÆÌ UÉzÀÄÝ vÀgÀĪÀÅzÀPÀÆÌ ªÀåvÁå¸À EzÉAiÀÄ®èªÉÃ? ºÁVzÀÝgÀÆ £ÀªÀÄä ªÀÄ»¼ÉAiÀÄjUÉ ²ªÀ£ÉÃPÉ EµÀÖªÁUÀĪÀÅ¢®è? EzÀPÉÌ GvÀÛgÀªÀ£ÀÄß PÉÆqÀĪÀÅzÀÄ CµÀÄÖ ¸ÀÄ®¨sÀªÀ®è.
¸Á»vÀåPÉÌ £ÉÆ¨É¯ï ¥Àæ±À¹Û ¥ÀqÉzÀ ¹ÃªÀÄ£ï zÀ ¨ÉÆÃªÁ vÀªÀÄä "¸ÉPÉ0qï ¸ÉPïì" ¥ÀŸÀÛPÀzÀ°è »ÃUÉ ºÉüÀÄvÁÛgÉ:
"¸ÀªÀĸÀÛ ªÀÄ£ÀÄPÀÄ®ªÉà UÀ0qÁV ©nÖzÉ, DvÀ ºÉtÚ£ÀÄß ºÉtÂÚ£À ¸ÁéAiÀÄvÀÛvÉAiÀÄ°è «ªÀj¸ÀzÉà vÀ£ÀUÉ ¸À0§0¢ü¹zÀ0vÉ, vÀ£Àß zÀȶÖPÉÆÃ£ÀPÉÌ C£ÀÄUÀÄtªÁV ªÁåSÁ夸ÀÄvÁÛ£É. ºÉtÄÚ ¸ÀévÀ0vÀæ ªÀåQÛAiÀÄ®è. DPÉAiÀÄ C¹ÛvÀé UÀ0qÀ¹£À C¥ÀàuÉAiÀİèzÉ."
C0zÀgÉ E°è ºÉtÄÚ PÀÆqÀ ¥ÀÅgÀĵÀ ¥ÀgÀªÁVAiÉÄà AiÉÆÃa¸ÀÄvÁÛ¼É. CªÀ½UÉ UÉÆwÛ®èzÀ0vÉ. ¥ÀÅgÀĵÀ ¥ÀæzsÁ£À ªÀiË®åUÀ¼À£Éßà DPÉ ¥ÉÇö¸ÀÄvÁÛ¼É. ºÁUÁV CªÀ½UÉ ²ªÀ¤V0vÀ gÁªÀÄ£Éà ªÀÄÄRå£ÁUÀÄvÁÛ£É.
[ಹಿಂದೆಂದೋ ಬರೆದ ಲೇಖನವನ್ನು ಮಂಗಳೂರಿನ ನಿಯತಕಾಲಿಕವೊಂದು ಮರುಮುದ್ರಣಕ್ಕಾಗಿ ಕೇಳಿದೆ. ಅಲ್ಲಿಗೆ ಕಳಿಸುವಾಗ ಬ್ಲಾಗಿಗೂ ಪೋಸ್ಟ್ ಮಾಡಿದೆ.ಸ್ವಲ್ಪ ಬಿಝಿ ಕಣ್ರಿ ನಾನು. ಕ್ಷಮೆಯಿರಲಿ]
Sunday, October 17, 2010
ಎದೆಯು ನರಳಿ ಮೊರೆಯುತಿದೆ
ಇಂದು ಕೊನೆಯ ಎರಡು ಮಕ್ಕಳನ್ನು ಕೊಟ್ಟುಬಿಟ್ಟೆ. ಯೋಗ್ಯ ಮನೆಗಳನ್ನು ಮಕ್ಕಳು ಸೇರಿದರೆಂಬ ಸಮಾಧಾನ ಇದೆಯಾದರೂ ಅದಕ್ಕೂ ಮೀರಿದ ಬಿಕ್ಕಳಿಕೆಯಿಂದಾಗಿ ಇದನ್ನು ಕೀ ಮಾಡಲು ಸಾಧ್ಯವಾಗದೆ ಕಣ್ಣೀರು ಹರಿಯುತ್ತಿದೆ. ದುಪ್ಪಟ ಒದ್ದೆಯಾಗುತ್ತದೆ. ಮೂಗು ಉರಿಯುತ್ತಿದೆ. ಈ ಮೂರೂವರೆ ತಿಂಗಳಲ್ಲಿ ಅವು ನನಗೆ ಕೊಟ್ಟ ಭಾವನಾತ್ಮಕ ಆಸರೆಯನ್ನು ಇದುವರೆಗೆ ಯಾರೂ ಕೊಟ್ಟ ನೆನಪು ನನಗಿಲ್ಲ. ನನ್ನ ಮೂರುವರೆ ತಿಂಗಳ ಪ್ರತಿಕ್ಷಣವೂ ಅವುಗಳಿಗಾಗಿಯೇ ಮೀಸಲಾಗಿತ್ತು. ಅವುಗಳಿಗೂ ನಾನೇ ಸರ್ವಸ್ವವಾಗಿದ್ದೆ.
ಬೆಳಿಗ್ಗೆ ನಾನು ಏಳುವುದನ್ನೇ ಅವು ಕಾಯುತ್ತಾ ಕುಳಿತ್ತಿರುತ್ತಿದ್ದವು. ನಿಗದಿತ ಸಮಯವಾದರೂ ನಾನು ಏಳದೆ ಇದ್ದಾಗ ಅವು ಕುಂಯಿಗುಡುತ್ತಾ ತಮ್ಮ ಪುಟ್ಟ ಪುಟ್ಟ ಕಾಲುಗಳಿಂದ ಮೃದುವಾಗಿ ಪರಚುತ್ತಿದ್ದವು. ಎದ್ದ ಮೇಲೆ ಅವು ಸದಾ ನನ್ನ ಹಿಂಬಾಲಕರು. ಯಾಕೆಂದರೆ ಅವು ಪಗ್ ಜಾತಿಗೆ ಸೇರಿದವು. ಹಚ್ ಪೋನ್, ನಂತರ ವೋಡಪೋನ್ ಎಂದು ಹೆಸರು ಬದಲಾಯಿಸಿಕೊಂಡ ಪೋನಿನ ಬ್ರಾಡ್ ಅಂಬಾಸಿಡರ್ ಇವು!.ರಾತ್ರಿ ಕುತ್ತಿಗೆಯನ್ನು ಪರಚಿ, ಕಿವಿಯನ್ನು ಕಚ್ಚಿ ಕಚಗುಳಿಯಿಟ್ಟು ಅಲ್ಲಿಯೇ ತಲೆಯಿಟ್ಟು ಮಲಗಿಬಿಡುತ್ತಿದ್ದವು
ಮೂರುವರೆ ತಿಂಗಳ ಕಾಲ ಅಕ್ಷರಶಃ ದ್ವೀಪವಾಸಿಯಾಂತಾಗಿಸಿ, ನನ್ನೆಲ್ಲಾ ಹವ್ಯಾಸ, ಚಟುವಟಿಗಳನ್ನು ನಿಯಂತ್ರಿಸಿ, ನನ್ನ ನಿದ್ದೆಯನ್ನು ಅಪಹರಿಸಿ, ಮೈ ಮನಗಳನ್ನು ಬಳಲಿಸಿದರೂ ಅವು ಪ್ರೀತಿಯ ಮುದ್ದೆಯಂತಿದ್ದವು.
ಈಗ ಅವು ನನ್ನ ಮಡಿಲಲ್ಲಿ ಇಲ್ಲ.
ಅವುಗಳ ಅಮ್ಮ ಊಟ ಮಾಡದೆ ಮುದುಡಿ ಮಲಗಿದೆ. ನನ್ನ ಗಂಟಲಲ್ಲಿಯೂ ಅನ್ನ ಇಳಿಯುತ್ತಿಲ್ಲ. ಉರಿಯುತ್ತಿರುವ ಕಣ್ಣಿಗೆ ಒಂಚೂರು ವಿಶ್ರಾಂತಿ ಬೇಕಾಗಿದೆ. ಈಗ ನಾನೂ ಮಲಗಿ, ಮುಂದೊಂದು ದಿನ ಆ ಪುಟ್ಟ ಕಂದಮ್ಮಗಳ ವಿವರವಾಗಿ ಬರೆಯುತ್ತೇನೆ.
Wednesday, September 29, 2010
’ರಿಯಾಲಿಟಿ ಶೋ’ಗಳ ವೈನೋದಿಕ ಹಿಂಸೆ

ಇಪ್ಪತ್ತು ವರ್ಷಗಳ ಹಿಂದಿನ ಸಮಾಚಾರ; ’ಮನ್ವಂತರ’ ಎಂಬ ರಾಜಕೀಯ ವಾರಪತ್ರಿಕೆಯ ಮುಖಾಂತರ ನಾನು ಪತ್ರಿಕಾರಂಗಕ್ಕೆ ಅಡಿಯಿಟ್ಟೆ. ಆ ಪತ್ರಿಕೆಯ ಸಹ ಪ್ರಕಟಣಾ ಮಾಸಪತ್ರಿಕೆಯೊಂದಿತ್ತು. ಅದರ ಹೆಸರು ’ಸುರತಿ’. ಮಾರುಕಟ್ಟೆಯಲ್ಲಿ ಅದಕ್ಕೆ ಪೈಪೋಟಿ ನೀಡುತ್ತಿರುವ ಇನ್ನೊಂದು ಮಾಸಪತ್ರಿಕೆಯಿತ್ತು. ಅದರ ಹೆಸರು ’ರತಿವಿಜ್ನಾನ’. ಸರ್ಕ್ಯೂಲೇಶನಿನಲ್ಲೂ ಪರಸ್ಪರ ಪೈಪೋಟಿ ನೀಡುತ್ತಿದ್ದ ಆ ಪತ್ರಿಕೆಗಳ ಒಟ್ಟು ಪ್ರಸರಣ ಸಂಖ್ಯೆ ಐದು ಲಕ್ಷ ದಾಟಿ ಹೋಗುತ್ತಿತ್ತು.
ಪ್ರಸರಣದ ದೃಷ್ಟಿಯಿಂದ ನೋಡಿದರೆ ಅವೆರಡು ಪತ್ರಿಕೆಗಳು ಜನಪ್ರಿಯವಾದ ಮಾಸಪತ್ರಿಕೆಗಳು. ಆದರೆ ಅವು ಮನುಷ್ಯನ ಬೇಸಿಕ್ ಇನ್ಸ್ಟಿಂಗ್ಟ್ ಆದ ಲೈಂಗಿಕ ಕುತೂಹಲವನ್ನು, ತಣಿಸುವ, ಕೆರಳಿಸುವ ಪುಸ್ತಕಗಳು ಅಷ್ಟೆ. ’ಸೆಗಣಿಯಲ್ಲಿ ಸಾವಿರ, ಮಧ್ಯಾಹ್ನಕ್ಕೆ ಲಯ’ ಎಂಬಂತೆ ಅದರಿಂದಾಚೆಗೆ ಅವುಗಳಿಗೆ ಪ್ರತ್ಯೇಕ ಐಡೆಂಟಿಟಿ ಇರಲಿಲ್ಲ.
ಅದು ಮುದ್ರಣ ಮಾಧ್ಯಮದ ಸಾರ್ವಭೌಮತ್ವದ ಕಾಲಘಟ್ಟ. ಈಗ ಏನಿದ್ದರೂ ದೃಶ್ಯ ಮಾಧ್ಯಮದ ಯುಗ. ಸರ್ಕ್ಯೂಲೇಷನ್ ಎಂಬುದು ಹಿಂದಕ್ಕೆ ಸರಿದು ಟಿ.ಆರ್.ಪಿ ಎಂಬ ಭೂತ ಟಿ.ವಿಯನ್ನು ಆಳುತ್ತಿರುವ ಕಾಲ. ಇಲ್ಲೂ ಅದೇ ಟೆಕ್ನಿಕ್; ಮನುಷ್ಯನ ಮೂಲಭೂತ ಕಾಮನೆಗಳನ್ನು ತಣಿಸುವುದು. ಮನುಷ್ಯ ಮೂಲತಃ ಕ್ರೂರಿ. ಆತ ಹಿಂಸ್ರಾ ಪಶು. ಆತನಲ್ಲಿರುವ ಆಕ್ರಮಣಶೀಲತೆ ಸೂಕ್ತ ಸಂದರ್ಭಕ್ಕಾಗಿ ಹೊಂಚು ಹಾಕುತ್ತಿರುತ್ತದೆ.
ಇತ್ತೀಚೆಗೆ ಜನಪ್ರಿಯವಾಗುತ್ತಿರುವ ಟಿ.ವಿ ಧಾರಾವಾಹಿಗಳನ್ನೇ ನೋಡಿ; ಟಿ,ಅರ್.ಪಿ ಗ್ರಾಪ್ ಉರ್ಧ್ವಮುಖಿಯಾಗಿ ಸಾಗಿದ್ದು, ಸಾಗುತ್ತಿರುವುದು; ಸಚ್ ಕಾ ಸಾಮ್ನ್, ಇಮೋಷನಲ್ ಅತ್ಯಾಚಾರ್, ಕನ್ನಡದ ಹಳ್ಳಿಹೈದ ಪ್ಯಾಟೆಗೆ ಬಂದ...ಮುಂತಾದ ಭಾವಕೋಶವನ್ನು ಕಲುಷಿತಗೊಳಿಸುವ ದಾರಾವಾಹಿಗಳಿಗೆ ಮಾತ್ರ. ಇದರ ಜೊತೆಗೆ ಕೃತ್ರಿಮತೆಯನ್ನೇ ಢಾಳಾಗಿ ತೋರಿಸುವ ಸ್ವಯಂವರದ ಧಾರಾವಾಹಿಗಳು, ಖಾಸಗಿ ಬದುಕನ್ನು ನಾಟಕಿಯವಾಗಿ ರಂಗದ ಮೇಲೆ ತಂದು ಸಾರ್ವಜನಿಕರ ಬಾಯಿಗೆ ಎಲೆಯಡಿಕೆಯಾಗಿಸುವ ಕಥೆಯಲ್ಲ ಜೀವನಗಳು; ಬದುಕು ಜಟಕಾ ಬಂಡಿಗಳು. ಸಾವಿನಾಚೆಗೆ ಏನಿದೆ ಎಂಬ ಮನುಷ್ಯನ ಅನಾದಿ ಕಾಲದ ಜಿಜ್ನಾಸೆಯನ್ನು, ಸಹಜ ಕುತೂಹಲವನ್ನು ಮಾರುಕಟ್ಟೆಯ ಮೌಲ್ಯಗಳಿಗೆ ಬಾಗಿಸುತ್ತಿರುವ ಜನ್ಮಾಂತರಗಳು, ಹೀಗೇ ಉಂಟುಗಳು..!
ಟಿ.ಅರ್.ಪಿ ಗ್ರಾಪ್ ಮೇಲೆರಿದಂತೆಲ್ಲಾ ಚಾನಲ್ ಗಳಿಗೆ ಅಡ್ ರೆವಿನ್ಯು ಜಾಸ್ತಿಯಾಗುತ್ತದೆ. ಟಿ.ಅರ್.ಪಿ ಅಂದರೆ ಟಾರ್ಗೆಟ್ ರೇಟಿಂಗ್ ಪಾಯಿಂಟ್. ಇದು ಜನಪ್ರಿಯ ಟಿ.ವಿ ಪ್ರೋಗ್ರಾಮ್ ಗಳ ಪಟ್ಟಿಯನ್ನು ಕೊಡುತ್ತದೆ. ಕನ್ನಡದಲ್ಲಿ ಪ್ರತಿ ಬುದವಾರದಂದು ಈ ಪಟ್ಟಿ ಬಿಡುಗಡೆಯಾಗುತ್ತದೆ. ಹಾಗಾಗಿ ವಾರಕೊಮ್ಮೆ ಟಿ.ವಿ ನಿರ್ಮಾಪಕರ ಎದೆಬಡಿತ ಏರುಪೇರಾಗುತ್ತದೆ!. ಯಾಕೆಂದರೆ ರೇಟಿಂಗ್ ಇಲ್ಲ ಎಂಬ ಕಾರಣದಿಂದಾಗೆ ಹಲವು ಸದಭಿರುಚಿಯ ಕಾರ್ಯಕ್ರಮಗಳು ವೈಂಡ್ ಅಫ್ ಆದ ಉದಾಹರಣೆ ಟಿ.ವಿ ಇತಿಹಾಸಕ್ಕಿದೆ.
ಟಿ.ಅರ್.ಪಿಯನ್ನು ಯಾರು ನಿರ್ಧರಿಸುತ್ತಾರೆ? ವಿಕ್ಷಕರು. ಆದರೆ ಎಲ್ಲಾ ವಿಕ್ಷಕರಲ್ಲ. ಆಯ್ದ ವೀಕ್ಷಕರು. ಅದರ ನಿರ್ವಹಣೆಯನ್ನು ಏಜನ್ಸಿಯೊಂದು ಮಾಡುತ್ತದೆ. ಅವರು ಆಯ್ದ ಕೆಲವರ ಮನೆಗಳಲ್ಲಿ ’ಪೀಪಲ್ಸ್ ಮೀಟರ್’ ಎಂಬ ಉಪಕರಣವೊಂದನ್ನು ಅಳವಡಿಸುತ್ತಾರೆ. ಆ ಮನೆಯವರು ಯಾವ ಚಾನಲ್, ಯಾವ ಪ್ರೋಗ್ರಾಮನ್ನು ಎಷ್ಟೊತ್ತು ನೋಡುತ್ತಾರೆ ಎಂಬುದರ ಮೇಲೆ ಕಾರ್ಯಕ್ರಮಗಳ ಜನಪ್ರಿಯತೆಯನ್ನು ಏಜನ್ಸಿ ಸಂಯೋಜಿಸುತ್ತದೆ. ಅದೇ ಟಿ.ಅರ್.ಪಿ. ಆದರೆ ಅದರ ನಿಖರತೆಯ ಬಗ್ಗೆಯೇ ಈಗೀಗ ಸಂಶಯ ವ್ಯಕ್ತವಾಗುತ್ತಿದೆ.
ಕರ್ನಾಟಕದಲ್ಲಿ ಬೆಂಗಳೂರನ್ನು ಹೊರತುಪಡಿಸಿ ಒಟ್ಟು ೮ ಟಿ.ಅರ್.ಪಿ ಸೆಂಟರ್ ಗಳಿವೆ.ಅದನ್ನು ಟಿ.ವಿ ಭಾಷೆಯಲ್ಲಿ ಅರ್.ಒ.ಕೆ ಎಂದು ಕರೆಯುತ್ತಾರೆ. ಅಂದರೆ ರೆಸ್ಟ್ ಅಫ್ ಕರ್ನಾಟಕ. ಅವು ಮೈಸೂರು, ಮಂಗಳೂರು, ದಾವಣಗೆರೆ, ಹುಬ್ಬಳಿ, ಗದಗ, ಬೆಳಗಾವಿ, ಗುಲ್ಬರ್ಗಾ ಮತ್ತು ರಾಯಚೂರು. ಜಾಹಿರಾತುದಾರರು ಈ ಸೆಂಟರ್ ಗಳಿಗಿಂತಲೂ ಬೆಂಗಳೂರಿಗೇ ಹೆಚ್ಚು ಗಮನ ಕೊಡುತ್ತಾರೆ. ಯಾಕೆಂದರೆ ಬೆಂಗಳೂರಲ್ಲಿ ಹೆಚ್ಚು ದುಡ್ಡು ಓಡಾಡುತ್ತದೆ. ಇಲ್ಲಿಯ ಜನರ ಖರೀದಿ ಶಕ್ತಿ ಜಾಸ್ತಿ ಎಂಬುದು ಅವರ ತರ್ಕ. ಹಾಗಾಗಿ ಈ ನಗರವೊಂದರಲ್ಲೇ ಸುಮಾರು ೧೮೦ ಮನೆಗಳಲ್ಲಿ ಟಿ.ಅರ್.ಪಿ ಮಾಪನವಾದ ’ಪೀಪಲ್ಸ್ ಮೀಟರ್’ ಗಳನ್ನು ಅಳವಡಿಸಲಾಗಿದೆ.
ಇದರರ್ಥ ಇಷ್ಟೆ; ಟಿ.ವಿ ಮಾಧ್ಯಮದವರ ಲೆಕ್ಕಾಚಾರದಲ್ಲಿ ಗ್ರಾಮಾಂತರ ಪ್ರದೇಶದ, ಬಹುಸಂಖ್ಯಾತ ಜನರು ಟಿ.ವಿ ವೀಕ್ಷಕರೇ ಅಲ್ಲ. ಅಡ್ ರೆವಿನ್ಯೂ ತರುವ ಟಿ.ಅರ್.ಪಿ ಸೆಂಟರ್ ನ ಜನರಿಗಾಗಿ ಅವರು ಕಾರ್ಯಕ್ರಮವನ್ನು ತಯಾರಿಸಬೇಕು. ಅಂದರೆ ಆಧುನಿಕ ಮನೋಭಾವದ, ಉಳ್ಳವರ ಮನೋರಂಜನೆಗಾಗಿ ಕಾರ್ಯಕ್ರಮ ಹಣೆಯಬೇಕು. ನಿಜಕ್ಕೂ ಅದೊಂದು ಸವಾಲು. ಸಾಹಸ, ಹಾಸ್ಯ ಮತ್ತು ಭಾವುಕತೆಯ ಹದವಾದ ಮಿಶ್ರಣದ ಕಾರ್ಯಕ್ರಮಗಳು ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುತ್ತದೆ. ಆದರ ತಯಾರಿಕೆಗೆ ಶ್ರಮ ಮತ್ತು ಪ್ರತಿಭೆ ಬೇಕು. ಮುಖ್ಯವಾಗಿ ಹೃದಯವಂತಿಕೆ ಬೇಕು. ಅದಿಲ್ಲವಾದರೆ ಏನಾಗುತ್ತದೆ ಎಂಬುದಕ್ಕೆ ಇತ್ತೀಚೆಗೆ ಪ್ರಸಾರವಾಗುತ್ತಿರುವ ’ಹಳ್ಳಿಹೈದ ಪ್ಯಾಟೆಗೆ ಬಂದ’ ರಿಯಾಲಿಟಿ ಶೋ ಉತ್ತಮ ಉದಾಹರಣೆ.
ಇಲ್ಲಿ ಎಲ್ಲವೂ ಇದೆ. ಆದರೆ ಹೃದಯವಂತಿಕೆ ಇಲ್ಲ. ಹಳ್ಳಿಯ ಎಳೆಂಟು ಹುಡುಗರನ್ನು ಪೇಟೆಗೆ ತಂದು ಹಾಕಿದ್ದಾರೆ. ಅವರಿಗೆ ನಾಗರಿಕೆ ನಡವಳಿಕೆಗಳನ್ನು[!] ಕಲಿಸಲು ಒಬ್ಬೊಬ್ಬ ಹುಡುಗಿಯರನ್ನು ನೇಮಿಸಲಾಗಿದೆ. ಅವರ ವೇಷ ಭೂಷಣಗಳನ್ನು ನೋಡಿಯೇ ಪಾಪ ಆಹುಡುಗರು ದಂಗಾಗಿರಬೇಕು! ಅಮೇಲೆ ಶುರು ನೋಡಿ, ಅವರಿಗೆ ನಾಗರಿಕ ನಡತೆಯನ್ನು ಕಲಿಸುವ ಪಾಠಗಳು; ಮಾಲ್ ಗಳಲ್ಲಿ ಬಿಕ್ಷೆ ಬೇಡುವುದು, ಬ್ರಿಗೇಡ್ ರೋಡ್ ನಲ್ಲಿ ಹುಡುಗಿಯರ ಮೊಬೈಲ್ ನಂಬರ್ ಗಳನ್ನು ಕಲೆಕ್ಟ್ ಮಾಡುವುದು, ಇಂಗ್ಲೀಷ್ ಕಲಿಯುವುದು, ಯಾರ್ಯರನ್ನೊ ಕಾಡಿ ಬೇಡಿ ಮೆಜೆಸ್ಟಿಕ್ ತಲುಪುವುದು, ಹುಡುಗಿಯರನ್ನು ಹೊತ್ತುಕೊಂಡು ಕೆಸರಿನಲ್ಲಿ ಓಡುವುದು. ಇದೆಲ್ಲಕಿಂತಲೂ ಬೀಬತ್ಸಕರವಾದ ಇನ್ನೊಂದು ಟಾಸ್ಕ್ ಇತ್ತು, ಅತೀ ಹೆಚ್ಚು ಯಾರು ತಿನ್ನುತ್ತಾರೆ, ಕುಡಿಯುತ್ತಾರೆ ಅಂತ. ಅದರಲ್ಲಿ ಸ್ಪರ್ಧಿಗಳಿಗೆ ಗೊತ್ತಿಲ್ಲದಂತೆ ಭೇದಿ ಮಾತ್ರೆ ಹಾಕಿರ್ತಾರೆ. ಆದರೆ ಟಾಯ್ಲೆಟ್ಗೆ ಹೋದ್ರೆ ಸ್ಪರ್ಧೆಯಿಂದ ಹೊರ ಹೋಗಬೇಕಾಗುತ್ತಾದೆ. ದೇಹ ಭಾದೆಯನ್ನು ತಡೆದುಕೊಂಡು ಅವರು ಒದ್ದಾಡುವುದು ನೋಡುವಾಗ ಇದು ಅಮಾನವೀಯ ಅನ್ನಿಸಿಬಿಡುತ್ತಾದೆ. ಇನ್ನು ಆ ಹಳ್ಳಿ ಹುಡುಗರ ಜೋತೆ ಪೇಟೆ ಹುಡುಗಿಯರನ್ನು ರೆಸ್ಲಿಂಗ್ [ಕುಸ್ತಿ] ಆಡಿಸುವುದು ಖಂಡಿತವಾಗಿಯೂ ಆರೋಗ್ಯಕರ ಟಾಸ್ಕ್ ಅನ್ನಿಸುವುದಿಲ್ಲ. ಯಾವ ಮನಸ್ಥಿತಿಯಿಂದ ಅವರು ಪ್ಯಾಟೆಗೆ ಬಂದರೋ ಅದೇ ಮನಸ್ಥಿತಿಯೊಂದಿಗೆ ಅವರು ಹಳ್ಳಿಗೆ ಮರಳಲು ಸಾಧ್ಯವೇ? ಅವರ ಮುಗ್ಧತೆಯನ್ನು ನಾಶ ಮಾಡಿದ ಶಾಪ ಯಾರನ್ನು ತಟ್ಟುತ್ತದೆ?
ಇದೇ ಚಾನಲಿನ ’ಪ್ಯಾಟೆ ಹುಡ್ಗೀರ ಹಳ್ಳಿ ಲೈಪ್’ ಇದಕ್ಕೆ ಹೋಲಿಸಿದರೆ ಚೆನ್ನಾಗಿತ್ತು, ಯಾಕೆಂದರೆ ಹಳ್ಳಿಯಲ್ಲಿ ಮುಕ್ತವಾದ ವಾತಾವರಣವಿರುತ್ತದೆ. ಅವರಲ್ಲಿ ಇನ್ನೂ ಅಂತಃಕರಣ ಉಳಿದಿರುತ್ತದೆ. ಹೊರಗಿನಿಂದ ಬಂದವರನ್ನು ಕೂಡ ಅವರು ಕ್ರಮೇಣ ತಮ್ಮವರೆಂದು ಒಪ್ಪಿಕೊಂಡುಬಿಡುತ್ತಾರೆ. ನಗರದ ಜನತೆಯದು ಕವರ್ಡ್ ಮನಸ್ಥಿತಿ, ಅವರು ಯಾರನ್ನು ನಂಬಲಾರರು. ಹಳ್ಳಿ ಹುಡುಗರಿಗೆ ಮೊಬೈಲ್ ನಂಬರ್ ಕಲೆಕ್ಟ್ ಮಾಡುವುದು, ಲಿಪ್ಟ್ ಪಡೆಯುವುದು ಹಾಗಾಗಿಯೇ ತುಂಬಾ ಕಷ್ಟವಾಗಿದ್ದು. ನಾಗರಿಕ ಜನರ ಕೈಯಲ್ಲಿ ಸಿಕ್ಕು ಅವರು ಪಡುವ ಪರಿಪಾಟಲು ಕಂಡಾಗ ೨೦ ವರ್ಷಗಳ ಹಿಂದೆ ಹಳ್ಳಿಯಿಂದ ನೇರವಾಗಿ ಬೆಂಗಳೂರೆಂಬ ಮಾಯಾಂಗನೆಯ ತೆಕ್ಕೆಗೆ ಬಂದು ಬಿದ್ದ ನನ್ನದೇ ಅನುಭವ ಮರುಕಳಿಸಿದಂತಾಯಿತು. ರಾಜೇಶನೆಂಬ ಹಳ್ಳಿ ಹುಡುಗನಲ್ಲಿ ನನ್ನನ್ನು ನಾನು ಕಂಡುಕೊಂಡೆ.
ಇನ್ನು, ನಿರೂಪಕ ಅಕುಲ್ ಬಾಲಾಜಿಯ ಇಂಗೀಷ್ ಶೈಲಿಯ ಕನ್ನಡ ಉಚ್ಛಾರಣೆ ಮತ್ತು ಅವರು ಹುಡುಗಿಯರನ್ನು ಬಹುವಚನದಲ್ಲೂ ಹುಡುಗರನ್ನು ಏಕವಚನದಲ್ಲೂ ಸಂಬೋಧಿಸುವುದು. ಹುಡಿಗಿಯರಿಗೆ ಗಂಭೀರವಾಗಿ ಬಯ್ಯುವುದು,ಹುಡುಗರಿಗೆ ಅದನ್ನೇ ಗೇಲಿ ಮಾಡುತ್ತಾ ಎಚ್ಚರಿಸುವುದು ಅವರು ನಗರ ಪಕ್ಷಪಾತಿ ಎಂಬುದನ್ನು ತೋರಿಸುತ್ತದೆ. ಇನ್ನು ಸ್ಕ್ರಿಪ್ಟ್ ಮತ್ತು ವಾಯ್ಸ್ ಒವರ್ ವೈನೋದಿಕ ಹಿಂಸೆಗೆ ಅತ್ಯುತ್ತಮ ಉದಾಹರಣೆ. ಅವಕಾಶ ಸಿಕ್ಕಾಗಲೆಲ್ಲಾ ಇಡೀ ಗ್ರಾಮೀಣ ಜನತೆಯನ್ನು, ಅವರ ನಂಬಿಕೆಗಳನ್ನು ಮತ್ತು ಅವರ ಕಪ್ಪು ವರ್ಣವನ್ನು ಲೇವಡಿ ಮಾಡಲಾಗಿದೆ. ಇದಲ್ಲದೆ ಆ ಹುಡುಗರ ಬಾಯಲ್ಲಿ ಪ್ರೀತಿ, ಪ್ರೇಮ, ಮುತ್ತು ಎಂಬ ಮಾತುಗಳನ್ನೆಲ್ಲಾ ಆಡಿಸಿ ಕಾಮನೆಗಳನ್ನು ಕೆರಳಿಸುವ ಪ್ರಯತ್ನವೂ ನಡೆಯುತ್ತಿದೆ.
ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ ನನ್ನ ಗೆಳತಿಯೊಬ್ಬಳು ಹೇಳುತ್ತಿದ್ದಳು; ಅಲ್ಲಿ ’ಡಿವೈಡ್ ಅಂಡ್ ರೂಲ್’ ಅಂದರೆ ಒಡೆದು ಆಳುವ ನೀತಿಯನ್ನು ಅನುಸರಿಸಲಾಗುತ್ತದೆಯೆಂದು. ಸ್ಪರ್ಧಿಗಳಲ್ಲೇ ಪೈಪೋಟಿಯನ್ನು ಹುಟ್ಟು ಹಾಕಿ ಪರಸ್ಪರ ಅಪನಂಬಿಕೆಯನ್ನು ಸೃಷ್ಟಿಸುವುದು. ಪ್ರತಿಯೊಬ್ಬರಿಗೂ ಗೆಲ್ಲುವ ತವಕ. ಹಳ್ಳಿಹೈದ....ದಲ್ಲಿ ಪ್ಯಾಟೆ ಸುಂದರಿಯರಿಗೆ ಮಾತ್ರ ಗೆಲ್ಲುವ ತವಕ .ಹೈದರಿಗೆ ಇಲ್ಲಿಂದ ತಪ್ಪಿಸಿಕೊಂಡು ಊರಿಗೆ ಓಡುವ ತುಡಿತ. ಬಹುಶಃ ಕಾರ್ಯಕ್ರಮದ ನಿಬಂಧನೆಗಳು ಮತ್ತು ಆಕರ್ಷಣೆಗಳು ಅವರನ್ನು ’ಇಲ್ಲಿರಲಾರೆ ಅಲ್ಲಿಗೆ ಪೋಗಲಾರೆ’ ಎಂದು ಕಟ್ಟಿ ಹಾಕಿರಬಹುದು.
ಹಳ್ಳಿ ಜನರ ಬಡತನ, ಅಸಹಾಯಕತೆ ಮತ್ತು ಮುಗ್ಧತೆ ಟಿ.ವಿಯಲ್ಲಿ ಮಾರಾಟದ ಸರಕಾಗುತ್ತಿದೆ. ಅದ್ದೂರಿಯ ಬಂಗಲೆಗಳಲ್ಲಿ ಕುಳಿತು, ಕುರುಕುಲು ತಿಂಡಿ ತಿನ್ನುತ್ತಾ ನಗರಗಳ ಸುಶಿಕ್ಷಿತ ಜನರು ಇದನ್ನು ಎಂಜಾಯ್ ಮಡುತ್ತಾರೆ! ಹಾಗೆಂದು ಅವರನ್ನು ಹೃದಯಹೀನರೆಂದು, ಗ್ರಾಮೀಣ ಜನರನ್ನು ಉಪೇಕ್ಷೆಸುವರೆಂದು ಅನ್ನುವ ಹಾಗಿಲ್ಲ. ಯಾಕೆಂದರೆ ಕಳೆದ ಬಾರಿ ಉತ್ತರ ಕರ್ನಾಟಕದ ಜನತೆ ನೆರೆ ಹಾವಳಿಯಿಂದ ಬದುಕು ಕಳೆದುಕೊಂಡಾಗ ಮುಖ್ಯಮಂತ್ರಿಗಳ ಜೋಳಿಗೆಗೆ ಕೋಟ್ಯಾಂತರ ರೂಪಾಯಿಗಳನ್ನು ಹಾಕಿದವರು ಇದೇ ಪೇಟೆ ಜನರು.
ಇದೇ ನಗರದ ಸೆಲೆಬ್ರಿಟಿಗಳನ್ನು ಅಚ್ಚರಿಯ ಕಣ್ಣುಗಳಿಂದ ನೋಡುತ್ತಿದ್ದ ಹಳ್ಳಿ ಜನರೆದುರು ಅವರ ಖಾಸಗಿ ಬದುಕನ್ನು ತೆರೆದಿಟ್ಟು ಮಾದರಿಗಳನ್ನು ಒಡೆಯುವ ಪ್ರಯತ್ನವೂ ಕಿರು ತೆರೆಯಲ್ಲಿ ನಿರಂತರ ನಡೆಯುತ್ತಿದೆ. ಸಾಮಾಜಿಕ ಹೊಣೆಗಾರಿಕೆಯೆಂಬುದು ದೃಶ್ಯ ಮಾಧ್ಯಮದ ನಿಘಂಟಿನಲ್ಲಿಲ್ಲದ ಪದ. ಇದೇ ಚಾನಲ್ ನವರು ಹಿಂದೆ ಸ್ವಯಂವರ ರಿಯಾಲಿಟಿ ಶೋ ಒಂದು ಮಾಡಿದ್ದರು. ಅದರಲ್ಲಿ ಭಾಗವಹಿಸಲು ವಧುಗಳು ಮುಂದೆ ಬರದಾದಾಗ ಕಿರುತೆರೆ ನಟಿಯರನ್ನೇ ಬಾಡಿಗೆ ವಧುಗಳಾಗಿ ತಂದು ವಿವಾಹಕಾಂಕ್ಷಿಗಳನ್ನು ಬೆಚ್ಚಿ ಬೀಳಿಸಿದ ಇತಿಹಾಸವೂ ಇದಕ್ಕಿದೆ.
ನಾನು ಇದನ್ನು ಬರೆಯುವ ಹೊತ್ತಿಗಾಗಲೇ ಪುತ್ತೂರಿನ ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ಮಾಧವ ಭಾವಿಕಟ್ಟೆಯವರು ’ ಹಳ್ಳಿ ಹೈದ ಪ್ಯಾಟೆಗೆ ಬಂದ’ ಕಾರ್ಯಕ್ರಮದ ಬಗ್ಗೆ ತೀವ್ರ ಅಸಮಾಧಾನಗೊಂಡು ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆಗಳನ್ನು ಮಾಡಿಕೊಳ್ಳೊತ್ತಿದ್ದಾರೆ. ಹಳ್ಳಿ ಜನರನ್ನು ಸ್ನಾನ ಮಾಡದವರು, ತಲೆ ಬಾಚಿಕೊಳ್ಳದವರು, ಕಾಡುಜನರಂತೆ ಬದುಕುತ್ತಾರೆ ಎಂಬಂತೆ ಚಿತ್ರಿಸಲಾಗಿದೆ; ಗ್ರಾಮೀಣ ಜನರನ್ನು ಅವಮಾನಿಸಲಾಗಿದೆ ಎಂಬುದು ಅವರ ಆರೋಪ. ನಾನು ಮಾತಾಡಿಸಿದ ಬಹುತೇಕ ಜನರ ಅಭಿಪ್ರಾಯವೂ ಇದೇ ಆಗಿದೆ.
’ಹಳ್ಳಿ ಹೈದ ಪ್ಯಾಟೆಗೆ ಬಂದ’ ಎಂಬ ರಿಯಾಲಿಟಿ ಶೋದ ಕೆಲವು ಎಪಿಸೋಡುಗಳನ್ನು ನೋಡಿದೆ. ಅದು ನನಗೆ ಇಷ್ಟನ್ನೆಲಾ ಬರೆಯಲು ಪ್ರಚೋದಿಸಿತು. ಅದಕ್ಕಾಗಿ ಆ ಶೋ ದ ಕ್ರಿಯೇಟಿವ್ ಹೆಡ್ ಗೆ ನನ್ನ ಕೃತಜ್ನತೆಗಳು!
[ ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ ]
Thursday, September 2, 2010
ದ್ರೌಪದಿಗೆ ಕೃಷ್ಣನಂತೆ.......!?

ಈಗೀಗ ಒಂಟಿಯಾಗಿ ಇರುವುದೇ ಹೆಚ್ಚು ಖುಷಿಯನ್ನು ಕೊಡುತ್ತದೆ. ಯಾವಾಗಲೂ ಅಷ್ಟೇ. ಮೌನದೊಡನೆ ಸಂವಾದ ಸಾಧ್ಯವಾಗುವಷ್ಟು ಶಬ್ದಗಳ ಜೊತೆ ಆಗುವುದಿಲ್ಲ. ಚಿಕ್ಕಂದಿನಿಂದಲೂ ಮನೆ, ಶಾಲೆಗಳಲ್ಲಿ ಕಲಿತದ್ದಕ್ಕಿಂತಲೂ ತೋಟ, ಗದ್ದೆ, ಕಾಡು, ನದಿ, ಗೋಮಾಳಗಳಲ್ಲಿ ಕಲಿತದ್ದೇ ಹೆಚ್ಚು.
ಮಲೆನಾಡಿನಲ್ಲಿ ಹುಟ್ಟಿ ಬೆಳೆದ ಎಲ್ಲರೂ ಹಾಗೇ. ಬಾಲ್ಯದಲ್ಲಿ ಗೋಪಾಲಕರಾಗುತ್ತಾರೆ, ಇಲ್ಲವೆ ಗೋಪಿಕೆಯರಾಗುತ್ತಾರೆ. ಅವರ ಸುತ್ತಮುತ್ತ ದನಕರುಗಳಿರುತ್ತವೆ; ನದಿಯಿರುತ್ತವೆ; ಕಾಡಿರುತ್ತದೆ; ಬೆಟ್ಟಗುಡ್ಡವಿರುತ್ತದೆ; ಮನೆಯವರ ಜೊತೆ ಮುನಿಸಿಕೊಂಡರೆ ಸುತ್ತಮುತ್ತ ಯಶೋಧೆಯರಿರುತ್ತಾರೆ; ಆಳುಗಳಿರುತ್ತಾರೆ. ಒಟ್ಟಿನಲ್ಲಿ ಸಮೃದ್ಧ ಬಾಲ್ಯ.
ಈಗ ಬೆಂಗಳೂರಿನಲ್ಲಿರುವ ನನಗೆ ಒಂಟಿತನ ಅನಿರ್ವಾಯ. ಅದು ಆಧುನಿಕ ಬದುಕಿನ ಕೊಡುಗೆ! ಎರಡು ವರ್ಷಗಳ ಹಿಂದೆ ನಾನು ಬ್ಲಾಗ್ ಆರಂಭಿಸಿದಾಗ ಇದನ್ನೇ ಬರೆದುಕೊಂಡಿದ್ದೆ;
ಒರ್ವನೇ ನಿಲುವೆ ನೀನುತ್ಕಟಕ್ಷಣಗಳಲಿ
ಧರ್ಮಸಂಕಟಗಳಲಿ, ಜೀವಸಮರದಲಿ
ನಿರ್ವಾಣದೀಕ್ಷೆಯಲಿ, ನಿರ್ಯಾಣಘಟ್ಟದಲಿ
ನಿರ್ಮಿತ್ರನಿರಲು ಕಲಿ-ಮಂಕುತಿಮ್ಮ.
ಡಿ.ವಿ.ಜಿಯವರ ಕಗ್ಗದ ಈ ಪದ್ಯ ನನ್ನ ಉತ್ಕಟ ಕ್ಷಣಗಳಲ್ಲಿ ನನಗೆ ಎಲ್ಲವನ್ನು ಎದುರಿಸುವ ಶಕ್ತಿಯನ್ನು ನೀಡುತ್ತದೆ. ಹಾಗಿದ್ದರೂ ಬಾಲ್ಯದಿಂದಲೂ ಗೆಳೆತನದ ಬಗ್ಗೆ ನನಗೆ ತುಂಬಾ ಉದಾತ್ತವಾದ ಭಾವನೆಯಿತ್ತು; ಆದರ್ಶ ಕಲ್ಪನೆಯಿತ್ತು, ಇಂದಿಗೂ ಅಷ್ಟು ಸುಲಭವಾಗಿ ನಾನು ಯಾರನ್ನೂ ’ಇವರು ನನ್ನ ಪ್ರೆಂಡ್’ ಎಂದು ಹೇಳಿಕೊಳ್ಳುವುದಿಲ್ಲ. ಇವರು ನನ್ನ ಪರಿಚಯದವರು, ಕ್ಲಾಸ್ ಮೇಟ್, ಕೊಲಿಗ್, ಪ್ಯಾಮಿಲಿ ಪ್ರೆಂಡ್, ರಿಲೇಟಿವ್, ಬೇಕಾದವರು ಎಂದೆಲ್ಲಾ ಹೇಳಿಕೊಳ್ಳುತ್ತೇನೆ. ಆದರೆ ’ಪ್ರೆಂಡ್’ ಎಂಬ ಪದವನ್ನು ಅತ್ಯಂತ ಜಾಗರೂಕತೆಯಿಂದ ಉಪಯೋಗಿಸುತ್ತೇನೆ. ಯಾರಾದರೂ ’ ನಿಂಗೆ ತುಂಬಾ ಬೇಕಾದವರು, ಆತ್ಮೀಯರಾದವರು ಯಾರು?’ ಎಂದು ಕೇಳಿದರೆ ತಕ್ಷಣ ಕಣ್ಮುಂದೆ ದ್ರೌಪದಿಯ ಸಖ ಕೃಷ್ಣ ಕಾಣಿಸಿಕೊಳ್ಳುತ್ತಾನೆ.
ದ್ರೌಪದಿಯ ಸಖ ಕೃಷ್ಣ ಎನ್ನಲು ಕಾರಣವಿದೆ, ಆತ ಆಕೆಯ ಬೌದ್ಧಿಕ ಸಂಗಾತಿ. ಇಡೀ ಮಹಾಭಾರತದಲ್ಲಿ ದ್ರೌಪದಿಯ ಶಕ್ತಿಯನ್ನು ಅರಿತವನು ಕೃಷ್ಣ ಮಾತ್ರ. ಅವಳ ಸಮಗ್ರ ವ್ಯಕ್ತಿತ್ವದ ಆಳ ವಿಸ್ತಾರಗಳು ಆತನಿಗೆ ಗೊತ್ತಿತ್ತು. ಎಲ್ಲರೆದುರಲ್ಲಿ ಅವರವರ ಭಾವಕ್ಕೆ ತಕ್ಕಂತೆ ಗೋಚರವಾಗುತ್ತಿದ್ದ ಕೃಷ್ಣ ಒಂದು ಮೆಟ್ಟಿಲು ಎತ್ತರದಲ್ಲಿಯೇ ಇರುತ್ತಿದ್ದ. ಆದರೆ ದ್ರೌಪದಿಯ ಎದುರಿನಲ್ಲಿ ಮಾತ್ರ ಸಮಾನ ನೆಲೆಯಲ್ಲಿ ಸ್ಪಂದಿಸುತ್ತಿದ್ದ, ಅವರ ನಡುವೆ ಹೃದಯ ಸಂವಾದವಿತ್ತು. ಮೌನದಲ್ಲೂ ಮಾತಿತ್ತು.
ದ್ರೌಪದಿ ಅಸಹಾಯಕ ಹೆಣ್ಣಲ್ಲ. ಆದರೂ ನೆರವು ಬೇಕೆಂದಾಗ ಅವಳು ಯಾಚಿಸಿದ್ದು ತನ್ನ ವೀರಾಧಿವೀರ ಗಂಡರನ್ನಲ್ಲ. ಆಪತ್ಬಾಂಧವ ಕೃಷ್ಣನನ್ನು. ಅವನಲ್ಲಿ ಆಕೆಗೆ ಅಂತಹ ನಂಬಿಕೆಯಿತ್ತು. ಗಂಡು-ಹೆಣ್ಣಿನ ನಡುವಿನ ಸಂಬಂಧಕ್ಕೆ ಹೊಸ ವ್ಯಾಖ್ಯೆಯನ್ನು ಬರೆದವರು ಅವರು.
ಪ್ರೀತಿ ದೇವನಂತಿರುವ, ಬೆಚ್ಚನೆಯ ಭಾವವನ್ನು ಮೂಡಿಸುವ ಆ ಕೃಷ್ಣ ಸದಾ ನನ್ನ ಜತೆಗಿರುತ್ತಾನೆ. ಅವನ ಕಿರುಬೆರಳನ್ನು ಹಿಡಿದು, ಸಮುದ್ರಗುಂಟ ಹೆಜ್ಜೆ ಹಾಕುತ್ತಾ ಬದುಕಿನ ಅನೇಕ ಸವಾಲುಗಳನ್ನು ನಾನು ಎದುರಿಸಿದ್ದೇನೆ.
ನಿಜ, ಪರಿಪೂರ್ಣವಾದ ಸಂಬಂಧವೊಂದಕ್ಕಾಗಿ ನಾವೆಲ್ಲರೂ ಸದಾ ಹಾತೊರೆಯುತ್ತಿರುತ್ತೇವೆ. ಆ ಹುಡುಕಾಟ ನಮ್ಮನ್ನು ಎಲ್ಲೆಲ್ಲಿಯೋ ಕೊಂಡೊಯ್ಯುತ್ತದೆ. ಅದೃಷ್ಟವಿದ್ದರೆ ಒಂಚೂರಾದರೂ ದಕ್ಕೀತು, ಇಲ್ಲವದಾರೆ ನಿರಾಶೆ, ದುಃಖ, ಹತಾಶೆ ತಪ್ಪಿದ್ದಲ್ಲ. ಯಾಕೆಂದರೆ ಪರಿಪೂರ್ಣತೆ ಎನ್ನುವುದೇ ಒಂದು ಆದರ್ಶ. ಅದು ಎಂದೂ ವಾಸ್ತವವಾಗುವುದಿಲ್ಲ. ಆದರೆ ಕೃಷ್ಣನದು ಪರಿಪೂರ್ಣವಾದ ವ್ಯಕ್ತಿತ್ವ. ಅವನ ವ್ಯಕ್ತಿತ್ವ ಎಲ್ಲವನ್ನೂ, ಎಲ್ಲರನ್ನೂ ತನ್ನೊಳಗೆ ಲೀನವಾಗಿಸಿಕೊಳ್ಳುತ್ತದೆ. ಒಬ್ಬ ಸ್ತ್ರೀ ಬಯಸುವ ಎಲ್ಲವೂ ಅವನಲ್ಲಿದೆ.
ಒಬ್ಬ ಸ್ತ್ರೀಯ ನಿಡಿದಾದ ಬದುಕಿನಲ್ಲಿ ಪುರುಷ ವಹಿಸುವ ಎಲ್ಲಾ ಪಾತ್ರಗಳನ್ನು ಒಬ್ಬನೇ ಕೃಷ್ಣ ವಿವಿಧ ರೂಪಗಳಲ್ಲಿ ವಹಿಸಿಬಿಡುತ್ತಾನೆ. ಬಾಲ್ಯದಲ್ಲಿ ಈಕೆ ಗೋಪಿಕೆಯಾದರೆ ಆತ ಮುರಳಿಲೋಲ. ಯೌವನದಲ್ಲಿ ಇವಳು ರಾಧೆಯಾದರೆ ಆತ ರಾಸಲೀಲೆಯಾಡುವ ಮಾಧವ. ಆದರ್ಶ ದಾಂಪತ್ಯದಲ್ಲಿ ಇವಳು ರುಕ್ಮಿಣಿಯಾದರೆ ಅವನು ಕೃಷ್ಣ. ತಾಯ್ತನದಲ್ಲಿ ಇವಳು ಯಶೋಧರೆಯಾದರೆ ಅವನು ಬೆಣ್ಣೆಚೋರ. ದಾಂಪತ್ಯ ಕಲಹದಲ್ಲಿ ಇವಳು ಸತ್ಯಭಾಮೆಯಾದರೆ ಅವನು ಓಲೈಸುವ ಚಿತ್ತಚೋರ. ಯಾರೂ ಇಲ್ಲವೆಂದು ಮೊರೆಯಿಟ್ಟರೆ ಅವನು ಅನಾಥರಕ್ಷಕ.
ಇಷ್ಟೆಲ್ಲಾ ಆಗಿದ್ದರೂ ಒಬ್ಬ ದ್ರೌಪದಿಗೆ ಮಾತ್ರ ಅವನು ಆತ್ಮಬಂಧು. ಯಾಕೆಂದರೆ ಮೇಲಿನ ಯಾವ ಸಂದರ್ಭದಲ್ಲೂ ಅವಳಿಗೆ ಕೃಷ್ಣ ಆದರ್ಶವಾಗಿರಲಿಲ್ಲ. ಅವಳು ಸಾಮಾನ್ಯ ಹೆಣ್ಣಾಗಿರಲಿಲ್ಲ. ಅವಳ ಹುಟ್ಟಿಗೆ ನಿರ್ಧಿಷ್ಟ ಕಾರಣವಿತ್ತು. ಹಾಗಾಗಿ ಅವಳು ಋಣಾನುಬಂಧಕ್ಕೆ ಒಳಗಾದವಳಲ್ಲ; ಯಾರಿಗೂ ಸೇರಿದವಳಲ್ಲ. ತಾನು ಯಾರಿಗೋ ಸೇರಿದವಳಾಗಿರಬೇಕೆಂದು ಪ್ರತಿಯೊಬ್ಬ ಹೆಣ್ಣೂ ಬಯಸುತ್ತಾಳೆ. ಯಾಕೆಂದರೆ ಹೆಣ್ಣಿನಲ್ಲೊಂದು ಅರ್ಪಣಾ ಭಾವವಿರುತ್ತದೆ. ದ್ರೌಪದಿಗೆ ಅರ್ಪಿಸಿಕೊಳ್ಳುವುದಕ್ಕೆ ಯಾರೂ ಇರಲಿಲ್ಲ!.
ತಂದೆ ದ್ರುಪದನಿಗೆ ದ್ರೋಣನ ಮೇಲೆ ಸೇಡು ತೀರಿಸಿಕೊಳ್ಳುವುದಕ್ಕೆ ಅವಳೊಂದು ವಾಹಕವಾಗಿದ್ದಳು. ಪಾಂಡವರು ಅವಳನ್ನು ಬಯಸಿ ಪಡೆದವರಲ್ಲ. ಹಾಗಿರುವಾಗ ಅವಳು ಜೀವದುಂಬಿ ಯಾರನ್ನು ಪ್ರೀತಿಸಬೇಕು? ಮಕ್ಕಳನ್ನೇ? ಅವು ಕೂಡಾ ಅವಳ ದೇಹವನ್ನು ಹರಿದು ಹಂಚಿ ಉಂಡ ಗಂಡಸರದಲ್ಲವೇ? ಅಗ್ನಿಯಲ್ಲಿ ಹುಟ್ಟಿದವಳು; ಅಗ್ನಿಯಂತೆಯೇ ತೀಕ್ಷಣವಾಗಿ ಯೋಚಿಸುವವಳು. ಮೇಲೆ ತಣ್ಣಗಿದ್ದರೂ ಒಳಗೊಳಗೇ ಕಠೋರನಾಗಿದ್ದ ಕೃಷ್ಣ ಅವಳಿಗೆ ಹತ್ತಿರನಾದ. ಅವನನ್ನೇ ಅವಳು ಬುದ್ದಿಪೂರ್ವಕವಾಗಿ ನಂಬಿದಳು.
ಸಾಮಾನ್ಯ ಗೃಹಿಣಿಯೂ ಸೇರ್ಇದಂತೆ ಹೆಣ್ಣೊಬ್ಬಳ ಮನಸ್ಸಿನಲ್ಲಿ ಎಷ್ಟೊಂದು ತೀವ್ರವಾದ ಭಾವನೆಗಳು ಇರುತ್ತವೆಯೆಂದರೆ ಅದನ್ನು ಒಬ್ಬ ಕೃಷ್ಣ ಮಾತ್ರ ಅರ್ಥ ಮಾಡಿಕೊಳ್ಳಬಲ್ಲ. ಅದೂ ದ್ರೌಪದಿಗೊಲಿದ ಕೃಷ್ಣ ಮಾತ್ರ!
ಒಬ್ಬ ಹೆಣ್ಣುಮಗಳು ದ್ರೌಪದಿಯ ಮನಸ್ಥಿತಿಯನ್ನು ತಲುಪುವುದು ನಲುವತ್ತು ದಾಟಿದ ಮೇಲೆಯೇ. ಈ ಹೊತ್ತಿಗಾಗಲೇ ಪುರುಷನೊಬ್ಬ ಆಕೆಯ ಬದುಕಿನಲ್ಲಿ ಏನೇನು ಪಾತ್ರ ವಹಿಸಬಹುದೋ ಅದೆಲ್ಲವನ್ನೂ ವಹಿಸಿ ಆಗಿರುತ್ತದೆ. ತಂದೆ, ಅಣ್ಣ-ತಮ್ಮ, ಗೆಳೆಯ, ಗಂಡ, ಮಗ, ಸಹೋದ್ಯೊಗಿ, ಮೇಲಾಧಿಕಾರಿ, ನೆರೆಮನೆಯಾತ- ಇವೆಲ್ಲಾ ಮುಖಗಳ ಪರಿಚಯ ಆಕೆಗಾಗಿದೆ. ಹೆಣ್ಣೊಬ್ಬಳ ಪಾಲಿಗೆ ಈ ’ಗಂಡಸು’ ಅನ್ನುವವನು ’ಇಷ್ಟೇ’ ಎಂಬ ಅನುಭವ ಅವಳಿಗೆ ಸ್ವಲ್ಪವಾದರೂ ಆಗಿರುತ್ತದೆ. ಈ ಅನುಭವ ಗಂಡಸಿನೆಡೆಗೆ ನೋಡುವ ಆಕೆಯ ನೋಟವನ್ನು ಬದಲಿಸಿದೆ.
ಸಾಮಾನ್ಯ ಗೃಹಿಣಿಯಾದರೆ ’ಇಷ್ಟೇ’ ಎಂಬ ತೀರ್ಮಾನದೊಂದಿಗೆ ಬದುಕು ಯಥಾ ಪ್ರಕಾರ ಸಾಗುತ್ತಿರುತ್ತದೆ. ಅವಳು ಮೇಲ್ನೋಟಕ್ಕೆ ಸಂತೃಪ್ತ ಗೃಹಿಣಿಯಾಗಿಯೂ ಕಾಣಿಸಿಕೊಳ್ಳಬಹುದು. ಆದರೆ ಸ್ವಲ್ಪ ವಿಭಿನ್ನವಾಗಿ ಯೋಚಿಸುವ ಮಹಿಳೆಯರು ’ಇನ್ಯಾವುದಕ್ಕೋ’ ಹುಡುಕಾಟ ಆರಂಭಿಸಿಬಿಡುತ್ತಾರೆ. ನನ್ನ ಮಟ್ಟಿಗೆ ಸೀಮಿತಗೊಳಿಸಿ ಹೇಳುವುದಾರೆ ಅದು ಕೃಷ್ಣನಿಗಾಗಿ ದ್ರೌಪದಿ ಹುಡುಕಾಡಿದಂತೆ.
ಹಿಂದೆಯೇ ಹೇಳಿದಂತೆ ಈ ಹುಡುಕಾಟ ದಾರಿ ತಪ್ಪಿದರೆ? ಅತ್ಯಂತ ಪ್ರಕ್ಷುಬ್ದಗೊಂಡ ಮನಸ್ಥಿತಿಯಲ್ಲಿ ಅದರ ಭಾರವನ್ನು ಎಲ್ಲಿಯಾದರೂ ಇಳುಹಬೇಕೆಂದು ಅನ್ನಿಸುವುದು ಸಹಜ. ಆದರೆ ಕೈ ನೀಡಲು ಯಾರೂ ಇಲ್ಲದಿದ್ದರೆ? ಅಂಥ ಸನ್ನಿವೇಶದಲ್ಲಿ ತಲೆಯ ಮೇಲಿನ ಭಾರವನ್ನು ಹೊತ್ತು ಹಾಕಲೇಬೇಕು.
ಅಂಥದೊಂದು ಸ್ಥಿತಿಯಲ್ಲಿ ನಾನೊಮ್ಮೆ ಏನು ಮಾಡಿದೆ ಗೊತ್ತಾ? ಚಂದ್ರಶೇಖರ ಪಾಟೀಲರ ’ಲೇಖಕರ ವಿಳಾಸ ಪುಸ್ತಕ’ ನನ್ನಲ್ಲಿತ್ತು.ಅದರಲ್ಲಿ ನಾನು ತುಂಬಾ ಮೆಚ್ಚುವ ಲೇಖಕರೊಬ್ಬರ ದೂರವಾಣಿ ನಂಬರ್ ಇತ್ತು. ಸಭೆ ಸಮಾರಂಭಗಳಲ್ಲಿ ಅವರನ್ನು ನೋಡಿದ್ದೆ. ಕೆಲವೊಮ್ಮೆ ಮಾತಾಡಿಸಿಯೂ ಇದ್ದೆ. ಅವರಿಗೆ ಕರೆ ಮಾಡಿ ನನ್ನ ಸಮಸ್ಯೆ ಹೇಳಿಕೊಳ್ಳಲೆತ್ನಿಸಿದೆ. ಹೇಳ ಹೇಳುತ್ತಲೇ ಬಿಕ್ಕಳಿಸಿ ಅತ್ತುಬಿಟ್ಟೆ. ಅವರು ಸಮಾಧಾನದಿಂದಲೇ ಆಲಿಸಿದರು. ಒಂದೂ ಮಾತಾಡದಿದ್ದರೂ ಕೆಲವೊಮ್ಮೆ ’ಆಲಿಸುವ’ ಕಿವಿಗಳು ಎಷ್ಟು ಸಾಂತ್ವನ ನೀಡುತ್ತವೆ ಅಲ್ಲವೇ? ನನ್ನ ಗೆಳತಿಯೊಬ್ಬಳ ಬದುಕಿನಲ್ಲಿ ನಡೆದ ಘಟನೆಯಿದು; ಕನ್ನಡದ ಸಂವೇದನಾಶೀಲ ಬರಗಾರರೊಬ್ಬರ ಮೇಲೆ ಆಕೆಗೆ ಹುಚ್ಚು ಮೋಹ, ಅವರ ಬರವಣಿಗೆಯಿಂದ ಪ್ರಭಾವಿತಳಾಗಿ ಹಿಂದು ಮುಂದು ಯೋಚಿಸದೆ ಅವರನ್ನವಳು ಆರಾಧಿಸತೊಡಗಿದಳು. ಅದೂ ನಿರಂತರ ಆರು ವರ್ಷಗಳ ಕಾಲ.
ನಮ್ಮ ಬರಹಗಾರರನ್ನು ಹತ್ತಿರದಿಂದ ಬಲ್ಲವರಿಗೆ ಅವರ ವಿಕ್ಷಿಪ್ತ ನಡವಳಿಕೆಗಳ ಪರಿಚಯ ಇರುತ್ತದೆ, ಅವರ ಭಾವ ಜಗತ್ತೇ ಬೇರೆ. ಬಾಹ್ಯ ಜಗತ್ತೇ ಬೇರೆ. ಇದು ಅರಿವಾಗುವ ಹೊತ್ತಿಗೆ ಅವಳು ಬಹು ದೂರ ಸಾಗಿ ಬಂದಿದ್ದಳು. ಕೊನೆಗೆ ಡಿಪ್ರೆಶನ್ನಿಗೆ ಒಳಗಾದಳು. ಅದರಿಂದ ಹೊರಬರಲು ಅವಳು ಮಾನಸಿಕ ತಜ್ನರ ಮೊರೆ ಹೋಗಬೇಕಾಯಿತು.
ಕೃಷ್ಣನ ಹುಡುಕಾಟ ಹೊರಗಡೆ ಯಾಕೆ ಆಗಬೇಕು, ಗಂಡನೇ ಗೆಳೆಯನೂ ಆಗಲಾರನೇ? ಎಂದು ಕೆಲವರಿಗನ್ನಿಸಬಹುದು. ಆದರೆ ಗಂಡ ಯಾವತ್ತಿದ್ದರೂ ಗಂಡನೇ!. ಆ ಶಬ್ದದ ಅರ್ಥವೇ ’ಒಡೆಯ’. ಆತ ತನ್ನ ಒಡೆತನದ ಹಕ್ಕನ್ನು ಚಲಾಯಿಸಿಯೇ ಚಲಾಯಿಸುತ್ತಾನೆ. ಎಷ್ಟಾದರೂ ಗಂಡಸು ದೈಹಿಕವಾಗಿ ಐಕ್ಯವಾಗುವುದನ್ನು ಬಯಸುತ್ತಾನೆ. ಹೆಣ್ಣು ಮಾನಸಿಕವಾಗಿ ಐಕ್ಯವಾಗುವ ಕನಸು ಕಾಣುತ್ತಾಳೆ. ಹಾಗಾಗಿ ಕೆಲವೊಂದು ಸೂಕ್ಷ್ಮಭಾವನೆಗಳು, ಗುಟ್ಟುಗಳು, ತಲ್ಲಣಗಳನ್ನು ಹಂಚಿಕೊಳ್ಳಲು ಹೆಣ್ಣೊಬ್ಬಳು ’ಕೃಷ್ಣ’ನನ್ನು ಹಂಬಲಿಸುವುದು ತಪ್ಪೆಂದು ನನಗೆ ತೋರುವುದಿಲ್ಲ.
ಅದರೆ ನನಗೆ ಗೊತ್ತಿದೆ, ’ಕೃಷ್ಣ’ ನಮಗೆ ಎಂದೂ ಸಿಗಲಾರ. ಸಿಗಬಾರದು ಕೂಡಾ. ಹುಡುಕಾಟ ನಿರಂತರವಾಗಿರಬೇಕು. ಅವನ ಮುರಳಿಯ ದಿವ್ಯಗಾನ ಸದಾ ನಮ್ಮ ಕಿವಿಯಲ್ಲಿ ಮೊರೆಯುತ್ತಿರಬೇಕು. ಆ ಮೂಲಕ ನಮ್ಮ ದುರ್ಭರ ಕ್ಷಣಗಳನ್ನು ಗೆಲ್ಲುವ ಅಂತಃಶಕ್ತಿ ನಮ್ಮಲ್ಲೇ ಮೂಡಿಬರಬೇಕು. ಆ ಧೀಶಕ್ತಿ ಸ್ತ್ರೀಯರಲ್ಲಿ ಇದೆ ಎಂಬುದು ನನ್ನ ಬಲವಾದ ನಂಬಿಕೆ.
[೨೦೦೪ರಲ್ಲಿ ’ಹಂಗಾಮ’ ಕ್ಕಾಗಿ ಬರೆದ ಬರಹವನ್ನು ಒಂಚೂರು ಎಡಿಟ್ ಮಾಡಿದ್ದೇನೆ]